ಮುಂದಿನ ತಿಂಗಳು ರೇಷನ್ ಬೇಕೆಂದರೆ ಈ ಕೆಲಸ ಮಾಡಿ!. ಪಡಿತರ ಚೀಟಿದಾರರೇ ಡಿಸೆಂಬರ್ 31ರೊಳಗೆ ಇ-ಕೆವೈಸಿ ಮಾಡುವುದು ಕಡ್ಡಾಯ.
ಆಧಾರ್ ಕಾರ್ಡ್, ರೇಷನ್ ಕಾರ್ಡ್, ವೋಟರ್ ಐಡಿ ಈ ರೀತಿಯ ಹಲವು ದಾಖಲೆಗಳು (Documents) ಇಂದು ಜನರಿಗೆ ಅಗತ್ಯವಾದ ದಾಖಲೆಗಳಾಗಿವೆ. ಅದರಲ್ಲೂ ರೇಷನ್ ಕಾರ್ಡ್ ಎಲ್ಲರಿಗೂ ಕೂಡ ಅವಶ್ಯಕವಾಗಿ ಬೇಕಾಗಿರುವಂತಹ ಒಂದು ದಾಖಲೆ. ಕಾಂಗ್ರೆಸ್ ಸರ್ಕಾರ (Congress government) ಅಧಿಕಾರಕ್ಕೆ ಬಂದಾಗಿನಿಂದಲೂ ರೇಷನ್ ಕಾರ್ಡ್ ಮಾಡಿಸುವವರ ಸಂಖ್ಯೆ ಹೆಚ್ಚಾಗಿದೆ. ಜನರು ರೇಷನ್ ಕಾರ್ಡ್ ಏನು ಮಾಡಿಸಿಕೊಳ್ಳುತ್ತಿದ್ದಾರೆ, ಆದರೆ ಅದಕ್ಕೆ ಪೂರಕವಾಗಿ ಇ-ಕೆವೈಸಿ ಮಾಡಿಸುವುದನ್ನು ಮರೆತು ಬಿಟ್ಟಿದ್ದಾರೆ. ಇ-ಕೆವೈಸಿ ಎಂದರೆ ನೀವು ಯಾವುದೇ ರೀತಿಯ ಹಣಕಾಸಿನ ಕೊಡುಗೆಗಳನ್ನು ಪಡೆಯುವ ಬದಲು ಗ್ರಾಹಕರ ಗುರುತು ಮತ್ತು ವಿಳಾಸದ ವಿವರಗಳನ್ನು ದೃಢೀಕರಿಸುವ ಅಥವಾ ಪರಿಶೀಲಿಸುವ ಪ್ರಕ್ರಿಯೆಯಾಗಿದೆ. ಆದ್ದರಿಂದ ರೇಷನ್ ಕಾರ್ಡ್ (ration card) ಗೆ ಇ-ಕೆವೈಸಿ (E-KYC) ಮಾಡಿಸಲು ಸರ್ಕಾರ ಗಡುವು ನೀಡಿದೆ. ಇ-ಕೆವೈಸಿ ಮಾಡಿಸಲು ಯಾವುದು ಕೊನೆಯ ದಿನಾಂಕ? ಯಾವೆಲ್ಲಾ ದಾಖಲೆಗಳು ಬೇಕು? ಇ-ಕೆವೈಸಿ ಹೇಗೆ ಮಾಡಿಸಬೇಕು? ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಇ-ಕೆವೈಸಿ ಮಾಡಿಸಲು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಮಾಹಿತಿ ನೀಡಿದ್ದು, ಎಲ್ಲ ಜಿಲ್ಲೆಯಲ್ಲಿಯೂ ಕೂಡ ಪಡಿತರ ಚೀಟಿಗಳನ್ನು ಪಡೆದುಕೊಂಡಿರುವ ಕುಟುಂಬಗಳು ಇದ್ದಾವೆ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವದು ಕಡ್ಡಾಯವಾಗಿದೆ ಎಂದು ತಿಳಿಸಿದೆ. ಈ ಹಿಂದೆ ರಾಜ್ಯ ಸರ್ಕಾರ ಪಡಿತರ ಚೀಟಿಗೆ (ration card) ಕುಟುಂಬದ ಸದಸ್ಯರ ಇ-ಕೆವೈಸಿ ಕಡ್ಡಾಯಗೊಳಿಸಿದ್ದರೂ ಕೂಡ ಕೆಲವರು ಇ-ಕೆವೈಸಿ ಮಾಡಿಸಿರುವುದಿಲ್ಲ. ಹಾಗಾಗಿ ಅಂತಹ ಪಡಿತರ ಚೀಟಿಗಳಿಗೆ ರೇಷನ್ ನೀಡುವುದನ್ನು ಮುಂದಿನ ತಿಂಗಳಿನಿಂದ ಸ್ಥಗಿತಗೊಳಿಸುವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ.
ರೇಷನ್ ಕಾರ್ಡ್ ಗೆ ಇ-ಕೆವೈಸಿ ಮಾಡಿಸಲು ಕೊನೆಯ ದಿನಾಂಕ ಯಾವುದು?
ಕರ್ನಾಟಕ ರಾಜ್ಯದ ಪಡಿತರ ಚೀಟಿದಾರರು ತಮ್ಮ ಪಡಿತರ ಚೀಟಿಗಳ ಇ-ಕೆವೈಸಿ (ಆಧಾರ್ ಆಧಾರಿತ ಬೆರಳಚ್ಚು ದೃಢೀಕರಣ) ಪ್ರಕ್ರಿಯೆಯನ್ನು ಡಿಸೆಂಬರ್ 31, 2024ರೊಳಗೆ ಪೂರ್ಣಗೊಳಿಸಬೇಕೆಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸೂಚಿಸಿದೆ. ಈ ಗಡುವಿನೊಳಗೆ ಇ-ಕೆವೈಸಿ ಮಾಡದಿದ್ದಲ್ಲಿ, ಪಡಿತರ ಚೀಟಿಗಳು ರದ್ದಾಗುವ ಸಾಧ್ಯತೆ ಇದೆ. ಗ್ರಾಹಕರು ಸಂಬಂಧ ಪಟ್ಟ ನ್ಯಾಯ ಬೆಲೆ ಅಂಗಡಿಗಳಲ್ಲಿ ಬೆ.7.00 ರಿಂದ ರಾ. 9.00 ರವರೆಗೆ ಉಚಿತವಾಗಿ ಮಾಡಿಸಿಕೊಳ್ಳುವುದು.
ಇ-ಕೆವೈಸಿ ಪ್ರಕ್ರಿಯೆಯ ಅವಶ್ಯಕತೆ:
ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ, ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಇದರಿಂದ ಪಡಿತರ ವಿತರಣೆಯಲ್ಲಿ ಪಾರದರ್ಶಕತೆ ಮತ್ತು ನಿಖರತೆ ಸಾಧಿಸಲು ಸಾಧ್ಯವಾಗುತ್ತದೆ. ಸುಳ್ಳು ದಾಖಲೆಗಳ ಮೂಲಕ ಬಿಪಿಎಲ್ (ಬ್ಲೋ ಪಾವರ್ಟಿ ಲೈನ್) ಕಾರ್ಡ್ ಪಡೆದುಕೊಂಡಿರುವವರು ತಮ್ಮ ಪಡಿತರ ಚೀಟಿಗಳನ್ನು ತಕ್ಷಣವೇ ಹಿಂತಿರುಗಿಸಬೇಕೆಂದು ಇಲಾಖೆ ಸೂಚಿಸಿದೆ.
ರೇಷನ್ ಕಾರ್ಡ್ ಗೆ ಇ-ಕೆವೈಸಿ (eKYC) ಮಾಡಿಸುವ ಹೊಸ ಪ್ರಕ್ರಿಯೆ:
ಪಡಿತರ ಚೀಟಿದಾರರು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ತೆರಳಿ, ಬೆರಳಚ್ಚು ನೀಡುವ ಮೂಲಕ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. ಈ ಪ್ರಕ್ರಿಯೆಗೆ ಯಾವುದೇ ಶುಲ್ಕವಿಲ್ಲ. ಆಧಾರ್ ದೃಢೀಕರಣ ಮಾಡಿಸದೇ ಇರುವ ಫಲಾನುಭವಿಗಳಿಗೆ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು.
ರೇಷನ್ ಕಾರ್ಡ್ ಗೆ ಇ-ಕೆವೈಸಿ ಮಾಡಿಸಲು ಈ ದಾಖಲೆಗಳು (Documents) ಕಡ್ಡಾಯ:
ಪಡಿತರ ಚೀಟಿಯ ಒರಿಜಿನಲ್ ಪ್ರತಿ.
ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಫೋಟೋಕಾಪಿ.
ಕುಟುಂಬದ ಯಜಮಾನನ ಆಧಾರ್ ಕಾರ್ಡ್ ನಕಲು ಪ್ರತಿ.
ಬ್ಯಾಂಕ್ ಪಾಸ್ಬುಕ್ನ ಫೋಟೋಕಾಪಿ.
ಕುಟುಂಬದ ಯಜಮಾನನ ಎರಡು ಪಾಸ್ಪೋರ್ಟ್ ಅಳತೆಯ ಪೋಟೋ.
ಗಮನಿಸಿ :
ಪಡಿತರ ಚೀಟಿದಾರರು ಡಿಸೆಂಬರ್ 31, 2024ರೊಳಗೆ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದು ಕಡ್ಡಾಯವಾಗಿದೆ. ಇದರಿಂದ ಪಡಿತರ ಚೀಟಿಗಳ ಮಾನ್ಯತೆ ಉಳಿಯುತ್ತದೆ ಮತ್ತು ಪಡಿತರ ವಿತರಣೆಯಲ್ಲಿ ಪಾರದರ್ಶಕತೆ ಸಾಧಿಸಲು ಸಾಧ್ಯವಾಗುತ್ತದೆ. ಅದಕ್ಕಾಗಿ ತಕ್ಷಣವೇ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ, ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group




