ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ನವೆಂಬರ್ 4 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು-ಮಿಂಚಿನೊಂದಿಗೆ ಸಾಮಾನ್ಯ ಮಳೆ ಬೀಳುವ ಸಂಭವವಿದೆ. ಈ ಮಳೆ ಎಲ್ಲಿ ಎಲ್ಲಿ ಸಾಧ್ಯ ಎಂಬ ವಿವರ ಇಲ್ಲಿದೆ.
ಬೆಂಗಳೂರು: ರಾಜ್ಯದಲ್ಲಿ 1 ವಾರದ ಒಣ ಹವೆಯ ನಂತರ ಈಗ ಮತ್ತೆ ಸಾಮಾನ್ಯ ಮಳೆಯ ಸೂಚನೆ ಲಭಿಸಿದೆ. ಮುಂಗಾರು ಕೊನೆಗೊಂಡ ಬಳಿಕ ಹಿಂಗಾರು ದುರ್ಬಲಗೊಂಡಿದೆ. ಆದರೂ ಕೆಲವು ಪ್ರದೇಶಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಯಾವಾಗ ಮತ್ತೆ ಮಳೆ?
ನವೆಂಬರ್ 4 ಮಂಗಳವಾರದಿಂದ ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಹಾಗೂ ನವೆಂಬರ್ 5 ರಿಂದ 7 ರವರೆಗೆ 3 ದಿನಗಳ ಕಾಲ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಗುಡುಗು-ಮಿಂಚಿನೊಂದಿಗೆ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ.
ಎಲ್ಲೆಲ್ಲಿ ಮಳೆಯ ಎಚ್ಚರಿಕೆ?
ಇಂದು ಸೋಮವಾರ, ರಾಜ್ಯಾದ್ಯಂತ ಒಣ ಹವೆಯೇ ಮುಂದುವರಿಯಲಿದೆ. ನವೆಂಬರ್ 4 ಅಂದರೆ ಮಂಗಳವಾರ, ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ ಮತ್ತು ಕೊಪ್ಪಳದಲ್ಲಿ ಸಾಮಾನ್ಯ ಮಳೆಯ ಸೂಚನೆ ಇದೆ.
ನವೆಂಬರ್ 5 ರಿಂದ 7 ರವರೆಗೆ ವ್ಯಾಪಕ ಮಳೆ
ನವೆಂಬರ್ 5 ರಿಂದ ಕರಾವಳಿ, ದಕ್ಷಿಣ ಮತ್ತು ಉತ್ತರ ಕರ್ನಾಟಕದ ಹಲವು ಕಡೆ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದ್ದು, ಇದು ನವೆಂಬರ್ 7 ರವರೆಗೆ ಮುಂದುವರಿಯಲಿದೆ. ವಿಶೇಷವಾಗಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ, ಬೀದರ್, ಕಲಬುರ್ಗಿ, ಕೊಪ್ಪಳ, ಯಾದಗಿರಿ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಹಾಗೂ ವಿಜಯನಗರದಲ್ಲಿ ಸಾಮಾನ್ಯ ಮತ್ತು ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಮುನ್ಸೂಚನೆ ಇದೆ.
ಬೆಂಗಳೂರು ಹವಾಮಾನ
ನವೆಂಬರ್ ತಿಂಗಳಲ್ಲಿ ನಗರದಲ್ಲಿ ಸಾಮಾನ್ಯವಾಗಿ ತಂಪಾದ ವಾತಾವರಣವಿರುತ್ತದೆ. 2011 ರಿಂದ 2024 ರವರೆಗಿನ ಅಂಕಿಅಂಶಗಳ ಪ್ರಕಾರ, ಕನಿಷ್ಠ ತಾಪಮಾನ 9.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, 1967 ರಲ್ಲಿ ಅದನ್ನು ಹೊರತುಪಡಿಸಿದರೆ, 2012 ರಲ್ಲಿ 13.3 ಸೆಲ್ಸಿಯಸ್, 2020 ರಲ್ಲಿ 14.8 ಡಿ.ಸೆ. ದಾಖಲಾಗಿದೆ. ಅದೇ ರೀತಿ 2-11 ರಲ್ಲಿ ಗರಿಷ್ಠ ತಾಪಮಾನ 33.0 ಡಿ.ಸೆ. ದಾಖಲಾಗಿತ್ತು. ಗರಿಷ್ಠ ಮಳೆ ಪ್ರಮಾಣ 2021 ರಲ್ಲಿ 366.5 ಮಿಮೀ ದಾಖಲಾಗಿತ್ತು.

ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

Sagari leads the ‘Government Schemes’ vertical at NeedsOfPublic.in, where she decodes the latest Central and State government policies for the common citizen. She has over 3 years of experience tracking welfare programs like PM Kisan, Ayushman Bharat, and State Ration updates. Her goal is to ensure every reader understands their eligibility and benefits without confusion. Sagari strictly verifies all updates from official government portals before publishing. Outside of work, she is an advocate for digital literacy in rural India.”
Connect with Sagari:


WhatsApp Group




