Bigg Boss Kannada: ಬಿಗ್‌ಬಾಸ್‌ ಹೋಗಿಬಂದ ಬಳಿಕ ಟೀಕಿಸಿದವರಿಗೆ ಗುಮ್ಮಿದ ಪ್ರದೀಪ್‌ ಈಶ್ವರ್‌

BIGBOSS PRADEEP KUMAR REACTION

WhatsApp Group Telegram Group

ಈಗಾಗಲೇ ಕನ್ನಡ ಕಿರುತೆರೆಯ ಪ್ರಮುಖ ರಿಯಾಲಿಟಿ ಶೋ ಬಿಗ್‌ಬಾಸ್‌ ಸೀಸನ್ 10(BigBoss season 10) ನಡೆಯುತ್ತಿದೆ. ಬಿಗ್‌ಬಾಸ್‌ ಆರಂಭವಾದ ಮರುದಿನ ದೊಡ್ಡ ಮನೆಯೊಳಗೆ ಶಾಸಕ ಪ್ರದೀಪ್‌ ಈಶ್ವರ್‌ ಎಂಟ್ರಿ ಕೊಟ್ಟಿದ್ದು ವೀಕ್ಷಕರಿಗೆ ಅಚ್ಚರಿಯನ್ನು ಉಂಟು ಮಾಡಿದೆ. ಶಾಸಕರಾದ ಪ್ರದೀಪ್ ಈಶ್ವರ್ ರವರು ರಿಯಾಲಿಟಿ ಶೋ ಗೆ ಬಂದಿರುದು ಎಲ್ಲಾ ಕಡೆಗಳಿಂದ ಮಾತುಗಳು ಕೇಳಿಬರುತ್ತಿವೆ. ಇದನ್ನು ಸಾರ್ವಜನಿಕರು ಮತ್ತು ವಿರೋಧ ಪಕ್ಷದವರು ಆಕ್ಷೇಪಿಸಿದ್ದಾರೆ. ಏನಿದು ಸುದ್ದಿ ಅಂತ ತಿಳಿದುಕೊಳ್ಳ ಬೇಕೇ ಹಾಗಿದ್ದಲ್ಲಿ ಲೇಖನವನ್ನು ಸಂಪೂರ್ಣವಾಗಿ ಓದಿ.

ಬಿಗ್ ಬಾಸ್ ನಿಂದ ಮರಳಿ ಬಂದ ಶಾಸಕ ಪ್ರದೀಪ್ ಈಶ್ವರ್ ಇದೀಗ “ಬಿಗ್‌ಬಾಸ್‌ ಕನ್ನಡಕ್ಕೆ ಹೋಗಿ ಬಂದಿರುವುದರಲ್ಲಿ ತಪ್ಪೇನಿಲ್ಲ” ಎಂದು ತನ್ನ ನಡೆಯನ್ನು ಎಲ್ಲರ ಮುಂದೆ ಹೇಳಿಕೊಂಡಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಶಾಸಕ ಪ್ರದೀಪ್ ಈಶ್ವರ್ ಹೇಳಿಕೆ :

ರಿಯಾಲಿಟಿ ಶೋ ಕಾರ್ಯಕ್ರಮಗಳಲ್ಲಿ ಭಾಗಿ ಆಗುವುದು ತಪ್ಪೇನೂ ಇಲ್ಲ. ನಾನು ಬಿಗ್ ಬಾಸ್ ಮನೆಗೆ ಹೋಗಿದ್ದು ಕೇವಲ 2-3 ತಾಸು ಮಾತ್ರ. ಅದರ ಆಯೋಜಕರು ನನ್ನ ಸ್ನೇಹಿತರು, ಅವರ ಆಹ್ವಾನದ ಮೇರೆಗೆ ಅಲ್ಲಿನ ಸ್ಪರ್ಧಿಗಳಿಗೆ ಉತ್ತೇಜಿಸಲು ಹೋಗಿದ್ದೆ. ಸ್ಫೂರ್ತಿದಾಯಕ ಮಾತುಗಳನ್ನು ಆಡಿದ್ದೇನೆ. ಬಿಗ್ ಬಾಸ್ ಮನೆಯಲ್ಲಿ ಇರುವವರಿಗೆ ಧೈರ್ಯ ತುಂಬಿದ್ದೇನೆ ಎಂದು ಪ್ರದೀಪ್ ಈಶ್ವರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

whatss

ಒಳಗಡೆ ಕಾಲಿಟ್ಟಾಗ ಆರಂಭದಲ್ಲಿ ನಾನು ಕಂಟೆಸ್ಟೆಂಟ್ ಅಂತ ಪ್ರಾಂಕ್ ಮಾಡಬೇಕಿತ್ತು. ಆಮೇಲೆ ನಾನು ಅತಿಥಿ ಅಂತ ಬಿಗ್ ಬಾಸ್ ರಿವೀಲ್ ಮಾಡಿದರು. ಎಪಿಸೋಡ್ ಪ್ರಸಾರ ಆಗುವವರೆಗೂ ಸಹಕರಿಸಿ ಅಂತ ಕಲರ್ಸ್ ಕನ್ನಡ(colors kannada) ವಾಹಿನಿಯವರು ಕೇಳಿಕೊಂಡಿದ್ದರು. ಹೀಗಾಗಿ ನಿನ್ನೆ ನಾನು ಸುಮ್ಮನಾಗಿದ್ದೆ ಎಂದು ಪ್ರದೀಪ್ ಈಶ್ವರ್ ತಿಳಿಸಿದರು.

ಈ ಸಂದರ್ಭದಲ್ಲಿ ಸುಧಾಕರ್‌ ಟೀಕಿಸಿರುವುದಕ್ಕೂ ಇವರು ಪ್ರತಿಕ್ರಿಯೆ ನೀಡಿದ್ದಾರೆ. ” ಸುಧಾಕರ್‌ ಈಗ ವಿರೋಧ ಪಕ್ಷದಲ್ಲಿದ್ದಾರೆ. ಮಾತನಾಡುವುದು ಅವರ ಹಕ್ಕು. ಸೋಮವಾರ ನನ್ನನ್ನು ಟೀಕಿಸಲು ಅವರಿಗೆ ಒಳ್ಳೆಯ ಅವಕಾಶವಾಗಿತ್ತು. ಆದರೆ, ಅವರು ಈ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಲು ವಿಫಲರಾಗಿದ್ದಾರೆ ಎಂದು ಹೇಳುವೆ. ಈ ಮೊದಲು ಅವರು ಪ್ರತಿಕ್ರಿಯೆ ನೀಡುವ ಮೊದಲು ಕೊಂಚ ಸಮಯ ಕಾಯುತ್ತಿದ್ದರು. ಆದರೆ, ಅವರೀಗ ಅತಿಯಾಗಿ ಪ್ರತಿಕ್ರಿಯಿಸುತ್ತಿದ್ದಾರೆ” ಎಂದು ಪ್ರದೀಪ್‌ ಈಶ್ವರ್‌ ಹೇಳಿದ್ದಾರೆ. ಬಿಗ್‌ಬಾಸ್‌ನಿಂದ ಬಂದ ಹಣವನ್ನು ಬಡ ಮಕ್ಕಳಿಗೆ ನೀಡುವ ಕುರಿತೂ ಪ್ರದೀಪ್‌ ಈಶ್ವರ್‌ ಹೇಳಿದ್ದಾರೆ.

ಪ್ರದೀಪ್ ಈಶ್ವರ್ ವಿರುದ್ಧ ರಾಜಕೀಯ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಹಿಂದೆ ಜವಾಬ್ದಾರಿ ಮರೆತು ಪ್ರದೀಪ್ ಈಶ್ವರ್  ಬಿಗ್‌ಬಾಸ್‌ ಮನರಂಜನೆಯ ರಿಯಾಲಿಟಿ ಶೋ ಗೆ ಹೋಗಿದ್ದಾರೆ. ಇಂತಹ ತಪ್ಪು ಮಾಡಿರುವ ಇವರನ್ನು ಶಾಸಕ ಸ್ಥಾನದಿಂದ ವಜಾ ಮಾಡಬೇಕು ಎಂದು ವಂದೇ ವಿಧಾನ ಸಭಾ ಸ್ಪೀಕರ್ ಗೆ ಮಾತರಂ ಸಮಾಜ ಸೇವಾ ಸಂಸ್ಥೆ ದೂರು ನೀಡಿತ್ತು.

ಪ್ರದೀಪ್ ಈಶ್ವರ್ ಬಿಗ್ ಬಾಸ್ ಮನೆಯೊಳಗೆ ಪ್ರವೇಶಿಸಿದಕ್ಕೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಇದರ ಬಗ್ಗೆ ಮಾತನಾಡಿದ ಅವರು ಬಿಗ್ ಬಾಸ್ ನಂತಹ ರಿಯಾಲಿಟಿ ಶೋ ಗೆ ಭಾಗವಹಿಸುವುದು ಅವರ ಅವರ ವೈಯಕ್ತಿಕ ವಿಷಯ. ಅದರ ಬಗ್ಗೆ ಮಾತನಾಡುವ ಅಥವಾ ತಡೆಯುವ ಹಕ್ಕು ಯಾರಿಗೂ ಇಲ್ಲ ಎಂದು ತಿಳಿಸಿದ್ದಾರೆ. ಹಾಗೆಯೇ ಬಿಗ್ ಬಾಸ್ ಮನೆಗೆ ಹೋಗಿದಕ್ಕೆ ಬಿಗ್ ಬಾಸ್ ಕಡೆಯಿಂದ ಹಣ ದೊರಕಿದೆ ಅದನ್ನು ಅನಾಥ ಆಶ್ರಮಕ್ಕೆ ಕೊಡುವುದಾಗಿ ಪ್ರದೀಪ್ ಅವರು ತಿಳಿಸಿದ್ದಾರೆ ಎಂದರು.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ಹಾಗೆಯೇ ಬಿಗ್ ಬಾಸ್ ಮನೆಯೊಳಗೆ ಹೋದ ನಂತರ ಮತ್ತು ಹೊರಬಂದ ನಂತರವೂ ಸಾಕಷ್ಟು ಟ್ರೋಲ್ ಮತ್ತು ವಿವಾದಗಳಿಗೆ ಪ್ರದೀಪ್ ಈಶ್ವರ್ ಗುರಿಯಾಗಿದ್ದಾರೆ.

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

WhatsApp Group Join Now
Telegram Group Join Now

Related Posts

Editor in Chief

Editor in Chief

Lingaraj Ramapur BCA, MCA, MA ( Journalism );as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.

Leave a Reply

Your email address will not be published. Required fields are marked *

error: Content is protected !!