ಪರಿಶಿಷ್ಟ ಜಾತಿಯ(Scheduled caste) ವಿದ್ಯಾರ್ಥಿಗಳಿಗೆ ‘ಪ್ರೋತ್ಸಾಹಧನ’ ಯೋಜನೆ: ಪ್ರಥಮ ದರ್ಜೆ ಉತ್ತೀರ್ಣರಿಗೆ ಸರ್ಕಾರದಿಂದ ಆರ್ಥಿಕ ನೆರವು
ಶಿಕ್ಷಣದಲ್ಲಿ ಸಾಧನೆಗೆ ಉತ್ತೇಜನ ನೀಡಲು ಮತ್ತು ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳನ್ನು ಹೆಚ್ಚು ಶಿಕ್ಷಣ ಕಡೆಗೆ ಪ್ರೇರೇಪಿಸಲು ಕರ್ನಾಟಕ ಸರ್ಕಾರ ಮತ್ತೊಂದು ಪ್ರಮುಖ ನಿರ್ಧಾರ ತೆಗೆದುಕೊಂಡಿದೆ. ರಾಜ್ಯದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗಾಗಿ ಸಮಾಜ ಕಲ್ಯಾಣ ಇಲಾಖೆ ಪ್ರಕಟಿಸಿರುವ ‘ಪ್ರೋತ್ಸಾಹಧನ’ (Incentive Scheme) ಯೋಜನೆಯಡಿ, ಶಿಕ್ಷಣದ ವಿವಿಧ ಹಂತಗಳಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಗೊಂಡವರಿಗೆ ಆರ್ಥಿಕ ಬಹುಮಾನ ನೀಡಲಾಗುತ್ತದೆ. ಈ ಬಗ್ಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹತೆ, ದಾಖಲೆಗಳು ಹಾಗೂ ಅರ್ಜಿ ಸಲ್ಲಿಕೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಯೋಜನೆಯ ಉದ್ದೇಶವೇನು?:
ಈ ಯೋಜನೆಯ ಪ್ರಧಾನ ಉದ್ದೇಶ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ವಿದ್ಯಾರ್ಥಿಗಳಿಗೆ ಉತ್ತೇಜನ ನೀಡುವುದು. ವಿಶೇಷವಾಗಿ, ಪರಿಶಿಷ್ಟ ಜಾತಿಯ (Scheduled Castes) ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ವಿದ್ಯಾಭ್ಯಾಸ ಮುಂದುವರಿಸಲು ಈ ನೆರವು ಸಹಾಯಕವಾಗುತ್ತದೆ. ಎಸ್ಎಸ್ಎಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಕೃಷಿ, ಪಶುಸಂಗೋಪನೆ, ಎಂಜಿನಿಯರಿಂಗ್ ಮತ್ತು ವೈದ್ಯಕೀಯ ವಿದ್ಯಾಭ್ಯಾಸದ ವಿದ್ಯಾರ್ಥಿಗಳು ಈ ಯೋಜನೆಯ ಲಾಭ ಪಡೆಯಬಹುದು.
ಅರ್ಹತಾ ಮಾನದಂಡಗಳು (Eligibility Criteria) ಏನು?:
ಎಸ್ಎಸ್ಎಲ್ಸಿ / ಮೆಟ್ರಿಕ್: ಪ್ರಥಮ ಪ್ರಯತ್ನದಲ್ಲಿಯೇ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರಬೇಕು.
ಪಿಯುಸಿ (PUC 2nd Year): ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು. CBSE ಮತ್ತು ICSE ವಿದ್ಯಾರ್ಥಿಗಳಿಗೂ ಅವಕಾಶವಿದೆ.
ಪದವಿ ಮತ್ತು ಮೇಲಿನ ಹಂತದ ಕೋರ್ಸ್ಗಳು: ಪ್ರತಿ ವರ್ಷ ಪ್ರಥಮ ಪ್ರಯತ್ನದಲ್ಲೇ ತೇರ್ಗಡೆಯಾಗಿರಬೇಕು ಮತ್ತು ಅಂತಿಮ ವರ್ಷದಲ್ಲಿ ಪ್ರಥಮ ದರ್ಜೆಯಲ್ಲಿ ಪಾಸ್(Passed in first class) ಆಗಿರಬೇಕು.
Compartmental / Carry Over System ಮೂಲಕ ಪಾಸಾದವರು ಈ ಯೋಜನೆಗೆ ಅರ್ಹರಲ್ಲ.
ಹೊರ ರಾಜ್ಯದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದವರು ಅರ್ಹರಾಗಿರುತ್ತಾರೆ. ಆದರೆ,
ಹೊರ ದೇಶದಲ್ಲಿ ವ್ಯಾಸಂಗ ಮಾಡಿದವರಿಗೆ ಅವಕಾಶವಿಲ್ಲ.
ಯುಜಿಸಿ ಮಾನ್ಯತೆ / ಸರ್ಕಾರ ಮಾನ್ಯತೆ ಪಡೆದ ಸಂಸ್ಥೆಗಳಲ್ಲಿಯೇ ವ್ಯಾಸಂಗ ಮಾಡಿರಬೇಕು.
ಅರ್ಜಿ ಸಲ್ಲಿಸುವ ವಿಧಾನ ಹೇಗೆ?:
ವಿದ್ಯಾರ್ಥಿಗಳು www.sw.kar.nic.in ಎಂಬ ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ವೇಳೆ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು.
ಅಗತ್ಯ ದಾಖಲೆಗಳು (Course-wise) ಯಾವುವು?:
ಎಸ್ಎಸ್ಎಲ್ಸಿ / ಮೆಟ್ರಿಕ್:
ಅಭ್ಯರ್ಥಿಯ ಪೋಟೋ.
ಅಂಕಪಟ್ಟಿ(Marks card).
ಆಧಾರ್ ಕಾರ್ಡ್ ಪ್ರತಿಯು(Adhar card).
ಜಾತಿ ಪ್ರಮಾಣ ಪತ್ರ.
ಆದಾಯ ಪ್ರಮಾಣ ಪತ್ರ.
ಬ್ಯಾಂಕ್ ಪಾಸ್ ಬುಕ್.
ಪಿಯುಸಿ (2ನೇ ವರ್ಷ):
ಮೇಲಿನ ಎಲ್ಲಾ ದಾಖಲೆಗಳು ಹಾಗೂ ಪಿಯುಸಿ ಅಂಕಪಟ್ಟಿ ಸೇರಿಸಬೇಕು.
ಪದವಿ / ಸ್ನಾತಕೋತ್ತರ / ತಾಂತ್ರಿಕ ಕೋರ್ಸ್ಗಳು:
ಅಭ್ಯರ್ಥಿಯ ಪೋಟೋ.
ಎಲ್ಲ ಸೆಮಿಸ್ಟರ್ಗಳ ಅಂಕಪಟ್ಟಿಗಳು.
ಎಸ್ಎಸ್ಎಲ್ಸಿ ಅಂಕಪಟ್ಟಿ(SSLC Marks card).
ಆಧಾರ್, ಜಾತಿ ಹಾಗೂ ಆದಾಯ ಪ್ರಮಾಣ ಪತ್ರ.
ಬ್ಯಾಂಕ್ ಪಾಸ್ ಬುಕ್
ಅರ್ಜಿಯನ್ನು ಎಲ್ಲಿ ಸಲ್ಲಿಕೆ ಮಾಡಬೇಕು?:
ವಿದ್ಯಾರ್ಥಿಯ ಶಿಕ್ಷಣ ಸಂಸ್ಥೆ ಇರುವ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಹೊರ ರಾಜ್ಯದಲ್ಲಿ ವ್ಯಾಸಂಗ ಮಾಡಿದವರು ತಮ್ಮ ಮೂಲ ಜಿಲ್ಲೆ (native district) ಯ ಉಪ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬೇಕಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ಆನ್ಲೈನ್ ಅರ್ಜಿ ಸಲ್ಲಿಕೆಯಲ್ಲಿ ತಾಂತ್ರಿಕ ಸಮಸ್ಯೆ ಎದುರಾದರೆ, ವಿದ್ಯಾರ್ಥಿಗಳು ಈ ದೂರವಾಣಿ ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದು,
ಟೋಲ್ ಫ್ರೀ: 080-22634300, 080-22353757
ಸಹಾಯಕ ನಿರ್ದೇಶಕರು (ಸೋಮವಾರಪೇಟೆ): 94808843156, 08276-281115
ಒಟ್ಟಾರೆಯಾಗಿ, ಈ ಯೋಜನೆಯ ಮೂಲಕ ಸರ್ಕಾರ ಶೈಕ್ಷಣಿಕ ಹಾದಿಯಲ್ಲಿ ಪ್ರಗತಿಪಥದಲ್ಲಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ನೈಜ ಉತ್ಸಾಹವನ್ನು ತುಂಬುತ್ತಿದೆ. ಉತ್ತಮ ಶೈಕ್ಷಣಿಕ ಸಾಧನೆಗೆ ಗೌರವದ ಜೊತೆಗೆ ಆರ್ಥಿಕ ನೆರವು ನೀಡುವ ಈ ಕ್ರಮ ನಿಜಕ್ಕೂ ಅಭಿನಂದನಾರ್ಹವಾಗಿದೆ. ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಮುಂದಿನ ಹಂತದ ವಿದ್ಯಾಭ್ಯಾಸದಲ್ಲಿ ಉತ್ತಮ ಸಾಧನೆ ಮಾಡಲಿ ಎಂಬುದು ಸರ್ಕಾರದ ಆಶಯ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.