ರಾಜ್ಯದಲ್ಲಿನ ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಹೊಸ ಆದೇಶವೊಂದನ್ನು ಹೊರಡಿಸಿದೆ. ಶಿಕ್ಷಣದ ಗುಣಮಟ್ಟವನ್ನು ಕಾಪಾಡುವುದು, ಪಾರದರ್ಶಕ ಆಡಳಿತವನ್ನು ಸ್ಥಾಪಿಸುವುದು ಮತ್ತು ಶಾಲಾ ವ್ಯವಸ್ಥೆಯ ನೈತಿಕತೆಯನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ಈ ಆದೇಶವನ್ನು ಹೊರಡಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
ಶೈಕ್ಷಣಿಕ ಹಿನ್ನೆಲೆ:
ಕರ್ನಾಟಕದಲ್ಲಿ ಪ್ರತೀ ಶೈಕ್ಷಣಿಕ ಸಂಸ್ಥೆ ತಮ್ಮ ಶಾಲಾ ಕಾರ್ಯಾಚರಣೆಗೆ ಮಾನ್ಯತೆ ಪಡೆಯುವುದು ಕಡ್ಡಾಯವಾಗಿದೆ. ಇದು ಕೇವಲ ಒಂದು ಅಧಿಕೃತ ಪ್ರಕ್ರಿಯೆಯಲ್ಲ, ವಿದ್ಯಾರ್ಥಿಗಳ ಹಕ್ಕು, ಸುರಕ್ಷತೆ ಮತ್ತು ಶಿಕ್ಷಣದ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳುವ ಪ್ರಮುಖ ಹಂತವಾಗಿದೆ. ಈ ಹಿನ್ನೆಲೆಯಲ್ಲಿ, ಕರ್ನಾಟಕ ಶಿಕ್ಷಣ ಕಾಯ್ದೆ 1983 ಹಾಗೂ ಆರ್.ಟಿ.ಇ (RTE) ನಿಯಮ – 2012ರ ಅಡಿಯಲ್ಲಿ ಶಾಲೆಗಳ ಮಾನ್ಯತೆ ಹಾಗೂ ಅದರ ನವೀಕರಣಕ್ಕೆ ಸಂಬಂಧಿಸಿದ ಸ್ಪಷ್ಟ ಮಾರ್ಗಸೂಚಿಗಳನ್ನು ಇಲಾಖೆಯು ಪ್ರಕಟಿಸಿದೆ.
ಹೊಸ ಆದೇಶದ ಮುಖ್ಯ ಅಂಶಗಳು ಹೀಗಿವೆ:
2025–26 ನೇ ಶೈಕ್ಷಣಿಕ ಸಾಲಿನಲ್ಲಿ ನೊಂದಣಿ ಪಡೆದು ಶಾಲೆ ಪ್ರಾರಂಭಿಸಿರುವ ಎಲ್ಲಾ ಖಾಸಗಿ ಶಾಲೆಗಳು ಇದೀಗ ಆನ್ಲೈನ್ ತಂತ್ರಾಂಶದ ಮೂಲಕ ಪ್ರಥಮ ಮಾನ್ಯತೆಗಾಗಿ ಅರ್ಜಿ ಸಲ್ಲಿಸಬೇಕು.
ಶಾಲೆಗಳು ನಿಯಮಾನುಸಾರ ನಿಗದಿಪಡಿಸಲಾದ ದಾಖಲೆಗಳು ಹಾಗೂ ಮಾಹಿತಿಗಳನ್ನು ತಂತ್ರಾಂಶದ ಮೂಲಕ ಅಪ್ಲೋಡ್ ಮಾಡುವುದು ಕಡ್ಡಾಯ.
ಯಾವುದೇ ಶಾಲೆಯು ನಿಗದಿತ ಅವಧಿಯೊಳಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸದಿದ್ದರೆ ಅಥವಾ ನಿಯಮಾನುಸಾರ ಮಾನ್ಯತೆ ಪಡೆಯದಿದ್ದರೆ, ಶಾಲಾ ನೊಂದಣಿ ಪ್ರಮಾಣಪತ್ರವು ಸ್ವಯಂಚಾಲಿತವಾಗಿ ರದ್ದಾಗುತ್ತದೆ.
ಶಾಲೆಯು ನೊಂದಣಿ ಪಡೆಯುವ ವೇಳೆ ಆನ್ಲೈನ್ ಮೂಲಕ ಸಲ್ಲಿಸಿದ ದಾಖಲೆಗಳು ಸ್ವಯಂ ಪ್ರಥಮ ಮಾನ್ಯತೆ ಅರ್ಜಿಗೆ ಸೆಳೆಯಲ್ಪಡುತ್ತವೆ, ಇದರಿಂದ ಪ್ರಕ್ರಿಯೆ ಹೆಚ್ಚು ವೇಗವಾಗಿ ಹಾಗೂ ಪಾರದರ್ಶಕವಾಗಿ ನಡೆಯಲಿದೆ.
ಹಳೆಯ ದಾಖಲೆಗಳಲ್ಲಿ ಇತ್ತೀಚಿನ ದಿನಾಂಕಕ್ಕೆ ಚಾಲ್ತಿಯಲ್ಲಿರುವ ದಾಖಲೆಗಳನ್ನು ಮಾತ್ರ ನವೀಕರಿಸಿ ಸಲ್ಲಿಸಲು ಸೂಚಿಸಲಾಗಿದೆ.
ಆದೇಶದ ಉದ್ದೇಶವೇನು:
ಈ ಕ್ರಮದ ಮೂಲಕ ಶಿಕ್ಷಣ ಇಲಾಖೆ ಶಾಲೆಗಳ ಮಾನ್ಯತೆ ಪ್ರಕ್ರಿಯೆಯನ್ನು ಡಿಜಿಟಲ್ ಪ್ಲಾಟ್ಫಾರ್ಮ್ ಮೂಲಕ ಸರಳಗೊಳಿಸಲು ಹಾಗೂ ಎಲ್ಲಾ ದಾಖಲೆಗಳು ಮತ್ತು ಅನುಮೋದನೆಗಳನ್ನು ಆನ್ಲೈನ್ನಲ್ಲಿ ನಿರ್ವಹಿಸಲು ಉದ್ದೇಶಿಸಿದೆ. ಇದರ ಮೂಲಕ,
ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿರುವ ಶಾಲೆಗಳ ಪತ್ತೆ ಸುಲಭವಾಗಲಿದೆ,
ವಿದ್ಯಾರ್ಥಿ, ಪೋಷಕರು ಹಾಗೂ ಆಡಳಿತದ ನಡುವೆ ಪಾರದರ್ಶಕತೆ ಹೆಚ್ಚಲಿದೆ,
ಮತ್ತು ಶಿಕ್ಷಣದ ಗುಣಮಟ್ಟವನ್ನು ಕಾಪಾಡುವಲ್ಲಿ ಸರ್ಕಾರಕ್ಕೆ ಸಹಕಾರ ದೊರಕಲಿದೆ.
ಒಟ್ಟಾರೆಯಾಗಿ, ರಾಜ್ಯದ ಎಲ್ಲಾ ಖಾಸಗಿ ಶಾಲೆಗಳು ತಮ್ಮ ಪ್ರಥಮ ಮಾನ್ಯತೆ ಅಥವಾ ಮಾನ್ಯತೆ ನವೀಕರಣದ ಅರ್ಜಿಯನ್ನು ನಿಗದಿತ ಅವಧಿಯೊಳಗೆ ಆನ್ಲೈನ್ ಮೂಲಕ ಸಲ್ಲಿಸುವುದು ಕಡ್ಡಾಯ. ವಿಳಂಬ ಅಥವಾ ನಿರ್ಲಕ್ಷ್ಯ ಮಾಡಿದರೆ ಶಾಲೆಯ ನೊಂದಣಿ ರದ್ದಾಗುವ ಸಾಧ್ಯತೆ ಇದೆ.

ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

Sagari leads the ‘Government Schemes’ vertical at NeedsOfPublic.in, where she decodes the latest Central and State government policies for the common citizen. She has over 3 years of experience tracking welfare programs like PM Kisan, Ayushman Bharat, and State Ration updates. Her goal is to ensure every reader understands their eligibility and benefits without confusion. Sagari strictly verifies all updates from official government portals before publishing. Outside of work, she is an advocate for digital literacy in rural India.”
Connect with Sagari:


WhatsApp Group




