ರಾಜ್ಯದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯ ಮುಂಚೂಣಿಯಲ್ಲಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ವರ್ಗಾವಣೆ ಪ್ರಕ್ರಿಯೆ ಸುಗಮವಾಗಿ ನಡೆಯಲು ಕರ್ನಾಟಕ ಸರ್ಕಾರವು ಮಹತ್ವದ ಮಾರ್ಗಸೂಚಿಗಳನ್ನು ಹೊರಡಿಸಿದೆ. 2025-26 ಸಾಲಿನ ವರ್ಗಾವಣೆ ಕೌನ್ಸಿಲಿಂಗ್ ಗೆ ಹಾಜರಾಗುವ ಎಲ್ಲಾ ಅಧಿಕಾರಿಗಳು ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಈ ಪ್ರಕ್ರಿಯೆಯನ್ನು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ, ಗಾಂಧಿನಗರ, ಬೆಂಗಳೂರಿನಲ್ಲಿ ನಡೆಸಲಾಗುವುದು. ವಿಶೇಷ ಪ್ರಕರಣ, ಕಡ್ಡಾಯ ವರ್ಗಾವಣೆ ಮತ್ತು ಸಾಮಾನ್ಯ ವರ್ಗಾವಣೆ ಕೋರಿಕೆ ಇಟ್ಟುಕೊಂಡಿರುವ ಅರ್ಹರಾದ ಎಲ್ಲಾ ಪಿಡಿಒ ಅಧಿಕಾರಿಗಳೂ ತಮ್ಮ ನಿಗದಿತ ದಿನಾಂಕದಂದು ಈ ಕಚೇರಿಗೆ ವೈಯಕ್ತಿಕವಾಗಿ ಹಾಜರಾಗಬೇಕಾಗಿದೆ.
ಹಾಜರಾಗುವಾಗ ಪಾಲಿಸಬೇಕಾದ ಕಾರ್ಯವಿಧಾನ
ವರ್ಗಾವಣೆ ಕೌನ್ಸಿಲಿಂಗ್ ಗೆ ಹಾಜರಾಗುವ ಎಲ್ಲಾ ಅಧಿಕಾರಿಗಳು ತಮ್ಮ ಸರ್ಕಾರಿ ಗುರುತಿನ ಚೀಟಿ (ಐಡಿ ಕಾರ್ಡ್) ಮತ್ತು ಆಧಾರ್ ಕಾರ್ಡ್ ನಂತಹ ಅಗತ್ಯ ದಾಖಲೆಗಳ ಮೂಲ ಪ್ರತಿಗಳನ್ನು ಜೊತೆಯಲ್ಲಿ ತಂದಿರಬೇಕು. ದಾಖಲೆಗಳಿಲ್ಲದಿದ್ದರೆ ಅಥವಾ ಖೋಟಾ ದಾಖಲೆಗಳನ್ನು ಸಲ್ಲಿಸಿದರೆ, ಅವರಿಗೆ ವರ್ಗಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದಿಲ್ಲ.
ನಿಗದಿತ ಸಮಯ ಮತ್ತು ನೊಂದಣಿ ಕಡ್ಡಾಯ
ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ಪೂರ್ವಾಹ್ನ ಮತ್ತು ಅಪರಾಹ್ನ ಎಂಬ ಎರಡು ಸೆಷನ್ ಗಳಾಗಿ ನಡೆಸಲಾಗುವುದು. ಅಧಿಕಾರಿಗಳು ತಮಗೆ ನಿಗದಿ ಮಾಡಲಾದ ಸೆಷನ್ ಗೆ ಕಟ್ಟುನಿಟ್ಟಾಗಿ ಹಾಜರಾಗಬೇಕು.
ಪೂರ್ವಾಹ್ನ ಸೆಷನ್ ಗೆ ಹಾಜರಾಗುವ ಅಧಿಕಾರಿಗಳು ಬೆಳಗ್ಗೆ 9:00 ಗಂಟೆಗೆ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಕಡ್ಡಾಯವಾಗಿ ಹಾಜರಿರಬೇಕು. ಅವರು 9:30 ಗಂಟೆಗೆ ಮುನ್ನ ತಮ್ಮ ನೊಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.
ಅಪರಾಹ್ನ ಸೆಷನ್ ಗೆ ಹಾಜರಾಗುವ ಅಧಿಕಾರಿಗಳು ಮಧ್ಯಾಹ್ನ 1:00 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು ಮತ್ತು 1:30 ಗಂಟೆಗೆ ಮುನ್ನ ನೊಂದಣಿ ಮಾಡಿಸಿಕೊಳ್ಳಬೇಕು.
ನಿಗದಿತ ಸಮಯದಲ್ಲಿ ಹಾಜರಾಗದ ಅಧಿಕಾರಿಗಳಿಗೆ ವರ್ಗಾವಣೆ ಸೌಲಭ್ಯವನ್ನು ನೀಡುವುದಿಲ್ಲ ಎಂದು ಸರ್ಕಾರಿ ಆದೇಶದಲ್ಲಿ ಸ್ಪಷ್ಟಪಡಿಸಿದೆ.
ಪ್ರಕ್ರಿಯೆ ಪೂರ್ಣವಾಗುವವರೆಗೂ ಹಾಜರಾತಿ ಕಡ್ಡಾಯ
ವರ್ಗಾವಣೆ ಕೌನ್ಸಿಲಿಂಗ್ ಪ್ರಕ್ರಿಯೆಗೆ ಹಾಜರಾದ ಪ್ರತಿಯೊಬ್ಬ ಅಧಿಕಾರಿಯು ತಮ್ಮ ವರ್ಗಾವಣೆ ಚರ್ಚೆ ಮತ್ತು ಆದೇಶ ಪ್ರಕ್ರಿಯೆ ಪೂರ್ಣವಾಗುವವರೆಗೂ ಕಚೇರಿ ಪ್ರಾಂಗಣದಲ್ಲೇ ಹಾಜರಿರಬೇಕು. ತಮ್ಮ ವಿಧಿ ಪೂರ್ಣವಾದ ನಂತರ, ಅಧಿಕಾರಿಗಳು ಕಚೇರಿಯಿಂದ ವರ್ಗಾವಣೆಯ ಆದೇಶ ಪತ್ರ ಮತ್ತು ಹಾಜರಾತಿ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಪಡೆದುಕೊಂಡ ತೆರಳಬೇಕು. ಈ ದಾಖಲೆಗಳು ಅವರ ಹೊಸ ಕಾರ್ಯಸ್ಥಳದಲ್ಲಿ ಜೋಯಿಸಿ ಮಾಡುವಾಗ ಅತ್ಯಗತ್ಯವಾಗಿರುತ್ತವೆ.
ಈ ಎಲ್ಲಾ ನಿಯಮಗಳನ್ನು ಪಾಲಿಸದ ಅಧಿಕಾರಿಗಳ ವರ್ಗಾವಣೆ ಕುರಿತು ನಂತರ ಯಾವುದೇ ವಿಚಾರಣೆಗೆ ಅವಕಾಶ ಇರುವುದಿಲ್ಲ ಎಂದು ಸರ್ಕಾರವು ಘೋಷಿಸಿದೆ. ಈ ಕ್ರಮವು ವರ್ಗಾವಣೆ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಮತ್ತು ಸಮಯಸ್ಫೂರ್ತಿಯಾಗಿ ನಡೆಸಲು ತೆಗೆದುಕೊಂಡಿದೆ.







ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಕೃಷ್ಣಸಾಗರಿ ಅವರು NeedsOfPublic.in ನ ‘ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ’ (Job Updates & Career) ವಿಭಾಗದ ಮುಖ್ಯಸ್ಥರಾಗಿದ್ದಾರೆ. ತುಮಕೂರಿನ ಸರ್ಕಾರಿ ನರ್ಸಿಂಗ್ ಕಾಲೇಜಿನಿಂದ B.Sc (Nursing) ಪದವಿ ಪಡೆದಿರುವ ಇವರು, ಸಾರ್ವಜನಿಕ ಜಾಗೃತಿ ಮತ್ತು ಮಾಹಿತಿ ನೀಡುವ ಆಸಕ್ತಿಯಿಂದಾಗಿ ಡಿಜಿಟಲ್ ಪತ್ರಿಕೋದ್ಯಮ ಕ್ಷೇತ್ರವನ್ನು ಆಯ್ದುಕೊಂಡಿದ್ದಾರೆ. ಡಿಜಿಟಲ್ ಮಾಧ್ಯಮ ರಂಗದಲ್ಲಿ 3 ವರ್ಷಗಳ ಅನುಭವ ಹೊಂದಿರುವ ಇವರು, ಸರ್ಕಾರಿ ಉದ್ಯೋಗದ ಅಧಿಸೂಚನೆಗಳು (Govt Job Notifications), ಖಾಸಗಿ ನೇಮಕಾತಿಗಳು ಮತ್ತು ಶೈಕ್ಷಣಿಕ ಅಪ್ಡೇಟ್ಗಳನ್ನು ಒದಗಿಸುವಲ್ಲಿ ಪರಿಣತಿ ಹೊಂದಿದ್ದಾರೆ. ನಿರುದ್ಯೋಗಿ ಯುವಕ-ಯುವತಿಯರಿಗೆ ಯಾವುದೇ ಗೊಂದಲವಿಲ್ಲದೆ, ಕೇವಲ ಅಧಿಕೃತ ಮೂಲಗಳಿಂದ ಪರಿಶೀಲಿಸಿದ (Verified) ನಿಖರ ಮಾಹಿತಿಯನ್ನು ಸಕಾಲದಲ್ಲಿ ತಲುಪಿಸುವುದೇ ಇವರ ಬರವಣಿಗೆಯ ಶೈಲಿಯಾಗಿದೆ.


WhatsApp Group




Leave a Reply