ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಕೆರೆಕಟ್ಟೆಗಳು ಭರ್ತಿಯಾಗಿವೆ, ಈ ವರ್ಷ ಮಳೆ ಕೇವಲ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿಲ್ಲ ಇಡೀ ರಾಜ್ಯಕ್ಕೆ ಆವರಿಸಿಕೊಳ್ಳುತ್ತಿದ್ದು. ಮುಂದಿನ 24 ಗಂಟೆಗಳಲ್ಲಿ ಭರ್ಜರಿ ಮಳೆ ಆಗುವ ಮುನ್ನೆಚ್ಚರಿಕೆ ಕೊಡಲಾಗಿದೆ. ರಾಜ್ಯದ ಯಾವ ಯಾವ ಜಿಲ್ಲೆಗಳಲ್ಲಿ ಮಳೆ ಬೀಳಲಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ಮುಂದೆ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ ಹವಾಮಾನ ವರದಿ
ದಿನದಿಂದ ದಿನಕ್ಕೆ ಮಳೆಯ ಅಬ್ಬರ ಜೋರಾಗುತ್ತಿದೆ. ದೇಶಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಅನೇಕ ರಾಜ್ಯಗಳಲ್ಲಿ ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ರಾಜಧಾನಿ ಬೆಂಗಳೂರು ನಗರದಲ್ಲಿ ಇನ್ನೂ ಎರಡ್ಮೂರು ದಿನ ಕೂಲ್ ಕೂಲ್ ವೆದರ್ ಇರಲಿದ್ದು, ಜೊತೆಗೆ ಸಾಧಾರಣ ಮಳೆಯೂ ಬರಲಿದೆ. ಬೆಂಗಳೂರಿನಲ್ಲಿ ಮೂರ್ನಾಲ್ಕು ದಿನ ಮೋಡ ಕವಿದ ವಾತಾವರಣ ಮುಂದುವರಿಯಲಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಯಾದಗಿರಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಗಾಳಿಯ ವೇಗ (30-40 kmph) ತಲುಪುವ ಸಾಧ್ಯತೆಯಿರುವ ಹಗುರದಿಂದ ಸಾಧಾರಣ ಮಳೆ ಮತ್ತು ನಿರಂತರ ಗಾಳಿಯು ಸಂಭವಿಸುವ ಸಾಧ್ಯತೆಯಿದೆ
ಯಾವ ಯಾವ ಜಿಲ್ಲೆಗೆ ಮಳೆ?
ಭಾರೀ ಮಳೆಯಾಗಲಿರುವ ಹಿನ್ನಲೆ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಜುಲೈ 12, 13 ಹಾಗೂ 14 ರಂದು ಆರೆಂಜ್ ಅಲರ್ಟ್ ನೀಡಿದೆ.
ದಕ್ಷಿಣ ಒಳನಾಡು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಇನ್ನು ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಮಳೆ ಸಾಧ್ಯತೆ ಇದೆ. ಭಾರೀ ಮಳೆಯ ಜೊತೆಗೆ 30 ರಿಂದ 40 ಕಿಲೋ ಮೀಟರ್ ವೇಗದಲ್ಲಿ ಗಾಳಿಯೂ ಬೀಸಲಿದೆ.
ಬೆಂಗಳೂರಲ್ಲಿ, 3-4 ದಿನ ಕಾಲ ಮೋಡ ಕವಿದ ವಾತವರಣ ಇರಲಿದ್ದು. ಜುಲೈ 12 ಹಾಗೂ 13 ರಂದು ಬಿರುಗಾಳಿ ಸಹಿತ ಭಾರಿ ಮಳೆ ಬೀಳುವ ಎಲ್ಲಾ ಸಾಧ್ಯತೆ ದಟ್ಟವಾಗಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group




