ಬೆಂಗಳೂರು: ಕರ್ನಾಟಕ ಮರಾಠಾ ಅಭಿವೃದ್ಧಿ ನಿಗಮವು (Karnataka Maratha Development Corporation) 2025-26ನೇ ಆರ್ಥಿಕ ವರ್ಷಕ್ಕೆ ಸಂಬಂಧಿಸಿದಂತೆ ಹಿಂದುಳಿದ ವರ್ಗದ ಮರಾಠಾ ಸಮುದಾಯದ ಸದಸ್ಯರಿಗಾಗಿ ಹಲವಾರು ಯೋಜನೆಗಳನ್ನು ಪ್ರಕಟಿಸಿದೆ. ಈ ಯೋಜನೆಗಳು ಶಿಕ್ಷಣ, ಸ್ವರೋಜಗಾರಿಕೆ, ನೀರಾವರಿ ಮತ್ತು ಇತರ ಅಭಿವೃದ್ಧಿ ಕಾರ್ಯಕ್ರಮಗಳನ್ನು ಒಳಗೊಂಡಿವೆ. ಸರ್ಕಾರದ ಈ ಪಹಲವು ಯೋಜನೆಗಳಿಂದ ಸಮುದಾಯದ ಯುವಕರು, ವಿದ್ಯಾರ್ಥಿಗಳು ಮತ್ತು ಉದ್ಯೋಗಾರ್ಥಿಗಳು ಪ್ರಯೋಜನ ಪಡೆಯಬಹುದು..ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಯೋಜನೆಗಳ ವಿವರಗಳು
- ಶಹಾಜೀರಾಜೇ ಸಮೃದ್ಧಿ ಯೋಜನೆ – ಈ ಯೋಜನೆಯಡಿಯಲ್ಲಿ ಸ್ವಯಂ ಉದ್ಯೋಗಿಗಳಿಗೆ ಸಾಲ ಮತ್ತು ಸಹಾಯಧನ ನೀಡಲಾಗುತ್ತದೆ.
- ಜೀಜಾವು ಜಲಭಾಗ್ಯ ಯೋಜನೆ – ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿಯಲ್ಲಿ ಕೃಷಿಕರಿಗೆ ನೀರಾವರಿ ಸೌಲಭ್ಯಗಳನ್ನು ಒದಗಿಸಲಾಗುತ್ತದೆ.
- ಅರಿವು ಶೈಕ್ಷಣಿಕ ಸಾಲ ಯೋಜನೆ – ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಸಾಲ ನೀಡಲಾಗುತ್ತದೆ.
- ಶಾಹುಮಹಾರಾಜ ವಿದೇಶಿ ವ್ಯಾಸಂಗ ಸಾಲ ಯೋಜನೆ – ವಿದೇಶದ ವಿಶ್ವವಿದ್ಯಾಲಯಗಳಲ್ಲಿ ಓದಲು ಬಯಸುವ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಒದಗಿಸಲಾಗುತ್ತದೆ.
- ಮರಾಠಾ ಮಿಲ್ಟ್ರೀ ಹೋಟೆಲ್ ಯೋಜನೆ – ಹೋಟೆಲ್ ಮತ್ತು ಹಾಸ್ಟೆಲ್ ವ್ಯವಸ್ಥಾಪನೆಗೆ ಸಂಬಂಧಿಸಿದ ತರಬೇತಿ ಮತ್ತು ಸಾಲ ಸೌಲಭ್ಯ.
- ಸ್ವಯಂ ಉದ್ಯೋಗ ಸಾಲ ಯೋಜನೆ – ವ್ಯಾಪಾರ ಮತ್ತು ಸಣ್ಣ ಉದ್ಯಮಗಳನ್ನು ಪ್ರಾರಂಭಿಸಲು ಬ್ಯಾಂಕುಗಳ ಸಹಯೋಗದಲ್ಲಿ ಸಾಲ ನೀಡಲಾಗುತ್ತದೆ.
- ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆ – ವಿಶೇಷ ಸಮುದಾಯಗಳಿಗೆ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ-ಅಲೆಮಾರಿ ಸಮುದಾಯಗಳು ಹೊರತುಪಡಿಸಿ) ಹೆಚ್ಚಿನ ಪ್ರಯೋಜನಗಳನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿದಾರರು ತಮ್ಮ ಆಧಾರ್ ಕಾರ್ಡ್ ಮತ್ತು ಮೊಬೈಲ್ ನಂಬರ್ ಲಿಂಕ್ ಮಾಡಿರಬೇಕು.
- ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ (Aadhaar Seeding) ಮಾಡಿರಬೇಕು.
- ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬೇಕು.
- ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಜುಲೈ 4, 2025 ರೊಳಗೆ ಅರ್ಜಿ ಸಲ್ಲಿಸಬೇಕು (ಶೈಕ್ಷಣಿಕ ಸಾಲ ಯೋಜನೆಗೆ ಕೊನೆಯ ದಿನಾಂಕ ಇಲ್ಲ).
- ಒಂದು ಕುಟುಂಬದಿಂದ ಒಬ್ಬರಿಗೆ ಮಾತ್ರ ಯಾವುದಾದರೂ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ
- ಅಧಿಕೃತ ವೆಬ್ಸೈಟ್: https://kmcdc.karnataka.gov.in
- ಸಹಾಯವಾಣಿ: 8867537799
- ದೂರವಾಣಿ: 080-29903994
ಕರ್ನಾಟಕ ಮರಾಠಾ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಡಾ. ಪ್ರಕಾಶ್ ಆರ್. ಪಾಗೋಜಿ ಅವರು ಈ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡಿದ್ದಾರೆ. ಸಮುದಾಯದ ಸದಸ್ಯರು ಈ ಅವಕಾಶವನ್ನು ಪೂರ್ಣವಾಗಿ ಬಳಸಿಕೊಳ್ಳುವಂತೆ ನಿಗಮವು ಅನುರೋಧಿಸಿದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

Shivaraj is the Lead Editor at NeedsOfPublic.in with over 4 years of experience tracking Indian government schemes and educational updates. He specializes in simplifying complex notifications from the Central and State governments to help the public understand their benefits. Before joining NeedsOfPublic, Shivaraj worked as a Content Writer focusing on Civic issues. When he isn’t decoding the latest circulars, he enjoys reading about digital literacy.”
Follow Shivaraj on:


WhatsApp Group




