ಬೆಂಗಳೂರು, ಮಾರ್ಚ್ 25:
ಕರ್ನಾಟಕ ಸರ್ಕಾರವು ಆಸ್ತಿಗಳ ಮಾರಾಟ ಮತ್ತು ಖರೀದಿಗೆ ಇ-ಖಾತಾ ಕಡ್ಡಾಯವಾಗಿಸಿದೆ. ಇದರ ಅನುಷ್ಠಾನದಲ್ಲಿ ಉಂಟಾಗುವ ಗೊಂದಲಗಳನ್ನು ತಪ್ಪಿಸಲು ಇ-ಆಸ್ತಿ ತಂತ್ರಾಂಶವನ್ನು ಸರಳೀಕರಿಸಿ ಪರಿಣಾಮಕಾರಿಯಾಗಿ ಬಳಸಲು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಈ ನಿಟ್ಟಿನಲ್ಲಿ, ಆಸ್ತಿ ಕಣಜ ತಂತ್ರಾಂಶದಲ್ಲಿ ಗಣಕೀಕರಣಗೊಂಡ ಆಸ್ತಿಗಳ ವಿವರಗಳನ್ನು ಪರಿಶೀಲಿಸಿ, ಇ-ಆಸ್ತಿ ತಂತ್ರಾಂಶದಲ್ಲಿ ದಾಖಲಿಸುವ ಬಗ್ಗೆ ಹೊಸ ಸುತ್ತೋಲೆ ಹೊರಡಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಸುತ್ತೋಲೆಯ ಮುಖ್ಯ ಅಂಶಗಳು:
ನೋಡಲ್ ಅಧಿಕಾರಿಗಳ ನೇಮಕ: ಮಹಾನಗರ ಪಾಲಿಕೆ, ನಗರ ಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳು ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು.
ಮಾಹಿತಿ ಪ್ರಸಾರ: ನೋಡಲ್ ಅಧಿಕಾರಿಗಳ ಮೊಬೈಲ್ ಸಂಖ್ಯೆ ಮತ್ತು ವಿಳಾಸವನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಬೇಕು.
ಇ-ಆಸ್ತಿ ಡಿಜಿಟಲೀಕರಣ: ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 57 ಲಕ್ಷ ಆಸ್ತಿಗಳಲ್ಲಿ 20 ಲಕ್ಷವನ್ನು ಈಗಾಗಲೇ ಡಿಜಿಟಲ್ ಮಾಡಲಾಗಿದೆ. ಉಳಿದ 37 ಲಕ್ಷ ಆಸ್ತಿಗಳ ಡಿಜಿಟಲೀಕರಣವನ್ನು ತ್ವರಿತಗೊಳಿಸಲಾಗುತ್ತಿದೆ.
ಇ-ಖಾತಾ ಅನುಷ್ಠಾನದ ಹಂತಗಳು:
*KMDS ತಂತ್ರಾಂಶದಲ್ಲಿ ದತ್ತಾಂಶವನ್ನು ಪರಿಶೀಲಿಸಿ, 10.03.2025 ರೊಳಗೆ ಇ-ಆಸ್ತಿ ತಂತ್ರಾಂಶದಲ್ಲಿ ದಾಖಲಿಸಬೇಕು.
*ನಮೂನೆ-2/3 ಅನ್ನು ಸೃಷ್ಟಿಸಿ ಆಸ್ತಿ ಮಾಲೀಕರಿಗೆ ನೀಡಬೇಕು.
*ಸಾರ್ವಜನಿಕರಿಗೆ ಸುಗಮವಾಗಿ ಮಾಹಿತಿ ದೊರಕುವಂತೆ ಮೇಳಗಳನ್ನು ಏರ್ಪಡಿಸುವುದು.
*ಸಹಾಯ ಕೇಂದ್ರಗಳನ್ನು (Helpdesk) ಸ್ಥಾಪಿಸಿ, ನಾಗರಿಕರಿಗೆ ಮಾರ್ಗದರ್ಶನ ನೀಡುವುದು.
ಇ-ಖಾತಾ ಪಡೆಯಲು ಅಗತ್ಯ ದಾಖಲೆಗಳು:
ಅಧಿಕೃತ ಆಸ್ತಿ ಮಾಲೀಕರು: ಮೂಲ ದಾಖಲೆಗಳು, ಐಡಿ ಪುರಾವೆ.
ಅನಧಿಕೃತ ಆಸ್ತಿ ಮಾಲೀಕರು: ಹೆಚ್ಚುವರಿ ದಾಖಲೆಗಳು (ಉದಾ: ಸ್ವಾಮ್ಯದ ಪತ್ರ, ಸಾಕ್ಷ್ಯಗಳು).
ಮುಂದಿನ ಹಂತಗಳು:
*1.03.2025 ರೊಳಗೆ ಎಲ್ಲಾ ಆಸ್ತಿಗಳನ್ನು ಇ-ಆಸ್ತಿ ತಂತ್ರಾಂಶದಲ್ಲಿ ದಾಖಲಿಸುವುದು.
*ನಗರ ಸ್ಥಳೀಯ ಸಂಸ್ಥೆಗಳು ಸಾಪ್ತಾಹಿಕ ಮೌಲ್ಯಮಾಪನ ನಡೆಸಿ, ವಿಳಂಬವಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದು.
*ಇ-ಖಾತಾ ಕಡ್ಡಾಯವಾಗಿಸುವ ಮೂಲಕ, ಕರ್ನಾಟಕ ಸರ್ಕಾರವು ಪಾರದರ್ಶಕತೆ ಮತ್ತು ಸುಗಮ ಆಸ್ತಿ ವಹಿವಾಟು ನಡೆಸುವ ಗುರಿ ಹೊಂದಿದೆ. ನಾಗರಿಕರು ತಮ್ಮ ಆಸ್ತಿ ದಾಖಲೆಗಳನ್ನು ತ್ವರಿತವಾಗಿ ಪಡೆಯಲು ಸೂಚನೆಗಳನ್ನು ಪಾಲಿಸಬೇಕು.
ಹೆಚ್ಚಿನ ಮಾಹಿತಿಗೆ: ನಿಮ್ಮ ಸ್ಥಳೀಯ ನಗರ ಸಂಸ್ಥೆ ಅಥವಾ ಕರ್ನಾಟಕ ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

“ಶಿವರಾಜ್ ಅವರು NeedsOfPublic.in ನಲ್ಲಿ ಸಾರ್ವಜನಿಕ, ಶೈಕ್ಷಣಿಕ ಮತ್ತು ಸ್ಥಳೀಯ ಸುದ್ದಿಗಳ ವಿಭಾಗದ ಹಿರಿಯ ಸಂಪಾದಕರಾಗಿದ್ದಾರೆ. ಪತ್ರಿಕೋದ್ಯಮದಲ್ಲಿ 6 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಇವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಂಕೀರ್ಣ ಯೋಜನೆಗಳನ್ನು ಹಾಗೂ ವಿದ್ಯಾರ್ಥಿವೇತನಗಳನ್ನು (Scholarships) ವಿಶ್ಲೇಷಿಸಿ, ಜನಸಾಮಾನ್ಯರಿಗೆ ಮತ್ತು ವಿದ್ಯಾರ್ಥಿಗಳಿಗೆ ಅದರ ಪ್ರಯೋಜನಗಳನ್ನು ಸುಲಭವಾಗಿ ಅರ್ಥೈಸುವಲ್ಲಿ ಎಕ್ಸ್ಪರ್ಟ್ ಆಗಿದ್ದಾರೆ. ಇದರ ಜೊತೆಗೆ ಪ್ರಮುಖ ಶೈಕ್ಷಣಿಕ ಅಪ್ಡೇಟ್ಗಳು, ಪರೀಕ್ಷಾ ಫಲಿತಾಂಶಗಳು ಮತ್ತು ವಿಶ್ವಾಸಾರ್ಹ ದೈನಂದಿನ ಹವಾಮಾನ ವರದಿಯನ್ನು ಒದಗಿಸುತ್ತಾರೆ. ವಿದ್ಯಾರ್ಥಿಗಳ ಭವಿಷ್ಯ ಮತ್ತು ಸಾರ್ವಜನಿಕ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದು ಇವರ ಮುಖ್ಯ ಗುರಿಯಾಗಿದೆ.”


WhatsApp Group




