ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಸ್ವಯಂ ಉದ್ಯೋಗ ಯೋಜನೆಯಡಿ ಸಿಗುವ 1 ಲಕ್ಷ Subsidy loan ಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ, ಇದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನಿರುದ್ಯೋಗರಿಗೆ ಇದೊಂದು ಸುವರ್ಣವಕಾಶ ಎಂದು ಹೇಳಬಹುದು, ಹೀಗಿರುವಾಗ ಈ ಯೋಜನೆ(Scheme) ಗೆ ಯಾರೆಲ್ಲ ಅರ್ಜಿ ಹಾಕಬಹುದು, ಏನೆಲ್ಲಾ ಪ್ರಯೋಜನಗಳು ಸಿಗುತ್ತೆ?, ಅರ್ಹತೆ ಏನಾಗಿರಬೇಕು?, ಎಂದು ಸೇರಿದಂತೆ ಇನ್ನಿತರೆ ಮಾಹಿತಿಯನ್ನು ತಿಳಿಸಿಕೊಡುತ್ತೇವೆ, ಲೇಖನವನ್ನು ಕೊನೆಯವರೆಗೂ ಓದಿರಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ
ನಿರುದ್ಯೋಗ ದರವನ್ನು ಕಡಿಮೆ ಮಾಡಲು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿವಿಧ ರೀತಿಯ ಯೋಜನೆಗಳನ್ನು ಪ್ರಾರಂಭಿಸುತ್ತವೆ. ಈ ಯೋಜನೆಯ ಮೂಲಕ, ಉತ್ಪಾದನೆ ಮತ್ತು ಸೇವಾ ಚಟುವಟಿಕೆಗಳಿಗೆ ಸರ್ಕಾರವು ಸಾಲ(Government Loan)ದ ಮೇಲೆ ಸಬ್ಸಿಡಿಗಳನ್ನು ನೀಡುತ್ತದೆ.
ಸ್ವಯಂ ಉದ್ಯೋಗ ಯೋಜನೆ(Self Employment Scheme) 2023:
ಈ ಯೋಜನೆಯಡಿ ಫಲಾನುಭವಿಗಳಿಗೆ ಸಣ್ಣಪುಟ್ಟ ವ್ಯಾಪಾರದ ಚಟುವಟಿಕೆಗಳಾದ ಪೆಟ್ಟಿ ಅಂಗಡಿ, ಸಿದ್ಧ ಉಡುಪುಗಳ ಅಂಗಡಿ, ಕುರಿ ಮತ್ತು ಮೇಕೆ ಸಾಕಣೆ, ಮೀನುಗಾರಿಕೆ, ಹಣ್ಣು ಮತ್ತು ತರಕಾರಿ ಅಂಗಡಿ, ಟೈಲರಿಂಗ್ ಮುಂತಾದ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಅನುಕೂಲವಾಗುವಂತೆ ನಿಗಮವು ಪ್ರತಿ ಫಲಾನುಭವಿಗೆ ರೂ.1,00,000/- ಧನ ಸಹಾಯವನ್ನು ನೀಡುತ್ತಿದೆ. ಈ ಸಹಾಯದ ಮೊತ್ತವು ರೂ.50,000/- ಸಹಾಯಧನ ಮತ್ತು ರೂ.50,000/- ಸಾಲವನ್ನು ಒಳಗೊಂಡಿರುತ್ತದೆ.
ವೈಶಿಷ್ಟ್ಯಗಳು:
ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಳ್ಳಲು ಈ ಯೋಜನೆಯಡಿ ಪರಿಶಿಷ್ಟ ಜಾತಿಯ ಮಾದಿಗ ಮತ್ತು ಸಂಬಂಧಿತ ಸಮುದಾಯದಕ್ಕೆ ಸೇರಿದ ಪುರುಷ ಮತ್ತು ಮಹಿಳೆಯರಿಗೆ ಆರ್ಥಿಕ ನೆರವುನ್ನು ನೀಡಲಾಗುತ್ತದೆ.
ಯೋಜನೆಯ ಸಾಲದ ವೆಚ್ಚ ರೂ.1 ಲಕ್ಷ, ರೂ. 50 ಸಾವಿರ ಸಹಾಯಧನವಾದ್ರೆ ಬಾಕಿ ರೂ. 50 ಸಾವಿರ ಸಾಲವಾಗಿದೆ.
ಸಾಲದ ಮೊತ್ತವನ್ನು 4% ಬಡ್ಡಿ ದರದಲ್ಲಿ 30 ಸಾಮನ್ಯ ಕಂತುಗಳಲ್ಲಿ ಮರುಪಾವತಿಸಬೇಕು.
ಯಾರು ಅರ್ಜಿ ಸಲ್ಲಿಸಬಹುದು?:
ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ
ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ
ಕರ್ನಾಟಕ ಆದಿಜಂಬವ ಅಭಿವೃದ್ಧಿ ನಿಗಮ
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ
ಅಭಿವೃದ್ಧಿ ನಿಗಮ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮ
ಈ ಮೇಲಿನ ಸಮುದಾಯಕ್ಕೆ ಸೇರಿದವರು ಈ ಯೋಜನೆಗೆ ಅರ್ಹರಾಗಿದ್ದಾರೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಯೋಜನೆಗಳ ಷರತ್ತುಗಳು:
ಫಲಾನುಭವಿಗಳನ್ನು ಆಯ್ಕೆ ಸಮಿತಿಯು ಆಯ್ಕೆ ಮಾಡಬೇಕು.
ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು, ಅರ್ಜಿದಾರರು ಗ್ರಾಮೀಣ ಪ್ರದೇಶದಕ್ಕೆ ಸೇರಿದವರಾಗಿದ್ದಾರೆ ವಾರ್ಷಿಕ ಆದಾಯ ರೂ.1.50 ಲಕ್ಷಗಳು ಮತ್ತು ನಗರ ಪ್ರದೇಶಕ್ಕೆ ಸೇರಿದವರಾಗಿದ್ದಾರೆ ರೂ.2.00 ಲಕ್ಷಗಳ ಮಿತಿಯಲ್ಲಿರಬೇಕು.
ಅರ್ಜಿದಾರರು 21 ವರ್ಷ ಮತ್ತು ಮೇಲ್ಪಟ್ಟವರು ಮತ್ತು 50 ವರ್ಷದ ವಯಸ್ಸಿನವರಾಗಿರಬೇಕು.
ಉದ್ದೇಶ/ಚಟುವಟಿಕೆಗಳ ಆಧಾರದ ಮೇಲೆ ಸಹಾಯಧನವನ್ನು ಮಂಜೂರು ಮಾಡಲಾಗುವುದು
ಆಯ್ಕೆ ಪ್ರಕ್ರಿಯೆಯಲ್ಲಿ ಅರ್ಜಿದಾರರು ಅನರ್ಹರೆಂದು ಕಂಡು ಬಂದರೆ ಅರ್ಜಿಯನ್ನು ತಿರಸ್ಕರಿಸಲಾಗುತ್ತದೆ.
ಸಬ್ಸಿಡಿ ಮತ್ತು ಸಾಲದ ಮೊತ್ತವನ್ನು ನೇರವಾಗಿ ಫಲಾನುಭವಿ/ಮಾರಾಟಗಾರರಿಗೆ ಬಿಡುಗಡೆ ಮಾಡಲಾಗುತ್ತದೆ.
ಅರ್ಜಿಯೊಂದಿಗೆ ಅರ್ಜಿದಾರರು ಸಲ್ಲಿಸಬೇಕಾದ ದಾಖಲೆಗಳು:
ಅರ್ಜಿ ಸಲ್ಲಿಸಿದ ಅಪ್ಲಿಕೇಶನ್
ಫೋಟೋ
ಜಾತಿ ಪ್ರಮಾಣಪತ್ರ (RD ಸಂಖ್ಯೆಯೊಂದಿಗೆ)
ಆದಾಯ ಪ್ರಮಾಣಪತ್ರ (RD ಸಂಖ್ಯೆಯೊಂದಿಗೆ)
ಆಧಾರ್ ಕಾರ್ಡ್
ಬ್ಯಾಂಕ್ ಪಾಸ್ ಬುಕ್
ಅರ್ಜಿಯನ್ನು ಹೇಗೆ ಸಲ್ಲಿಸಬೇಕು?
ಆಸಕ್ತ ಅರ್ಜಿದಾರರು ಅರ್ಜಿಯನ್ನು ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್(online) ನಲ್ಲಿ ಸಲ್ಲಿಸಬಹುದು. ಹಾಗೂ ‘ಗ್ರಾಮಒನ್(grama one) ‘, ‘ಬೆಂಗಳೂರಒನ್(Bengaluru one) ‘, ‘ಕರ್ನಾಟಕ ಒನ್’ ಕೇಂದ್ರಗಳಲ್ಲಿ ಸಹ ಅರ್ಜಿಯನ್ನು ಸಲ್ಲಿಸಬಹುದು.
ಯುವಕರು ಈ ಯೋಜನೆಯ ಸದುಪಯೋಗ ಪಡೆದುಕೊಂಡು ನಿರುದ್ಯೋಗವನ್ನು ಹೋಗಲಾಡಿಸಬಹುದು ಮತ್ತು ನಿಮ್ಮ ಸ್ವಂತ ಉದ್ಯೋಗವನ್ನು ಶುರು ಮಾಡಬಹುದು. ಹಾಗೆ ಇಂತಹ ಉತ್ತಮ ಮತ್ತು ಉಪಯುಕ್ತ ಮಾಹಿತಿಯನ್ನು ಹೊಂದಿರುವ ಲೇಖನವನ್ನು ನಿಮ್ಮೆಲ್ಲಾ ಸ್ನೇಹಿತರಲ್ಲಿ, ಬಂಧು – ಬಾಂಧವರಲ್ಲಿ ಶೇರ್ ಮಾಡಿ, ಧನ್ಯವಾದಗಳು.
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group








