ರೈತರಿಗೆ ಗುಡ್ ನ್ಯೂಸ್, ಮರು ಜಾರಿಯಾಗಲಿದೆ ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ..!
ರೈತರು (Farmers) ಬಹಳ ಕಷ್ಟ ಪಟ್ಟು ಬೆಳೆ ಬೆಳೆಯುತ್ತಿದ್ದಾರೆ ಆದರೂ ಕೂಡ ಇಂದು ರೈತರು ಸರ್ಕಾರದ ಅನೇಕ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಅಷ್ಟೇ ಅಲ್ಲ ಇಂದು ಮಳೆ ಇಲ್ಲ ಬೆಳೆ ಬೆಳೆಯಲಾರದೇ ರೈತರ ಕಷ್ಟ ಪಾಡು ಹೇಳತೀರಾದಾಗಿದೆ. ಇಂದು ರೈತರು ನೀರಿಗಾಗಿ ಬಹಳ ಕಷ್ಟ ಪಡುತ್ತಿದ್ದಾರೆ. ತಮ್ಮ ಹೊಲ ಗದ್ದೆಗಳ ಪಕ್ಕದಲ್ಲಿ ಇದ್ದ ಹಳ್ಳ ಕೆರೆಗಳಿಗೆ ಅಥವಾ ಬೋರ್ವೆಲ್ ಗಳನ್ನು ಕೊರೆಸಿ ತಮ್ಮ ಜಮೀನಿಗೆ ಕೃಷಿ ಪಂಪ್ ಸೆಟ್ (Agricultural pump set) ಅಳವಡಿಸಿಕೊಂಡಿದ್ದಾರೆ. ಹಾಗೆಯೇ ಇದೀಗ ಸರ್ಕಾರವು ರೈತರಿಗೆ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಕಾರ್ಡ ಜೋಡಣೆ ಕಡ್ಡಾಯ ಮಾಡಲಾಗಿದೆ ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿ :
ಹೌದು, ಇಂದು ಸರ್ಕಾರವು ರೈತರ ಕಷ್ಟವನ್ನು ನಿಗಿಸಲು, ಮಳೆ ಇಲ್ಲದೆ ಅವರು ಬೆಳೆಗಳನ್ನು ಬೆಳೆಯಲು ಪಂಪ್ ಸೆಟ್ ಗಳನ್ನು ಅಳವಡಿಸಿಕೊಡಲಾಗುತ್ತಿದ್ದೆ. ಆದರೆ ಇಂದು ಇಂತಹ ಸರ್ಕಾರದ ಯೋಜನೆಯು ರೈತರ ಪಾಲಿಗೆ ಸೇರದೆ ಇನ್ನಾರದೇ ಪಾಲಿಗೆ ಸೇರುತ್ತಿದೆ. ಇಂತಹ ಸಮಸ್ಯೆಗಳನ್ನು ದೂರ ಮಾಡಲು ಸರ್ಕಾರವು ರೈತರಿಗೆ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಕಾರ್ಡ್ ಜೋಡಣೆ (Adharcard link) ಕಡ್ಡಾಯ ಮಾಡಲಾಗಿದೆ. ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿ ಮಾಡಲಾಗಿದೆ. ರೈತರ ಈ ಸಮಸ್ಯೆಗಳನ್ನು ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರೈತರ ಬೇಡಿಕೆಗಳನ್ನು ಪರಿಶೀಲಿಸಿ ಬಹು ಮುಖ್ಯವಾದ ಸಮಸ್ಯೆಗಳಿಗೆ ಶೀಘ್ರ ಪರಿಹಾರ ದೊರಕಿಸಿಕೊಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ.
ರೈತರು ಸರ್ಕಾರದ ಮುಂದಿಟ್ಟ ಹಲವು ಬೇಡಿಕೆಗಳು (demands) :
ಕೃಷಿ ಪಂಪ್ಸೆಟ್ ಗಳಿಗೆ ಆಧಾರ್ ಜೋಡಣೆ ಕಾರ್ಯವನ್ನು ತಕ್ಷಣ ಕೈಬಿಡಬೇಕು. ಭೂ ಸುಧಾರಣಾ ತಿದ್ದುಪಡಿ ಕಾಯ್ದೆ (Land Reforms Amendment Act) ರದ್ದುಗೊಳಿಸಬೇಕು. ಕೃಷಿ ಸಾಲ(agriculture loan) ಮರುಪಾವತಿಸದ ರೈತರ ಜಮೀನು ವಶಪಡಿಸಿಕೊಳ್ಳುವ ಹಣಕಾಸು ಆಸ್ತಿಗಳ ಭದ್ರತೆ ಮತ್ತು ಪುನರ್ ನಿರ್ಮಾಣ ಕಾಯ್ದೆ (Securing and Reconstruction of Financial Assets Act) ರದ್ದು ಮಾಡಬೇಕು. ಇದಷ್ಟೇ ಅಲ್ಲದೆ ಬರ, ಅತಿವೃಷ್ಟಿ, ಪ್ರವಾಹದಿಂದ ಹಾನಿಯಾದ ಬೆಳೆಗಳಿಗೆ ವೈಜ್ಞಾನಿಕ ಮಾನದಂಡಗಳ ಅನ್ವಯ ಪರಿಹಾರ ಕೊಡಬೇಕು. ಖಾಸಗಿ ಫೈನಾನ್ಸ್, ಬ್ಯಾಂಕ್ ಸಾಲ ವಸೂಲಿ ನೆಪದಲ್ಲಿ ರೈತರಿಗೆ ಕಿರುಕುಳ (Harassment) ನೀಡುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು. ಜಿಂದಾಲ್ ಗೆ ನೀಡಿದ 3667 ಎಕರೆ ಜಮೀನು ಹಿಂಪಡೆಯಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ರೈತರು ಒತ್ತಾಯಿಸಿದ್ದಾರೆ.
ರೈತರ ಇತರ ಸಮಸ್ಯೆಗಳಿಗೆ ಪರಿಹಾರ ಮತ್ತು ಅಕ್ರಮ ಕೃಷಿಯ ಪಂಪ್ ಸೆಟ್ ಗಳ ಸಕ್ರಮದ ಯೋಜನೆಯನ್ನು ಮರು ಜಾರಿಮಾಡುವಂತೆ ಸೂಚನೆ :
ನಿಯೋಗದ ಮನವಿಯನ್ನು ಆಲಿಸಿದ ಸಿಎಂ, ಅಕ್ರಮ ಕೃಷಿಯ ಪಂಪ್ ಸೆಟ್ ಗಳ ಸಕ್ರಮದ ಯೋಜನೆಯನ್ನು ಮರು ಜಾರಿಯನ್ನು ಸೇರಿ ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ (problems) ಆದ್ಯತೆಗಳ ಮೇರೆಗೆ ಪರಿಹಾರವನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group




