WhatsApp Image 2026 02 07 at 3.56.57 PM

BREAKING: 54 ನಿಗಮ-ಮಂಡಳಿ ಅಧ್ಯಕ್ಷರಿಗೆ ರಾಜ್ಯ ಸಚಿವರ ಸ್ಥಾನಮಾನ: ಸರ್ಕಾರದಿಂದ ಮಹತ್ವದ ಆದೇಶ ಜಾರಿ!

WhatsApp Group Telegram Group
ಮುಖ್ಯಾಂಶಗಳು (Highlights)
  • 54 ನಿಗಮ, ಮಂಡಳಿ ಅಧ್ಯಕ್ಷರಿಗೆ ಬಂಫರ್ ರಾಜ್ಯ ಸಚಿವ ಸ್ಥಾನಮಾನ.
  • ತಕ್ಷಣ ಜಾರಿಗೆ ಬರುವಂತೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ.
  • ವೇತನ, ಸಾರಿಗೆ ಸೇರಿದಂತೆ ಸಚಿವ ದರ್ಜೆಯ ಎಲ್ಲಾ ಸೌಲಭ್ಯ ಲಭ್ಯ.

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸುದೀರ್ಘ ಕಾಯುವಿಕೆಯ ನಂತರ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ನಿಗಮ-ಮಂಡಳಿಗಳ ಅಧ್ಯಕ್ಷರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಒಟ್ಟು 54 ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ಅಧ್ಯಕ್ಷರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ‘ರಾಜ್ಯ ಸಚಿವ’ ಸ್ಥಾನಮಾನ ನೀಡಿ ಅಧಿಕೃತ ಆದೇಶ ಹೊರಡಿಸಲಾಗಿದೆ.

ಈ ಕುರಿತಂತೆ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರುಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಆದೇಶಿಸಿರುವುದಾಗಿ ತಿಳಿಸಿದೆ.

ಯಾರಿಗೆಲ್ಲ ರಾಜ್ಯ ಸಚಿವರ ಸ್ಥಾನಮಾನ? ಇಲ್ಲಿದೆ ಲೀಸ್ಟ್

ಕರ್ನಾಟಕ ಗೇರು ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷೆ ಮಮತಾ ಗಟ್ಟಿ, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾದಂತ ಎನ್.ರಂಗಸ್ವಾಮಿ, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷ ವಡ್ನಾಳ್ ಜಗದೀಶ್, ರಾಜ್ಯ ತಜ್ಞರ ಮೌಲ್ಯ ಮಾಪನ ಸಮಿತಿಯ ಅಧ್ಯಕ್ಷ ಮಹೇಶ್.ಎಂ.ಎನ್, ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಹೇಶ್.ಎಂ, ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯುನಿಕೇಷನ್ ಮತ್ತು ಅಡ್ವರ್ಟೈಸಿಂಗ್ ಲಿಮಿಟೆಡ್ ಅಧ್ಯಕ್ಷ ಸತೀಶ್ ಕೃಷ್ಣ ಸೈಲ್, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಬಿ ನಾಗೇಂದ್ರ ಕುಮಾರ್ ಸೇರಿದಂತೆ 54 ನಿಗಮ, ಮಂಡಳಿ, ಪ್ರಾಧಿಕಾರದ ಅಧ್ಯಕ್ಷರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಆದೇಶ ಹೊರಡಿಸಿದೆ.

wmremove transformed 14
wmremove transformed 15
post order 3

ಗಮನಿಸಿ: ಈ ಬದಲಾವಣೆಯು ಕೇವಲ ಅಧ್ಯಕ್ಷರ ಸ್ಥಾನಮಾನಕ್ಕೆ ಸಂಬಂಧಿಸಿದ್ದಾಗಿದ್ದು, ನಿಮ್ಮ ಕೆಲಸ ಕಾರ್ಯಗಳಿಗಾಗಿ ಆಯಾ ನಿಗಮಗಳ ಕಚೇರಿಯನ್ನು ಎಂದಿನಂತೆ ಸಂಪರ್ಕಿಸಬಹುದು.

ನಮ್ಮ ಸಲಹೆ

ನಮ್ಮ ಸಲಹೆ: ಈ 54 ನಿಗಮಗಳಲ್ಲಿ ನಿಮ್ಮ ಜಿಲ್ಲೆಯ ಅಥವಾ ಸಮುದಾಯದ ನಿಗಮಗಳೂ ಇರುತ್ತವೆ (ಉದಾಹರಣೆಗೆ ಕಾಡುಗೊಲ್ಲ ಅಭಿವೃದ್ಧಿ ನಿಗಮ). ಇನ್ಮುಂದೆ ಈ ನಿಗಮಗಳ ಅಧ್ಯಕ್ಷರಿಗೆ ಹೆಚ್ಚಿನ ಅಧಿಕಾರ ಇರುವುದರಿಂದ, ಯೋಜನೆಗಳ ಬಗ್ಗೆ ಏನಾದರೂ ದೂರುಗಳಿದ್ದರೆ ಅಥವಾ ಕೆಲಸಗಳು ವಿಳಂಬವಾಗುತ್ತಿದ್ದರೆ ನೇರವಾಗಿ ಅವರ ಕಚೇರಿಯನ್ನು ಭೇಟಿ ಮಾಡಿ ಒತ್ತಾಯಿಸಬಹುದು. ಈಗ ಅವರು ಸಚಿವ ದರ್ಜೆಯವರಾಗಿರುವುದರಿಂದ ನಿಮ್ಮ ಸಮಸ್ಯೆಗಳಿಗೆ ಶಕ್ತಿ ಮೀರಿ ಸ್ಪಂದಿಸುವ ಜವಾಬ್ದಾರಿ ಅವರ ಮೇಲಿರುತ್ತದೆ!

ಸಾಮಾನ್ಯ ಪ್ರಶ್ನೆಗಳು (FAQs)

ಪ್ರಶ್ನೆ 1: ಸಚಿವ ಸ್ಥಾನಮಾನ ಸಿಕ್ಕರೆ ಜನರಿಗೆ ಏನು ಲಾಭ?

ಉತ್ತರ: ಇದು ನೇರವಾಗಿ ಜನರಿಗೆ ಹಣ ನೀಡುವ ಯೋಜನೆಯಲ್ಲ. ಆದರೆ, ನಿಗಮದ ಅಧ್ಯಕ್ಷರಿಗೆ ಹೆಚ್ಚಿನ ಅಧಿಕಾರ ಸಿಗುವುದರಿಂದ ಸರ್ಕಾರದಿಂದ ನಿಗಮಕ್ಕೆ ಬರಬೇಕಾದ ಅನುದಾನ ಮತ್ತು ಫೈಲ್‌ಗಳು ವೇಗವಾಗಿ ವಿಲೇವಾರಿಯಾಗಲು ಇದು ಸಹಾಯ ಮಾಡುತ್ತದೆ.

ಪ್ರಶ್ನೆ 2: ಈ 54 ಮಂದಿಯಲ್ಲಿ ಯಾರ್ಯಾರಿದ್ದಾರೆ? ಪೂರ್ಣ ಪಟ್ಟಿ ಎಲ್ಲಿ ಸಿಗುತ್ತದೆ?

ಉತ್ತರ: ಪಟ್ಟಿಯಲ್ಲಿ ಮಮತಾ ಗಟ್ಟಿ, ಬಿ ನಾಗೇಂದ್ರ ಕುಮಾರ್, ಮಹೇಶ್ ಎಂ.ಎನ್ ಸೇರಿದಂತೆ 54 ಹೆಸರಿದ್ದು, ನೀವು ನಿಮ್ಮ ಸ್ಥಳೀಯ ತಹಶೀಲ್ದಾರ್ ಕಚೇರಿ ಅಥವಾ ಸರ್ಕಾರದ ಅಧಿಕೃತ ಗೆಜೆಟ್ ವೆಬ್‌ಸೈಟ್‌ನಲ್ಲಿ ಪೂರ್ಣ ಲಿಸ್ಟ್ ಪಡೆಯಬಹುದು.

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories