Gruhalakshmi – ಯಜಮಾನಿಯರ ಖಾತೆಗೆ 2000 ವರ್ಗಾವಣೆಗೆ ಡೇಟ್ ಫಿಕ್ಸ್.. ಈ ಮಹಿಳೆಯರಿಗಿಲ್ಲ ಹಣ ಭಾಗ್ಯ – ಇಲ್ಲಿ ಸಂಪೂರ್ಣ ಮಾಹಿತಿ

WhatsApp Image 2023 08 18 at 05.47.59

WhatsApp Group Telegram Group

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆಯ ಹಣ ಖಾತೆಗೆ ಬರುವ ದಿನಾಂಕದ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಆಗಸ್ಟ್ 27ಕ್ಕೆ ಗೃಹಲಕ್ಷ್ಮಿ ಯೋಜನೆ(gruhalakshmi scheme)ಗೆ ಚಾಲನೆ ನೀಡಲಾಗುತ್ತದೆ. ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ 1.30 ಕೋಟಿ ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೆ. ಇದರ ಕುರಿತಾಗಿ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ಲೇಖನವನ್ನು ಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಸಿಎಂ ಸಿದ್ದರಾಮಯ್ಯ ಧ್ವಜಾರೋಹಣದ ಬಳಿಕ ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡುತ್ತಿದ್ದು, ರಾಜ್ಯದ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದ್ದು, ಜನರಿಗೆ ನಾವು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ದೇಶದ ಅಭಿವೃದ್ಧಿ ದೃಷ್ಟಿಯಲ್ಲಿಟ್ಟುಕೊಂಡು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು.ರಾಜ್ಯ ಸರ್ಕಾರ ಬಡತನ ನಿರ್ಮೂಲನೆ ಕೆಲಸ ಮಾಡುತ್ತಿದೆ. ನಾವು ಈಗಾಗಲೇ ನೀಡಿರುವ ಆಶ್ವಾಸನೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರಿಗೆ ಅನುಕೂಲವಾಗಲಿದೆ. ಮಹಿಳೆಯರಿಗೆ 2,000 ರೂ. ಆರ್ಥಿಕ ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 27 ರಂದು ಚಾಲನೆ ನೀಡಲಾಗುತ್ತಿದ್ದು, ಅಂದೇ ಮಹಿಳೆಯರ ಖಾತೆಗೆ 2,000 ರೂ. ಜಮೆ ಆಗಲಿದೆ ಎಂದು ತಿಳಿಸಿದ್ದಾರೆ.

whatss

ಈ ಕೆಳಗಿನವರಿಗೆ ಹಣ ಬರೋದಿಲ್ಲ :

ಇನ್ನೇನು ಎಲ್ಲ ಮಹಿಳೆಯರಿಗೂ ಹಣ ಬರುತ್ತದೆ ಎಂಬ ಖುಷಿಯ ಸಮಯದಲ್ಲಿ ಸರ್ಕಾರವು ಇನ್ನೊಂದು ನಿಯಮವನ್ನು ಜಾರಿಗೆ ತಂದಿದೆ. ಅದೇನೆಂದರೆ, ಬಿಪಿಎಲ್ ಕುಟುಂಬದ ಯಜಮಾನಿಗೆ ಮಾತ್ರ ರೂ.2000 ಅಂತ ಹೇಳಲಾಗಿದ್ದು. 5 ಎಕರೆ ಮೀರಿದ ಒಣ ಭೂಮಿ ಹೊಂದಿರುವ ಜನರಿಗೆ 2000 ಬೇಡ ಎಂದು ಹೇಳಲಾಗುತ್ತಿದೆ. ಅಷ್ಟೇ ಅಲ್ಲದೆ, ನಾಲ್ಕು ಚಕ್ರಗಳ ವಾಹನ ಹೊಂದಿದ ಕುಟುಂಬದವರಿಗೆ ಹಣವನ್ನು ನೀಡಲಾಗದು ಎನ್ನುತ್ತಿದ್ದಾರೆ. ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು ಯಾರಿಗೂ ಬೇಡ ಎಂದು ಹೇಳಲಾಗಿದೆ.
ಸರ್ಕಾರಿ ಉದ್ಯೋಗ ಮತ್ತು ಪೆನ್ಷನ್ ಪಡೆಯುವವರೆಗೂ ಬೇಡ ಎಂದು ಹೇಳಲಾಗಿದೆ.
ಸರ್ಕಾರ ಇನ್ಕಮ್ ಟ್ಯಾಕ್ಸ್ ಪಾವತಿದಾರರ ಕುಟುಂಬಕ್ಕೂ ಹಣ ದೊರೆಯುವುದಿಲ್ಲ. ಜಿಎಸ್ಟಿ ರಿಟರ್ನ್ ಪಾವತಿಸುವ ಮಹಿಳೆಯರಿಗೂ ನೀಡಬಾರದು. ಪ್ರೊಫೆಷನಲ್ ಟ್ಯಾಕ್ಸ್ ಪಾವತಿದಾರರಿಗೂ ಕೊಡಬಾರದು ಎಂದು ಸರ್ಕಾರ ತಿಳಿಸಿದೆ ಎಂದು ಸುದ್ದಿಗಳು ಹೇಳುತ್ತಿವೆ. ಅದೇನೆ ಇದ್ದರೂ ಒಂದು ಒಂದು ಬಾರಿ ಹಣ ಜಮಾ ಆದ ನಂತರ ಯಾರ್ಯಾರಿಗೆ ಬಂದಿದೆ ಎಂದು ತಿಳಿಯಿತ್ತದೆ.

ಈ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತದೆ :

ಹಲವಾರು ಜನರಿಗೆ ಈಗಾಗಲೇ ಅನ್ನ ಭಾಗ್ಯ ಯೋಜನೆಯ ಹಣವು ಬಂದಿದೆ. ಬಿಪಿಎಲ್ ಕಾರ್ಡ್ ಹೊಂದಿದ ಮನೆಯ ಯಜಮಾನಿಯಾ ಖಾತೆಗೆ ಯೋಜನೆಯ ಹಣ ಬಂದಿರುತ್ತದೆ ಆದ್ದರಿಂದ ಅದೇ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣವು ಕೂಡ ಬರುತ್ತದೆ. ಗೃಹಲಕ್ಷ್ಮಿ ಯೋಜನೆಯ ಅಧಿಕೃತ ಪ್ರಕಟಣೆಯ ಪ್ರಕಾರ ರೇಷನ್ ಕಾರ್ಡಿನಲ್ಲಿ ಇರುವ ಮನೆಯ ಯಜಮಾನಿಯ ಖಾತೆಗೆ ಹಣ ಜಮಾ ಆಗುತ್ತದೆ. ನಿಮ್ಮ ಆಧಾರ್ ಕಾರ್ಡಿಗೆ ಮ್ಯಾಪಿಂಗ್ ಆಗಿರುವ ಬ್ಯಾಂಕ್ ಖಾತೆಗೆ ಹಣ ಜಮಾ ಆಗುತ್ತದೆ. ಒಂದು ವೇಳೆ ನೀವೇನಾದರೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವಾಗ ಬೇರೆ ಖಾತೆಯ ಅಕೌಂಟ್ ನಂಬರ್ ಅನ್ನು ಕೊಟ್ಟಿದ್ದರೆ ಆ ಬ್ಯಾಂಕ್ ಖಾತೆಗೆ ಹಣ ಜಮಾವಾಗಲಿದೆ. ನಿಮಗೇನಾದರೂ ಇನ್ನೂ ಇದರ ಬಗ್ಗೆ ಸಂಶಯವಿದ್ದಲ್ಲಿ, ಯಾವ ಖಾತೆಗೆ ಹಣ ಜಮಾ ಆಗುತ್ತದೆ ಎಂಬುವುದನ್ನು ನೀವೇ ಮೊಬೈಲಿನಲ್ಲಿ ನೋಡಿಕೊಳ್ಳಬಹುದು. ಅದಕ್ಕಾಗಿ ಕೆಳಗಿನ ಹಂತಗಳನ್ನು ಅನುಸರಿಸಿ.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗುವ ಖಾತೆಯನ್ನು ಚೆಕ್ ಮಾಡುವ ವಿಧಾನ :

ಹಂತ 1: ಮೊದಲನೆಯದಾಗಿ ಆಹಾರ ಮತ್ತು ನಾಗರಿಕ ಸರಜರಾಜು ಇಲಾಖೆಯ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ  

https://ahara.kar.nic.in/Home/Eservices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಮುಖ ಪುಟ ತೆಗೆಯುತ್ತದೆ ಅದರಲ್ಲಿ ಈ ಸ್ಟೇಟಸ್ ಎಂಬ ಆಯ್ಕೆಯನ್ನು ಒತ್ತಿ, ನಂತರ ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.

h1

ಹಂತ 2: ನಂತರ ನಿಮ್ಮ ಜಿಲ್ಲೆಯ ಮೇಲಿನ ಲಿಂಕನ್ನು ಕ್ಲಿಕ್ ಮಾಡಿ.

h2

ಹಂತ 3 : ನಂತರ ಕೆಳಗಿನ ಭಾಗದಲ್ಲಿರುವ  ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ. h3

ಹಂತ 4: ಮುಂದುವರೆದು ನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಿ. ನಂತರ ಗೋ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ, 2000 ಹಣ ಜಮಾ ಆಗಿದೆ ಎಂಬುದರ ಮಾಹಿತಿಯನ್ನು ನೀವು ನೋಡಬಹುದು.

ddnn

tel share transformed

ಹೀಗೆ ನೀವು ಗೃಹಲಕ್ಷ್ಮಿ ಯೋಜನೆಯಡಿಯಲ್ಲಿನ ಹಣವು ನಿಮಗೆ ಜಮಾ ಆಗಿದೆಯೇ ಅಥವಾ ಅದರ ಸ್ಥಿತಿ ಹೇಗಿದೆ ಎಂಬುವುದನ್ನು ಚೆಕ್ ಮಾಡಬಹುದು.

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Picsart 23 07 16 14 24 41 584 transformed 1

WhatsApp Group Join Now
Telegram Group Join Now

Related Posts

Editor in Chief

Editor in Chief

Lingaraj Ramapur BCA, MCA, MA ( Journalism );as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.

Leave a Reply

Your email address will not be published. Required fields are marked *

error: Content is protected !!