ಎಲ್ಲರಿಗೂ ನಮಸ್ಕಾರ, ಗೃಹ ಜ್ಯೋತಿ ಯೋಜನೆಗಾಗಿ ನೀವು ಅರ್ಜಿ ಸಲ್ಲಿಸುತ್ತಿದ್ದರೆ ಸ್ವಲ್ಪ ಗಮನವಿಟ್ಟು ಓದಿ, ಗೃಹ ಜ್ಯೋತಿ ಸರ್ವರ್ ಸಮಸ್ಯೆಯನ್ನು ಬಂಡವಾಳವಾಗಿಸಿಕೊಂಡ ಸೈಬರ್ ಕಳ್ಳರು ಸೇವಾ ಸಿಂಧು ಹೆಸರಿನಲ್ಲಿ ನಕಲಿ ವೆಬ್ಸೈಟ್ ಅಥವಾ ಲಿಂಕನ್ನು ಸೃಷ್ಟಿಸಿ ಹರಿಬಿಟ್ಟಿದ್ದಾರೆ. ಹಾಗಾಗಿ ಸಿಕ್ಕ ಸಿಕ್ಕ ಲಿಂಕ್ ಮೇಲೆ ಒತ್ತಿದರೆ ನಿಮ್ಮ ಬ್ಯಾಂಕ್ ಖಾತೆಗೆ ಕನ್ನ ಗ್ಯಾರಂಟಿ. ಹಾಗಾಗಿ ದಯವಿಟ್ಟು ಯಾರು ಎಚ್ಚರ ತಪ್ಪದಂತೆ ಕಾಳಜಿ ವಹಿಸಿ ಸೇವಾ ಸಿಂಧುವಿನ ಅಧಿಕೃತ ಲಿಂಕ್ ಮೇಲೆ ಮಾತ್ರ ಕ್ಲಿಕ್ ಮಾಡಿ ಅರ್ಜಿ ಅರ್ಜಿ ಸಲ್ಲಿಸತಕ್ಕದ್ದು.
ಹಾಗಾಗಿ ನೀಡ್ಸ್ ಆಫ್ ಪಬ್ಲಿಕ್ ನ ತಂಡ ಇಂತಹ ಆಹಿತಕರ ಘಟನೆಗಳು ನಡೆಯದಂತೆ ತಡೆಯಲು ವಿಶೇಷವಾಗಿ ಅರ್ಜಿ ಸಲ್ಲಿಸುವ ವಿಡಿಯೋವನ್ನು ಯೂಟ್ಯೂಬ್ ನಲ್ಲಿ ಕೊಟ್ಟಿದ್ದೇವೆ ಮತ್ತು ಕೆಳಗೆ ಅಧಿಕೃತ ಲಿಂಕುಗಳನ್ನು ನಿಮಗಾಗಿ ಕೊಟ್ಟಿದ್ದೇವೆ ಈ ಕೆಳಗೆ ಕೊಡಲಾದ ಸರ್ಕಾರದ ಅಧಿಕೃತ ಸೇವಾ ಸಿಂಧು ಲಿಂಕ್ ಗಳ ಮೇಲೆ ಮಾತ್ರ ನೀವು ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು. ಮತ್ತು ಕೆಳಗೆ ಕೊಡಲಾದ ಯೂಟ್ಯೂಬ್ ವಿಡಿಯೋ ನೋಡುವ ಮೂಲಕ ನೀವು ಅರ್ಜಿ ಸಲ್ಲಿಸುವ ವಿಧಾನಗಳನ್ನು ಅನುಸರಿಸಬಹುದು.
ನಮ್ಮ ವಿಡಿಯೋ ನೋಡುವ ಮೂಲಕ ಸುಮಾರು 20 ಸಾವಿರಕ್ಕೂ ಹೆಚ್ಚು ಜನ ಆನ್ಲೈನ್ ಮೂಲಕ ನೊಂದಣಿ ಮಾಡಿಕೊಂಡಿದ್ದಾರೆ. ನಮ್ಮ ಎಲ್ಲಾ ವೀಕ್ಷಕರಿಗೂ ತುಂಬಾ ಧನ್ಯವಾದಗಳು ನಿಮ್ಮ ಪ್ರೀತಿ ವಿಶ್ವಾಸ ನಮ್ಮ ಮೇಲೆ ಹೀಗೆ ಇರಲಿ. ನಮ್ಮ Android ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳೋ ಮೂಲಕ ನಿಖರವಾದ ಮತ್ತು ಸ್ಪಷ್ಟ ಸುದ್ದಿಗಳನ್ನು ನೀವು ಪ್ರತಿದಿನ ಓದಬಹುದು.
ಫಲಾನುಭವಿಗಳು ಹೀಗೆ ಮಾಡಿ.
ಬೆಂಗಳೂರು ಒನ್ ಕರ್ನಾಟಕ ಒನ್ ನಾಡಕಛೇರಿಯಲ್ಲಿ ಅರ್ಜಿ ಸಲ್ಲಿಸಿ, ಅಧಿಕೃತ ವೆಬ್ಸೈಟ್ ಸೇವಾ ಸಿಂಧೂ ಬಳಸಿ, ಅಪರಿಚಿತ ಕರೆ, ಇ-ಮೇಲ್, ಲಿಂಕ್ಗಳನ್ನು ನಿರ್ಲಕ್ಷಿಸಿ, ಇಂಟರ್ನೆಟ್ ಬಳಸುವ ಮುನ್ನ ಸುರಕ್ಷಿತ ವೆಬ್ಸೈಟ್ ಪರೀಕ್ಷಿಸಿ ನೀವು ಬಳಸುವ ವೆಬ್ಸೈಟ್ https ಆಗಿರಬೇಕು, ಸಿಕ್ಕ ಸಿಕ್ಕ ಕಡೆ ಸೈಬರ್ ಸೆಂಟರ್ ಬಳಸುವ ಬದಲು ಪರಿಚಿತರ ಕಡೆ ಹೋಗಿ. ಗ್ಯಾರಂಟಿ ಅನುಷ್ಠಾನಕ್ಕೆ ಆತುರ ಬೇಡ ಅರ್ಜಿ ಸಲ್ಲಿಕೆಯ ಯಾವುದೇ ಕೊನೆ ದಿನಾಂಕ ಇಲ್ಲ ಹಾಗಾಗಿ ಸ್ವಲ್ಪ ತಡವಾದರೂ ಸರಿಯಾದ ಅಧಿಕೃತ ಲಿಂಕ್ ಬಳಸಿ ಅರ್ಜಿ ಸಲ್ಲಿಸಿ.
ಯೋಜನೆ ನೆನಪದಲ್ಲಿ ಕನ್ನ :
ಬೆಸ್ಕಾಂ ಅಧಿಕಾರಿಗಳ ಸೋಗಿನಲ್ಲಿ ಜನರಿಗೆ ಕರೆ ಮಾಡಿ ವಿದ್ಯುತ್ ಬಿಲ್ ಪಾವತಿ ಮಾಡಿಲ್ಲ ಸಂಪರ್ಕ ಕಡಿತ ಮಾಡುವುದಾಗಿ ಬೆದರಿಸಿ ಆನ್ಲೈನಲ್ಲಿ ಬಿಲ್ ಮೊತ್ತ ಸ್ವೀಕರಿಸುವ ನೆಪದಲ್ಲಿ ಬ್ಯಾಂಕ್ ಖಾತೆ ವಿವರ ಪಡೆದು ಅಮಾಯಕರ ಖಾತೆಗೆ ಕನ್ನ ಹಾಕುತ್ತಿರುವ ಸಾಕಷ್ಟು ಪ್ರಕರಣಗಳು ಬೆಳಕಿಗೆ ಬಂದಿವೆ, RBI ಅಧಿಕಾರಿಗಳ ನೆಪದಲ್ಲಿ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡುತ್ತಿವೆ ಎಂಬ ನೆಪದಲ್ಲಿ ಸಹಿತ ಕನ್ನ ಕೊಟ್ಟಿದ್ದಾರೆ ಎಚ್ಚರ. ಹಾಗಾಗಿ ಅಪರಿಚಿತರ ಕರೆ ಬಂದಲ್ಲಿ ನಿರ್ಲಕ್ಷಿಸಿ.
ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಕೆಳಗಿನ ವಿಧಾನಗಳನ್ನು ಅನುಸರಿಸಿ.
ಅರ್ಜಿ ಸಲ್ಲಿಸಲು ನೇರವಾದ ಲಿಂಕ್ ಮತ್ತು ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸುವ ಲೈವ್ ವಿಡಿಯೋ ಕೆಳಗಿದೆ ದಯವಿಟ್ಟು ನೋಡಿ ಅರ್ಜಿ ಸಲ್ಲಿಸಿ
ಗೃಹಜ್ಯೋತಿ ಯೋಜನೆ ಆನ್ಲೈನ್ ಅರ್ಜಿ:
ಈ ಯೋಜನೆಯ ಲಾಭ ಪಡೆಯಲು ಇಚ್ಚಿಸುವ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ನಲ್ಲಿ ವಿಶೇಷವಾಗಿ ರೂಪಿಸಿರುವ https://sevasindhugs.karnataka.gov.in/ ವಿಳಾಸದಲ್ಲಿ ಲಾಗಿನ್ ಆಗಿ ನೋಂದಾಯಿಸಬೇಕು.
ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ : https://sevasindhugs.karnataka.gov.in/
ಎರಡನೇ ದಿನವಾದ ನಿನ್ನೆ1,61,958 ಜನರು ನೋಂದಣಿ ಮಾಡಿಕೊಂಡಿದ್ದಾರೆ ಯೋಜನೆ ನೋಂದಣಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಇಂಧನ ಇಲಾಖೆ ತಿಳಿಸಿದೆ.
ಹಂತ 1: ಮೊದಲು ಸೇವಾ ಸಿಂಧು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಹಂತ 2: ಎಸ್ಕಾಂ ಹೆಸರು, ಖಾತೆ ಸಂಖ್ಯೆ, ಖಾತೆದಾರರ ಹೆಸರು ಎಸ್ಕಾಂ ನಲ್ಲಿರುವಂತೆ, ಖಾತೆದಾರರ ವಿಳಾಸ ಎಸ್ಕಾಂ ನಲ್ಲಿರುವಂತೆ, ಎಸ್ಕಾಂ ಹೆಸರು1, ಬಳಕೆದಾರರ ವಿಧ (ಇಲ್ಲಿ ಎರಡು ಆಯ್ಕೆಗಳಿದ್ದು ಬಾಡಿಗೆದಾರರು/ ಮಾಲೀಕರು) ಎಂದಿದೆ, ಆಧಾರ್ ಸಂಖ್ಯೆ, ಅರ್ಜಿದಾರರ ಹೆಸರು, ಸಂವಹನಕ್ಕಾಗಿ ದೂರವಾಣಿ ಸಂಖ್ಯೆ ಅಗತ್ಯವಿರುವ ವಿವರಗಳನ್ನು ಇಲ್ಲಿ ನಮೂದಿಸಿ.

ಕೊನೆಯದಾಗಿ, ಅಗತ್ಯ ದಾಖಲೆಗಳನ್ನು ಪೋರ್ಟಲ್ನಲ್ಲಿ ಅಪ್ಲೋಡ್ ಮಾಡಿ ಸಲ್ಲಿಸಬೇಕು.

ಹಂತ 3: ಎಲ್ಲಾ ಸರಿಯಾದ ಮಾಹಿತಿಯನ್ನ ನಮೂದಿಸಿ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ

ಹಂತ 4: ನಂತರ ಕೆಳಗಡೆ ಈ ರೀತಿಯಾಗಿ ನಿಮಗೆ ಸ್ವೀಕೃತಿ ಪತ್ರ ದೊರೆಯುತ್ತದೆ

ನಿಮಗೆ ಮೊಬೈಲ್ ನಲ್ಲಿ ಅಪ್ಲಿಕೇಶನ್ ಹಾಕುವಾಗ ಏನಾದ್ರು ಸಮಸ್ಯೆ ಆದರೆ ಹತ್ತಿರದ ಗ್ರಾಮ ಒನ್ ಕರ್ನಾಟಕ ಒನ್ ಬೆಂಗಳೂರು ಒನ್ ಗೆ ಭೇಟಿ ಕೊಟ್ಟು ಅರ್ಜಿ ಸಲ್ಲಿಸಬಹುದು
ಸೂಚನೆ: ಇಂದು ಬಹಳ ಜನ ಗೃಹಜೋತಿ ಯೋಜನೆಗೆ ಅರ್ಜಿ ಸಲ್ಲಿಸುತ್ತಿದ್ದಾರೆ ಹಾಗಾಗಿ ತಾಂತ್ರಿಕ ಕಾರಣಗಳಿಂದ ವೆಬ್ಸೈಟ್ ತೆರೆಯದಿದ್ದರೆ ಸ್ವಲ್ಪ ಸಮಯದ ನಂತರ ಮತ್ತೆ ಪ್ರಯತ್ನಿಸಿ, ಅರ್ಜಿ ಸಲ್ಲಿಸಿ
https://youtu.be/pHcGtQN8MD4
ಇಂತಹ ಮುಖ್ಯವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಮಹಿಳೆಯರಿಗೂ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
| ಪ್ರಮುಖ ಲಿಂಕುಗಳು |
| ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ |
Download App |
| ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group





