ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು 2025-26ನೇ ಸಾಲಿನ ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಯೋಜನೆಯಡಿಯಲ್ಲಿ ನೋಂದಾಯಿತ ಕಾರ್ಮಿಕರ ಮಕ್ಕಳು ಶಿಕ್ಷಣಕ್ಕೆ ಆರ್ಥಿಕ ಸಹಾಯ ಪಡೆಯಲು ಅರ್ಹರಾಗಿರುತ್ತಾರೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಯಾರಿಗೆ ಅರ್ಜಿ ಸಲ್ಲಿಸುವ ಅರ್ಹತೆ ಇದೆ?
- 2024 ಮೇ 25ರ ಮೊದಲು ಕಾರ್ಮಿಕ ಕಾರ್ಡ್ ನೋಂದಣಿ ಮಾಡಿಸಿಕೊಂಡವರು
- ಕರ್ನಾಟಕ ರಾಜ್ಯದ ಶಾಲೆಗಳು/ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು
- ಸರ್ಕಾರದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳಲ್ಲಿ ನೋಂದಾಯಿತರಾದವರು
ಅರ್ಜಿ ಸಲ್ಲಿಸುವ ವಿಧಾನ
- ಆನ್ಲೈನ್ ಅರ್ಜಿ: ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ (ssp.postmatric.karnataka.gov.in)ಗೆ ಭೇಟಿ ನೀಡಿ
- ಲಾಗಿನ್: ಪೋರ್ಟಲ್ನಲ್ಲಿ ನೋಂದಣಿ ಮಾಡಿ ಅಥವಾ ಅಸ್ತಿತ್ವದಲ್ಲಿರುವ ಖಾತೆಯನ್ನು ಬಳಸಿ
- ದಾಖಲೆಗಳು: ಕಾರ್ಮಿಕ ಕಾರ್ಡ್ ವಿವರ, ವಿದ್ಯಾರ್ಥಿಯ ಶೈಕ್ಷಣಿಕ ದಾಖಲೆಗಳು, ಬ್ಯಾಂಕ್ ಖಾತೆ ವಿವರ ಮತ್ತು ಆಧಾರ್ ಕಾರ್ಡ್ ಅಪ್ಲೋಡ್ ಮಾಡಿ
- ಸಲ್ಲಿಕೆ: ಅರ್ಜಿಯನ್ನು ಪರಿಶೀಲಿಸಿ 31 ಅಕ್ಟೋಬರ್ 2024ರೊಳಗೆ ಸಲ್ಲಿಸಿ
ಮುಖ್ಯ ನಿರ್ದೇಶನಗಳು
- ಕಾರ್ಮಿಕ ಕಾರ್ಡ್ ನೋಂದಣಿ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ಲಿಂಕ್ ಮಾಡಬೇಕು
- ಬ್ಯಾಂಕ್ ಖಾತೆ NPCI ಮ್ಯಾಪಿಂಗ್ (ಆಧಾರ್ ಲಿಂಕ್) ಮಾಡಿರಬೇಕು
- ಸಹಾಯಧನದ ಹಣ ನೋಂದಾಯಿತ ಕಾರ್ಮಿಕರ (ತಂದೆ/ತಾಯಿ) ಬ್ಯಾಂಕ್ ಖಾತೆಗೆ ಜಮೆಯಾಗುತ್ತದೆ
ಹೆಚ್ಚಿನ ಮಾಹಿತಿಗಾಗಿ
- ಅಧಿಕೃತ ವೆಬ್ಸೈಟ್: kbocwwb.karnataka.gov.in
- ಸಹಾಯಕ್ಕಾಗಿ: ಜಿಲ್ಲಾ ಕಾರ್ಮಿಕ ಕಲ್ಯಾಣ ಕಚೇರಿಗಳನ್ನು ಸಂಪರ್ಕಿಸಿ
ಗಮನಿಸಿ: 2025-26ನೇ ಸಾಲಿಗೆ ಈಗಾಗಲೇ ವಿದ್ಯಾರ್ಥಿವೇತನ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿದವರು ಪುನಃ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.