ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM Kisan) ಯೋಜನೆಯ 17ನೇ ಕಂತು ಯಾವಾಗ ಬಿಡುಗಡೆಯಾಗಲಿದೆ ಎಂಬುದರ ಕುರಿತು ರೈತರಲ್ಲಿ ಕುತೂಹಲ ಮೂಡಿದೆ. ಕೇಂದ್ರ ಸರ್ಕಾರ ಇನ್ನೂ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲದಿದ್ದರೂ, ಕೆಲವು ಸುಳಿವುಗಳು ಲಭ್ಯವಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ(Pradhan Mantri Kisan Samman Nidhi):
ಭಾರತದ ಅನ್ನದಾತರಿಗೆ ಭರವಸೆಯ ಕಿರಣವಾಗಿ ಬಂದಿರುವ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ, ಕೇಂದ್ರ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿದೆ. ಈ ಯೋಜನೆಯಡಿ, ರೈತರಿಗೆ ವಾರ್ಷಿಕ ₹6000/- ಆರ್ಥಿಕ ನೆರವು ನೀಡಲಾಗುತ್ತದೆ. ಈ ಹಣವನ್ನು ನೇರವಾಗಿ ಅನ್ನದಾತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡುವ ಮೂಲಕ, ಯಾವುದೇ ಮಧ್ಯವರ್ತಿಗಳಿಲ್ಲದೆ ಅವರಿಗೆ ನೆರವು ನೀಡಲಾಗುತ್ತದೆ.
ಈ ಯೋಜನೆಯ ಯಶಸ್ಸಿನಿಂದಾಗಿ, ಕೋಟ್ಯಾಂತರ ರೈತರು ಪ್ರಯೋಜನ ಪಡೆದಿದ್ದಾರೆ. ಈ ಯೋಜನೆಯು ರೈತರ ಜೀವನಮಟ್ಟವನ್ನು ಸುಧಾರಿಸಲು ಮತ್ತು ಕೃಷಿ ಕ್ಷೇತ್ರವನ್ನು ಬಲಪಡಿಸಲು ಉತ್ತಮ ಕ್ರಮವಾಗಿದೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM ಕಿಸಾನ್) ಯೋಜನೆಯಡಿ ರೈತರಿಗೆ ವಾರ್ಷಿಕ ₹6000 ನೀಡಲಾಗುತ್ತದೆ. ಈ ಯೋಜನೆಯಡಿ ಈಗಾಗಲೇ 16 ಕಂತುಗಳನ್ನು ರೈತರ ಖಾತೆಗಳಿಗೆ ಜಮಾ ಮಾಡಲಾಗಿದೆ. ಈಗ 17ನೇ ಕಂತು ಯಾವಾಗ ಬರುತ್ತದೆ ಎಂಬುದರ ಕುರಿತು ಕುತೂಹಲ ಮೂಡಿದೆ.
ಸಾಮನ್ಯವಾಗಿ, ಕೇಂದ್ರ ಸರ್ಕಾರವು ದೇಶದ ರೈತರಿಗೆ ವಾರ್ಷಿಕವಾಗಿ ₹6,000 ಆರ್ಥಿಕ ನೆರವು ನೀಡುತ್ತದೆ. ಈ ಯೋಜನೆಯಡಿ, ರೈತರಿಗೆ ಮೂರು ಕಂತುಗಳಲ್ಲಿ ಈ ರೀತಿ ಹಣ ಜಮಾ ಮಾಡಲಾಗುತ್ತದೆ:
₹2,000 ನಾಲ್ಕು ತಿಂಗಳಿಗೊಮ್ಮೆ
₹6,000 ಒಟ್ಟು ವಾರ್ಷಿಕ
ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ಈ ಹಣವನ್ನು ನೇರವಾಗಿ ಜಮಾ ಮಾಡಲಾಗುತ್ತದೆ. ಈ ಯೋಜನೆಯು ರೈತರಿಗೆ ಕೃಷಿ ಖರ್ಚುಗಳನ್ನು ಭರಿಸಲು ಮತ್ತು ಅವರ ಜೀವನಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ಫೆಬ್ರವರಿ ತಿಂಗಳ ಅಂತ್ಯದಲ್ಲಿ, ಮೋದಿ ಸರ್ಕಾರವು PM ಕಿಸಾನ್ ಯೋಜನೆಯ 16ನೇ ಕಂತು ಹಣವನ್ನು ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಿತ್ತು. ಈಗ, 17ನೇ ಕಂತು ಯಾವಾಗ ಬಿಡುಗಡೆಯಾಗಲಿದೆ ಎಂಬುದರ ಕುರಿತು ಕುತೂಹಲ ಮೂಡಿದೆ.
ವರದಿಗಳ ಪ್ರಕಾರ, ಕೇಂದ್ರ ಸರ್ಕಾರವು ಜುಲೈ 2024ರಲ್ಲಿ 17ನೇ ಕಂತು ಹಣವನ್ನು ರೈತರ ಖಾತೆಗಳಿಗೆ ಜಮಾ ಮಾಡಬಹುದು ಎಂದು ನಿರೀಕ್ಷಿಸಲಾಗಿದೆ. ಈ ಕಂತು ಬಂದರೆ, ರೈತರು ಈ ಯೋಜನೆಯಡಿ ಒಟ್ಟು ₹34,000 ಪಡೆದಂತಾಗುತ್ತದೆ. ಚುನಾವಣೆ ಹಿನ್ನೆಲೆಯಲ್ಲಿ ಪಿಎಂ ಕಿಸಾನ್ ಹಣ ಹೆಚ್ಚಾಗಬಹುದು ಎಂಬ ನಿರೀಕ್ಷೆಗಳೂ ಇದ್ದವು. ಆದರೆ, ಮೋದಿ ಸರ್ಕಾರ ಈ ವಿಚಾರವಾಗಿ ಸ್ಪಷ್ಟಪಡಿಸಿ, ಪಿಎಂ ಕಿಸಾನ್ ಮೊತ್ತವನ್ನು ಹೆಚ್ಚಿಸುವ ವಿಷಯದ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ ಎಂದಿದ್ದಾರೆ.
ದೇಶದಲ್ಲಿ ಈಗ ಲೋಕಸಭೆ ಚುನಾವಣೆ ನಡೆಯುತ್ತಿದ್ದು ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಯಾವುದೇ ಸರ್ಕಾರಿ ಯೋಜನೆಯ ಹಣ ಜಮಾ ಆಗುವುದಿಲ್ಲ. ಆದರೆ 17ನೇ ಕಂತಿನ ಹಣ ಜುಲೈ ತಿಂಗಳಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದ್ದರೂ, ಒಂದು ವೇಳೆ ಬರುವ ಚುನಾವಣೆಯಲ್ಲಿ ಅಧಿಕಾರ ಬದಲಾವಣೆಯಾದರೆ. ಯಾವ ಯಾವ ಯೋಜನೆಗಳು ಅಸ್ತಿತ್ವದಲ್ಲಿ ಇರುತ್ತವೆ ಎಂಬುದು ಸ್ಪಷ್ಟತೆ ಇರುವುದಿಲ್ಲ
ಪಿಎಂ ಕಿಸಾನ್ ಯೋಜನೆಯ ಲಾಭ ಪಡೆಯಲು, KYC ಪೂರ್ಣಗೊಳಿಸುವುದು ಅತ್ಯಗತ್ಯ. KYC ಪೂರ್ಣಗೊಳಿಸದಿದ್ದರೆ ಅಥವಾ ಖಾತೆ ಲಿಂಕ್ ಸರಿಯಾಗಿಲ್ಲದಿದ್ದರೆ, ಯೋಜನೆಯ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ. ಹಾಗಾಗಿ ರೈತರು ಮೊದಲಿಗೆ KYC ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.
ಪಿಎಂ ಕಿಸಾನ್ ಯೋಜನೆ: ಯಾರು ಅರ್ಹರು?
ತೆರಿಗೆದಾರರು ಈ ಯೋಜನೆಯಡಿ ಯಾವುದೇ ಪ್ರಯೋಜನ ಪಡೆಯುವುದಿಲ್ಲ.
ಯಾವುದೇ ಕೃಷಿ ಭೂಮಿ ಹೊಂದಿರುವ ವ್ಯಕ್ತಿಯು ಈ ಯೋಜನೆಗೆ ಅರ್ಹರಾಗಿದ್ದಾರೆ, ಆದರೆ ಅವರು ಕೃಷಿಯನ್ನು ಒಂದು ವೃತ್ತಿಯಾಗಿ ಅವಲಂಬಿಸಿರಬೇಕಾಗಿಲ್ಲ.
ಈ ಯೋಜನೆಯಡಿ ಒಂದು ಮನೆಯಿಂದ ಒಬ್ಬ ವ್ಯಕ್ತಿಗೆ ಮಾತ್ರ ಪ್ರಯೋಜನ ಸಿಗುತ್ತದೆ.
ಜಮೀನು ಪತಿ-ಪತ್ನಿಯರ ಹೆಸರಲ್ಲಿದ್ದರೆ, ಅವರಲ್ಲಿ ಒಬ್ಬರಿಗೆ ಮಾತ್ರ ಪಿಎಂ ಕಿಸಾನ್ ಹಣ ಸಿಗುತ್ತದೆ.
ಇನ್ನೂ ಈ ಯೋಜನೆಗೆ ಸೇರ್ಪಡೆಯಾಗದ ರೈತರು ಈಗಲೇ ಸೇರಿ ಈ ಯೋಜನೆಯ ಪ್ರಯೋಜನಗಳನ್ನು ಪಡೆಯಬಹುದು. ಆಧಾರ್ ಕಾರ್ಡ್, ಪಡಿತರ ಚೀಟಿ, ಬ್ಯಾಂಕ್ ಖಾತೆ, ಫಾರ್ಮ್ ಪಟ್ಟಾ, ಆಧಾರ್ ಲಿಂಕ್ ಮೊಬೈಲ್ ಸಂಖ್ಯೆಯ ಮೂಲಕ ಈ ಯೋಜನೆಯಲ್ಲಿ ಸೇರ್ಪಡೆಯಾಬಹುದು.
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ
- SSC 968 ಖಾಲಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ, ಇಲ್ಲಿದೆ ವಿವರ
- ಹೊಸ ರೇಷನ್ ಕಾರ್ಡ್ ಸ್ಟೇಟಸ್ ಮೊಬೈಲ್ ನಲ್ಲೆ ಚೆಕ್ ಮಾಡಿ, New Ration Card Status Karnataka 2024 @ahara.kar.nic.in
- ಜ್ಯೂಸ್ ಜಾಕಿಂಗ್ ಬಗ್ಗೆ ಎಚ್ಚರಿಕೆ ನೀಡಿದ ಕೇಂದ್ರ ಸರ್ಕಾರ! ಏನಿದು ಜ್ಯೂಸ್ ಜಾಕಿಂಗ್?
- ಗೃಹಲಕ್ಷ್ಮಿ 7ನೇ ಕಂತಿನ ಹಣ ಈಗ ಖಾತೆಗೆ ಬಂತು, ನಿಮ್ಮ ಖಾತೆಗೆ ಬರದೇ ಇದ್ರೆ ಈ ರೀತಿ ಮಾಡಿ
- ಒಂದೇ ತಿಂಗಳಲ್ಲಿ ಬರೋಬ್ಬರಿ 4 ಸಾವಿರ ಏರಿದ ಚಿನ್ನದ ಬೆಲೆ, ಇಂದಿನ ರೇಟ್ ನೋಡಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ..
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group





