ರಾಜ್ಯದಲ್ಲಿ ಯುಗಾದಿ ಹಬ್ಬದಂದು ಹಲವಾರು ಜಿಲ್ಲೆಗಳಲ್ಲಿ ಮಳೆಯ ಆಗಮನ ವಾಗಿದ್ದು. ಬಿಸಿಲಿನ ತಾಪಕ್ಕೆ ಕಂಗೆಟ್ಟ ಜನರಿಗೆ ವರುಣ ತಂಪೆರದಿದ್ದಾನೆ. ವರ್ಷದ ಮೊದಲ ಮಳೆಗೆ ಜನ ಹರ್ಷ ವ್ಯಕ್ತಪಡಿಸಿದ್ದಾರೆ. ಹೌದು ರಾಜ್ಯದಲ್ಲಿ ಇಂದಿನಿಂದ ಏಪ್ರಿಲ್ 17 ವರೆಗೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Karnataka weather Updates : ಕರ್ನಾಟಕ ಹವಾಮಾನ ವರದಿ
ರಾಜ್ಯದಲ್ಲಿ ಇಂದಿನಿಂದ ಏಪ್ರಿಲ್ 17ರವರೆಗೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದರೆ ರಾಜ್ಯದ ದಕ್ಷಿಣ ಕನ್ನಡ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆ ಹಾಗೂ ಸುತ್ತಮುತ್ತಲು ಒಣಹವೇ ಮುಂದುವರೆಯಲಿದ್ದು ಏಪ್ರಿಲ್ 15 ನಂತರ ಈ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ರಾಮನಗರ ಚಾಮರಾಜನಗರ ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ ವಿಜಯಪುರ ಕಲಬುರಗಿ ಬೀ ವಿಜಯನಗರ ಬೆಳಗಾವಿ ಬಾಗಲಕೋಟೆ ಯಾದಗಿರಿ ರಾಯಚೂರು ಗದಗ ಕೊಪ್ಪಳ ಮೈಸೂರು ಕೊಡಗು ಚಿಕ್ಕಬಳ್ಳಾಪುರ ಚಿಕ್ಕಮಗಳೂರು ಶಿವಮೊಗ್ಗ ತುಮಕೂರು ಕೋಲಾರ ಹಾಸನ ಚಿತ್ರದುರ್ಗ ದಾವಣಗೆರೆ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿರುತ್ತದೆ.
ಕೊಡಗು, ಬಾಗಲಕೋಟೆ , ಬೆಳಗಾವಿ, ಚಿಕ್ಕಮಗಳೂರು ಜಿಲ್ಲೆಯ ವಲಯಗಳಲ್ಲಿ ಜೋರಾಗಿ ಮಳೆ ಸುರಿದಿದೆ. ಸಣ್ಣ ಬೆಳೆಗಾರರಿಗೆ ಕಾಫಿ ಹೂ ಅರಳಲು ಮಳೆ ತೀರಾ ಅಗತ್ಯವಾಗಿತ್ತು. ವರ್ಷದ ಮೊದಲ ಮಳೆ ಈ ಭಾಗದಲ್ಲಿಬಿದ್ದಿದ್ದು, ಮಳೆ ಕಾಣದೆ ಕಂಗೆಟ್ಟಿದ್ದ ಕಾಫಿ ಬೆಳೆಗಾರರು ಹರ್ಷಗೊಂಡಿದ್ದಾರೆ.
ಉತ್ತರ ಕರ್ನಾಟಕ ಜಿಲ್ಲೆಗಳಾದ ಹಾವೇರಿ, ಗದಗ, ಧಾರವಾಡ, ಕೊಪ್ಪಳ, ಬೆಳಗಾವಿ, ಕಲಬುರಗಿ ಬೀದರ್,ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲೂ ಮಳೆಯಾಗಲಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ರಾಮನಗರ, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
2024 ರಲ್ಲಿ ಉತ್ತಮ ಮಳೆ
ಕರ್ನಾಟಕ ರಾಜ್ಯದಲ್ಲಿ ಕಳೆದ ವರ್ಷ ನಿರೀಕ್ಷೆಯಂತೆ ಮಳೆಯಾಗದೆ ಇರುವ ಕಾರಣ ತೀರ್ವ ಬರಗಾಲ ಉಂಟಾಯಿತು. ಆದರೆ 2024ರಲ್ಲಿ ಒಳ್ಳೆಯ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದೇ ಮಾರ್ಚ್ ಎಲ್ ನಿನೋ ಪ್ರಭಾವ ತಗ್ಗಿ ಮುಂಗಾರು ಉತ್ತಮವಾಗಲಿದೆ. ಹೌದು 2023 ಜನವರಿ 1 ರಿಂದ ಡಿಸೆಂಬರ್ 31ರವರೆಗೆ ರಾಜ್ಯದಲ್ಲಿ ವಾಡಿಕೆಯ ಪ್ರಕಾರ, 1153 ಮಿ.ಮೀ. ಮಳೆ ಸುರಿಯಬೇಕು. ಆದರೆ, ಕೇವಲ 872 ಮಿ.ಮೀ. ಮಾತ್ರ ಮಳೆಯಾಗಿದೆ. 19 ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾದರೆ, 12 ಜಿಲ್ಲೆಗಧಿಳಲ್ಲಿಸಾಮಾನ್ಯ ಮಳೆ ಕೊರತೆ ಉಂಟಾಗಿದೆ. ಅತಿ ಹೆಚ್ಚು ಮಳೆಯಾಗುವ ಕರಾವಳಿಯಲ್ಲಿ ಶೇ. 19ರಷ್ಟು ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಶೇ.35ರಷ್ಟು ಮಳೆ ಕೊರತೆ ಉಂಟಾಗಿದೆ.
2023 ರಲ್ಲಿ ಬೆಂಗಳೂರಿನಲ್ಲಿ ಕೇವಲ 1020.2 ಮಿಮೀ ಮಳೆಯಾಗಿದೆ. ಇದು ಕಳೆದ ಮೂರು ವರ್ಷಗಳ ಅವಧಿಯಲ್ಲಿ ಕನಿಷ್ಠ ವಾರ್ಷಿಕ ಮಳೆ. ಜೂನ್ ಮತ್ತು ಸೆಪ್ಟೆಂಬರ್ ನಡುವೆ (ನೈಋತ್ಯ ಮಾನ್ಸೂನ್) 474.6 ಮಿಮೀ ಮಳೆ ದಾಖಲಾಗಿದ್ದರೆ, ಅಕ್ಟೋಬರ್ ಮತ್ತು ನವೆಂಬರ್ನಲ್ಲಿ (ಈಶಾನ್ಯ ಮಾನ್ಸೂನ್) 202.9 ಮಿಮೀ ಮಳೆ ದಾಖಲಾಗಿದೆ. ಇಡೀ ವರ್ಷ, ಬೆಂಗಳೂರು ನಗರದಲ್ಲಿ ಕೇವಲ 54 ದಿನ ಮಾತ್ರ ಮಳೆ ಬಿದ್ದಿತ್ತು ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ
- ಏಪ್ರಿಲ್ ತಿಂಗಳ 680/- ರೂ. ಅಕ್ಕಿ ಹಣ ಈಗ ಜಮಾ. ಅಕೌಂಟ್ ಹೀಗೆ ಚೆಕ್ ಮಾಡಿಕೊಳ್ಳಿ..!
- ಹೊಸ ಪಾನ್ ಕಾರ್ಡ್ ಕೇವಲ ಹತ್ತು ನಿಮಿಷದಲ್ಲಿ ಮೊಬೈಲ್ ನಲ್ಲೆ ಪಡೆಯಿರಿ, ಹೀಗೆ ಅರ್ಜಿ ಸಲ್ಲಿಸಿ
- ಹಳೆಯ ವೋಟರ್ ಐಡಿ ಮೊಬೈಲ್ನಲ್ಲೇ ಡೌನ್ಲೋಡ್ ಮಾಡಿ, How to Download Voter ID Online
- ಗೃಹಲಕ್ಷ್ಮಿ 7ನೇ ಕಂತಿನ ಹಣ ಈಗ ಖಾತೆಗೆ ಬಂತು, ನಿಮ್ಮ ಖಾತೆಗೆ ಬರದೇ ಇದ್ರೆ ಈ ರೀತಿ ಮಾಡಿ
- 2024ರ ಹೊಸ ಮತದಾರರ ಪಟ್ಟಿ ಬಿಡುಗಡೆ, ನಿಮ್ಮ ಹೆಸರು ಸೇರ್ಪಡೆಗೆ ಎರಡೇ ದಿನ ಬಾಕಿ.
- ಪಿಯುಸಿ ನಂತರ ಈ ಶಾರ್ಟ್ ಟರ್ಮ್ ಕೋರ್ಸ್ ಮಾಡಿ ಹೆಚ್ಚು ವೇತನ ಪಡೆಯಿರಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ..
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group




