ಬೆಂಗಳೂರು ಮಹಾನಗರದಲ್ಲಿ ಹಳದಿ ಮೆಟ್ರೊ ಮಾರ್ಗದ ಸೇವೆ 10ನೇ ತಾರೀಕಿನಂದು ಪ್ರಾರಂಭವಾಗಲಿದೆ. ಈ ಹೊಸ ಮಾರ್ಗವು ರಾಷ್ಟ್ರೀಯ ವಿದ್ಯಾಲಯ ರಸ್ತೆ (ಆರ್.ವಿ. ರಸ್ತೆ) ಮತ್ತು ಬೊಮ್ಮಸಂದ್ರ ನಡುವೆ ಸಂಪರ್ಕ ಕಲ್ಪಿಸುತ್ತದೆ. ಪ್ರಧಾನಿ ನರೇಂದ್ರ ಮೋದಿಯವರು ಈ ಮಾರ್ಗಕ್ಕೆ ಚಾಲನೆ ನೀಡಲಿದ್ದಾರೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಹಳದಿ ಮಾರ್ಗದ ಮುಖ್ಯ ವಿಶೇಷತೆ ಎಂದರೆ ಇಲ್ಲಿ ಚಾಲಕರಿಲ್ಲದ (ಡ್ರೈವರ್ಲೆಸ್) ಮೆಟ್ರೊ ರೈಲುಗಳು ಸಂಚರಿಸುತ್ತವೆ. ಆರಂಭದ ಹಂತದಲ್ಲಿ ಈ ಮಾರ್ಗದಲ್ಲಿ ಮೂರು ರೈಲುಗಳು ಮಾತ್ರ ಕಾರ್ಯನಿರ್ವಹಿಸಲಿವೆ.
ಹಳದಿ ಮಾರ್ಗದ ನಿಲ್ದಾಣಗಳು:
- ಬೊಮ್ಮಸಂದ್ರ
- ಹೆಬ್ಬಗೋಡಿ
- ಹುಸ್ಕೂರು ರಸ್ತೆ
- ಇನ್ಫೋಸಿಸ್ ಫೌಂಡೇಷನ್ (ಕೋನಪ್ಪನ ಅಗ್ರಹಾರ)
- ಎಲೆಕ್ಟ್ರಾನಿಕ್ ಸಿಟಿ
- ಬೆರಟೇನ ಅಗ್ರಹಾರ
- ಹೊಸ ರಸ್ತೆ
- ಸಿಂಗಸಂದ್ರ
- ಕೂಡ್ಲು ಗೇಟ್
- ಹೊಂಗಸಂದ್ರ
- ಬೊಮ್ಮನಹಳ್ಳಿ
- ಸೆಂಟ್ರಲ್ ಸಿಲ್ಕ್ ಬೋರ್ಡ್
- ಬಿಟಿಎಂ ಲೇಔಟ್
- ಜಯದೇವ ಆಸ್ಪತ್ರೆ
- ರಾಗಿಗುಡ್ಡ
- ಆರ್.ವಿ. ರಸ್ತೆ
ಈ ಮಾರ್ಗವು ಬೆಂಗಳೂರಿನ ಪ್ರಮುಖ ಪ್ರದೇಶಗಳನ್ನು ಸಂಪರ್ಕಿಸುವುದರೊಂದಿಗೆ ನಗರದ ಸಾರಿಗೆ ವ್ಯವಸ್ಥೆಯನ್ನು ಹೆಚ್ಚು ಸುಗಮವಾಗಿಸಲಿದೆ. ಪ್ರಯಾಣಿಕರು ಈ ಹೊಸ ಸೇವೆಯನ್ನು ಬಳಸಿಕೊಂಡು ನಗರದ ಟ್ರಾಫಿಕ್ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

“ಕೃಷ್ಣಸಾಗರಿ ಅವರು NeedsOfPublic.in ನ ‘ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ’ (Job Updates & Career) ವಿಭಾಗದ ಮುಖ್ಯಸ್ಥರಾಗಿದ್ದಾರೆ. ಉದ್ಯೋಗ ಮಾಹಿತಿ ಕ್ಷೇತ್ರದಲ್ಲಿ 4 ವರ್ಷಗಳ ವೃತ್ತಿಪರ ಅನುಭವ ಹೊಂದಿರುವ ಇವರು, ಸರ್ಕಾರಿ ಉದ್ಯೋಗದ ಅಧಿಸೂಚನೆಗಳು (Govt Job Notifications), ಖಾಸಗಿ ವಲಯದ ನೇಮಕಾತಿಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಅಪ್ಡೇಟ್ಗಳನ್ನು ಒದಗಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಉದ್ಯೋಗಾಕಾಂಕ್ಷಿಗಳಿಗೆ ಕೇವಲ ಅಧಿಕೃತ ಮೂಲಗಳಿಂದ ಪರಿಶೀಲಿಸಿದ (verified) ಮತ್ತು ನಿಖರವಾದ ಉದ್ಯೋಗದ ಮಾಹಿತಿಯನ್ನು ಸಕಾಲದಲ್ಲಿ ತಲುಪಿಸುವುದು ಸಾಗರಿ ಅವರ ಪ್ರಮುಖ ಗುರಿಯಾಗಿದೆ.”


WhatsApp Group




