ಕರ್ನಾಟಕದಲ್ಲಿ ಮಳೆಯ ಅಬ್ಬರ: ಏಪ್ರಿಲ್ನಲ್ಲಿ ವಾಡಿಕೆಗಿಂತ ಹೆಚ್ಚಿದ ಮಳೆ, ಮುಂದಿನ 7 ದಿನ ಮತ್ತೆ ಜೋರು!
ಬೆಂಗಳೂರು: ಕರ್ನಾಟಕದಲ್ಲಿ ಈ ವರ್ಷದ ಏಪ್ರಿಲ್ ಮೊದಲ ವಾರದಲ್ಲೇ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಹವಮಾನ ಇಲಾಖೆಯ ಪ್ರಕಾರ, ಏಪ್ರಿಲ್ 12 ರಿಂದ 18 ರವರೆಗೆ ಮತ್ತೆ ಜೋರು ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಅತ್ಯಧಿಕ ಮಳೆಯ ದಾಖಲೆ:
2025ರ ಏಪ್ರಿಲ್ ಮೊದಲ ವಾರದಲ್ಲಿ ರಾಜ್ಯದಲ್ಲಿ ವಾಡಿಕೆಗೆ ಸರಾಸರಿ 4.7 ಮಿ.ಮೀ ಮಳೆಯಾಗಬೇಕಿತ್ತು. ಆದರೆ ಈ ಬಾರಿ ಸರಾಸರಿ 19.1 ಮಿ.ಮೀ ಮಳೆಯಾಗಿದೆ.
– ಕರಾವಳಿ: 4.7 ಮಿ.ಮೀ – ಬದಲಿಗೆ 18.1 ಮಿ.ಮೀ
– ಉತ್ತರ ಕನ್ನಡ: 3.8 ಮಿ.ಮೀ ಬದಲಿಗೆ 13.9 ಮಿ.ಮೀ
– ದಕ್ಷಿಣ ಕನ್ನಡ : 5.5 ಮಿ.ಮೀ ಬದಲಿಗೆ 23.8 ಮಿ.ಮೀ
ರಾಜ್ಯದ 25 ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಅತ್ಯಧಿಕವಾಗಿದ್ದು, 3 ಜಿಲ್ಲೆಗಳಲ್ಲಿ ಸಾಮಾನ್ಯ ಪ್ರಮಾಣದ ಮಳೆ ಹಾಗೂ ಒಂದೊಂದು ಜಿಲ್ಲೆಗಳಲ್ಲಿ ಅತಿ ಕಡಿಮೆ ಅಥವಾ ಮಳೆಯೇ ಇಲ್ಲ ಎಂಬ ಸ್ಥಿತಿಯಿದೆ.
ಮುಂದಿನ ದಿನಗಳಲ್ಲಿ ಯಾವೆಲ್ಲ ಜಿಲ್ಲೆಗಳಲ್ಲಿ ಮಳೆ?:
– ಕರಾವಳಿ: ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ
– ದಕ್ಷಿಣ ಕನ್ನಡ: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ದಾವಣಗೆರೆ, ವಿಜಯನಗರ .
– ಉತ್ತರ ಕನ್ನಡ:ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ರಾಯಚೂರು, ಯಾದಗಿರಿ, ಬೀದರ್.
ತಾಜಾ ಮಳೆಯ ವರದಿ:
ಏಪ್ರಿಲ್ 11ರಂದು ಮಂಗಳೂರಿನಲ್ಲಿ 4 ಸೆಂ.ಮೀ ಮಳೆ ದಾಖಲಾಗಿದೆ. ಯಾದಗಿರಿಯ ಶೋರಾಪುರ, ಸೈದಾಪುರ, ಗಬ್ಬೂರ, ರಾಯಚೂರಿನ ಜಾಲಹಳ್ಳಿ, ಬೀದರ್ನ ಕೆಲವು ಭಾಗಗಳಲ್ಲಿ 3 ಸೆಂ.ಮೀ ಮಳೆ ಸುರಿದಿದೆ.
ಪೂರ್ವ ಮುಂಗಾರು ಆರಂಭದ ಸೂಚನೆ?:
ಈ ಬಾರಿಯ ಮಳೆಯು ಪೂರ್ವ ಮುಂಗಾರಿನ ಆರಂಭದ ಸೂಚನೆಯಾಗಬಹುದೆಂಬ ನಿರೀಕ್ಷೆಯಿದೆ. ಕೃಷಿಕರಿಗೂ ನಗರ ನಿವಾಸಿಗಳಿಗೂ ಈ ಮಳೆ ನಿರೀಕ್ಷಿತ ಹವಾಮಾನ ಬದಲಾವಣೆಯ ಸೂಚನೆಯಾಗಿದ್ದು, ಮುಂದಿನ ದಿನಗಳಲ್ಲಿ ಮಳೆ ನಿರ್ವಹಣೆಗೆ ತಯಾರಿ ಅಗತ್ಯವಾಗಿದೆ.
ಸೂಚನೆ:
ಪ್ರಜೆಗಳು ಮಳೆಯ ಸಮಯದಲ್ಲಿ ಸುರಕ್ಷಿತವಾಗಿ ಇರುವಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು. ಸಂಚಾರ, ವಿದ್ಯುತ್ನ ತೊಂದರೆ ಮತ್ತು ಪ್ರವಾಹ ಸಾಧ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳುವುದು ಉತ್ತಮ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

Sagari leads the ‘Government Schemes’ vertical at NeedsOfPublic.in, where she decodes the latest Central and State government policies for the common citizen. She has over 3 years of experience tracking welfare programs like PM Kisan, Ayushman Bharat, and State Ration updates. Her goal is to ensure every reader understands their eligibility and benefits without confusion. Sagari strictly verifies all updates from official government portals before publishing. Outside of work, she is an advocate for digital literacy in rural India.”
Connect with Sagari:


WhatsApp Group




