WhatsApp Image 2025 09 01 at 5.46.38 PM

ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯ’ದವರಿಗೆ ಭರ್ಜರಿ ಗುಡ್ ನ್ಯೂಸ್: ಈ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ.!

WhatsApp Group Telegram Group

ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀನುಗಾರರು ಹಾಗೂ ಮೀನು ಸಾಕಾಣಿಕೆದಾರರಿಗೆ ಸರ್ಕಾರದಿಂದ ಉತ್ತಮ ಸಂದೇಶವೊಂದು ಬಂದಿದೆ. ಪ್ರಧಾನಮಂತ್ರಿ ಮತ್ಸ್ಯ ಸಂಪದ್ ಮತ್ತು ನೀಲಿ ಕ್ರಾಂತಿ ಯೋಜನೆಯ ಅಡಿಯಲ್ಲಿ ಅನೇಕ ಘಟಕಗಳಿಗೆ ಸಹಾಯಧನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಮೀನುಗಾರಿಕೆ ಇಲಾಖೆಯ ಶಿವಮೊಗ್ಗ ವತಿಯಿಂದ 2022-23 ರಿಂದ 2024-25 ರವರೆಗೆ ಮರುಹಂಚಿಕೆಯಾಗಿರುವ ಈ ಯೋಜನೆಯಡಿ, ಸಹಾಯಧನ ಪಡೆಯಲು ಅರ್ಹರಾದ ಫಲಾನುಭವಿಗಳು ಅರ್ಜಿ ಸಲ್ಲಿಸಬೇಕಿದೆ. ಈ ಕಾರ್ಯಕ್ರಮದಲ್ಲಿ ವಿವಿಧ ಘಟಕಗಳಿಗೆ ಗುರಿ ನಿಗದಿ ಪಡಿಸಲಾಗಿದೆ.

ಮೀನು ಕೃಷಿ ಕೊಳಗಳ ನಿರ್ಮಾಣಕ್ಕಾಗಿ ಒಟ್ಟು 4.03 ಹೆಕ್ಟೇರ್ ಗುರಿ ಹೊಂದಿಸಲಾಗಿದೆ. ಇದರಲ್ಲಿ ಸಾಮಾನ್ಯ ವರ್ಗದವರಿಗೆ 2.39 ಹೆಕ್ಟೇರ್ ಮತ್ತು ಪರಿಶಿಷ್ಟ ಜಾತಿಯವರಿಗೆ 1.64 ಹೆಕ್ಟೇರ್ ನೀಡಲಾಗುವುದು. ಮೀನು ಕೃಷಿ ಕೊಳ ನಿರ್ಮಾಣ ಮತ್ತು ಮೀನು ಸಾಕಾಣಿಕೆಗೆ ಹೂಡಿಕೆ ವೆಚ್ಚದ ಮೇಲೆ ಸಹಾಯಧನ ನೀಡಲು ಒಟ್ಟು 8.60 ಹೆಕ್ಟೇರ್ ಗುರಿ ಇದ್ದು, ಸಾಮಾನ್ಯ ವರ್ಗದವರಿಗೆ 4.80 ಹೆಕ್ಟೇರ್, ಸಾಮಾನ್ಯ ಮಹಿಳೆಯರಿಗೆ 1.80 ಹೆಕ್ಟೇರ್, ಪರಿಶಿಷ್ಟ ಜಾತಿಗೆ 1 ಹೆಕ್ಟೇರ್ ಮತ್ತು ಪರಿಶಿಷ್ಟ ಪಂಗಡಕ್ಕೆ 1 ಹೆಕ್ಟೇರ್ ನೀಡಲಾಗುವುದು.

ಯಾಂತ್ರೀಕೃತ ದೋಣಿ ಖರೀದಿಗೆ ಸಹಾಯ ಯೋಜನೆಯಡಿ, ಸಾಂಪ್ರದಾಯಿಕ ಮೀನುಗಾರರಿಗೆ ಎಫ್.ಆರ್.ಪಿ. ಬದಲಿ ದೋಣಿ ನಿರ್ಮಾಣಕ್ಕಾಗಿ ಒಂದು ಘಟಕ ಗುರಿ ಇದ್ದು, ಇದನ್ನು ಸಾಮಾನ್ಯ ವರ್ಗದವರಿಗೆ ನೀಡಲಾಗುವುದು. ಮೀನು ಮರಿ ಪಾಲನಾ ಘಟಕ ನಿರ್ಮಾಣ ಸಹಾಯಕ್ಕೆ ಒಟ್ಟು 7.198 ಹೆಕ್ಟೇರ್ ಗುರಿ ಇದ್ದು, ಸಾಮಾನ್ಯ ವರ್ಗದವರಿಗೆ 2.03 ಹೆಕ್ಟೇರ್, ಮಹಿಳೆಯರಿಗೆ 2.228 ಹೆಕ್ಟೇರ್, ಪರಿಶಿಷ್ಟ ಜಾತಿಗೆ 1 ಹೆಕ್ಟೇರ್ ಮತ್ತು ಪರಿಶಿಷ್ಟ ಪಂಗಡಕ್ಕೆ 1.94 ಹೆಕ್ಟೇರ್ ನೀಡಲಾಗುವುದು.

ಇದರ ಜೊತೆಗೆ, ಸೈಕಲ್ ಜೊತೆ ಐಸ್ ಬಾಕ್ಸ್ ಘಟಕವನ್ನು ಸಾಮಾನ್ಯ ವರ್ಗಕ್ಕೆ ಒಂದು ಗುರಿ, ಮಧ್ಯಮ ವರ್ಗದ ಅಲಂಕಾರಿಕ ಮೀನು ಸಾಕಾಣಿಕೆ ಘಟಕವನ್ನು ಪರಿಶಿಷ್ಟ ಜಾತಿಗೆ ಒಂದು ಗುರಿ ಮತ್ತು ಹೊಸ ಅಲಂಕಾರಿಕ ಮೀನು ಮಾರಾಟ ಮಳಿಗೆ ಘಟಕವನ್ನು ಪರಿಶಿಷ್ಟ ಜಾತಿಗೆ ಒಂದು ಗುರಿ ನೀಡಲಾಗುವುದು.

ಸಹಾಯಧನದ ಪ್ರಮಾಣ:

ಸಹಾಯಧನ ಘಟಕಗಳ ಉಪಯೋಗ ಪಡೆಯಲು, ಸಾಮಾನ್ಯ ವರ್ಗದ ಫಲಾನುಭವಿಗಳಿಗೆ 40% ಸಹಾಯಧನ ನೀಡಲಾಗುವುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳಾ ಫಲಾನುಭವಿಗಳಿಗೆ 60% ರಷ್ಟು ಸಹಾಯಧನ ನೀಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:

ಈ ಯೋಜನೆಯಲ್ಲಿ ಆಸಕ್ತಿ ಹೊಂದಿರುವವರು, ಸೆಪ್ಟೆಂಬರ್ 20ರೊಳಗೆ ತಮ್ಮ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಿಂದ ಅರ್ಜಿ ಪತ್ರಗಳನ್ನು ಪಡೆದುಕೊಂಡು, ಅಗತ್ಯ ದಾಖಲೆಗಳೊಂದಿಗೆ ಅದೇ ಕಚೇರಿಗೆ ಸಲ್ಲಿಸಬೇಕು. ಇದರ ಬಗ್ಗೆ ಮೀನುಗಾರಿಕೆ ಉಪ ನಿರ್ದೇಶಕರು ಹೆಚ್ಚಿನ ಮಾಹಿತಿ ನೀಡಿದ್ದಾರೆ.

ಈ ಕಾರ್ಯಕ್ರಮವು ರಾಜ್ಯದ ಎಸ್.ಸಿ. ಮತ್ತು ಎಸ್.ಟಿ. ಸಮುದಾಯದ ಮೀನುಗಾರರು ಮತ್ತು ಮೀನು ಸಾಕಾಣಿಕೆದಾರರ ಆರ್ಥಿಕ ಹಿತಾಸಕ್ತಿಗಳನ್ನು ಉನ್ನತ ಮಟ್ಟಕ್ಕೇರಿಸಲು ನೆರವಾಗಲಿದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories