ಚಂಡಮಾರುತದ (ಸೈಕ್ಲೋನ್) ಪ್ರಭಾವದಿಂದಾಗಿ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಅನೇಕ ಭಾಗಗಳಲ್ಲಿ ಇನ್ನೊಂದು ವಾರಗಳ ಕಾಲ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ವರದಿ ಮಾಡಿದೆ. ಪಶ್ಚಿಮ-ಮಧ್ಯ ಹಾಗೂ ಪಕ್ಕದ ವಾಯುವ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವೇ ಈ ಭಾರೀ ಮಳೆಗೆ ಮುಖ್ಯ ಕಾರಣವಾಗಿದೆ.
IMD ವರದಿಯ ಪ್ರಕಾರ, ಅಕ್ಟೋಬರ್ 9 ರವರೆಗೆ ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಲ್ಲಿ ಒಂದು ವಾರದ ಅವಧಿಗೆ ಮಳೆ ಮುಂದುವರಿಯುವ ಸಂಭವವಿದ್ದು, ಗುರುವಾರ ಕೂಡ ಬೆಂಗಳೂರು ಸೇರಿದಂತೆ ಹಲವು ಕಡೆ ಭಾರೀ ಮಳೆ ದಾಖಲಾಗಿದೆ. ಚಂಡಮಾರುತದ ತೀವ್ರತೆಯಿಂದಾಗಿ ಮಳೆಯ ಜೊತೆಗೆ ಚಳಿಯ ವಾತಾವರಣವೂ ಇರಲಿದೆ ಎಂದು ಹೇಳಲಾಗಿದೆ.
ಯಾವೆಲ್ಲಾ ಪ್ರದೇಶಗಳಲ್ಲಿ ಮಳೆ ನಿರೀಕ್ಷೆ?
ಮುಂದಿನ ಒಂದು ವಾರದ ಅವಧಿಗೆ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಒಳನಾಡು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಮಲೆನಾಡು ಮತ್ತು ಕರಾವಳಿ: ಹಾಸನ, ಕೊಡಗು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ.
ಉತ್ತರ ಒಳನಾಡು: ವಿಜಯನಗರ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿಯೂ ಮಳೆಯಾಗುವ ನಿರೀಕ್ಷೆಯಿದೆ.
ವಾರಾಂತ್ಯದಲ್ಲಿ ಮಳೆಯ ಅಬ್ಬರ
ಇನ್ನೊಂದು ವಾರದವರೆಗೆ ರಾಜ್ಯದಲ್ಲಿ ಗುಡುಗು-ಬಿರುಗಾಳಿ ಸಹಿತ ಧಾರಾಕಾರ ಮಳೆ ಆಗಲಿದೆ. ವಿಶೇಷವಾಗಿ ಅಕ್ಟೋಬರ್ 4 ರಂದು ಕರ್ನಾಟಕದ ಹಲವು ಭಾಗದಲ್ಲಿ ಮಳೆ ಹೆಚ್ಚು ಇರಲಿದೆ. ವಾರಾಂತ್ಯದಲ್ಲಿ ಅಂದರೆ ಶನಿವಾರದಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ.
ಅದೇ ರೀತಿ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು IMD ವರದಿ ಉಲ್ಲೇಖಿಸಿದೆ.
ಬೆಂಗಳೂರಿನಲ್ಲಿ ವಾತಾವರಣ ಹೇಗಿದೆ?
ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ನಗರದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದೆ. ಈ ಅವಧಿಯಲ್ಲಿ ಗಾಳಿಯ ವೇಗವು ಗಂಟೆಗೆ ಸುಮಾರು 30 ರಿಂದ 40 ಕಿ.ಮೀ ವೇಗದಲ್ಲಿ ಇರಲಿದೆ. ಗರಿಷ್ಠ ತಾಪಮಾನವು ಮತ್ತು ಕನಿಷ್ಠ ತಾಪಮಾನವು
ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

“Lingaraj is the Editor-in-Chief at NeedsOfPublic.in, where he leads the editorial strategy and content integrity team. With a unique academic background combining Technology (BCA, MCA) and Media (MA in Journalism), Lingaraj brings a data-driven approach to news reporting. Over his 7-year career in digital media, he has specialized in bridging the gap between complex government digital infrastructures and public understanding.
As Editor-in-Chief, Lingaraj oversees all fact-checking processes to ensure that every article meets high journalistic standards. He is passionate about using his technical expertise to combat misinformation in the digital space.”
Connect with Lingaraj:


WhatsApp Group




