ಬೆಂಗಳೂರು ನಗರದ ಉತ್ತರ ಭಾಗದ ನಿವಾಸಿಗಳು ನವೆಂಬರ್ 23, 2025ರ ಭಾನುವಾರ ದಿನವಿಡೀ ವಿದ್ಯುತ್ ವ್ಯತ್ಯಯಕ್ಕೆ ಸಿದ್ಧರಾಗಬೇಕಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ಮತ್ತು ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ, ಲೈನ್ ದುರಸ್ತಿ ಮತ್ತು ಉಪಕೇಂದ್ರದ ಅಪ್ಗ್ರೇಡೇಷನ್ ಕಾರಣದಿಂದ ಮೂರು ದೊಡ್ಡ ಉಪಕೇಂದ್ರಗಳ ವ್ಯಾಪ್ತಿಯಲ್ಲಿ ಬೆಳಗ್ಗೆಯಿಂದ ಸಂಜೆವರೆಗೆ ಸುಮಾರು 5-6 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ. ಈ ಪ್ರದೇಶಗಳಲ್ಲಿ ವಾಸಿಸುವವರು, ವ್ಯಾಪಾರ ಮಾಡುವವರು, ಶಾಲಾ-ಕಾಲೇಜುಗಳು ಮತ್ತು ಆಸ್ಪತ್ರೆಗಳು ಮುಂಗಡ ಸಿದ್ಧತೆ ಮಾಡಿಕೊಳ್ಳುವಂತೆ BESCOM ಕೋರಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.…………
ಯಲಹಂಕಾ 66/11 ಕೆವಿ ಉಪಕೇಂದ್ರ ವ್ಯಾಪ್ತಿ
ದಿನಾಂಕ: 23.11.2025 (ಭಾನುವಾರ)
ಸಮಯ: ಬೆಳಗ್ಗೆ 11:00 ರಿಂದ ಸಂಜೆ 04:30 ರವರೆಗೆ (5.5 ಗಂಟೆಗಳ ಕಾಲ)
ಪ್ರಭಾವಿತ ಪ್ರದೇಶಗಳು: ಕೆಎಂಎಫ್, ವೈಎನ್ಕೆ ನ್ಯೂ ಟೌನ್ 208, 407, ಬಿ ಸೆಕ್ಟರ್, ಸಿಬಿ ಸಾಂದ್ರ, ಅಲ್ಲಾಳಸಂದ್ರ, ಶಾರದಾನಗರ, ಜನಪ್ರಿಯ ಬಡಾವಣೆ, ಅನ್ರಿಯಾ, ಮಾರುತಿನಗರ, ಕೋಗಿಲು, ಬಿಬಿ ರಸ್ತೆ ಯಲಹಂಕ, ಬಾಗಲೂರು ಕ್ರಾಸ್, ವೆಂಕಟಾಲ್, ನಿಟ್ಟೆ ಇಂಟರ್ನ್ಯಾಶನಲ್ ಸ್ಕೂಲ್, ಬಿಎಸ್ಎಫ್ ಕ್ಯಾಂಪಸ್, ಐಎಎಫ್, ರಿಯಾನ್ ಇಂಟರ್ನ್ಯಾಶನಲ್ ಸ್ಕೂಲ್, ಕಾಗೆನ್ ಅಡ್ಯಾನ್ ಕಾಲೇಜು, ರಾಯಣ್ಣನ ಶಾಲೆ ಪಾಲನಹಳ್ಳಿ, ದ್ವಾರಕಾನಗರ, ಪೂರ್ವಂಕರ RMZ ಗ್ಯಾಲೇರಿಯಾ ಮತ್ತು ಸುತ್ತಮುತ್ತಲಿನ ಎಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.
ಅಬ್ಬಿಗೆರೆ 66/11 ಕೆವಿ ಉಪಕೇಂದ್ರ ವ್ಯಾಪ್ತಿ
ದಿನಾಂಕ: 23.11.2025 (ಭಾನುವಾರ)
ಸಮಯ: ಬೆಳಗ್ಗೆ 10:00 ರಿಂದ ಸಂಜೆ 05:00 ರವರೆಗೆ (7 ಗಂಟೆಗಳ ಕಾಲ)
ಪ್ರಭಾವಿತ ಪ್ರದೇಶಗಳು: ಕಮ್ಮಗೊಂಡನಹಳ್ಳಿ, ರಾಘವೇಂದ್ರ ಬಡಾವಣೆ, ಲಕ್ಷ್ಮೀಪುರ, ವಡೇರಹಳ್ಳಿ, ಅಬ್ಬಿಗೆರೆ ಇಂಡಸ್ಟ್ರಿಯಲ್ ಏರಿಯಾ, ಸಿಂಗಾಪುರ ಬಡಾವಣೆ, ಪೈಪ್ಲೈನ್ ರೋಡ್, ನಿಸರ್ಗ ಬಡಾವಣೆ, ಕೆಂಪೇಗೌಡ ಬಡಾವಣೆ, ಕಲಾನಗರ ಮುಖ್ಯ ರಸ್ತೆ, ವಿಶ್ವೇಶ್ವರಯ್ಯ ಬಡಾವಣೆ, ಎಚ್ವಿವಿ ಬಡಾವಣೆ, ಕುವೆಂಪು ನಗರ, ಕಾಶಿರಾಮ ನಗರ, ಸಿಂಹಾದ್ರಿ ಬಡಾವಣೆ, ಪ್ರಕೃತಿ ಬಡಾವಣೆ, ಮುನಿಸ್ವಾಮಪ್ಪ ಬಡಾವಣೆ, ಲಕ್ಕಪ್ಪ ಬಡಾವಣೆ, ಬಾಲಾಜಿ ಬಡಾವಣೆ, ವರದರಾಜಸ್ವಾಮಿ ಬಡಾವಣೆ, ಬ್ರಿಗೇಡ್ ಪಾರ್ಕ್ಸೈಡ್ ಉತ್ತರ ಅಪಾರ್ಟ್ಮೆಂಟ್ ಮತ್ತು ಸುತ್ತಮುತ್ತಲಿನ ಎಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ಸ್ಥಗಿತವಾಗಲಿದೆ.
ಪೀಣ್ಯ SRS 220/66/11 ಕೆವಿ ಉಪಕೇಂದ್ರ ವ್ಯಾಪ್ತಿ
ದಿನಾಂಕ: 23.11.2025 (ಭಾನುವಾರ)
ಸಮಯ: ಬೆಳಗ್ಗೆ 10:00 ರಿಂದ ಸಂಜೆ 05:00 ರವರೆಗೆ (7 ಗಂಟೆಗಳ ಕಾಲ)
ಪ್ರಭಾವಿತ ಪ್ರದೇಶಗಳು: ಪೀಣ್ಯ 10ನೇ ಮತ್ತು 11ನೇ ಮುಖ್ಯ ರಸ್ತೆ, ಉಡುಪಿ ಹೋಟೆಲ್ ಸುತ್ತಮುತ್ತ, ಐಆರ್ ಪಾಲಿಟೆಕ್ನಿಕ್ ರಸ್ತೆ, ಲಕ್ಷ್ಮೀದೇವಿ ನಗರ, ಲಗ್ಗೆರೆ ಹಳೆ ಗ್ರಾಮ, ಲವ್ ಕುಶ ನಗರ, ರಾಘವೇಂದ್ರ ನಗರ, ಚೌಡೇಶ್ವರಿ ನಗರ 6,7,8,9ನೇ ಕ್ರಾಸ್, ಪೀಣ್ಯ 1ನೇ ಹಂತ ಪಿಐಎ 7ನೇ ಕ್ರಾಸ್, ಟಿವಿಎಸ್ ಕ್ರಾಸ್, ಇಸ್ರೋ 1ನೇ ಮತ್ತು 2ನೇ ಕ್ರಾಸ್, ಎಂಇಐ ಲೇಔಟ್, ಯಶವಂತಪುರ ಕೈಗಾರಿಕಾ ಪ್ರದೇಶ, ಎಚ್ಎಂಟಿ ರಸ್ತೆ, ಆರ್ಎನ್ಎಸ್ ಅಪಾರ್ಟ್ಮೆಂಟ್, ಸಿಎಂಟಿಐ, ಬೋರ್ಲಿಂಗಪ್ಪ ಗಾರ್ಡನ್, ಪೀಣ್ಯ ಪೊಲೀಸ್ ಠಾಣೆ ರಸ್ತೆ, ಗಣಪತಿನಗರ, ಚಾಮುಂಡಿಪುರ, ಮುನೇಶ್ವರ ದೇವಸ್ಥಾನ ರಸ್ತೆ, ಮೆಕ್ ಲೇಔಟ್, ರಾಜೇಶ್ವರಿನಗರ, ಆಕಾಶ್ ಥಿಯೇಟರ್ ರಸ್ತೆ, ಭೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, ರಾಜಗೋಪಾಲನಗರ, ಕಸ್ತೂರಿ ಬಡಾವಣೆ, ಜಿಕೆಡಬ್ಲ್ಯೂ ಲೇಔಟ್, ಇಎಸ್ಐ ಆಸ್ಪತ್ರೆ ಮತ್ತು ಸುತ್ತಮುತ್ತಲಿನ ಎಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಇರುವುದಿಲ್ಲ.
ಈ ಪ್ರದೇಶಗಳಲ್ಲಿರುವ ನಿವಾಸಿಗಳು, ವಾಣಿಜ್ಯ ಸಂಸ್ಥೆಗಳು, ಶೈಕ್ಷಣಿಕ ಸಂಸ್ಥೆಗಳು ಮತ್ತು ಆರೋಗ್ಯ ಕೇಂದ್ರಗಳು ಜನರೇಟರ್, ಇನ್ವರ್ಟರ್ ಅಥವಾ ಬ್ಯಾಕಪ್ ವ್ಯವಸ್ಥೆ ಮಾಡಿಕೊಳ್ಳುವಂತೆ BESCOM ಕೋರಿದೆ. ತುರ್ತು ಪರಿಸ್ಥಿತಿಯಲ್ಲಿ 1912 ಅಥವಾ ಸ್ಥಳೀಯ BESCOM ಕಚೇರಿಗೆ ಸಂಪರ್ಕಿಸಬಹುದು.

ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಶಿವರಾಜ್ ಅವರು NeedsOfPublic.in ನಲ್ಲಿ ಸಾರ್ವಜನಿಕ, ಶೈಕ್ಷಣಿಕ ಮತ್ತು ಸ್ಥಳೀಯ ಸುದ್ದಿಗಳ ವಿಭಾಗದ ಹಿರಿಯ ಸಂಪಾದಕರಾಗಿದ್ದಾರೆ (Senior Editor). ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಡಿಪ್ಲೊಮಾ ಪದವಿ ಪಡೆದಿದ್ದರೂ, ಮಾಧ್ಯಮ ಕ್ಷೇತ್ರದ ಮೇಲಿರುವ ಅತೀವ ಆಸಕ್ತಿಯಿಂದಾಗಿ 2019 ರಲ್ಲಿ ಡಿಜಿಟಲ್ ಜಗತ್ತಿಗೆ ಕಾಲಿಟ್ಟರು. ಇವರು ಆರಂಭಿಸಿದ “Suddi No.1 Kannada” ಯೂಟ್ಯೂಬ್ ಚಾನೆಲ್ ಪ್ರಸ್ತುತ 300K ಗೂ ಹೆಚ್ಚು ಸಬ್ಸ್ಕ್ರೈಬರ್ಗಳನ್ನು ಹೊಂದುವ ಮೂಲಕ ಜನಪ್ರಿಯವಾಗಿದೆ. ಡಿಜಿಟಲ್ ಮಾಧ್ಯಮದಲ್ಲಿ ಉತ್ತಮ ಅನುಭವ ಹೊಂದಿರುವ ಇವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಂಕೀರ್ಣ ಯೋಜನೆಗಳನ್ನು ಹಾಗೂ ವಿದ್ಯಾರ್ಥಿವೇತನಗಳನ್ನು (Scholarships) ಸರಳವಾಗಿ ವಿಶ್ಲೇಷಿಸಿ, ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ತಲುಪಿಸುವಲ್ಲಿ ಎಕ್ಸ್ಪರ್ಟ್ ಆಗಿದ್ದಾರೆ. ಇದರ ಜೊತೆಗೆ ಪ್ರಮುಖ ಶೈಕ್ಷಣಿಕ ಅಪ್ಡೇಟ್ಗಳು ಮತ್ತು ನಿಖರ ಮಾಹಿತಿ ನೀಡುವ ವಿಡಿಯೋ ಕಂಟೆಂಟ್ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವುದು ಇವರ ಬರವಣಿಗೆಯ ವಿಶಿಷ್ಟ ಶೈಲಿಯಾಗಿದೆ.


WhatsApp Group




