ರಾಜ್ಯದಲ್ಲಿ ಗ್ರಾಮಪಂಚಾಯಿತಿ ಚುನಾವಣೆಗಳಿಗೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ವೇಳಾಪಟ್ಟಿಯನ್ನು ಇನ್ನೂ ಪ್ರಕಟಿಸಲಾಗಿಲ್ಲ ಎಂದು ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಸಾಮಾಜಿಕ ಮಾಧ್ಯಮ ಮತ್ತು ವಾಟ್ಸಾಪ್ ನಂತರದ ವಲಯಗಳಲ್ಲಿ ಚುನಾವಣಾ ವೇಳಾಪಟ್ಟಿಯು ಪ್ರಕಟವಾಗಿದೆ ಎಂಬ ಸುಳ್ಳು ಸುದ್ದಿ ಹರಡುವುದನ್ನು ಆಯೋಗ ಗಮನಿಸಿದೆ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಈ ಬಗ್ಗೆ ಆಯೋಗದಿಂದ ನೀಡಲಾದ ಮಾಧ್ಯಮ ಪ್ರಕಟಣೆಯಲ್ಲಿ, “ರಾಜ್ಯ ಚುನಾವಣಾ ಆಯೋಗವು ಚುನಾವಣೆಗಳಿಗೆ ಸಂಬಂಧಿಸಿದ ಯಾವುದೇ ವೇಳಾಪಟ್ಟಿಯನ್ನು ಇತ್ಯಾರೂ ಪ್ರಕಟಿಸಿಲ್ಲ. ಚುನಾವಣಾ ವೇಳಾಪಟ್ಟಿಯನ್ನು ಅಧಿಕೃತವಾಗಿ ಘೋಷಿಸುವ ಏಕೈಕ ಅಧಿಕಾರ ಇರುವುದು ಚುನಾವಣಾ ಆಯೋಗಕ್ಕೆ ಮಾತ್ರ. ಈ ಪ್ರಕ್ರಿಯೆಯು ಒಂದು ನಿಗದಿತ ಪ್ರಕಾರದಲ್ಲಿ ನಡೆಯುತ್ತದೆ ಮತ್ತು ಅದು ಆಯೋಗವು ನಡೆಸುವ ಒಂದು ಪ್ರೆಸ್ ಕಾನ್ಫರೆನ್ಸ್ ಮೂಲಕ ಸಾರ್ವಜನಿಕರಿಗೆ ತಿಳಿಸಲಾಗುವುದು” ಎಂದು ಸ್ಪಷ್ಟಪಡಿಸಲಾಗಿದೆ.
ಪ್ರಸ್ತುತ ಹರಡುತ್ತಿರುವ ವೇಳಾಪಟ್ಟಿಯನ್ನು ಸಂಪೂರ್ಣವಾಗಿ ನಿರಾಧಾರವಾದ ಮತ್ತು ಕೃತಕವಾದದ್ದು ಎಂದು ಹೇಳಿದ ಆಯೋಗ, ನಾಗರಿಕರು ಅಂತಹ ದುರುದ್ದೇಶಪೂರಿತ ಸುಳ್ಳು ಮಾಹಿತಿಯನ್ನು ಪಸರಿಸುವುದನ್ನು ತಪ್ಪಿಸಬೇಕು ಮತ್ತು ಅಧಿಕೃತ ಮೂಲಗಳಿಂದ ಮಾತ್ರ ಮಾಹಿತಿ ಪಡೆಯುವಂತೆ ವಿನಂತಿಸಿದೆ. ಚುನಾವಣಾ ವೇಳಾಪಟ್ಟಿ ಸೇರಿದಂತೆ ಯಾವುದೇ ಅಧಿಕೃತ ನಿರ್ಧಾರಗಳನ್ನು ಆಯೋಗದ ವೆಬ್ ಸೈಟ್ https://ksec.karnataka.gov.in ಮತ್ತು ಅಧಿಕೃತ ಸೋಶಿಯಲ್ ಮೀಡಿಯಾ ಹ್ಯಾಂಡಲ್ ಗಳ ಮೂಲಕವೇ ಪ್ರಸಿದ್ಧಪಡಿಸಲಾಗುವುದು ಎಂದು ತಿಳಿಸಲಾಗಿದೆ.
ಆಯೋಗವು ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದ ಎಲ್ಲಾ ನಿಬಂಧನೆಗಳು ಮತ್ತು ಮಾರ್ಗಸೂಚಿಗಳನ್ನು ಪೂರ್ಣಗೊಳಿಸಿದ ನಂತರವೇ ವೇಳಾಪಟ್ಟಿಯನ್ನು ಘೋಷಿಸುವುದರ ಮೂಲಕ, ಚುನಾವಣೆಯು ಸುಗಮ ಮತ್ತು ಪಾರದರ್ಶಕವಾಗಿ ನಡೆಯುವಂತೆ ನೋಡಿಕೊಳ್ಳುತ್ತದೆ. ಅಧಿಕೃತವಾಗಿ ಘೋಷಿಸುವವರೆಗೂ, ಸಾರ್ವಜನಿಕರು ಯಾವುದೇ ಪ್ರಕಟಣೆಗಳ ಬಗ್ಗೆ ಚುನಾವಣಾ ಆಯೋಗದ ಅಧಿಕೃತ ಮಾಧ್ಯಮಗಳ ಮೂಲಕ ದೃಢೀಕರಿಸುವಂತೆ ಸೂಚಿಸಲಾಗಿದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಕೃಷ್ಣಸಾಗರಿ ಅವರು NeedsOfPublic.in ನ ‘ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ’ (Job Updates & Career) ವಿಭಾಗದ ಮುಖ್ಯಸ್ಥರಾಗಿದ್ದಾರೆ. ತುಮಕೂರಿನ ಸರ್ಕಾರಿ ನರ್ಸಿಂಗ್ ಕಾಲೇಜಿನಿಂದ B.Sc (Nursing) ಪದವಿ ಪಡೆದಿರುವ ಇವರು, ಸಾರ್ವಜನಿಕ ಜಾಗೃತಿ ಮತ್ತು ಮಾಹಿತಿ ನೀಡುವ ಆಸಕ್ತಿಯಿಂದಾಗಿ ಡಿಜಿಟಲ್ ಪತ್ರಿಕೋದ್ಯಮ ಕ್ಷೇತ್ರವನ್ನು ಆಯ್ದುಕೊಂಡಿದ್ದಾರೆ. ಡಿಜಿಟಲ್ ಮಾಧ್ಯಮ ರಂಗದಲ್ಲಿ 3 ವರ್ಷಗಳ ಅನುಭವ ಹೊಂದಿರುವ ಇವರು, ಸರ್ಕಾರಿ ಉದ್ಯೋಗದ ಅಧಿಸೂಚನೆಗಳು (Govt Job Notifications), ಖಾಸಗಿ ನೇಮಕಾತಿಗಳು ಮತ್ತು ಶೈಕ್ಷಣಿಕ ಅಪ್ಡೇಟ್ಗಳನ್ನು ಒದಗಿಸುವಲ್ಲಿ ಪರಿಣತಿ ಹೊಂದಿದ್ದಾರೆ. ನಿರುದ್ಯೋಗಿ ಯುವಕ-ಯುವತಿಯರಿಗೆ ಯಾವುದೇ ಗೊಂದಲವಿಲ್ಲದೆ, ಕೇವಲ ಅಧಿಕೃತ ಮೂಲಗಳಿಂದ ಪರಿಶೀಲಿಸಿದ (Verified) ನಿಖರ ಮಾಹಿತಿಯನ್ನು ಸಕಾಲದಲ್ಲಿ ತಲುಪಿಸುವುದೇ ಇವರ ಬರವಣಿಗೆಯ ಶೈಲಿಯಾಗಿದೆ.


WhatsApp Group




Leave a Reply