ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಗೃಹಲಕ್ಷ್ಮಿ ಯೋಜನೆಯ ಕುರಿದಾದ ಮುಖ್ಯವಾದ ವಿಷಯವನ್ನು ತಿಳಿಸಿಕೊಡಲಾಗುವುದು. ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ 2000 ರೂಗಳನ್ನು ಪಡೆಯಲು ಬ್ಯಾಂಕ್ ಖಾತೆಗೆ ಕುರಿತಾದ ಮುಖ್ಯ ವಿಷಯವನ್ನು ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿಕೊಟ್ಟಿದ್ದಾರೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ಲೇಖನವನ್ನು ಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಗೃಹಲಕ್ಷ್ಮಿ ಯೋಜನೆ 2023:
ಮಹಿಳೆಯರ ಸಬಲೀಕರಣ ಮತ್ತು ಲಿಂಗ ಸಮಾನತೆಯನ್ನು ಉತ್ತೇಜಿಸುವ ಪ್ರಯತ್ನದಲ್ಲಿ, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಇತ್ತೀಚೆಗೆ ಗೃಹ ಲಕ್ಷ್ಮಿ ಯೋಜನೆ ಪ್ರಾರಂಭಿಸುವುದಾಗಿ ಘೋಷಿಸಿತು. 2022 ರ ಮಾರ್ಚ್ 18 ರಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರು ತಮ್ಮ ಕುಟುಂಬದ ಮುಖ್ಯಸ್ಥರಾಗಿರುವ ರಾಜ್ಯದ ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ಗುರಿಯನ್ನು ಹೊಂದಿರುವ ಈ ಯೋಜನೆಯನ್ನು ಗೃಹ ಲಕ್ಷ್ಮಿ ಯೋಜನೆಯು ಪರಿಹರಿಸಲು ಪ್ರಯತ್ನಿಸುವ ಒಂದು ಉಪಕ್ರಮವಾಗಿದೆ. ಈ ಯೋಜನೆಯ ಅಡಿಯಲ್ಲಿ 2000 ರೂಗಳನ್ನು ಪಡೆದುಕೊಳ್ಳಲು ಕಡ್ಡಾಯವಾಗಿ ಅರ್ಜೆಗಳನ್ನು ಸಲ್ಲಿಸಬೇಕು. ಅರ್ಜಿಗಳನ್ನು ಜುಲೈ 14 ರಿಂದ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಸಲ್ಲಿಸಿದ ಪ್ರತಿಯೊಬ್ಬರಿಗೂ ಆಗಸ್ಟ್ 15ಕ್ಕೆ ತಮ್ಮ ಬ್ಯಾಂಕ್ ಖಾತೆಗಳಿಗೆ ರೂ. 2000 ಹಣ ವರ್ಗಾವಣೆ ಆಗುತ್ತದೆ.
ಯಾರಿಗೆಲ್ಲ 2000 ರೂಗಳು ದೊರೆಯುವುದಿಲ್ಲ :
ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ ಗಳಲ್ಲಿ ಅಥವಾ ಬೌದ್ಧಿಕವಾಗಿ, ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಮನೆಯ ಯಜಮಾನಿ ಅಥವಾ ಯಜಮಾನಿಯಾ ಪತಿಯು ಆದಾಯ ತೆರಿಗೆಯನ್ನು ಪಾವತಿಸುತ್ತಿದ್ದಾರೆ ಅವರಿಗೆ ಈ ಫಲವು ದೊರೆಯುವುದಿಲ್ಲ. ಹಾಗೆಯೇ ಜಿಎಸ್ಟಿ ರಿಟರ್ನ್ ಮಾಡುತ್ತಿದ್ದರೆ ನಿಮಗೆ ಸರ್ಕಾರದ ವತಿಯಿಂದ ಎರಡು ಸಾವಿರ ರೂಗಳು ದೊರೆಯುವುದಿಲ್ಲ. ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ ಎಂಬ ಯಾವುದೇ ರೀತಿಯ ತಾರತಮ್ಯ ಇಲ್ಲದೆ ಈ ಯೋಜನೆಯ ಅವಕಾಶವನ್ನು ಪಡೆದುಕೊಳ್ಳಬಹುದಾಗಿದೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಗೃಹಲಕ್ಷ್ಮಿ ಯೋಜನೆಯ ಬದಲಾವಣೆ ಏನು?:
ಎಪಿಎಲ್ ಅಥವಾ ಬಿಪಿಎಲ್ ಕಾರ್ಡಿನಲ್ಲಿ ನಮೂದಿಸಲಾದ ಯಜಮಾನಿಯು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಲು ಅರ್ಹರಾಗಿರುತ್ತಾರೆ ಇಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಪತಿ ಹಾಗೂ ಪತ್ನಿಯ ಆಧಾರ್ ಕಾರ್ಡ್, ಮೊಬೈಲ್ ನಂಬರ್ ಇದ್ದರೆ ಸಾಕು
ಪಡಿತರ ಚೀಟಿಯನ್ನು ಕೂಡ ಕೇಳುವುದಿಲ್ಲ. ಆಧಾರ್ ಕಾರ್ಡಿಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುವುದು.

ಆಧಾರ್ ಕಾರ್ಡಿಗೆ ಜೋಡಣೆಯಾದ ಬ್ಯಾಂಕ್ ಖಾತೆಗೆ ಹಣವನ್ನು ಹಾಕಲು ಮನವಿ ಮಾಡಿದ್ದಲ್ಲಿ, ಅದಕ್ಕೂ ಕೂಡ ಅವಕಾಶವಿದೆ. ಆಧಾರ್ ಕಾರ್ಡಿಗೆ ಜೋಡಣೆ ಮಾಡಿದ ಬ್ಯಾಂಕ್ ಖಾತೆಯಿಂದ ಲೋನ್(loan) ಅನ್ನು ಪಡೆದಿದ್ದರೆ, ಗೃಹಲಕ್ಷ್ಮಿ ಯೋಜನೆಯ ಹಣವು ಲೋನಿನ ಪ್ರತಿ ತಿಂಗಳ emi ಗೆ ಕಟ್ ಆಗುತ್ತದೆ ಎಂಬ ಆತಂಕವಿದ್ದರೆ, ಆಧಾರ್ ಕಾರ್ಡ್ ಗೆ ಜೋಡಣೆಯಾಗದ ಪಾಸ್ ಬುಕ್ಕಿನ ಪ್ರತಿಯನ್ನು ನೀಡಲು ಅವಕಾಶ ನೀಡಲಾಗಿದೆ. ಇಂತಹ ಖಾತೆಗಳಿಗೂ ಹಣವನ್ನು ನೀಡಲಾಗುವುದು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.
ಹಣ ಯಜಮಾನಿಯ ಖಾತೆಗೆ ವರ್ಗಾವಣೆ ಆದ ನಂತರ, ನೊಂದಣಿ ಮಾಡಿಕೊಂಡ ಮೊಬೈಲ್ ಸಂಖ್ಯೆಗೆ ವಾಯ್ಸ್ ಮೆಸೇಜ್ ಕೂಡ ಬರುತ್ತದೆ ಎಂದು ತಿಳಿಸಿದ್ದಾರೆ.
ಇದು ಒಂದು ಮುಖ್ಯವಾದ ಮಾಹಿತಿಯಾಗಿದ್ದು, ಎಲ್ಲರಿಗೂ ಉಪಯೋಗವಾಗುತ್ತದೆ, ಆದ್ದರಿಂದ ಈ ಲೇಖನವನ್ನು ಎಲ್ಲಾ ಸ್ನೇಹಿತ ಮಿತ್ರರಿಗೂ, ಬಂಧುಗಳಿಗೂ ಹಾಗೂ ಮಹಿಳೆಯರಿಗೂ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
| ಪ್ರಮುಖ ಲಿಂಕುಗಳು |
| ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ |
Download App |
| ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group





