ರಾಪಿಡೋ(Rapido), ಓಲಾ(Ola), ಊಬರ್(Uber) ಸೇವೆಗಳ ತಾತ್ಕಾಲಿಕ ಸ್ಥಗಿತ – ಹೈಕೋರ್ಟ್ ತೀರ್ಪಿನಿಂದ ಸಾವಿರಾರು ಉದ್ಯೋಗಗಳಿಗೆ ಹೊಡೆತ!
ಕರ್ನಾಟಕ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳನ್ನು ನಿಯಂತ್ರಿಸುವ ಸಂಬಂಧ ಮಹತ್ವದ ಆದೇಶವನ್ನು ಕರ್ನಾಟಕ ಹೈಕೋರ್ಟ್ ನೀಡಿದ್ದು, ರಾಜ್ಯದಲ್ಲಿ ರಾಪಿಡೋ, ಊಬರ್, ಓಲಾ ಸೇರಿದಂತೆ ಎಲ್ಲಾ ಬೈಕ್ ಟ್ಯಾಕ್ಸಿ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಹೌದು, ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಬೈಕ್ ಟ್ಯಾಕ್ಸಿ ಸೇವೆಗಳ ಮೇಲೆ ಹೈಕೋರ್ಟ್(High Court) ತಾತ್ಕಾಲಿಕ ನಿರ್ಬಂಧ ವಿಧಿಸುವ ಮಹತ್ವದ ಆದೇಶ ನೀಡಿದೆ. ರಾಪಿಡೋ, ಓಲಾ, ಊಬರ್ ಸೇರಿದಂತೆ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಬೈಕ್ ಟ್ಯಾಕ್ಸಿ ಸೇವೆಗಳ ಕಾರ್ಯಾಚರಣೆಯನ್ನು ಮುಂದಿನ ಆರು ವಾರಗಳಲ್ಲಿ ಸಂಪೂರ್ಣವಾಗಿ ಸ್ಥಗಿತಗೊಳಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ. ಹಾಗಿದ್ದರೆ ಈ ಆದೇಶದ ಹಿನ್ನೆಲೆ ಏನು? ಬೈಕ್ ಟ್ಯಾಕ್ಸಿಗಳ ನಿರ್ಬಂಧಕ್ಕೆ ಪ್ರಮುಖ ಕಾರಣಗಳು ಏನು ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಈ ಆದೇಶದ ಹಿನ್ನೆಲೆ ಏನು?:
ರಾಜ್ಯದ ಸಾರಿಗೆ ಇಲಾಖೆಯು ಬೈಕ್ ಟ್ಯಾಕ್ಸಿಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸೂಕ್ತ ಮಾರ್ಗಸೂಚಿಗಳನ್ನು ರೂಪಿಸದೇ ಇರುವ ಹಿನ್ನೆಲೆಯಲ್ಲಿ ಹೈಕೋರ್ಟ್ ಈ ತಾತ್ಕಾಲಿಕ ನಿರ್ಬಂಧವನ್ನು ವಿಧಿಸಿದೆ. 1988ರ ಮೋಟಾರು ವಾಹನ ಕಾಯ್ದೆ (Motor Vehicles Act), ಸೆಕ್ಷನ್ 3 ನ ಪ್ರಕಾರ, ಸರ್ಕಾರವು ನಿಗದಿತ ನಿಯಮಾವಳಿಗಳನ್ನು ಸಿದ್ಧಪಡಿಸುವ ಅಗತ್ಯವಿದೆ.
ಹೈಕೋರ್ಟ್ ನೀಡಿದ ಆದೇಶದ ಪ್ರಕಾರ, ರಾಜ್ಯ ಸರ್ಕಾರವು ಮೂರು ತಿಂಗಳೊಳಗಾಗಿ ಸೂಕ್ತ ಮಾರ್ಗಸೂಚಿಗಳನ್ನು ಜಾರಿ ಮಾಡಬೇಕಾಗಿದೆ. ಇನ್ನು, ಈ ತೀರ್ಪಿನ ಹಿನ್ನೆಲೆಯಲ್ಲಿ, ರಾಜ್ಯದ ಹಲವಾರು ಬೈಕ್ ಟ್ಯಾಕ್ಸಿ(Bike taxi) ಸೇವಾ ಕಂಪನಿಗಳಿಗೆ ದೊಡ್ಡ ಹಿನ್ನಡೆಯಾಗುವ ಸಾಧ್ಯತೆ ಇದೆ.
ರಾಜ್ಯದ ಹಲವಾರು ಯುವಕರು ಮತ್ತು ಮಧ್ಯಮ ವರ್ಗದ ಜನರು ರಾಪಿಡೋ, ಓಲಾ, ಊಬರ್ ಮುಂತಾದ ಸೇವೆಗಳ ಮೂಲಕ ಆದಾಯ ಸಂಪಾದಿಸುತ್ತಿದ್ದರು. ಹೈಕೋರ್ಟ್ ಆದೇಶದ(High Court order) ಹಿನ್ನೆಲೆಯಲ್ಲಿ ಈ ವಲಯದಲ್ಲಿ ಉದ್ಯೋಗ ಹೊಂದಿದವರ ವೃತ್ತಿ ಭದ್ರತೆ ಮೇಲೂ ತೀವ್ರ ಪರಿಣಾಮ ಬೀರುತ್ತದೆ. ಇದೇ ಸಂದರ್ಭದಲ್ಲಿ, ಪ್ರಯಾಣಿಕರಿಗೆ ಅಗ್ಗದ ಸಾರಿಗೆ ಆಯ್ಕೆಯ ಅಭಾವ ಉಂಟಾಗಬಹುದು ಎಂದು ಹೇಳಲಾಗುತ್ತಿದೆ.
ಬೈಕ್ ಟ್ಯಾಕ್ಸಿಗಳ ನಿರ್ಬಂಧದ ಪ್ರಮುಖ ಕಾರಣಗಳು ಏನು?:
ಈ ನಿರ್ಬಂಧದ ಹಿಂದೆ ಹಲವು ಪ್ರಮುಖ ಕಾರಣಗಳು ಇದ್ದು, ಅವುಗಳಲ್ಲಿ ಪ್ರಮುಖವಾದವು:
ಮೋಟಾರು ವಾಹನ ಕಾಯ್ದೆಯ ಉಲ್ಲಂಘನೆ :
ಪ್ರಸ್ತುತ ಬೈಕ್ ಟ್ಯಾಕ್ಸಿಗಳು(Bike taxis) ಸರ್ಕಾರದಿಂದ ಮಾನ್ಯತೆ ಪಡೆದ ಮಾರ್ಗಸೂಚಿಗಳ ಅನುಸರಣೆ ಮಾಡುತ್ತಿಲ್ಲ.
ಭದ್ರತಾ ಕಾಳಜಿ :
ಪ್ರಯಾಣಿಕರ ಸುರಕ್ಷತೆ, ವಿಮಾ ಹೊಣೆಗಾರಿಕೆ, ಚಾಲಕರ ಪರೀಕ್ಷೆ ಮತ್ತು ನೋಂದಣಿ ಮುಂತಾದ ಅಂಶಗಳಲ್ಲಿ ಸರಿಯಾದ ನಿಯಮಾವಳಿಗಳ ಕೊರತೆ.
ಆರ್ಥಿಕ ಮತ್ತು ಕಾನೂನು ಸಂಬಂಧಿತ ಸಮಸ್ಯೆಗಳು :
ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘಗಳ ವಿರೋಧ, ಕಾನೂನು ಪ್ರಕ್ರಿಯೆಗಳ ಅನುಸರಣೆ, ಮತ್ತು ಸರ್ಕಾರದ ಆದೇಶದ ಅನುಸರಣೆ ಅಗತ್ಯವಿದೆ.
ನ್ಯಾಯಾಲಯದ ಈ ಆದೇಶದ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರವು ಬೈಕ್ ಟ್ಯಾಕ್ಸಿ ಸೇವೆಗಳಿಗಾಗಿ ಹೊಸ ನಿಯಮಾವಳಿಗಳನ್ನು ರೂಪಿಸಬೇಕು ಮತ್ತು ಸರ್ಕಾರದಿಂದ ಅನುಮೋದನೆ ಪಡೆದು ಮೂರು ತಿಂಗಳ ಒಳಗಾಗಿ(Within three months) ಮಾರ್ಗಸೂಚಿ ಜಾರಿ ಮಾಡಬೇಕು. ಮಾರ್ಗಸೂಚಿಗಳು ಜಾರಿಗೆ ಬಂದ ನಂತರ ಮಾತ್ರ ಈ ಸೇವೆಗಳು ಪುನಾರಂಭಗೊಳ್ಳಬಹುದು.
ಹೈಕೋರ್ಟ್ ತೀರ್ಪು ಕಾನೂನುಬದ್ಧ ಪ್ರಕ್ರಿಯೆಗೆ ಅನುಸಾರವಾದರೂ, ರಾಜ್ಯದ ಜನಸಾಮಾನ್ಯರ ಹಾಗೂ ಸವಾರರ ಆರ್ಥಿಕ ಸ್ಥಿತಿಗೆ ಇದು ದೊಡ್ಡ ಹೊಡೆತ ನೀಡುವ ಸಾಧ್ಯತೆ ಇದೆ. ಸರ್ಕಾರ ತ್ವರಿತವಾಗಿ ಸೂಕ್ತ ನಿಯಮಾವಳಿಗಳನ್ನು ರೂಪಿಸಿ, ಈ ಸೇವೆ ಪುನಃ ಕಾರ್ಯನಿರ್ವಹಿಸಲು ಅವಕಾಶ ನೀಡಬೇಕೆಂದು ಸಾರ್ವಜನಿಕರು ಹಾಗೂ ಉದ್ಯಮಿಗಳು ನಿರೀಕ್ಷಿಸುತ್ತಿದ್ದಾರೆ. ಮುನ್ಸೂಚನೆಯಿಲ್ಲದ ಈ ನಿರ್ಧಾರದಿಂದಾಗಿ ಭವಿಷ್ಯದಲ್ಲಿ ಸರ್ಕಾರಿ ನಿಲುವು ಹೇಗಿರುತ್ತದೆ ಎಂಬುದು ಕುತೂಹಲ ಕೆರಳಿಸಿದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

Sagari leads the ‘Government Schemes’ vertical at NeedsOfPublic.in, where she decodes the latest Central and State government policies for the common citizen. She has over 3 years of experience tracking welfare programs like PM Kisan, Ayushman Bharat, and State Ration updates. Her goal is to ensure every reader understands their eligibility and benefits without confusion. Sagari strictly verifies all updates from official government portals before publishing. Outside of work, she is an advocate for digital literacy in rural India.”
Connect with Sagari:


WhatsApp Group




