Rain Alert : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆಯ ಮುನ್ಸೂಚನೆ!

karnataka rain alert

WhatsApp Group Telegram Group

ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಭಾರಿ ಪ್ರಮಾಣದಲ್ಲಿ ಆರಂಭವಾಗಿದೆ, ಮುಂದಿನ ಒಂದು ವಾರದಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆಯಿದ್ದು ರಾಜ್ಯದ ಕೆಲವು ಜಿಲ್ಲೆಗಳಿಗೆ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಈ ನಡುವೆ ಮುಂದಿನ ನಾಲ್ಕೈದು ದಿನ ಮಳೆ ಅಬ್ಬರಿಸೋ ಬಗ್ಗೆ ಹವಾಮಾನ ಇಲಾಖೆ (Weather Department) ಮುನ್ಸೂಚನೆ ನೀಡಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ.

ಎಲ್ಲೆಲ್ಲಿ ಮಳೆಯಾಗಲಿದೆ:

ಮುಂದಿನ 4 ದಿನಗಳಲ್ಲಿ ರಾಜ್ಯಾದ್ಯಂತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಇಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿಯ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಮತ್ತು ಹಳದಿ ಎಚ್ಚರಿಕೆ ನೀಡಲಾಗಿದೆ. ಮುಂಗಾರು ಆರಂಭಕ್ಕೂ ಮುನ್ನವೇ ಮಳೆಯಾಗುತ್ತಿದ್ದು, ರೈತರಲ್ಲಿ ಸಂತಸ ಮನೆ ಮಾಡಿದೆ

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಿಂದ ಅತಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯೂ ಆಗಲಿದೆ. ಇದಲ್ಲದೇ ಉತ್ತರ ಕನ್ನಡ ಜಿಲ್ಲೆಗಳ ಹಲವು ಕಡೆ ಗುಡುಗು ಸಹಿತ ಮಳೆ ಸುರಿಯಲಿದೆ.

ಉತ್ತರ ಒಳನಾಡಿನ ಹಾವೇರಿ, ವಿಜಯಪುರ, ಧಾರವಾಡ, ಗದಗ, ದಕ್ಷಿಣ ಒಳನಾಡಿನ ದಾವಣಗೆರೆ, ವಿಜಯನಗರದ ಪ್ರತ್ಯೇಕ ಭಾಗಗಳಲ್ಲಿ ಗಂಟೆಗೆ 40-50 ಕಿ.ಮಿ.ವೇಗದಲ್ಲಿ ಗಾಳಿ ಬೀಸಲಿದ್ದು. ಗುಡುಗು ಸಹಿತ ಭಾರೀ ಮಳೆಯನ್ನೇ ತರಲಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್‌, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ ಸಾಧಾರಣ ಮಳೆಯಾಗಬಹುದು. ಬಳ್ಳಾರಿ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲೂ ಸಾಧಾರಣ ಮಳೆ ಸುರಿಯುವ ಮುನ್ಸೂಚನೆಯಿದೆ.

ಮೇ 22ರಂದು ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್ ಘೋಷಿಸಲಾಗಿದ್ದು, ಮತ್ತೊಂದೆಡೆ ಕೊಡಗು, ದಾವಣಗೆರೆ, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಈ ಮಾಹಿತಿಗಳನ್ನು ಓದಿ

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Editor in Chief

Editor in Chief

Lingaraj Ramapur BCA, MCA, MA ( Journalism );as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.

Leave a Reply

Your email address will not be published. Required fields are marked *

error: Content is protected !!