ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಪ್ರಾಂಗಣದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ವಾಹನ ಚಾಲಕರು ಮತ್ತು ಗ್ರೂಪ್-ಡಿ (ಗ್ರೂಪ್-D) ವರ್ಗದ ನೌಕರರು ತಮ್ಮ ಕರ್ತವ್ಯ ಅವಧಿಯಲ್ಲಿ ಕಡ್ಡಾಯವಾಗಿ ಸಮವಸ್ತ್ರ ಮತ್ತು ಗುರುತಿನ ಚೀಟಿ (ಐಡಿ ಕಾರ್ಡ್) ಧರಿಸಬೇಕೆಂದು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.….
ಕರ್ನಾಟಕ ಸರ್ಕಾರ ಸಚಿವಾಲಯದ ವಿಧಾನ ಸೌಧ, ವಿಕಾಸ ಸೌಧ ಹಾಗೂ ಬಹು ಮಹಡಿ ಕಟ್ಟಡಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ವಾಹನ ಚಾಲಕರು ಹಾಗೂ ಗ್ರೂಪ್-ಡಿ ವೃಂದದ ನೌಕರರು ಕರ್ತವ್ಯದ ಅವಧಿಯಲ್ಲಿ ಸಮವಸ್ತ್ರ ಮತ್ತು ಗುರುತಿನ ಚೀಟಿಗಳನ್ನು ಧರಿಸದೇ ಇರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ.
ಇದರಿಂದ ಸಾರ್ವಜನಿಕರು ಮತ್ತು ಸರ್ಕಾರದಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳನ್ನು ಗುರುತಿಸುವುದು ಸಾಧ್ಯವಾಗುತ್ತಿಲ್ಲ. ಇದರಿಂದ ಶಿಸ್ತಿನ ಉಲ್ಲಂಘನೆ ಆಗುತ್ತಿರುತ್ತದೆ.
ಕರ್ನಾಟಕ ಸರ್ಕಾರ ಸಚಿವಾಲಯ ಕೈಪಿಡಿ(2005) ರ ಕಂಡಿಕೆ-48ರಲ್ಲಿ ಕರ್ನಾಟಕ ಸರ್ಕಾರ ಸಚಿವಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರೂಪ್-ಡಿ ವೃಂದದ ನೌಕರರ ಕರ್ತವ್ಯ ಹಾಗೂ ಜವಾಬ್ದಾರಿಗಳನ್ನು ನಿಗದಿಪಡಿಸಲಾಗಿರುತ್ತದೆ. ಅದರಂತೆ, ಕಚೇರಿ ಜ್ಞಾಪನ ಸಂಖ್ಯೆ:ಡಿಪಿಎಆರ್ 44 ಎಎಆರ್ 79 ದಿನಾಂಕ:12.09.1980ರ ಅನುಬಂಧದಲ್ಲಿ ಡಿ-ಗುಂಪಿನ ಸಿಬ್ಬಂದಿ ವರ್ಗದ ಕರ್ತವ್ಯಗಳು ಮತ್ತು ಹೊಣೆಗಾರಿಕೆಗಳನ್ನು ನಿಗದಿಪಡಿಸಲಾಗಿರುತ್ತದೆ.
ಸದರಿ ಜ್ಞಾಪನದಂತೆ ಗ್ರೂಪ್-ಡಿ ವೃಂದದ ಎಲ್ಲಾ ನೌಕರರು ಸಮವಸ್ತ್ರ ಧರಿಸಿ ಕಚೇರಿಗೆ ಹಾಜರಾಗುವುದು ಕಡ್ಡಾಯವಾಗಿರುತ್ತದೆ.
‘ಎಲ್ಲಾ ರೀತಿಯ ನೌಕರರು ತಮ್ಮ ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕೆಂದು ನಿರೀಕ್ಷಿಸುವುದು ಸರ್ಕಾರದ ಕಾರ್ಯನೀತಿಯಾಗಿರುವ ಕಾರಣ, ವಾಹನ ಚಾಲಕರು ಮತ್ತು ಡಿ-ಗುಂಪಿನ ಯಾರೇ ನೌಕರನು ತಾನು ಮಾಡಬೇಕಾದ ಯಾವುದೇ ಕರ್ತವ್ಯವನ್ನು ನಿರಾಕರಿಸಿದಲ್ಲಿ 1957ರ ಕರ್ನಾಟಕ ಸರ್ಕಾರಿ ಸೇವಾ (ವರ್ಗೀಕರಣ, ನಿಯಂತ್ರಣ, ಅಪೀಲು) ನಿಯಮಾವಳಿಯ ಮೇರೆಗೆ ಕ್ರಮಕ್ಕೆ ಒಳಗಾಗತಕ್ಕದ್ದು.
ಸರ್ಕಾರದ : 24 2 2018 (III) :11.01.2019ವಿವಿಧ ವರ್ಗದೆ ಹುದ್ದೆಗಳಿಗೆ ಲಭ್ಯವಿರುವ ಸಮವಸ್ತ್ರ ಭತ್ಯೆಯ ದರಗಳನ್ನು ದಿನಾಂಕ:01.01.2019ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಿ ಆದೇಶಿಸಲಾಗಿದೆ. ಅದರಂತೆ ಸರ್ಕಾರದ ಎಲ್ಲಾ ಹಿರಿಯ ವಾಹನ ಚಾಲಕರು/ಚಾಲಕರು, ಎಲ್ಲಾ ಗ್ರೂಪ್ಡಿ ಸಿಬ್ಬಂದಿಗೆ ಮಾಸಿಕ ಸಮವಸ್ತ್ರ ನಿರ್ವಹಣಾ ಭತ್ಯೆ ರೂ.400/-ಗಳನ್ನು ಮಂಜೂರು ಮಾಡಲಾಗಿದೆ.
ಈ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರ ಸಚಿವಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ವಾಹನ ಚಾಲಕರು ಹಾಗೂ ಗ್ರೂಪ್-ಡಿ ವೃಂದದ ನೌಕರರಿಗೆ ಇನ್ನು ಮುಂದೆ ಈ ಕೆಳಕಂಡಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ.
ಅ) ಪ್ರತಿಯೊಬ್ಬ ಹಿರಿಯ ವಾಹನ ಚಾಲಕ/ಚಾಲಕರು, ಗ್ರೂಪ್-ಡಿ ನೌಕರರು ಕರ್ತವ್ಯದ ಮೇಲಿದ್ದಾಗ ಕಡ್ಡಾಯವಾಗಿ ಸಮವಸ್ತ್ರವನ್ನು ಮತ್ತು ಗುರುತಿನ ಚೀಟಿಯನ್ನು ಧರಿಸತಕ್ಕದ್ದು.
ಆ) ಸಕ್ಷಮ ಪ್ರಾಧಿಕಾರಗಳು / ಮೇಲಧಿಕಾರಿಗಳು ಅವರ ಅಧೀನದಲ್ಲಿರುವ ಡಿ-ದರ್ಜೆ ನೌಕರರು ಮತ್ತು ವಾಹನ ಚಾಲಕರು ಕರ್ತವ್ಯದ ಮೇಲಿದ್ದಾಗ ಸಮವಸ್ತ್ರ ಮತ್ತು ಗುರುತಿನ ಚೀಟಿಯನ್ನು ಧರಿಸದಿದ್ದಲ್ಲಿ, ಸಂಬಳ ಬಟವಾಡೆ ಅಧಿಕಾರಿಗಳಿಗೆ (ಸಿಆಸುಇ ಲೆಕ್ಕಪತ್ರ ಶಾಖೆ) ಈ ಬಗ್ಗೆ ಪ್ರಮಾಣಿ ಪತ್ರವನ್ನು ನೀಡತಕ್ಕದ್ದು. ಹೀಗೆ ಪ್ರಮಾಣ ಪತ್ರವನ್ನು ನೀಡಿದ್ದಲ್ಲಿ, ಸಿಆಸುಇ ಲೆಕ್ಕಪತ್ರ ಶಾಖೆಯು ಸಮವಸ್ತ್ರ ಭತ್ಯೆಯನ್ನು ವೇತನದಲ್ಲಿ ಕಡಿತಗೊಳಿಸತಕ್ಕದ್ದು.
ಇ) ಈ ನಿರ್ದೇಶನವನ್ನು ಪಾಲಿಸದೇ ಇರುವ ಪ್ರತಿಯೊಬ್ಬ ವಾಹನ ಚಾಲಕರು ಹಾಗೂ ಡಿ ವೃಂದದ ನೌಕರರ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಸಕ್ಷಮ ಪ್ರಾಧಿಕಾರ/ಮೇಲಧಿಕಾರಿಗಳು ಅಗತ್ಯ ಕ್ರಮವಹಿಸತಕ್ಕದ್ದು.
ಈ) ಸಚಿವಾಲಯದಲ್ಲಿ ಖಾಲಿ ಇರುವ ಗ್ರೂಪ್-ಡಿ ವೃಂದದ ಹುದ್ದೆಗಳ ಎದುರಾಗಿ ಹೊರಗುತ್ತಿಗೆ ಏಜೆನ್ಸಿಗಳ ಮೂಲಕ ಸಿಬ್ಬಂದಿಗಳ ಸೇವೆಯನ್ನು ಪಡೆಯಲಾಗುತ್ತಿದ್ದು, ಅಂತಹ ಹೊರಗುತ್ತಿಗೆ ನೌಕರರು ಸಹ ಸಿಆಸುಇ (ಕಾರ್ಯಕಾರಿ) ಶಾಖೆಯಿಂದ ನೀಡಲಾಗುವ ಗುರುತಿನ ಚೀಟಿ ಮತ್ತು ಹೊರಗುತ್ತಿಗೆ ಏಜೆನ್ಸಿ ನೀಡುವ ಸಮವಸ್ತ್ರವನ್ನು ಕರ್ತವ್ಯದ ಮೇಲಿದ್ದಾಗ ಕಡ್ಡಾಯವಾಗಿ ಧರಿಸತಕ್ಕದ್ದು. ಇಲ್ಲದಿದ್ದಲ್ಲಿ, ಅಂತಹ ಸಿಬ್ಬಂದಿಗಳ ಸೇವೆಯನ್ನು ಹೊರಗುತ್ತಿಗೆ ಏಜೆನ್ಸಿಗೆ ಹಿಂದಿರುಗಿಸಲು ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು.
ಮೇಲ್ಕಾಣಿಸಿದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಈ ಸಂಬಂಧ ತಮ್ಮ ವ್ಯಾಪ್ತಿಯಲ್ಲಿರುವ ವಾಹನ ಚಾಲಕ / ಗ್ರೂಪ್-ಡಿ ನೌಕರರಿಗೆ ಅಗತ್ಯ ಮಾಹಿತಿ ಮತ್ತು ನಿರ್ದೇಶನಗಳನ್ನು ನೀಡುವಂತೆ ಈ ಮೂಲಕ ಸಚಿವಾಲಯದ ಎಲ್ಲಾ ಸಕ್ಷಮ ಪ್ರಾಧಿಕಾರಿಗಳೆಗೆ ಸೂಚಿಸಲಾಗಿದೆ.



ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಶಿವರಾಜ್ ಅವರು NeedsOfPublic.in ನಲ್ಲಿ ಸಾರ್ವಜನಿಕ, ಶೈಕ್ಷಣಿಕ ಮತ್ತು ಸ್ಥಳೀಯ ಸುದ್ದಿಗಳ ವಿಭಾಗದ ಹಿರಿಯ ಸಂಪಾದಕರಾಗಿದ್ದಾರೆ (Senior Editor). ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಡಿಪ್ಲೊಮಾ ಪದವಿ ಪಡೆದಿದ್ದರೂ, ಮಾಧ್ಯಮ ಕ್ಷೇತ್ರದ ಮೇಲಿರುವ ಅತೀವ ಆಸಕ್ತಿಯಿಂದಾಗಿ 2019 ರಲ್ಲಿ ಡಿಜಿಟಲ್ ಜಗತ್ತಿಗೆ ಕಾಲಿಟ್ಟರು. ಇವರು ಆರಂಭಿಸಿದ “Suddi No.1 Kannada” ಯೂಟ್ಯೂಬ್ ಚಾನೆಲ್ ಪ್ರಸ್ತುತ 300K ಗೂ ಹೆಚ್ಚು ಸಬ್ಸ್ಕ್ರೈಬರ್ಗಳನ್ನು ಹೊಂದುವ ಮೂಲಕ ಜನಪ್ರಿಯವಾಗಿದೆ. ಡಿಜಿಟಲ್ ಮಾಧ್ಯಮದಲ್ಲಿ ಉತ್ತಮ ಅನುಭವ ಹೊಂದಿರುವ ಇವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಂಕೀರ್ಣ ಯೋಜನೆಗಳನ್ನು ಹಾಗೂ ವಿದ್ಯಾರ್ಥಿವೇತನಗಳನ್ನು (Scholarships) ಸರಳವಾಗಿ ವಿಶ್ಲೇಷಿಸಿ, ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ತಲುಪಿಸುವಲ್ಲಿ ಎಕ್ಸ್ಪರ್ಟ್ ಆಗಿದ್ದಾರೆ. ಇದರ ಜೊತೆಗೆ ಪ್ರಮುಖ ಶೈಕ್ಷಣಿಕ ಅಪ್ಡೇಟ್ಗಳು ಮತ್ತು ನಿಖರ ಮಾಹಿತಿ ನೀಡುವ ವಿಡಿಯೋ ಕಂಟೆಂಟ್ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವುದು ಇವರ ಬರವಣಿಗೆಯ ವಿಶಿಷ್ಟ ಶೈಲಿಯಾಗಿದೆ.


WhatsApp Group




