ರಾಜ್ಯದಲ್ಲಿ ಕಳೆದ ಒಂದು ತಿಂಗಳಿಂದ ಭಾರಿ ಬಿಸಿಲಿನ ವಾತಾವರಣವಿದ್ದು ಮಳೆರಾಯನ ಆಗಮನಕ್ಕೆ ಕಾದು ಕುಳಿತಿದ್ದಾರೆ, ಈ ಸುಡುತ್ತಿರುವ ಬಿಸಿಲು ಉತ್ತಮ ಮುಂಗಾರು ಹಳೆಗೆ ಕಾರಣವಾಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಮೃತ್ಯುಂಜಯ ಮೋಹಪಾತ್ರ ತಿಳಿಸಿದ್ದಾರೆ. ಮಧು ಈ ವರ್ಷ ಎಲ್ ನಿನೋ ಆತಂಕ ಮರೆಯಾಗಿದ್ದು ದೊಡ್ಡ ಪ್ರಮಾಣದ ಹವಾಮಾನ ಬದಲಾವಣೆ ಮುಂಗಾರಿಗೆ ದಾರಿ ಮಾಡಿ ಕೊಡಲಿದೆ ಎಂದು ಹೇಳಿದ್ದಾರೆ, ಇಂದಿನ ಮಳೆ ಮಾಹಿತಿಯ ಬಗ್ಗೆ ಈ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Karnataka weather Updates : ಕರ್ನಾಟಕ ಹವಾಮಾನ ವರದಿ
ರಾಜ್ಯದಲ್ಲಿ ನಾಳೆಯಿಂದ 11ರವರೆಗೆ ವಿವಿಧ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೈಸೂರು, ಹಾಸನ, ಮಂಡ್ಯ, ರಾಮನಗರ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಹಾವೇರಿ, ಧಾರವಾಡ, ಗದಗ, ವಿಜಯಪುರ, ಕೊಪ್ಪಳ, ಬಳ್ಳಾರಿ, ಚಾಮರಾಜನಗರ, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿತ್ರದುರ್ಗ, ವಿಜಯನಗರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಯ ಒಂದೆರಡು ಕಡೆ ಮಳೆಯಾಗುವ ಸಂಭವ ಇದೆ ಎಂದು ಹೇಳಲಾಗಿದೆ.
ಮುಂದಿನ ಒಂದು ವಾರ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಮಳೆ ಯಾವಾಗ?
ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ ಏಪ್ರಿಲ್ ಎರಡನೇ ವಾರದಲ್ಲಿ ಬೆಂಗಳೂರಿನಾದ್ಯಂತ ಅತ್ಯಂತ ಗುಡುಗು ಸಹಿತ ಮಳೆ ಆಗುವ ಮುನ್ಸೂಚನೆ ನೀಡಿದ್ದು. ತಿಂಗಳ ಅಂತ್ಯದವರೆಗೆ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹೇಳಿದೆ.
ಬೆಂಗಳೂರಿನ ಐಎಂಡಿಯ ಹಿರಿಯ ವಿಜ್ಞಾನಿ ಎ.ಪ್ರಸಾದ್, “ಯುಗಾದಿ ಹಬ್ಬದ ದಿನದಿಂದ ಪ್ರತ್ಯೇಕ ಪ್ರದೇಶಗಳಲ್ಲಿ ಕೆಲವು ಲಘು ಮಳೆಯೊಂದಿಗೆ ಮಳೆ ಪ್ರಾರಂಭವಾಗಬಹುದು ಮತ್ತು ಹಬ್ಬದ ವಾರದ ದ್ವಿತೀಯಾರ್ಧದಲ್ಲಿ ಕ್ರಮೇಣ ಮಧ್ಯಮ ಮಳೆಯಾಗಬಹುದು” ಎಂದು ಹೇಳಿದರು.
2024 ರಲ್ಲಿ ಉತ್ತಮ ಮಳೆ
ಕರ್ನಾಟಕ ರಾಜ್ಯದಲ್ಲಿ ಕಳೆದ ವರ್ಷ ನಿರೀಕ್ಷೆಯಂತೆ ಮಳೆಯಾಗದೆ ಇರುವ ಕಾರಣ ತೀರ್ವ ಬರಗಾಲ ಉಂಟಾಯಿತು. ಆದರೆ 2024ರಲ್ಲಿ ಒಳ್ಳೆಯ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದೇ ಮಾರ್ಚ್ ಎಲ್ ನಿನೋ ಪ್ರಭಾವ ತಗ್ಗಿ ಮುಂಗಾರು ಉತ್ತಮವಾಗಲಿದೆ. ಹೌದು 2023 ಜನವರಿ 1 ರಿಂದ ಡಿಸೆಂಬರ್ 31ರವರೆಗೆ ರಾಜ್ಯದಲ್ಲಿ ವಾಡಿಕೆಯ ಪ್ರಕಾರ, 1153 ಮಿ.ಮೀ. ಮಳೆ ಸುರಿಯಬೇಕು. ಆದರೆ, ಕೇವಲ 872 ಮಿ.ಮೀ. ಮಾತ್ರ ಮಳೆಯಾಗಿದೆ. 19 ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾದರೆ, 12 ಜಿಲ್ಲೆಗಧಿಳಲ್ಲಿಸಾಮಾನ್ಯ ಮಳೆ ಕೊರತೆ ಉಂಟಾಗಿದೆ. ಅತಿ ಹೆಚ್ಚು ಮಳೆಯಾಗುವ ಕರಾವಳಿಯಲ್ಲಿ ಶೇ. 19ರಷ್ಟು ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಶೇ.35ರಷ್ಟು ಮಳೆ ಕೊರತೆ ಉಂಟಾಗಿದೆ.
2023 ರಲ್ಲಿ ಬೆಂಗಳೂರಿನಲ್ಲಿ ಕೇವಲ 1020.2 ಮಿಮೀ ಮಳೆಯಾಗಿದೆ. ಇದು ಕಳೆದ ಮೂರು ವರ್ಷಗಳ ಅವಧಿಯಲ್ಲಿ ಕನಿಷ್ಠ ವಾರ್ಷಿಕ ಮಳೆ. ಜೂನ್ ಮತ್ತು ಸೆಪ್ಟೆಂಬರ್ ನಡುವೆ (ನೈಋತ್ಯ ಮಾನ್ಸೂನ್) 474.6 ಮಿಮೀ ಮಳೆ ದಾಖಲಾಗಿದ್ದರೆ, ಅಕ್ಟೋಬರ್ ಮತ್ತು ನವೆಂಬರ್ನಲ್ಲಿ (ಈಶಾನ್ಯ ಮಾನ್ಸೂನ್) 202.9 ಮಿಮೀ ಮಳೆ ದಾಖಲಾಗಿದೆ. ಇಡೀ ವರ್ಷ, ಬೆಂಗಳೂರು ನಗರದಲ್ಲಿ ಕೇವಲ 54 ದಿನ ಮಾತ್ರ ಮಳೆ ಬಿದ್ದಿತ್ತು ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ
- ಈ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಪೆಂಡಿಂಗ್ ಹಣ 14,000/- ಬಿಡುಗಡೆ. ಹಣ ಬರದೇ ಇದ್ದವರು ಈ ರೀತಿ ಮಾಡಿ
- ಮಾರುಕಟ್ಟೆಗೆ ಭರ್ಜರಿ ಎಂಟ್ರಿ ಕೊಡಲಿದೆ ಬಜಾಜ್ ನ ಮತ್ತೊಂದು ಬೈಕ್!
- ಯುಗಾದಿ ಹಬ್ಬಕ್ಕೆ ವಿಶೇಷ ಸಾರಿಗೆ ಬಸ್ ಗಳ ವ್ಯವಸ್ಥೆ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
- ಭಾರತ ಅಷ್ಟೇ ಅಲ್ಲ ಅಮೆರಿಕದಲ್ಲೂ ಈ ಗ್ರಹಣಕ್ಕೆ ಭಯ ಪಡ್ತಿದಾರೆ ಜನ! ಯಾಕೆ ಗೊತ್ತಾ?
- ಗೃಹಲಕ್ಷ್ಮಿ 7ನೇ ಕಂತಿನ ಹಣ ಈಗ ಖಾತೆಗೆ ಬಂತು, ನಿಮ್ಮ ಖಾತೆಗೆ ಬರದೇ ಇದ್ರೆ ಈ ರೀತಿ ಮಾಡಿ
- ಯುಗಾದಿ ಹಬ್ಬಕ್ಕೆ ಚಿನ್ನ ಮತ್ತಷ್ಟು ದುಬಾರಿ, ಚಿನ್ನದ ಬೆಲೆಯಲ್ಲಿ ಐತಿಹಾಸಿಕ ದಾಖಲೆ. ಇಂದಿನ ರೇಟ್ ನೋಡಿ
- ಸ್ವಂತ ಬಿಸಿನೆಸ್ ಪ್ರಾರಂಭಿಸಲು 10 ಲಕ್ಷ ರೂ ಸಹಾಯಧನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ.?
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ..
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group




