ಕರ್ನಾಟಕದಲ್ಲಿ ದೀರ್ಘಕಾಲದಿಂದ ಅಸ್ಪಷ್ಟತೆಯಲ್ಲಿದ್ದ 13,352 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ(Teachers Recruitment) ಪ್ರಕ್ರಿಯೆ ಈಗ ಸುಪ್ರೀಂ ಕೋರ್ಟ್ನ(Supreme court) ತೀರ್ಪಿನಿಂದ ಅಂತಿಮ ಹಂತ ತಲುಪಿದೆ. ಹೈಕೋರ್ಟ್ ನೀಡಿದ್ದ ನಿರ್ದೇಶನಕ್ಕೆ ಬೆಂಬಲವಾಗಿ, ಸುಪ್ರೀಂ ಕೋರ್ಟ್ ನೇಮಕಾತಿ ಪ್ರಕ್ರಿಯೆ ಮುಂದುವರೆಯಲು ಹಸಿರು ನಿಶಾನೆ ನೀಡಿದೆ. ಈ ತೀರ್ಪು ಸಾವಿರಾರು ಶಿಕ್ಷಕ ಹುದ್ದೆ ಆಸಕ್ತರಿಗೆ ಹೊಸ ಆಶಾಕಿರಣವಾಗಿ ಪರಿಣಮಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
ಸುಪ್ರೀಂ ಕೋರ್ಟ್ನ ಪ್ರಮುಖ ನಿರ್ಣಯ:
ದ್ವಿಸದಸ್ಯ ಪೀಠದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜೆ.ಕೆ. ಮಾಹೇಶ್ವರಿ ಮತ್ತು ವಿಜಯ್ ಬಿಷ್ಟೋಯ್ ಅವರ ಪೀಠವು, ಹೈಕೋರ್ಟ್ನ ನಿರ್ಧಾರ ಸರಿಯೇ ಎಂದು ಸ್ಪಷ್ಟಪಡಿಸಿದೆ. ಪೀಠದ ಅಭಿಪ್ರಾಯದ ಪ್ರಕಾರ, ಈ ವಿಷಯ ಸೇವಾ ಸಂಬಂಧಿತ ತಕರಾರು ಆಗಿರುವುದರಿಂದ, ಇಂತಹ ವಿಷಯಗಳನ್ನು ನಿಭಾಯಿಸಲು ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (KSAT) ಸೂಕ್ತ ವೇದಿಕೆ ಎಂದು ಹೇಳಿದೆ.
ನ್ಯಾಯಮೂರ್ತಿ ವಿಜಯ್ ಬಿಷ್ಟೋ ಅವರ ಮಾತಿನಲ್ಲಿ —
“ಸೇವಾ ಸಂಬಂಧಿತ ವಿಷಯಗಳಲ್ಲಿ ಹೈಕೋರ್ಟ್ ಸಂವಿಧಾನದ 226ನೇ ವಿಧಿಯ ಅಡಿಯಲ್ಲಿ ನೇರವಾಗಿ ಹಸ್ತಕ್ಷೇಪ ಮಾಡಬಾರದು. ನ್ಯಾಯಮಂಡಳಿಯೇ ಅಂತಿಮ ತೀರ್ಪು ನೀಡುವ ಸರಿಯಾದ ವೇದಿಕೆ.”
ಹೀಗಾಗಿ, ಸುಪ್ರೀಂ ಕೋರ್ಟ್ ಹೈಕೋರ್ಟ್ನ ತೀರ್ಪನ್ನು ಮಾನ್ಯಗೊಳಿಸಿ, ನೇಮಕಾತಿ ಪ್ರಕ್ರಿಯೆಗೆ ಯಾವುದೇ ಅಡ್ಡಿಯಾಗದಂತೆ ಸ್ಪಷ್ಟ ನಿರ್ದೇಶನ ನೀಡಿದೆ.
ಪ್ರಕರಣದ ಹಿನ್ನಲೆ:
2022ರ ಮಾರ್ಚ್ 21ರಂದು ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳಲ್ಲಿ 6 ರಿಂದ 8ನೇ ತರಗತಿಯವರೆಗೆ 13,352 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಅಧಿಸೂಚನೆ ಹೊರಡಿಸಿತ್ತು. ಅದೇ ವರ್ಷದ ಮೇ ತಿಂಗಳಲ್ಲಿ ಲಿಖಿತ ಪರೀಕ್ಷೆ ನಡೆಯಿತು ಹಾಗೂ ನವೆಂಬರ್ 18ರಂದು ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟವಾಯಿತು.
ಆದರೆ ವಿವಾದ ಹುಟ್ಟಿದ್ದು ವಿವಾಹಿತ ಮಹಿಳಾ ಅಭ್ಯರ್ಥಿಗಳ ಆದಾಯ ಪ್ರಮಾಣಪತ್ರದ ಆಧಾರದ ಮೇಲೆ. ಆಯ್ಕೆಪಟ್ಟಿ ತಯಾರಿಸುವ ವೇಳೆ, ಇಲಾಖೆಯು ಪತಿಯ ಆದಾಯ ಪ್ರಮಾಣಪತ್ರವನ್ನೇ ಪರಿಗಣಿಸಿತ್ತು, ಆದರೆ ಅಧಿಸೂಚನೆಯಲ್ಲಿ ಅದು ಸ್ಪಷ್ಟವಾಗಿ ಉಲ್ಲೇಖವಾಗಿರಲಿಲ್ಲ.
ಈ ಹಿನ್ನೆಲೆ, ಹಲವಾರು ಮಹಿಳಾ ಅಭ್ಯರ್ಥಿಗಳು ನ್ಯಾಯಕ್ಕಾಗಿ ಹೈಕೋರ್ಟ್ ಮೆಟ್ಟಿಲೇರಿದರು.
ಅವರು “ತಂದೆಯ ಆದಾಯ ಪ್ರಮಾಣಪತ್ರವನ್ನೂ ಪರಿಗಣಿಸಬೇಕು” ಎಂದು ವಾದಿಸಿದ್ದರು.
ಹೈಕೋರ್ಟ್ನ(High court)ಕ್ರಮಗಳು:
ಮೊದಲು ಏಕಸದಸ್ಯ ಪೀಠ ಮಹಿಳಾ ಅಭ್ಯರ್ಥಿಗಳ ಪರವಾಗಿ ತೀರ್ಪು ನೀಡಿ ತಾತ್ಕಾಲಿಕ ಆಯ್ಕೆಪಟ್ಟಿ ರದ್ದುಗೊಳಿಸಿತು. ಸರ್ಕಾರ ಹೊಸ ಆಯ್ಕೆಪಟ್ಟಿ ಪ್ರಕಟಿಸಬೇಕಾಗಿ ಬಂತು. ಆದರೆ, ಹೊಸ ಪಟ್ಟಿಯಲ್ಲಿ ಹಿಂದಿನ 451 ಅಭ್ಯರ್ಥಿಗಳು ಕೈಬೀಳುವಂತಾಯಿತು. ಈ ತೀರ್ಮಾನ ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿ ದ್ವಿಸದಸ್ಯ ಪೀಠ ಮುಂದೆ ವಿಚಾರಣೆಗೆ ಬಂತು.
ದ್ವಿಸದಸ್ಯ ಪೀಠವು ಏಕಸದಸ್ಯ ಪೀಠದ ತೀರ್ಪನ್ನು ರದ್ದುಗೊಳಿಸಿ, ನೇಮಕಾತಿ ಪ್ರಕ್ರಿಯೆ ಮುಂದುವರೆಯಬಹುದೆಂದು ಸ್ಪಷ್ಟಪಡಿಸಿತು.
ಅಂತಿಮವಾಗಿ ಸುಪ್ರೀಂ ಕೋರ್ಟ್ ಈ ತೀರ್ಪನ್ನು ಎತ್ತಿಹಿಡಿದಿದೆ.
ಸುಪ್ರೀಂ ಕೋರ್ಟ್ನ ಅಂತಿಮ ನಿರ್ದೇಶನ:
ಹೈಕೋರ್ಟ್ನ ವಿಭಾಗೀಯ ಪೀಠದ ತೀರ್ಪು ಸರಿಯಾಗಿದೆ ಎಂದು ಸುಪ್ರೀಂ ಕೋರ್ಟ್ ದೃಢಪಡಿಸಿದೆ.
KSAT (ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ) ಈ ವಿಷಯದ ಅಂತಿಮ ನಿರ್ಧಾರ ಕೈಗೊಳ್ಳುವ ವೇದಿಕೆ ಎಂದು ಸ್ಪಷ್ಟಪಡಿಸಿದೆ.
ನ್ಯಾಯಮಂಡಳಿಯ ಅಂತಿಮ ತೀರ್ಪಿಗೆ ಅನುಗುಣವಾಗಿ 500 ಮೀಸಲು ಹುದ್ದೆಗಳನ್ನು ಭರ್ತಿ ಮಾಡಲು ಸೂಚನೆ ನೀಡಿದೆ.
ಈ ತೀರ್ಪು ರಾಜ್ಯದಲ್ಲಿ ಸಾವಿರಾರು ಶಿಕ್ಷಕ ಹುದ್ದೆ ಖಾಲಿ ಇರುವ ಸಂದರ್ಭದಲ್ಲಿಯೇ ಬಂದಿದೆ.
ನೇಮಕಾತಿ ಪ್ರಕ್ರಿಯೆ ವರ್ಷಗಟ್ಟಲೆ ತಡವಾಗಿದ್ದ ಕಾರಣ, ಶಾಲೆಗಳಲ್ಲಿ ಶಿಕ್ಷಕರ ಕೊರತೆಯು ಉಂಟಾಗಿತ್ತು. ಈಗ ಸುಪ್ರೀಂ ಕೋರ್ಟ್ನ ಸ್ಪಷ್ಟ ನಿರ್ದೇಶನದ ನಂತರ, ನೇಮಕಾತಿ ಪ್ರಕ್ರಿಯೆ ತ್ವರಿತವಾಗಿ ಪೂರ್ಣಗೊಳ್ಳುವ ಸಾಧ್ಯತೆ ಹೆಚ್ಚು
ಒಟ್ಟಾರೆ, ಸುಪ್ರೀಂ ಕೋರ್ಟ್ನ ಈ ತೀರ್ಪು ಕೇವಲ 13,352 ಹುದ್ದೆಗಳ ನೇಮಕಾತಿಗೆ ದಾರಿ ತೆರೆಯುವುದಲ್ಲ, ಆಡಳಿತಾತ್ಮಕ ನ್ಯಾಯಾಂಗದ ಪ್ರಾಮುಖ್ಯತೆಯನ್ನು ಮತ್ತೊಮ್ಮೆ ನೆನಪಿಸುತ್ತದೆ.
ಸರ್ಕಾರ ಮತ್ತು ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ನ್ಯಾಯಮಂಡಳಿಯ ತೀರ್ಪಿಗೆ ಅನುಗುಣವಾಗಿ ಕ್ರಮ ಕೈಗೊಳ್ಳಬೇಕಿದೆ. ಇದರಿಂದ ರಾಜ್ಯದ ಶಿಕ್ಷಣ ಕ್ಷೇತ್ರಕ್ಕೆ ಹೊಸ ಉತ್ಸಾಹ ಮತ್ತು ನಿರ್ವಹಣಾ ಸ್ಥಿರತೆ ಬರಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

“ಕೃಷ್ಣಸಾಗರಿ ಅವರು NeedsOfPublic.in ನ ‘ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ’ (Job Updates & Career) ವಿಭಾಗದ ಮುಖ್ಯಸ್ಥರಾಗಿದ್ದಾರೆ. ಉದ್ಯೋಗ ಮಾಹಿತಿ ಕ್ಷೇತ್ರದಲ್ಲಿ 4 ವರ್ಷಗಳ ವೃತ್ತಿಪರ ಅನುಭವ ಹೊಂದಿರುವ ಇವರು, ಸರ್ಕಾರಿ ಉದ್ಯೋಗದ ಅಧಿಸೂಚನೆಗಳು (Govt Job Notifications), ಖಾಸಗಿ ವಲಯದ ನೇಮಕಾತಿಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಅಪ್ಡೇಟ್ಗಳನ್ನು ಒದಗಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಉದ್ಯೋಗಾಕಾಂಕ್ಷಿಗಳಿಗೆ ಕೇವಲ ಅಧಿಕೃತ ಮೂಲಗಳಿಂದ ಪರಿಶೀಲಿಸಿದ (verified) ಮತ್ತು ನಿಖರವಾದ ಉದ್ಯೋಗದ ಮಾಹಿತಿಯನ್ನು ಸಕಾಲದಲ್ಲಿ ತಲುಪಿಸುವುದು ಸಾಗರಿ ಅವರ ಪ್ರಮುಖ ಗುರಿಯಾಗಿದೆ.”


WhatsApp Group




