ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ರೇಷನ್ ಕಾರ್ಡಿನಲ್ಲಿ(Ration card) ತಿದ್ದುಪಡಿಯನ್ನು ಮಾಡುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇಷ್ಟು ದಿನಗಳ ವರೆಗೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದಲ್ಲಿ ಹಲವಾರು ಮಹಿಳೆಯರಿಗೆ ರೇಷನ್ ಕಾರ್ಡಿನಲ್ಲಿ ಕುಂದುಕೊರತೆಗಳು ಇರುವುದರಿಂದ ಅರ್ಜಿಗಳನ್ನು ಸಲ್ಲಿಸಲು ಸಾಧ್ಯವಾಗುತ್ತಿರಲಿಲ್ಲ. ಆದ್ದರಿಂದ, ಸರ್ಕಾರವು ರೇಷನ್ ಕಾರ್ಡಿನ ತಿದ್ದುಪಡಿಗೆ ಅನುಮತಿಯನ್ನು ನೀಡಿದೆ. ರೇಷನ್ ಕಾರ್ಡ್ ತಿದ್ದುಪಡಿಯನ್ನು ಹೇಗೆ ಮಾಡಿಸುವುದು?, ಯಾವ ರೀತಿಯ ತಿದ್ದುಪಡಿಗಳನ್ನು ಮಾಡಿಸಬಹುದು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ರೇಷನ್ ಕಾರ್ಡಿನಲ್ಲಿ ಯಜಮಾನಿಯ ಬದಲಾವಣೆಗೆ ಅವಕಾಶ :
ಹಲವಾರು ಜನರ ಪಡಿತರ ಚೀಟಿಯಲ್ಲಿ ಪುರುಷರನ್ನು ಮುಖ್ಯಸ್ಥರನ್ನಾಗಿ ಮಾಡಲಾಗಿತ್ತು, ಅಂತವರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ದೊರೆಯುವುದಿಲ್ಲ ಎಂದು ನಿಮಗೆ ತಿಳಿದೇ ಇದೆ. ಹಾಗಾಗಿ ಹಲವು ಜನರು ಪಡಿತರ ಚೀಟಿಯಲ್ಲಿ ಮುಖ್ಯಸ್ಥರ ಬದಲಾವಣೆಯನ್ನು ಮಾಡಲು ನಿರೀಕ್ಷಿಸುತ್ತಿದ್ದರು. ಅಂತವರಿಗೆ ಈ ಅವಕಾಶವೂ ಒಂದು ಸಂತೋಷದ ಸುದ್ದಿ ಎನ್ನಬಹುದು. ಆಹಾರ ಇಲಾಖೆಯು ಪಡಿತರ ಚೀಟಿಯಲ್ಲಿ ಕುಟುಂಬ ಸದಸ್ಯರ ಹೆಸರು ಬದಲಾವಣೆ ಮಾಡಲು ಅವಕಾಶ ಮಾಡಿಕೊಟ್ಟಿದ್ದು, ಈ ನಿಟ್ಟಿನಲ್ಲಿ ಆಯಾ ಜಿಲ್ಲಾ ಆಹಾರ ಇಲಾಖೆ ಕಚೇರಿಗಳು ಅಗತ್ಯ ಕ್ರಮಕೈಗೊಳ್ಳುವಂತೆ ಸೂಚಿಸಲಾಗಿದೆ.
ರೇಷನ್ ಕಾರ್ಡ್ ನಲ್ಲಿ ಏನೆಲ್ಲಾ ತಿದ್ದುಪಡಿ ಮಾಡಿಸಬಹುದು?:
ಮರಣ ಹೊಂದಿರುವ ಸದಸ್ಯರನ್ನು ಮಾತ್ರ ತೆಗೆಯಲಾಗುತ್ತದೆ.
(ಪಡಿತರ ಚೀಟಿ ಜೆರಾಕ್ಸ್ ಮತ್ತು ಮರಣ ಪ್ರಮಾಣ ಪತ್ರ ಜೆರಾಕ್ಸ್ ಕಡ್ಡಾಯ)
ಜೀವಂತ ಸದಸ್ಯರನ್ನು ಯಾವುದೇ ಕಾರಣಕ್ಕೂ ತೆಗೆಯಲು ಅವಕಾಶವಿಲ್ಲ.
ಮನೆಯ ಯಜಮಾನ/ಯಜಮಾನಿಯನ್ನು ಮರಣ ಹೊಂದಿದ್ದಲ್ಲಿ ಮಾತ್ರ
ಬದಲಾಯಿಸಲಾಗುತ್ತದೆ. ಇತರ ಯಾವುದೇ ಕಾರಣಕ್ಕೂ ಅವಕಾಶವಿಲ್ಲ.
ಹೊಸ ಪಡಿತರ ಚೀಟಿ ಮತ್ತು ತಿದ್ದುಪಡಿಗಳಿಗೆ ಅವಕಾಶವಿರುವುದಿಲ್ಲ.
ಹಿರಿಯ ವ್ಯಕ್ತಿಗಳು ಮಾತ್ರ ಕಡ್ಡಾಯವಾಗಿ ಕುಟುಂಬ ಮುಖ್ಯಸ್ಥರಾರುತ್ತಾರೆ.
ಇ-ಕೆವೈಸಿಯನ್ನು ನಿಮ್ಮ ನ್ಯಾಯಬೆಲೆ ಅಂಗಡಿಗಳಲ್ಲಿ ಮಾಡಿಸಿಕೊಳ್ಳುವುದು.
ಬ್ಯಾಕ್ ಖಾತೆಗಳು ಸರಿ ಇಲ್ಲದಿದ್ದಲ್ಲಿ ನಿಮ್ಮ ಬ್ಯಾಂಕ್ ಗಳಲ್ಲಿ ಸರಿ ಮಾಡಿಸಿಕೊಳ್ಳುವುದು.
ರೇಷನ್ ಕಾರ್ಡಿನಲ್ಲಿ ಮುಖ್ಯಸ್ಥರನ್ನು ಬದಲಾಯಿಸುವ ವಿಧಾನ:
ರೇಷನ್ ಕಾರ್ಡ್ ಮುಖ್ಯಸ್ಥರ ಹೆಸರು ಬದಲಾವಣೆಗೆ ಹೀಗೆ ಈ ಕೆಳಗಿನ ಹಂತಗಳನ್ನು ಅನುಸರಿಸಿ :
ಮೊದಲಿಗೆ, ನಿಮ್ಮ ಸಮೀಪದ ಪಡಿತರ ಚೀಟಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ.
ಮುಖ್ಯಸ್ಥರ ಹೆಸರು ಬದಲಾವಣೆ ಮಾಡುವುದಕ್ಕೆ ಅರ್ಜಿಯನ್ನು ಭರ್ತಿ ಮಾಡಿ.
ಅರ್ಜಿಯೊಂದಿಗೆ ಅಗತ್ಯವಿರುವ ದಾಖಲೆಗಳನ್ನು ಸಲ್ಲಿಸಿ.
ಬಯೋಮೆಟ್ರಿಕ್ ದೃಡೀಕರಣದ ಮೂಲಕ ದಾಖಲೆಗಳನ್ನು ದೃಢೀಕರಿಸಿ.
ಪಡಿತರ ಸೇವಾ ಕೇಂದ್ರದಲ್ಲಿ ಮಾಹಿತಿಯನ್ನು ಆನ್ಲೈನ್ ಮೂಲಕ ಅಪ್ಲೋಡ್ ಮಾಡಲಾಗುತ್ತದೆ.
ಅಲ್ಲಿ ನೀಡಲಾಗುವ ಸ್ವೀಕೃತಿಯನ್ನು ಜಾಗ್ರತೆಯಿಂದ ಸಂರಕ್ಷಿಸಿ ಇಟ್ಟುಕೊಂಡಿರಿ.
ಅರ್ಜಿ ಸಲ್ಲಿಕೆ ನಂತರ, ಆಹಾರ ಕಚೇರಿಯಿಂದ ನಿಮಗೆ ಎಸ್ಎಂಎಸ್ ಬರಲಿದೆ
ಎಸ್ಎಂಎಸ್ ಬಂದ ಬಳಿಕ ನಿಮ್ಮಲ್ಲಿರುವ ಸ್ವೀಕೃತಿ ಪತ್ರವನ್ನು ನೀಡಿ ಹೊಸ (ಮನೆ ಯಜಮಾನಿಯನ್ನು ಬದಲಿಸಿದ) ಪಡಿತರ ಚೀಟಿ ಪಡೆಯಬಹುದು.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಈ ಕಾರಣಗಳಿಗೂ ಕೂಡ ತಿದ್ದುಪಡಿ ಮಾಡುತ್ತಾರೆ :
ರೇಷನ್ ಕಾರ್ಡಿನಲ್ಲಿ ಮನೆಯ ಯಜಮಾನರು ಪುರುಷರಾಗಿದ್ದರೆ, ಈಗ ಮಹಿಳೆಯರನ್ನು ಯಜಮನೆನ್ನಾಗಿ ತಿದ್ದುಪಡಿ ಮಾಡಿಸಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಷ್ಟೇ ಅಲ್ಲದೆ ಸಂಬಂಧಗಳು ತಪ್ಪಾಗಿ ಮುದ್ರೆತವಾಗಿದ್ದರೆ ಅವುಗಳನ್ನು ಕೂಡ ಸರಿಪಡಿಸಿಕೊಳ್ಳುವ ಅವಕಾಶವಿದೆ. ಮನೆಯಲ್ಲಿ ಅತ್ತೆಯು ರೇಷನ್ ಕಾರ್ಡಿನಲ್ಲಿ ಯಜಮಾನಿಯಾಗಿದ್ದು ಮರಣವನ್ನು ಹೊಂದಿದ್ದರೆ, ಸೊಸೆಯನ್ನು ರೇಷನ್ ಕಾರ್ಡ್ನಲ್ಲಿ ಯಜಮಾನಿಯನ್ನಾಗಿ ಮಾಡಿಕೊಂಡು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ರೇಷನ್ ಕಾರ್ಡಿನ ತಿದ್ದುಪಡೆಗೆ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ತಿದ್ದುಪಡಿ ಮಾಡಿಸಿಕೊಳ್ಳಬಹುದಾಗಿದೆ.
ನಿಮಗೇನಾದರೂ ರೇಷನ್ ಕಾರ್ಡಿನ ಕೊರತೆಯಿಂದಾಗಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ತಡವಾಗುತ್ತಿದ್ದರೆ ಇದು ಒಂದು ಸುವರ್ಣ ಕಾಲ ಎನ್ನಬಹುದಾಗಿದೆ. ಈ ಕೂಡಲೇ ರೇಷನ್ ಕಾರ್ಡಿನಲ್ಲಿ ಮುಖ್ಯವಾದ ಬದಲಾವಣೆಯನ್ನು ಮಾಡಿಸಿಕೊಂಡು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿ 2000 ರೂಗಳ ಸದುಪಯೋಗವನ್ನು ಕಳೆದುಕೊಳ್ಳಬಹುದಾಗಿದೆ. ಇಂತಹ ಮುಖ್ಯವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ, ಬಂಧುಗಳಿಗೆ, ಮುಖ್ಯವಾಗಿ ಮಹಿಳೆಯರಿಗೆ ಶೇರ್ ಮಾಡಿ, ಧನ್ಯವಾದಗಳು.
ನಿಮ್ಮ APL ಕಾರ್ಡ್ ಅನ್ನು BPL ಕಾರ್ಡ್ ಗೆ ವರ್ಗಾವಣೆ ಹೀಗೆ ವರ್ಗಾವಣೆ ಮಾಡಿ, ಇಲ್ಲಿದೆ ಸುಲಭ ಮಾರ್ಗ
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
| ಪ್ರಮುಖ ಲಿಂಕುಗಳು |
| ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ |
Download App |
| ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group








