7ನೇ ವೇತನ ಆಯೋಗ: ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ನೌಕರರಿಂದ ಹೊಸ ಡಿಮ್ಯಾಂಡ್ – ರಾಜ್ಯ ಮಟ್ಟದ ಹೋರಾಟಕ್ಕೆ ಸಿದ್ಧತೆ.
ಕರ್ನಾಟಕದಲ್ಲಿ 7ನೇ ವೇತನ ಆಯೋಗ ಜಾರಿಗೆ ಸಂಬಂಧಿಸಿದಂತೆ ಸರ್ಕಾರಿ ನೌಕರರ ಹೋರಾಟ ತೀವ್ರಗೊಳ್ಳುತ್ತಿದೆ. ಈ ಸಂಬಂಧ ಬೇರೆ ಹಂತಗಳಲ್ಲಿ ಆಗುತ್ತಿರುವ ಚಟುವಟಿಕೆಗಳಿಗೆ ಮತ್ತೊಂದು ಹೊಸ ರೂಪವೊಂದು ಸಿಕ್ಕಿದೆ. ಈಗ ರಾಜ್ಯದ ಮಹಾನಗರ ಪಾಲಿಕೆ, ಪುರಸಭೆ, ನಗರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಅಧಿಕಾರಿ ಹಾಗೂ ನೌಕರರು ಕೂಡ ತಮ್ಮ ಬೇಡಿಕೆಯನ್ನು ಮುಂದಿಟ್ಟಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಪತ್ರದ ಮೂಲಕ ಸಿಎಂಗೆ ಮನವಿ:
ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಸಂಘ, ಹಾಗೂ ಪೌರ ನೌಕರರ ಸಂಘದ ಜಂಟಿ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಈ ಸಭೆಯಲ್ಲಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಸಲ್ಲಿಸಿ, 7ನೇ ವೇತನ ಆಯೋಗದ ಸೌಲಭ್ಯವನ್ನು ರಾಜ್ಯ ಸರ್ಕಾರಿ ನೌಕರರಿಗೆ ವಿಸ್ತರಿಸಿದಂತೆ, ಸ್ಥಳೀಯ ಸಂಸ್ಥೆಗಳ ನೌಕರರಿಗೂ ವಿಸ್ತರಿಸಬೇಕು ಎಂದು ಮನವಿ ಮಾಡಿದರು.
ಅಮೃತ್ ರಾಜ್ ಅವರ ಮನವಿ:
ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಎ. ಅಮೃತ್ ರಾಜ್ ಮಾತನಾಡುತ್ತಾ, ರಾಜ್ಯ ಸರ್ಕಾರಿ ನೌಕರರಿಗೆ ಜಾರಿಗೆ ತರಲಾಗಿರುವ 7ನೇ ವೇತನ ಆಯೋಗದ ಸೌಲಭ್ಯಗಳನ್ನು, ಸ್ಥಳೀಯ ಸಂಸ್ಥೆಗಳ ನೌಕರರಿಗೆ ಸಹ ಸರ್ಕಾರದ ಆರ್ಥಿಕ ಇಲಾಕೆಯಿಂದಲೇ ಪಾವತಿಸಬೇಕೆಂದು ನಾವು ಆಗ್ರಹಿಸುತ್ತಿದ್ದೇವೆ,ಎಂದು ಹೇಳಿದರು.
ಎಸ್.ಎಫ್.ಸಿ. ನಿಧಿ ವಿಷಯದಲ್ಲಿ ಅಸಮಾಧಾನ:
ಸ್ಥಳೀಯ ಸಂಸ್ಥೆಗಳ ನೌಕರರಿಗೆ ವೇತನ ಪಾವತಿ ಸಂದರ್ಭದಲ್ಲಿ ಸರ್ಕಾರವು ಎಸ್.ಎಫ್.ಸಿ. ನಿಧಿಯಲ್ಲಿ ಶೇ 20ರಿಂದ 15% ಕಟ್ ಆಫ್ ಮಾಡಿರುವುದು ಭಾರೀ ಅಸಮಾಧಾನವನ್ನು
ಉಂಟುಮಾಡಿದೆ. ಈ ರೀತಿಯ ಕಟ್ ಆಫ್ ಅನ್ನು ತಕ್ಷಣವೇ ಹಿಂಪಡೆಯಬೇಕು ಹಾಗೂ ನೌಕರರ ಸಂಪೂರ್ಣ ವೇತನವನ್ನು ಸರ್ಕಾರವೇ ಭರಿಸಬೇಕು ಎಂದು ಸಂಘ ಆಗ್ರಹಿಸಿದೆ.
ಇತರೆ ಪ್ರಮುಖ ಬೇಡಿಕೆಗಳು:
– ಆರೋಗ್ಯ ಸಂಜೀವಿನಿ ಯೋಜನೆ: ರಾಜ್ಯ ಸರ್ಕಾರಿ ನೌಕರರಿಗೆ ಜಾರಿಗೆ ಇರುವ ಈ ಯೋಜನೆಯನ್ನು ಸ್ಥಳೀಯ ಸಂಸ್ಥೆಗಳ ನೌಕರರಿಗೂ ಜಾರಿಗೆ ತರಬೇಕು.
– KGID ಮತ್ತು GPF ಸೌಲಭ್ಯ:ಈ ಸೌಲಭ್ಯಗಳನ್ನು ಎಲ್ಲ ಪುರಸಭೆ, ನಗರಸಭೆ, ಪಟ್ಟಣ ಪಂಚಾಯಿತಿ ಮತ್ತು ಮಹಾನಗರ ಪಾಲಿಕೆ ನೌಕರರಿಗೂ ವಿಸ್ತರಿಸಬೇಕು.
– ನೇಮಕಾತಿ ನಿಯಮಾವಳಿ ತಿದ್ದುಪಡಿ: ನೌಕರರ ನೇಮಕಾತಿಗೆ ಸಂಬಂಧಿಸಿದ ನಿಯಮಾವಳಿಗೆ ತಿದ್ದುಪಡಿ ಅಧಿಸೂಚನೆ ಬಿಡುಗಡೆ ಮಾಡಬೇಕು.
ಹೋರಾಟದ ತೀರ್ಮಾನಗಳು:
ಹೆಚ್ಚುವರಿ ಒತ್ತಡ ತರುವ ಉದ್ದೇಶದಿಂದ, ಸಂಘವು ಹಂತ ಹಂತವಾಗಿ ಹೋರಾಟಕ್ಕೆ ತಯಾರಿ ನಡೆಸಿದೆ.
– 12-04-2025: ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ನೌಕರರು ಕಪ್ಪು ಪಟ್ಟಿಯನ್ನು ಧರಿಸಿ, ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಲಿದ್ದಾರೆ.
– 26-05-2025:ಈ ದಿನದಿಂದ ಸಾಂದರ್ಭಿಕ ರಜೆ ಹಾಕಿ, ತಮ್ಮ ಕೆಲಸ ಕಾರ್ಯಗಳನ್ನು ಅನಿರ್ಧಿಷ್ಟಾವಧಿಗೆ ಸ್ಥಗಿತಗೊಳಿಸುವ ತೀರ್ಮಾನವಿದೆ.
ಮನವಿ ಪತ್ರಗಳ ವಿಸ್ತರಣೆ:
ಈ ಬೇಡಿಕೆಗಳಿಗೆ ಸರ್ಕಾರದಿಂದ ಸ್ಪಂದನೆ ಸಿಕ್ಕಿಲ್ಲದಿರುವ ಹಿನ್ನೆಲೆಯಲ್ಲಿ, ರಾಜ್ಯದ ಎಲ್ಲಾ ಶಾಸಕರಿಗೆ, ಉಸ್ತುವಾರಿ ಸಚಿವರಿಗೆ, ಜಿಲ್ಲಾಧಿಕಾರಿಗಳಿಗೆ ಹಾಗೂ ವಿವಿಧ ಸಂಘ ಸಂಸ್ಥೆಗಳಿಗೆ ಕೂಡ ಈ ಬೇಡಿಕೆಗಳ ಕುರಿತ ಮನವಿ ಪತ್ರವನ್ನು ಸಲ್ಲಿಸಲು ನಿರ್ಧರಿಸಲಾಗಿದೆ.
ಕೊನೆಯದಾಗಿ ಹೇಳುವುದಾದರೆ 7ನೇ ವೇತನ ಆಯೋಗದ ಸೌಲಭ್ಯಗಳು ಎಲ್ಲ ನೌಕರರಿಗೂ ಸಮಾನವಾಗಿ ವಿಸ್ತರಿಸಬೇಕೆಂಬ ಮಾನವೀಯ ಹಾಗೂ ನ್ಯಾಯಸಮ್ಮತ ಬೇಡಿಕೆಗಳೊಂದಿಗೆ, ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ನೌಕರರು ನಿರ್ಣಾಯಕ ಹೋರಾಟದ ದಿಕ್ಕಿನಲ್ಲಿ ಸಾಗುತ್ತಿದ್ದಾರೆ. ರಾಜ್ಯ ಸರ್ಕಾರ ಈ ಬೇಡಿಕೆಗಳನ್ನು ಎಷ್ಟರಮಟ್ಟಿಗೆ ಪರಿಗಣಿಸುತ್ತದೆ ಎಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿದೆ.
ಇದು ಕೇವಲ ವೇತನದ ವಿಷಯವಲ್ಲ – ಇದು ಸಮಾನತೆ, ಗೌರವ ಮತ್ತು ಹಕ್ಕಿಗಾಗಿ ನಡೆಯುತ್ತಿರುವ ಹೋರಾಟವಾಗಿದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

Sagari leads the ‘Government Schemes’ vertical at NeedsOfPublic.in, where she decodes the latest Central and State government policies for the common citizen. She has over 3 years of experience tracking welfare programs like PM Kisan, Ayushman Bharat, and State Ration updates. Her goal is to ensure every reader understands their eligibility and benefits without confusion. Sagari strictly verifies all updates from official government portals before publishing. Outside of work, she is an advocate for digital literacy in rural India.”
Connect with Sagari:


WhatsApp Group




