ಪಡಿತರ ಚೀಟಿ(Ration card)ಯನ್ನು ಹೊಂದಿದ್ದು, ನಿಮಗೇನಾದರೂ ಅನ್ನಭಾಗ್ಯ ಯೋಜನೆಯ ಅಕ್ಕಿಯು ದೊರೆಯುತ್ತಿದ್ದರೆ ಇದೀಗ ಸಿಹಿ ಸುದ್ದಿ ಬಂದಿದೆ. ಈ ಸಿಹಿ ಸುದ್ದಿ ಏನೆಂದರೆ ಪ್ರತಿ ಭಾರಿಯೂ ಸಾರ್ವಜನಿಕರು ನ್ಯಾಯಬೆಲೆ ಅಂಗಡಿಗೆ ಹೋಗಿ ಕ್ಯೂ ನಿಂತು ರೇಷನ್ ತೆಗೆದುಕೊಂಡು ಬರುವ ಅವಶ್ಯಕತೆ ಇರುವುದಿಲ್ಲ. ಇನ್ಮುಂದೆ ನಿಮ್ಮ ಮನೆ ಬಾಗಿಲಿಗೆ(door delivery service ) ಅನ್ನಭಾಗ್ಯ ಅಕ್ಕಿಯನ್ನು ಒದಗಿಸಲಾಗುತ್ತದೆ. ಆದರೆ ಇದಕ್ಕೆ ಹಲವಾರು ಕಂಡೀಷನ್ ಅಪ್ಲೆ ಆಗಲಿವೆ. ಯಾವೆಲ್ಲಾ ಕಂಡೀಷನ್ ಅಪ್ಲೆ ಆಗಲಿವೆ ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಅನ್ನಭಾಗ್ಯ ಯೋಜನೆ(Annabhagya scheme)ಯ ಅಕ್ಕಿ ಮನೆ ಬಾಗಿಲಿಗೆ ಬರಲಿದೆ :
ರಾಜ್ಯದಲ್ಲಿ ಯಾರೋಬ್ಬರೂ ಹಸಿವಿನಿಂದ ಇರಬಾರದು ಎಂಬ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ(Congress Government) ಅನ್ನಭಾಗ್ಯ ಯೋಜನೆ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಇದೀಗ ಅನ್ನಭಾಗ್ಯ ಡೋರ್ ಡೆಲಿವರಿ ಸರ್ವಿಸ್ ಎಂಬ ಮತ್ತೊಂದು ಸ್ಕೀಮ್ ಅನ್ನು ಜನರಿಗೆ ನೀಡಲು ಮುಂದಾಗಿದೆ.
ಈ ಹಿಂದೆ ಅನ್ನಭಾಗ್ಯ ಯೋಜನೆಯಲ್ಲಿ 5 ಕೆಜಿ ಅಕ್ಕಿ ಬದಲು ದುಡ್ಡು ಹಾಕೋ ಅನ್ನಭಾಗ್ಯ ಹಣದ ಸ್ಕೀಂ ನಡೆಯುತ್ತಿತ್ತು. ಇದು ಈ ತಿಂಗಳು ಕೂಡ ಮುಂದುವರೆಯುವ ಸಾಧ್ಯತೆ ಇದೆ.
ಅನ್ನಭಾಗ್ಯ ಡೋರ್ ಡೆಲಿವರಿ ಸರ್ವಿಸ್ ಯೋಜನೆಯ ಕಂಡೀಷನ್ ಗಳು :
ಅನ್ನಭಾಗ್ಯ ಡೋರ್ ಡೆಲಿವರಿ ಸೌಲಭ್ಯ ಎಲ್ಲರಿಗೂ ಸಿಗುವುದಿಲ್ಲ ಬದಲಾಗಿ 60 ವರ್ಷ ಮೇಲ್ಪಟ್ಟ ಬಿಪಿಎಲ್ ಕಾರ್ಡ್(BPL card)ದಾರರಿಗೆ ಹಾಗೂ ರೇಷನ್ ಕಾರ್ಡ್ ಪ್ರಕಾರ ಒಬ್ಬರೆ ಸದಸ್ಯರಾಗಿದ್ದರೆ ಅಂಥವರ ಮನೆ ಬಾಗಿಲಿಗೆ ರೇಷನ್ ತಲುಪಿಸುವ ಕೆಲಸವನ್ನು ಶೀಘ್ರವೇ ಮಾಡಲಾಗುತ್ತದೆ. ರಾಜ್ಯಾದ್ಯಂತ ಕೆಲವೇ ದಿನದಲ್ಲಿ ಈ ಯೋಜನೆಗೆ ಚಾಲನೆ ಸಿಗಲಿದೆ. ಸದ್ಯ ಕರ್ನಾಟಕದಲ್ಲಿ ಒಟ್ಟು 10,000 ರೇಷನ್ ಕಾರ್ಡ್ನಲ್ಲಿ 60 ವರ್ಷ ಮೇಲ್ಪಟ್ಟ ಏಕ ಸದಸ್ಯರಿರುವ ಕಾರ್ಡ್ದಾರರು ಇದ್ದಾರೆ, ಈ ತಿಂಗಳಲ್ಲೆ ಈ ಯೋಜನೆ ಜಾರಿಗೆ ಮಾಡುವ ಬಗ್ಗೆ ಇಲಾಖೆ ಪ್ರಯತ್ನವನ್ನು ನಡೆಸುತ್ತಿದೆ.
ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ಬಡವರ ಹಸಿವು ನೀಗಿಸಲು ಅನ್ನಭಾಗ್ಯ ಯೋಜನೆ ಜಾರಿಯಲ್ಲಿದ್ದು ಇದೀಗ ಇದರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಮತ್ತೊಂದು ಅನುಕೂಲಕರವಾದ ಜನಸ್ನೇಹಿ ವ್ಯವಸ್ಥೆ ಈ ಡೋರ್ ಡೆಲಿವರಿ ಸರ್ವಿಸ್ ಆಗಿದೆ. ನಿಜವಾಗಿಯೂ ಇದು ಉತ್ತಮ ಯೋಜನೆಯಾಗಿದೆ.
ಹೀಗಾಗಿ ರಾಜ್ಯ ಸರ್ಕಾರದಿಂದ ಯಾವುದೇ ವಿಳಂಬವಾಗದೇ ಈ ಯೋಜನೆ ಜಾರಿಯಾದರೆ ವಯಸ್ಸಾದ ವೃದ್ಧರಿಗೆ ಬಹಳಷ್ಟು ಸಹಾಯವಾಗಲಿದೆ. ರಾಜ್ಯದ ಜನರಿಗೆ ಕಾಂಗ್ರೆಸ್ ಸರ್ಕಾರದಿಂದ ಹೊಸ ಉಡುಗೊರೆ ಎಂದು ಹೇಳಬಹುದಾಗಿದೆ. ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ವರದಿಯನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಬಂಧುಗಳಿಗೂ ಶೇರ್ ಮಾಡಿ, ಧನ್ಯವಾದಗಳು.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಇದನ್ನೂ ಓದಿ – Lingayath loan scheme – ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ & ಸಹಾಯ ಧನಕ್ಕೆ ಅರ್ಜಿ ಆಹ್ವಾನ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group






