ಕರ್ನಾಟಕ ಸರ್ಕಾರದ ನಿರುದ್ಯೋಗಿ ಯುವಕರಿಗೆ ಅವಕಾಶ
ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ನಿರುದ್ಯೋಗಿ ಯುವಕರಿಗೆ ಸ್ವಂತ ಉದ್ಯೋಗವನ್ನು ಪ್ರಾರಂಭಿಸಲು “ಸ್ವಾವಲಂಬಿ ಸಾರಥಿ ಯೋಜನೆ” ಅಡಿಯಲ್ಲಿ ಸಹಾಯಧನ ನೀಡಲಿದೆ. ಈ ಯೋಜನೆಯಡಿ, ಅರ್ಹರಾದ ಅಭ್ಯರ್ಥಿಗಳು ಸರಕು ವಾಹನ ಅಥವಾ ಹಳದಿ ಬೋರ್ಡ್ ಟ್ಯಾಕ್ಸಿ ಖರೀದಿಸಲು 75% ರಷ್ಟು ಅಥವಾ ಗರಿಷ್ಠ ₹4 ಲಕ್ಷ ಸಬ್ಸಿಡಿ ಪಡೆಯಬಹುದು. ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಲು ಅವಕಾಶವಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಯೋಜನೆಯ ಉದ್ದೇಶ
ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗದ ಸಮಸ್ಯೆಯನ್ನು ನಿವಾರಿಸಲು ಈ ಯೋಜನೆ ರೂಪುಗೊಂಡಿದೆ. ಯುವಕರು ಸ್ವಂತ ವಾಹನ ಖರೀದಿಸಿ ಟ್ಯಾಕ್ಸಿ ಅಥವಾ ಸರಕು ಸಾಗಾಣಿಕೆ ವ್ಯವಸ್ಥೆಯನ್ನು ಪ್ರಾರಂಭಿಸಿ ಆರ್ಥಿಕವಾಗಿ ಸ್ವಾವಲಂಬರಾಗಲು ಇದು ನೆರವಾಗುತ್ತದೆ.
ಅರ್ಹತೆ
- ಅರ್ಜಿದಾರರು ಕರ್ನಾಟಕ ರಾಜ್ಯದ ನಿವಾಸಿರಾಗಿರಬೇಕು.
- 21 ರಿಂದ 56 ವರ್ಷ ವಯಸ್ಸಿನೊಳಗಿರಬೇಕು.
- ಕುಟುಂಬದ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶದವರಿಗೆ ₹1.5 ಲಕ್ಷ ಮತ್ತು ನಗರವಾಸಿಗಳಿಗೆ ₹2 ಲಕ್ಷಗಿಂತ ಕಡಿಮೆ ಇರಬೇಕು.
- ಕುಟುಂಬದ ಯಾರೂ ಸರ್ಕಾರಿ/ಅರೆ-ಸರ್ಕಾರಿ ಉದ್ಯೋಗದಲ್ಲಿರಬಾರದು.
- ಇದಕ್ಕೂ ಮುಂಚೆ ಯಾವುದೇ ಸರ್ಕಾರಿ ನಿಗಮದಿಂದ ಸಹಾಯಧನ ಪಡೆದಿರಬಾರದು.
ಸಬ್ಸಿಡಿ ಮೊತ್ತ
ಯೋಜನೆಯಡಿ ವಾಹನದ ಬೆಲೆಯ 75% ಅಥವಾ ₹4 ಲಕ್ಷ (ಯಾವುದು ಕಡಿಮೆಯೋ ಅದು) ಸಹಾಯಧನ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ
ಅರ್ಜಿಗಳನ್ನು 10 ಸೆಪ್ಟೆಂಬರ್ 2025ರೊಳಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಧಾನ
ಆನ್ಲೈನ್ ವಿಧಾನ:
- ಸೇವಾ ಸಿಂಧು ಪೋರ್ಟಲ್ (ಲಿಂಕ್) ಗೆ ಭೇಟಿ ನೀಡಿ.
- “ಸ್ವಾವಲಂಬಿ ಸಾರಥಿ ಯೋಜನೆ” ಅನ್ನು ಹುಡುಕಿ.
- ಆನ್ಲೈನ್ ಅರ್ಜಿ ನಮೂನೆ ಪೂರೈಸಿ, ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಸಲ್ಲಿಸಿ.
ಆಫ್ಲೈನ್ ವಿಧಾನ:
- ಅಗತ್ಯ ದಾಖಲೆಗಳೊಂದಿಗೆ ನಿಮ್ಮ ನೆರೆಯ ಗ್ರಾಮ ಒನ್ ಕೇಂದ್ರ ಅಥವಾ ಸಮಾಜ ಕಲ್ಯಾಣ ಕಚೇರಿಗೆ ಭೇಟಿ ನೀಡಿ.
ಅಗತ್ಯ ದಾಖಲೆಗಳು
- ಆಧಾರ್ ಕಾರ್ಡ್
- ವಯಸ್ಸು ಮತ್ತು ನಿವಾಸದ ಪ್ರಮಾಣಪತ್ರ
- ಜಾತಿ ಮತ್ತು ಆದಾಯ ಪ್ರಮಾಣಪತ್ರ
- ಬ್ಯಾಂಕ್ ಪಾಸ್ಬುಕ್
- ಡ್ರೈವಿಂಗ್ ಲೈಸೆನ್ಸ್
- ವಾಹನದ ದರಪಟ್ಟಿ
- ಪಾಸ್ಪೋರ್ಟ್ ಗಾತ್ರದ ಫೋಟೋ
ಹೆಚ್ಚಿನ ಮಾಹಿತಿಗೆ
ಸಹಾಯವಾಣಿ ಸಂಖ್ಯೆ: 9482300400
ಅಧಿಕೃತ ವೆಬ್ಸೈಟ್: Click Here
ಅರ್ಜಿ ಸಲ್ಲಿಸಲು ಲಿಂಕ್-Apply Now
ನಿರುದ್ಯೋಗಿ ಯುವಕರು ಈ ಅವಕಾಶವನ್ನು ಬಳಸಿಕೊಂಡು ಸ್ವಾವಲಂಬರಾಗಲು ಮುಂದಾಗಿ!.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

Sagari leads the ‘Government Schemes’ vertical at NeedsOfPublic.in, where she decodes the latest Central and State government policies for the common citizen. She has over 3 years of experience tracking welfare programs like PM Kisan, Ayushman Bharat, and State Ration updates. Her goal is to ensure every reader understands their eligibility and benefits without confusion. Sagari strictly verifies all updates from official government portals before publishing. Outside of work, she is an advocate for digital literacy in rural India.”
Connect with Sagari:


WhatsApp Group




