ಬೆಂಗಳೂರು : ರಾಜ್ಯದ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ವರ್ಗಾವಣೆ ಪ್ರಮಾಣ ಪತ್ರವನ್ನು ವಿತರಿಸುವಂತೆ ಇದೀಗ ಶಿಕ್ಷಣ ಇಲಾಖೆ ಮಹತ್ವದ ಆದೇಶವೊಂದನ್ನು ಹೊರಡಿಸಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ….
ರಾಜ್ಯದಲ್ಲಿನ ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿನ ವಿದ್ಯಾರ್ಥಿಗಳ ವರ್ಗಾವಣೆ ಪ್ರಮಾಣ ಪತ್ರವನ್ನು ಸಕಾಲದಲ್ಲಿ ವಿತರಿಸದೇ ಕಾಲಹರಣ ಮಾಡಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಅಧಿಕೃತವಾಗಿ ಶಾಲೆಗೆ ದಾಖಲಾಗದೇ ಶೈಕ್ಷಣಿಕ ಪ್ರಗತಿಗೆ ಅಡ್ಡಿಯಾಗಿ ಆತಂಕದಲ್ಲಿ ಸಿಲುಕಿ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಹಲವಾರು ದೂರು ಸಲ್ಲಿಸಿರುವ ಅಂಶವನ್ನು ಗಂಭೀರವಾಗಿ ಪರಿಗಣಿಸಿ, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಗಳ ಕಾಯ್ದೆ-2005ರ ಸೆಕ್ಷನ್ 13(ಜೆ) ರಡಿಯಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳಲ್ಲಿ ದೂರುಗಳನ್ನು ಆಯೋಗವು ಸ್ವೀಕರಿಸಿ, ವಿಚಾರಣೆ ನಡೆಸುತ್ತಿದೆ.


ವಿದ್ಯಾರ್ಥಿಗಳ ವರ್ಗಾವಣೆ ಪತ್ರ ವಿತರಣೆ ಸಂಬಂಧ ರಾಷ್ಟ್ರದ ವಿವಿಧ ರಾಜ್ಯಗಳ ರಾಜ್ಯ ಉಚ್ಚನ್ಯಾಯಾಲಯಗಳಲ್ಲಿ ದಾಖಲಾಗಿರುವ ದಾವೆಗಳ ತೀರ್ಪಿನ ಅಡಿಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಯಿಂದ ವಂಚಿತರಾಗದಂತೆ, ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳನ್ನು ಮುಂದುವರೆಸಲು ಪೋಷಕರು ಬಯಸಿದಲ್ಲಿ “ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ-2009” ಸೆಕ್ಷನ್ 5(1)ರ ಉಲ್ಲಂಘನೆಯಾಗದಂತೆ, ಅರ್ಜಿ ಸಲ್ಲಿಸಿದ 15 ದಿನಗಳ ಒಳಗಾಗಿ ವರ್ಗಾವಣೆ ಪತ್ರವನ್ನು ವಿತರಿಸುವುದು ಶಾಲಾ ಮುಖ್ಯಸ್ಥರ ಅದ್ಯ ಕರ್ತವ್ಯವಾಗಿರುತ್ತದೆ.
ಶಾಲಾ ಮುಖ್ಯಸ್ಥರು ಸಕಾಲದಲ್ಲಿ ವರ್ಗಾವಣೆ ಪತ್ರವನ್ನು ವಿತರಿಸದಿದ್ದಲ್ಲಿ ಪೋಷಕರು ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸತಕ್ಕದ್ದು. ಮನವಿ ಸ್ವೀಕರಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸದರಿ ಶಾಲಾ ಮುಖ್ಯಸ್ಥರಿಗೆ ಒಂದು ವಾರ ಕಾಲಾವಕಾಶ ನೀಡಿ, ಮನವಿಯನ್ನು ಇತ್ಯರ್ಥಪಡಿಸಲು ಕ್ರಮವಹಿಸತಕ್ಕದು.
ಕ್ಷೇತ್ರ ಶಿಕ್ಷಣಾಧಿಕಾರಿಗಳು ನೀಡಿದ ಕಾಲಾವಧಿಯಲ್ಲಿ ವರ್ಗಾವಣೆ ಪತ್ರವನ್ನು ವಿತರಿಸಲು ಶಾಲೆಯು ವಿಫಲವಾದಲ್ಲಿ, ಸಂಬಂಧಪಟ್ಟ ಶಾಲಾ ಆಡಳಿತ ಮಂಡಳಿ ಮತ್ತು ಶಾಲಾ ಮುಖ್ಯಸ್ಥರ ವಿರುದ್ಧ ಕರ್ನಾಟಕ ಶಿಕ್ಷಣ ಕಾಯ್ದೆ-1983ರ ಸೆಕ್ಷನ್ 106(2)(ಬಿ)ರಡಿ ಸಕ್ಷಮ ಪ್ರಾಧಿಕಾರಿಗಳಾದ ಜಿಲ್ಲಾ ಉಪನಿರ್ದೇಶಕರು(ಆಡಳಿತ) ರವರು ಕ್ರಮವಹಿಸಿ, ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಂದ ವಂಚಿತರಾಗದಂತೆ ಕ್ರಮವಹಿಸಲು ಸೂಚಿಸಿದೆ.

ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಶಿವರಾಜ್ ಅವರು NeedsOfPublic.in ನಲ್ಲಿ ಸಾರ್ವಜನಿಕ, ಶೈಕ್ಷಣಿಕ ಮತ್ತು ಸ್ಥಳೀಯ ಸುದ್ದಿಗಳ ವಿಭಾಗದ ಹಿರಿಯ ಸಂಪಾದಕರಾಗಿದ್ದಾರೆ (Senior Editor). ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಡಿಪ್ಲೊಮಾ ಪದವಿ ಪಡೆದಿದ್ದರೂ, ಮಾಧ್ಯಮ ಕ್ಷೇತ್ರದ ಮೇಲಿರುವ ಅತೀವ ಆಸಕ್ತಿಯಿಂದಾಗಿ 2019 ರಲ್ಲಿ ಡಿಜಿಟಲ್ ಜಗತ್ತಿಗೆ ಕಾಲಿಟ್ಟರು. ಇವರು ಆರಂಭಿಸಿದ “Suddi No.1 Kannada” ಯೂಟ್ಯೂಬ್ ಚಾನೆಲ್ ಪ್ರಸ್ತುತ 300K ಗೂ ಹೆಚ್ಚು ಸಬ್ಸ್ಕ್ರೈಬರ್ಗಳನ್ನು ಹೊಂದುವ ಮೂಲಕ ಜನಪ್ರಿಯವಾಗಿದೆ. ಡಿಜಿಟಲ್ ಮಾಧ್ಯಮದಲ್ಲಿ ಉತ್ತಮ ಅನುಭವ ಹೊಂದಿರುವ ಇವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಂಕೀರ್ಣ ಯೋಜನೆಗಳನ್ನು ಹಾಗೂ ವಿದ್ಯಾರ್ಥಿವೇತನಗಳನ್ನು (Scholarships) ಸರಳವಾಗಿ ವಿಶ್ಲೇಷಿಸಿ, ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ತಲುಪಿಸುವಲ್ಲಿ ಎಕ್ಸ್ಪರ್ಟ್ ಆಗಿದ್ದಾರೆ. ಇದರ ಜೊತೆಗೆ ಪ್ರಮುಖ ಶೈಕ್ಷಣಿಕ ಅಪ್ಡೇಟ್ಗಳು ಮತ್ತು ನಿಖರ ಮಾಹಿತಿ ನೀಡುವ ವಿಡಿಯೋ ಕಂಟೆಂಟ್ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವುದು ಇವರ ಬರವಣಿಗೆಯ ವಿಶಿಷ್ಟ ಶೈಲಿಯಾಗಿದೆ.


WhatsApp Group





Leave a Reply