ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಹೆಸರಾಂತ ಖಾಸಗಿ ಸಂಸ್ಥೆಯಾದ ಜಿಂದಾಲ್ ವತಿಯಿಂದ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಅರ್ಜಿಗಳನ್ನು ಹೇಗೆ ಸಲ್ಲಿಸುವುದು?, ಯಾವ ಯಾವ ತರಗತಿಯವರು ಈ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ ? ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಹೀಗೆ ಎಲ್ಲಾ ಮಾಹಿತಿಗಳನ್ನು ಈ ಲೇಖನದಲ್ಲಿ ಸಂಕ್ಷಿಪ್ತವಾಗಿ ವಿವರಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ವಿದ್ಯಾರ್ಥಿ ವೇತನ ಮತ್ತು ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಜಿಂದಾಲ್ ಸ್ಕಾಲರ್ಶಿಪ್ 2022 : ಈ ಸ್ಕಾಲರ್ಶಿಪ್ ಅನ್ನು ಸೀತಾರಾಮ್ ಜಿಂದಾಲ್ ಫೌಂಡೇಶನ್ ವತಿಯಿಂದ ನೀಡಲಾಗುತ್ತಿದೆ. ಸೇರಿದ ಅರ್ಹ ಅಭ್ಯರ್ಥಿಗಳಿಗೆ ಹಣಕಾಸಿನ ನೆರವು ನೀಡುವ ಗುರಿಯನ್ನು ಈ ಯೋಜನೆ ಹೊಂದಿದೆ.
ರೈತರ ಮಕ್ಕಳಿಗೆ ನೀಡುತ್ತಿದ್ದ ಮುಖ್ಯಮಂತ್ರಿ ರೈತವಿಧ್ಯಾನಿಧಿ ಈ ವರ್ಗಗಳಿಗೂ ವಿಸ್ತರಣೆ
ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು :
ವರ್ಗ ಎ : ಈ ವರ್ಗದಲ್ಲಿ 11ನೇ ಹಾಗೂ 12ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇದರ ಪ್ರಕಾರ ವಿದ್ಯಾರ್ಥಿಗಳಿಗೆ ತಿಂಗಳಿಗೆ 500 ರೂಗಳಂತೆ ವರ್ಷಕ್ಕೆ 6000 ರೂಗಳು ವಿದ್ಯಾ ವೇತನದಲ್ಲಿ ಬರುತ್ತದೆ. ಹಾಗೆಯೇ ವಿದ್ಯಾರ್ಥಿನಿಯರಿಗೆ ತಿಂಗಳಿಗೆ 700 ರೂಪಾಯಿಗಳಂತೆ, ವರ್ಷಕ್ಕೆ 8,400ಗಳು ಖಾತೆಗೆ ಜಮಾ ಆಗುತ್ತದೆ. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಹಿಂದಿನ ತರಗತಿಯಲ್ಲಿ ಕನಿಷ್ಠ 70% ಗಳಿಂದ ಉತ್ತೀರ್ಣರಾಗಿರಬೇಕು ಹಾಗೂ ವಿದ್ಯಾರ್ಥಿನಿಯರು ಕನಿಷ್ಠ 65% ಗಳಿಂದ ಉತ್ತೀರ್ಣರಾಗಿರಬೇಕು.
ವರ್ಗ ಬಿ :ಐಟಿಐ ವಿದ್ಯಾರ್ಥಿಗಳು : ಸರ್ಕಾರಿ ಐಟಿಐ ನಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ತಿಂಗಳಿಗೆ 500 ರೂಗಳಂತೆ ವರ್ಷಕ್ಕೆ ಆರು ಸಾವಿರ ರೂಗಳು ಬರುತ್ತದೆ ಹಾಗೂ ಖಾಸಗಿ ಐಟಿಐ ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ತಿಂಗಳಿಗೆ 700ಗಳಂತೆ ವರ್ಷಕ್ಕೆ 8,400ರೂಗಳು ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ.
ಈ ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿಗಳು ಹಿಂದಿನ ತರಗತಿಯಲ್ಲಿ ಕನಿಷ್ಠ 45% ಗಳಿಂದ ಉತ್ತೀರ್ಣರಾಗಿರಬೇಕು ಹಾಗೂ ವಿದ್ಯಾರ್ಥಿನಿಯರು 35%ಗಳಿಂದ ಉತ್ತೀರ್ಣರಾಗಿರಬೇಕು.
SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ 2022-23 : ಅರ್ಜಿ ಸಲ್ಲಿಸುವ ವಿಧಾನ
ವರ್ಗ ಸಿ: ಈ ವರ್ಗದ ಅನುಸಾರ ಮೊದಲನೆಯದಾಗಿ ಪದವಿ ಓದುತ್ತಿರುವ ವಿದ್ಯಾರ್ಥಿಗಳು ಅಂದರೆ ಬಿಎ, ಬಿಕಾಂ, ಬಿ ಎಸ್ ಸಿ, ಬಿ ಎಫ್ ಎ, ಬಿ ಸಿ ಎ, ಬಿಬಿಎ, ಬಿಬಿಎಂ ಬ್ಯಾಚುಲರ್ ಆಫ್ ಬಿಸಿನೆಸ್ ಎಕನಾಮಿಕ್ಸ್ /ಫೈನಾನ್ಸ್, ಬಿಎಸ್ಸಿ ಅಗ್ರಿಕಲ್ಚರ್, ಬಿ ವಿ ಎಸ್ ಸಿ ಇಂಟಿಗ್ರೇಟೆಡ್ ಕೋರ್ಸ್ ಆಫ್ ಫೈವ್ ಇಯರ್ಸ್.
ಎರಡನೆಯದಾಗಿ ಎನ್ವಿರಾನ್ಮೆಂಟ್ ಸೈಂಟಿಸ್ಟ್, ಎನ್ವಿರಾನ್ಮೆಂಟ್ ಇಂಜಿನಿಯರ್ ಹಾಗೂ ಎನ್ವಿರಾನ್ಮೆಂಟ್ ಜನರಲಿಸ್ಟ್. ಮೈಕ್ರೋ ಬಯೋಲಜಿ ಫಾರಿನ್ ಸೆಕ್ಸ್ ಸೈನ್ಸ್ ಅಂಡ್ ಸೋಶಿಯಲ್ ವರ್ಕ್ ಓದುತ್ತಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಸಾಮಾನ್ಯವಾಗಿ ವರ್ಗದ ವಿದ್ಯಾರ್ಥಿನಿಯರಿಗೆ ತಿಂಗಳಿಗೆ 1400 ರೂಪಾಯಿಗಳಂತೆ ವರ್ಷಕ್ಕೆ 16800ರೂಗಳು ದೊರೆಯುತ್ತದೆ. ಸಾಮಾನ್ಯ ವರ್ಗದ ಗಂಡು ವಿದ್ಯಾರ್ಥಿಗಳಿಗೆ ತಿಂಗಳಿಗೆ ರೂ.1100 ಗಳಂತೆ ವರ್ಷಕ್ಕೆ 13 ಸಾವಿರದ 200 ರೂಪಾಯಿಗಳು ದೊರೆಯುತ್ತದೆ.
ದೈಹಿಕವಾಗಿ ಸವಾಲು ಹಾಗೂ ಅಂಗವಿಕಲ ವಿದ್ಯಾರ್ಥಿಗಳಿಗೆ ತಿಂಗಳಿಗೆ 1400 ರೂಪಾಯಿಗಳಂತೆ ವರ್ಷಕ್ಕೆ 16800 ರೂಗಳು ದೊರೆಯುತ್ತದೆ. ಮಾಜಿ ಸೈನಿಕರ ವಿಧವೆ ಮತ್ತು ಅವಿವಾಹಿತ ವಾರ್ಡ್ ವಿದ್ಯಾರ್ಥಿಗಳಿಗೆ ತಿಂಗಳಿಗೆ 1500 ರೂಪಾಯಿಗಳಂತೆ ವರ್ಷಕ್ಕೆ 18000ರೂಗಳು ದೊರೆಯುತ್ತದೆ. ಈ ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿಗಳು ಕನಿಷ್ಠ 65%ಗಳಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ವಿದ್ಯಾರ್ಥಿನಿಯರು ಕನಿಷ್ಠ 60% ಗಳಿಂದ ಉತ್ತೀರ್ಣರಾಗಿರಬೇಕು.
SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ – 2022-23 ನೇ ಸಾಲಿನ ಅರ್ಜಿ ಸಲ್ಲಿಕೆ ವಿವರ
ಸ್ನಾತಕೋತ್ತರ ಪದವಿಗಳಾದ ಎಂಎ, ಎಂಫಿಲ್,ಎಂಕಾಂ, ಎಂ.ಲಿಬ್ (ಸೈನ್ಸ್), ಎಂಬಿಎ, ಮಾಸ್ಟರ್ ಆಫ್ ಬಿಸಿನೆಸ್ ಎಕನಾಮಿಕ್ಸ್/ ಫೈನಾನ್ಸ್ /ಹ್ಯೂಮನ್ ರಿಸೋರ್ಸಸ್ ಮ್ಯಾನೇಜ್ಮೆಂಟ್/ ಇಂಟರ್ನ್ಯಾಷನಲ್ ಬಿಸಿನೆಸ್/ ಎಂ ಎಸ್ ಸಿ/ ಎಂ ವಿ ಎಸ್ ಸಿ /ಎಂ ಎಸ್ ಸಿ (ಅಗ್ರಿಕಲ್ಚರ್) ಎಂಸಿಎ, ಆರ್ಗಾನಿಕ್ ಅಗ್ರಿಕಲ್ಚರ್, ಸೋಲಾರ್, ಎನರ್ಜಿ,ರೂರಲ್/ ಅರ್ಬನ್ ಮ್ಯಾನೇಜ್ಮೆಂಟ್, ಇಂದು ಫೀಲ್ಡ್ ಆಫ್ ಎನ್ವಿರಾನ್ಮೆಂಟ್ ಲೈಕ್: ಎನ್ವಿರಾನ್ಮೆಂಟ್ ಸೈಂಟಿಸ್ಟ್, ಎನ್ವಿರಾನ್ಮೆಂಟ್ ಇಂಜಿನಿಯರ್ ಅಂಡ್ ಎನ್ವಿರಾನ್ಮೆಂಟ್ ಜರ್ನಲಿಸ್ಟ್. ಇಂದು ಫೀಲ್ಡ್ ಆಫ್ ಹಾಸ್ಪಿಟಲಿಟಿ, ಮೈಕ್ರೋ ಬಯಾಲಜಿ, ಫಾರಿನ್ ಸೆಕ್ಸ್ ಸೈನ್ಸ್ ಅಂಡ್ ಸೋಶಿಯಲ್ ವರ್ಕ್ ಓದುತ್ತಿರುವ ವಿದ್ಯಾರ್ಥಿಗಳು ಕೂಡ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದು. ಸಾಮಾನ್ಯ ವರ್ಗದ ಅಡಿಯಲ್ಲಿ ಹೆಣ್ಣು ಮಕ್ಕಳಿಗೆ ತಿಂಗಳಿಗೆ 1800 ಗಳಂತೆ ವರ್ಷಕ್ಕೆ 21 ಸಾವಿರದ ಆರುನೂರು ರೂಪಾಯಿಗಳು ದೊರೆಯುತ್ತದೆ ಹಾಗೂ ಗಂಡು ಮಕ್ಕಳಿಗೆ ಸಾವಿರದ ಐನೂರು ರೂಪಾಯಿಗಳಂತೆ ವರ್ಷಕ್ಕೆ 18 ಸಾವಿರ ರೂಪಾಯಿಗಳು ದೊರೆಯುತ್ತದೆ.
ದೈಹಿಕವಾಗಿ ಸವಾಲು ಹಾಗೂ ಅಂಗವಿಕಲರಿಗೆ ತಿಂಗಳಿಗೆ 1800ರೂಗಳಂತೆ ವರ್ಷಕ್ಕೆ 21,600 ದೊರೆಯುತ್ತದೆ.
ಮಾಜಿ ಸೈನಿಕರ ವಿಧವೆ ಮತ್ತು ಅವಿವಾಹಿತ ವಾರ್ಡ್ ವಿದ್ಯಾರ್ಥಿಗಳಿಗೆ ತಿಂಗಳಿಗೆ 1800 ರೂಪಾಯಿಗಳಂತೆ ವರ್ಷಕ್ಕೆ 21,600ರೂಗಳು ದೊರೆಯುತ್ತದೆ. ಈ ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿಗಳು, ಹಿಂದಿನ ತರಗತಿಯಲ್ಲಿ ಕನಿಷ್ಠ 65% ಗಳಿಂದ ಉತ್ತೀರ್ಣರಾಗಿರಬೇಕು ಹಾಗೂ ವಿದ್ಯಾರ್ಥಿನಿಯರು ಕನಿಷ್ಠ 60 %ಗಳಿಂದ ಉತ್ತೀರ್ಣರಾಗಿರಬೇಕು.
ಖಾಸಗಿ ಕಂಪನಿಗಳ ಕಡೆಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ- ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ
ವರ್ಗ ಡಿ : ಡಿಪ್ಲೋಮಾ ಓದುತ್ತಿರುವ ವಿದ್ಯಾರ್ಥಿಗಳಿಗೆ ತಿಂಗಳಿಗೆ 1000ರೂಗಳಂತೆ ವರ್ಷಕ್ಕೆ 12000 ರೂಪಾಯಿಗಳು ದೊರೆಯುತ್ತದೆ. ಹಾಗೂ ವಿದ್ಯಾರ್ಥಿನಿಯರಿಗೆ ತಿಂಗಳಿಗೆ 1200 ಗಳಂತೆ ವರ್ಷಕ್ಕೆ 14,400 ರೂಪಾಯಿಗಳು ದೊರೆಯುತ್ತದೆ. ವಿದ್ಯಾರ್ಥಿಗಳು ಹಿಂದಿನ ತರಗತಿಯಲ್ಲಿ ಕನಿಷ್ಠ 55% ಗಳಿಂದ ಉತ್ತೀರ್ಣರಾಗಿರಬೇಕು ಹಾಗೂ ವಿದ್ಯಾರ್ಥಿನಿಯರು ಕನಿಷ್ಠ 50% ಗಳಿಂದ ಉತ್ತೀರ್ಣರಾಗಿರಬೇಕು.
ವರ್ಗ ಈ : ಇಂಜಿನಿಯರಿಂಗ್ ಹಾಗೂ ಮೆಡಿಕಲ್ ಕೋರ್ಸಸ್ ಗಳಿಗಾಗಿ :
ಇಂಜಿನಿಯರಿಂಗ್ ಹಾಗೂ ಆರ್ಕಿಟೆಕ್ಚರ್ ಓದುತ್ತಿರುವ ವಿದ್ಯಾರ್ಥಿನಿಯರಿಗೆ ತಿಂಗಳಿಗೆ 2300 ಗಳಂತೆ ವರ್ಷಕ್ಕೆ 27 ಸಾವಿರದ ಆರುನೂರು ರೂಪಾಯಿಗಳು ದೊರೆಯುತ್ತದೆ. ಹಾಗೂ ವಿದ್ಯಾರ್ಥಿಗಳಿಗೆ ತಿಂಗಳಿಗೆ 2000 ರೂಗಳಂತೆ ವರ್ಷಕ್ಕೆ 24,000 ರೂಗಳು ದೊರೆಯುತ್ತದೆ.
ಮೆಡಿಸಿನ್ ಕೋರ್ಸ್ ಗಳು ಅಂದರೆ ನ್ಯಾಚುರೋಪತಿ, ಎಂ ಬಿ ಬಿ ಎಸ್, ಟೆಂಟಲ್, ಬಿ ಫಾರ್ಮ, ಹೋಮಿಯೋಪತಿ ಹಾಗೂ ಆಯುರ್ವೇದ ಓದುತ್ತಿರುವ ವಿದ್ಯಾರ್ಥಿನಿಯರಿಗೆ ತಿಂಗಳಿಗೆ 3000 ಗಳಂತೆ ವರ್ಷಕ್ಕೆ 36 ಸಾವಿರ ರೂಗಳು ದೊರೆಯುತ್ತದೆ. ಹಾಗೂ ವಿದ್ಯಾರ್ಥಿಗಳಿಗೆ ತಿಂಗಳಿಗೆ 2,500 ಗಳಂತೆ ವರ್ಷಕ್ಕೆ 30,000 ರೂಗಳು ದೊರೆಯುತ್ತದೆ.
ಪಿಜಿ ಕೋರ್ಸಸ್ ಇಂಜಿನಿಯರಿಂಗ್ ಅಂಡ್ ಮೆಡಿಸಿನ್ ಕೋರ್ಸಸ್ ಇನ್ಕ್ಲೂಡಿಂಗ್ ಹೋಮಿಯೋಪತಿ,ನ್ಯಾಚುರೋಪಥಿ, ಎಂ ಫಾರ್ಮಾ, ಸರ್ಜರಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ ತಿಂಗಳಿಗೆ 3200 ರೂಪಾಯಿಗಳಂತೆ ವರ್ಷಕ್ಕೆ 38400 ರೂಗಳು ದೊರೆಯುತ್ತದೆ ಹಾಗೂ ವಿದ್ಯಾರ್ಥಿಗಳಿಗೆ ತಿಂಗಳಿಗೆ 2,800 ರೂಪಾಯಿಗಳಂತೆ ವರ್ಷಕ್ಕೆ 33,600 ರೂಪಾಯಿಗಳು ದೊರೆಯುತ್ತದೆ.
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ವಿದ್ಯಾರ್ಥಿಗಳಿಗೆ ಹಿಂದಿನ ತರಗತಿಯಲ್ಲಿ ಕನಿಷ್ಠ 65% ಗಳಿಂದ ಪಾಸಾಗಿರಬೇಕು ಹಾಗೂ ವಿದ್ಯಾರ್ಥಿನಿಯರು ಕನಿಷ್ಠ 60% ಗಳಿಂದ ಉತ್ತೀರ್ಣರಾಗಿರಬೇಕು.
ವಸತಿ ಗೃಹದಲ್ಲಿ ಇದ್ದುಕೊಂಡು ಓದುತ್ತಿರುವ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಹಣವನ್ನು ನೀಡಲಾಗುತ್ತಿದೆ. ಐಟಿಐ/ ಡಿಪ್ಲೋಮೋ, ಪದವಿ /ಸ್ನಾತಕೋತ್ತರ ಕೋರ್ಸ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಾವಿರದ ಇನ್ನೂರು ರೂಪಾಯಿಗಳನ್ನು ನೀಡಲಾಗುತ್ತದೆ. ಮೆಡಿಸಿನ್ ಹಾಗೂ ಇಂಜಿನಿಯರಿಂಗ್ ಕೋರ್ಸ್ ಗಳನ್ನು ಮಾಡುತ್ತಿರುವ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಾವಿರದ 800 ರೂಪಾಯಿಗಳನ್ನು ನೀಡಲಾಗುತ್ತದೆ.
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 31, ಡಿಸೆಂಬರ್ 2022
ಅಗತ್ಯ ದಾಖಲೆಗಳು:
- ಆಧಾರ್ ಕಾರ್ಡ್
- SSLC HSC ಅಂಕಪಟ್ಟಿ
- ಆದಾಯ ಪ್ರಮಾಣಪತ್ರ
- ಮೆರಿಟ್ ಪ್ರಮಾಣಪತ್ರ
- ಶುಲ್ಕ ಪಾವತಿಸಿದ ರಸೀದಿ
- ಹಾಸ್ಟೆಲ್ ವಾರ್ಡನ್
- ದೈಹಿಕ ಅಂಗವೈಕಲ್ಯದ ಪ್ರಮಾಣಪತ್ರ
- ಮೊಬೈಲ್ ನಂಬರ
- 10ನೇ ಮತ್ತು 12ನೇ ತರಗತಿಯ ಅಂಕಪಟ್ಟಿ
- ಪಾಸ್ಪೋರ್ಟ್ ಅಳತೆಯ ಭಾವಚಿತ್ರ
ಅರ್ಜಿ ಸಲ್ಲಿಸುವ ವಿಧಾನ :
ಈ ವಿದ್ಯಾರ್ಥಿ ವೇತನಕ್ಕೆ ನಾವು ಆಫ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯ ನಮೂನೆಯನ್ನು ಅಧಿಕೃತ ಜಲತಾಣದಲ್ಲಿ ಡೌನ್ಲೋಡ್ ಮಾಡಿಕೊಂಡು, ಭರ್ತಿ ಮಾಡಿ ಪೋಸ್ಟ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1: ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಹಂತ 2: ಡೌನ್ಲೋಡ್ ಮಾಡಿದ ಅರ್ಜಿಯನ್ನು ಪ್ರಿಂಟ್ ತೆಗೆದುಕೊಂಡು ಸರಿಯಾಗಿ ಭರ್ತಿ ಮಾಡಿ.
ಹಂತ 3: ಭರ್ತಿ ಮಾಡಿದ ಅರ್ಜಿಗಳೊಂದಿಗೆ ಅಗತ್ಯವಾದ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸತಕ್ಕದ್ದು.
The Trustee, Sitaram Jindal Foundation,
Jindal Nagar, Tumkur Road, Bengaluru 560073
ಎಲ್ಲಾ ಓದಿನಲ್ಲಿ ಆಸಕ್ತಿಯುಳ್ಳ ವಿದ್ಯಾರ್ಥಿಗಳಿಗೆ ತಮ್ಮ ಕನಸನ್ನು ಸಹಕಾರ ಮಾಡಿಕೊಳ್ಳಲು ಇಂತಹ ವಿದ್ಯಾರ್ಥಿ ವೇತನಗಳಿಗೆ ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ. ಲೇಖನವನ್ನು ತಪ್ಪದೆ ಎಲ್ಲಾ ವಿದ್ಯಾರ್ಥಿ ಸ್ನೇಹಿತ ಮಿತ್ರರಿಗೆ ಹಾಗೂ ಸಂಬಂಧಿಕರಿಗೆ ಈ ಕೂಡಲೇ ಶೇರ್ ಮಾಡಿ, ಧನ್ಯವಾದಗಳು.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಯಶಸ್ವಿನಿ ಯೋಜನೆ ಮರು ಜಾರಿ- ಅರ್ಜಿ ಸಲ್ಲಿಸಲು ನವೆಂಬರ್ 14 ಕೊನೆಯ ದಿನಾಂಕ
ನವೆಂಬರ್ 1 ರ ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ನವೆಂಬರ್ 2ರಿಂದ ಈ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ.
ರಾಜ್ಯದಲ್ಲಿಡೆ ಸಹಕಾರಿಗಳ ಮತ್ತು ರೈತರ ನಿರಂತರ ಬೇಡಿಕೆಯಂತೆ ರಾಜ್ಯ ಸರ್ಕಾರವು 2022 23ನೇ ಸಾಲಿನ ಆಯವ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ರೂಪಿಸಿ ಮರು ಜಾರಿಗೊಳಿಸಲು ತೀರ್ಮಾನಿಸಿ ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300 ಕೋಟಿ ಘೋಷಣೆ ಮಾಡಲಾಗಿದೆ.
ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/yasashwing-scheme-karnataka-kannada/
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ
ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ, ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/two-wheeler-scheme-karnataka/
ನವೆಂಬರ್ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು
ಉದ್ಯೋಗದ ಆಕಾಂಕ್ಷೆಗಳಿಗೆ ನವೆಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹೊರಡಿಸಿಲಾದ ಅಧಿ ಸೂಚನೆಯ ಪ್ರಕಾರ 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ ಎಂದು ತಿಳಿದು ಬಂದಿದೆ. ಯಾವ ಯಾವ ಅಭ್ಯರ್ಥಿಗಳಿಗೆ ಈ ಸರ್ಕಾರಿ ಹುದ್ದೆಯಲ್ಲಿ ಆಸಕ್ತಿ ಹೊಂದಿದೆಯೋ ಅವರು ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾದ ಆನ್ಲೈನ್ ಫಾರ್ಮ್ ಇಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.
ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/kannada-job-news-november-2022/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ
Amazon Recruitment 2022 : ಮನೆಯಲ್ಲೇ ಕೆಲಸ ₹45 ಸಾವಿರ ಸಂಬಳ. ಅರ್ಜಿ ಸಲ್ಲಿಸುವ ವಿಧಾನ, ಸಂಪೂರ್ಣ ಮಾಹಿತಿ ಇಲ್ಲಿದೆ
SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ 2022-23 : ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ, ಅರ್ಜಿ ಸಲ್ಲಿಸುವ ವಿಧಾನ
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.

WhatsApp Group






