cyclone rain

Heavy Rain: ಬಂಗಾಳಕೊಲ್ಲಿ ಮತ್ತೇ ವಾಯುಭಾರ ಕುಸಿತ ಹಿನ್ನೆಲೆ, ರಾಜ್ಯದಲ್ಲಿ ತೀವ್ರ ಮಳೆ ಮುನ್ಸೂಚನೆ.! ಎಲ್ಲೆಲ್ಲಿ.?

Categories:
WhatsApp Group Telegram Group

ರಾಜ್ಯದಲ್ಲಿ ಮುಂದಿನ ಎರಡು ದಿನಗಳವರೆಗೆ ಹಗುರ ಮಳೆ ಮುಂದುವರಿಯುವ ನಿರೀಕ್ಷೆ ಇದೆ. ಅದರ ನಂತರ ಒಣಹವೆ ಇರುವ ಸಾಧ್ಯತೆ ಇದೆ. ನವೆಂಬರ್ 22ರ ವಾರಾಂತ್ಯದ ಸುಮಾರಿಗೆ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ ಸಂಭವಿಸುವುದರಿಂದ, ರಾಜ್ಯಾದ್ಯಂತ ಮಳೆಯ ಪ್ರಮಾಣ ಮತ್ತೆ ಹೆಚ್ಚಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನಲ್ಲಿ ನವೆಂಬರ್ 18 ರಿಂದ 22ರವರೆಗೆ ಮಳೆಯಾಗಲಿದ್ದು, ಈ ಅವಧಿಯಲ್ಲಿ ರಾತ್ರಿಯ ತಾಪಮಾನ ಏರಿಕೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

ರಾಜ್ಯದಲ್ಲಿ ಇಂದು (ನವೆಂಬರ್ 19) ಒಣಹವೆ ಕಂಡುಬರಲಿದೆ. ಆದರೆ ನವೆಂಬರ್ 22ರ ಆಸುಪಾಸಿನಲ್ಲಿ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ ಉಂಟಾಗುವ ಸೂಚನೆ ಇರುವುದರಿಂದ, ಅಂದಿನಿಂದ ರಾಜ್ಯದಲ್ಲಿ ಮಳೆ ಚುರುಕಾಗುವ ನಿರೀಕ್ಷೆ ಇದೆ ಎಂದು ಬೆಂಗಳೂರಿನ ಹವಾಮಾನ ಕೇಂದ್ರದ ವಿಜ್ಞಾನಿ ಸಿ.ಎಸ್. ಪಾಟೀಲ್ ಅವರು ಮಾಹಿತಿ ನೀಡಿದ್ದಾರೆ.

ವಿಜ್ಞಾನಿ ಸಿ.ಎಸ್. ಪಾಟೀಲ್ ಅವರ ಪ್ರಕಾರ, ಕರ್ನಾಟಕದಾದ್ಯಂತ ಇಂದು ಒಣಹವೆ ಇರಲಿದ್ದು, ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ಬೆಳಗಾವಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ತಂಪಾದ ಗಾಳಿ ಬೀಸಲಿದೆ.

ಪ್ರಸ್ತುತ ಹವಾಮಾನ ಸ್ಥಿತಿ: ನೈಋತ್ಯ ಬಂಗಾಳಕೊಲ್ಲಿ ಮತ್ತು ಶ್ರೀಲಂಕಾ ಕರಾವಳಿಯಲ್ಲಿದ್ದ ವಾಯುಭಾರ ಕುಸಿತವು ಈಗ ಕೊಮೊರಿನ್ ಪ್ರದೇಶದ ಮೇಲೆ ಕೇಂದ್ರೀಕೃತವಾಗಿದೆ. ಈ ಕಾರಣದಿಂದ ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ನವೆಂಬರ್ 18 ರಿಂದ 22 ರವರೆಗೆ ಹಗುರ ಮಳೆಯಾಗಲಿದೆ. ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ನವೆಂಬರ್ 18 ರಿಂದ 22 ರವರೆಗೆ ಒಣಹವೆ ಮುಂದುವರಿಯಲಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ರಾತ್ರಿಯ ಉಷ್ಣಾಂಶವು ಹೆಚ್ಚಾಗುವ ಸಾಧ್ಯತೆ ಇದೆ ಎಂದು ವಿಜ್ಞಾನಿ ಪಾಟೀಲ್ ಹೇಳಿದ್ದಾರೆ.

ಮಳೆ ಮುನ್ಸೂಚನೆ ವಿವರ

ನವೆಂಬರ್ 18-19

ದಕ್ಷಿಣ ಒಳನಾಡು: ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

ಕರಾವಳಿ ಕರ್ನಾಟಕ: ನವೆಂಬರ್ 18ರಂದು ಒಣಹವೆ ಇರಲಿದ್ದು, ನವೆಂಬರ್ 19ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆ ಹಗುರ ಮಳೆಯಾಗಬಹುದು. ಉತ್ತರ ಕನ್ನಡದಲ್ಲಿ ಒಣಹವೆ ಇರಲಿದೆ.

ಉತ್ತರ ಒಳನಾಡು: ಎಲ್ಲಾ ಜಿಲ್ಲೆಗಳಲ್ಲಿ ಸಂಪೂರ್ಣವಾಗಿ ಒಣಹವೆ ಮುಂದುವರಿಯಲಿದೆ.

ನವೆಂಬರ್ 20-21

ಈ ಎರಡು ದಿನಗಳ ಕಾಲ ರಾಜ್ಯದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಸಂಪೂರ್ಣವಾಗಿ ಒಣಹವೆ ಇರುವ ನಿರೀಕ್ಷೆ ಇದೆ.

ನವೆಂಬರ್ 22, 23 ಮತ್ತು 24

ಹೊಸ ವಾಯುಭಾರ ಕುಸಿತದ ಪ್ರಭಾವದಿಂದ ಈ ಮೂರು ದಿನಗಳಲ್ಲಿ ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆ ನಿರೀಕ್ಷಿಸಲಾಗಿದೆ.

ಕರಾವಳಿ ಕರ್ನಾಟಕ: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡು: ರಾಯಚೂರು, ಯಾದಗಿರಿ, ಕೊಪ್ಪಳ, ಕಲಬುರಗಿ ಮತ್ತು ಗದಗ ಜಿಲ್ಲೆಗಳ ಒಂದೆರಡು ಕಡೆ ಹಗುರದಿಂದ ಸಾಧಾರಣ ಮಳೆ ನಿರೀಕ್ಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

ದಕ್ಷಿಣ ಒಳನಾಡು: ಚಾಮರಾಜನಗರ, ಕೊಡಗು, ಹಾಸನ, ರಾಮನಗರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಒಂದೆರಡು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಮೈಸೂರು, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಮುನ್ಸೂಚನೆ

ಮುಂದಿನ 24 ಗಂಟೆಗಳು: ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಹಗುರ ಮಳೆ ಅಥವಾ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಮುಂಜಾನೆ ಕೆಲವು ಕಡೆಗಳಲ್ಲಿ ಮಂಜು ಕವಿಯುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 25°C ಮತ್ತು ಕನಿಷ್ಠ ತಾಪಮಾನ 18°C ಇರುವ ಸಂಭವವಿದೆ.

WhatsApp Image 2025 09 05 at 10.22.29 AM 3

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories