ಬೆಂಗಳೂರು: ಸರ್ಕಾರಿ ನೌಕರರ ವಯೋ ನಿವೃತ್ತಿ ಮತ್ತು ಸ್ವ-ಇಚ್ಛಾ ನಿವೃತ್ತಿ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಡಿಜಿಟಲ್ ಮಾಡಲು ಕರ್ನಾಟಕ ಸರ್ಕಾರ ಹೆಜ್ಜೆ ಇಟ್ಟಿದೆ. ಖಜಾನೆ-2 (Khajane-2) ಹಣಕಾಸು ನಿರ್ವಹಣಾ ತಂತ್ರಾಂಶದ ಮೂಲಕ ಮಹಾಲೇಖಪಾಲರ ಕಚೇರಿಗೆ (Accountants General – AG) ಪಿಂಚಣಿ ಅರ್ಜಿಗಳನ್ನು ಸಲ್ಲಿಸುವ ಪ್ರಕ್ರಿಯೆಯನ್ನು ಅನುಷ್ಠಾನಗೊಳಿಸುವಂತೆ ರಾಜ್ಯ ಸರ್ಕಾರ ನಿರ್ದೇಶನಗಳನ್ನು ಹೊರಡಿಸಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ….
ಉಲ್ಲೇಖಿತ ಸರ್ಕಾರದ ಆದೇಶದಲ್ಲಿ, ಖಜಾನೆ-2ರ ತಂತ್ರಾಂಶದ ಮುಖಾಂತರ ಪ್ರಾಯೋಗಿಕವಾಗಿ, ಏಪ್ರಿಲ್ 2025 ರಿಂದ ಮೂರು ತಿಂಗಳ ಕಾಲ ರಾಜ್ಯದ ಎಲ್ಲಾ ಹಣ ಸೆಳೆಯುವ ಮತ್ತು ಬಟವಾಡೆ ಅಧಿಕಾರಿಗಳು (ಡಿಡಿಓ), ವಯೋನಿವೃತ್ತಿ /ಸ್ವ-ಇಚ್ಛಾ ನಿವೃತ್ತಿ ಹೊಂದುವ ನೌಕರರ ಪಿಂಚಣಿಗೆ ಸಂಬಂಧಿಸಿದ ಅರ್ಜಿಗಳನ್ನು ಆನ್ಲೈನ್ ನಲ್ಲಿ ದಾಖಲಿಸಿ ಮಂಜೂರು ಮಾಡುವುದು ಮತ್ತು ಭೌತಿಕವಾಗಿ ಸಿದ್ಧಪಡಿಸಿರುವ ಅರ್ಜಿ ಹಾಗೂ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಮಹಾಲೇಖಪಾಲರಿಗೆ ನಿಯಮಾನುಸಾರ ಸಲ್ಲಿಸಲು ಆದೇಶಿಸಿದೆ.
ಪ್ರಾಯೋಗಿಕ ಹಂತವು ಯಶಸ್ವಿಯಾದಲ್ಲಿ, ಖಜಾನೆ-2ರ ತಂತ್ರಾಂಶದ ಮುಖಾಂತರ ಪಿಂಚಣಿ ಅರ್ಜಿಗಳನ್ನು ಮಹಾಲೇಖಪಾಲರಿಗೆ ಸಲ್ಲಿಸಲು ಮುಂದುವರೆಸುವುದು ಎಂದು ಸಹ ಆದೇಶಿಸಿದೆ.
2. ಆದಾಗ್ಯೂ, ಸರ್ಕಾರ ನೀಡಿದ ಸ್ಪಷ್ಟ ಸೂಚನೆಗಳ ಹೊರತಾಗಿಯೂ, ಗಮನಾರ್ಹ ಸಂಖ್ಯೆಯ ಡಿಡಿಓಗಳು ಪಿಂಚಣಿ ದಾಖಲೆಗಳನ್ನು ಭೌತಿಕವಾಗಿ ಸಲ್ಲಿಸುವುದನ್ನು ಮುಂದುವರೆಸಿರುವುದನ್ನು ಗಮನಿಸಲಾಗಿದೆ. ಇದು ಪ್ರಕ್ರಿಯೆಯನ್ನು ವಿಳಂಬಗೊಳಿಸುವುದಲ್ಲದೆ, ePPO ಯೋಜನೆಯಡಿಯಲ್ಲಿ ಪಾವತಿಗಾಗಿ ಸಕಾಲಿಕ ಪಿಂಚಣಿ ದೃಢೀಕರಣ ಮತ್ತು ಎಲೆಕ್ಟ್ರಾನಿಕ್ ದತ್ತಾಂಶ ಪ್ರಸರಣಕ್ಕಾಗಿ ಮಹಾಲೇಖಪಾಲರ ಕಚೇರಿ ಮತ್ತು ಖಜಾನೆಯ ನಡುವಿನ ತಡರಹಿತ ಸಂಯೋಜನೆಗೆ ಅಡ್ಡಿಪಡಿಸುತ್ತದೆ ಎಂದು ಮಹಾಲೇಖಪಾಲರು ಉಲ್ಲೇಖಿತ ಪತ್ರದಲ್ಲಿ ತಿಳಿಸಿ, ಡಿಜಿಟಲ್ ಪರಿಸರ ವ್ಯವಸ್ಥೆಗೆ ಈ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಅಳವಡಿಸುವ ಸಲುವಾಗಿ ಈ ಕೆಳಗಿನ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿರುತ್ತಾರೆ.
1) ದಿನಾಂಕ:01.12.2025 ರಿಂದ ಜಾರಿಗೆ ಬರುವಂತೆ. ವಯೋ ನಿವೃತ್ತಿ ಪ್ರಕರಣಗಳಿಗೆ ಸಂಬಂಧಿಸಿದಂತೆ. ಮಹಾಲೇಖಪಾಲರ ಕಚೇರಿಯಲ್ಲಿ ಭೌತಿಕವಾಗಿ ಸಲ್ಲಿಸಿದ ಯಾವುದೇ ಪಿಂಚಣಿ ಪತ್ರಗಳನ್ನು ಸ್ವೀಕರಿಸಲಾಗುವುದಿಲ್ಲ.
ii) ಮೇಲೆ ಉಲ್ಲೇಖಿಸಲಾದ ಸರ್ಕಾರಿ ಆದೇಶದಲ್ಲಿನ ಸೂಚನೆಗಳನ್ನು ಅನುಸರಿಸದೇ ಸೇವಾ ವಹಿಯೊಂದಿಗೆ ಭೌತಿಕ ರೂಪದಲ್ಲಿ ಸಲ್ಲಿಸಲಾಗುವ ಪ್ರಸ್ತಾವನೆಗಳನ್ನು ಪರಿಗಣಿಸಲಾಗುವುದಿಲ್ಲ.
II) ಮಹಾಲೇಖಪಾಲರ ಕಚೇರಿಯಲ್ಲಿ ಭೌತಿಕ ಸೇವಾವಹಿ ಮತ್ತು ನಮೂನೆ-7 ರ ಮುದ್ರಿತ ಪ್ರತಿಯೊಂದಿಗೆ ನಿಗದಿತ ಆನ್ಲೈನ್ ಪ್ರಕ್ರಿಯೆಯ ಮೂಲಕ ಸಲ್ಲಿಸಲಾಗುವ ಪಿಂಚಣಿ ಪ್ರಸ್ತಾವನೆಗಳನ್ನು ಮಾತ್ರ ಸ್ವೀಕರಿಸಲಾಗುವುದು.
v) ನಮೂನೆ-7 ರ ಮುದ್ರಿತ ಪ್ರತಿ ಮತ್ತು ಭೌತಿಕ ಸೇವಾವಹಿಯನ್ನು ಆನ್ಲೈನ್ನಲ್ಲಿ ಸಲ್ಲಿಸಿದ ನಂತರವೇ ಪಿಂಚಣಿ ಪ್ರಸ್ತಾವನೆಯನ್ನು ಪರಿಶೀಲಿಸುವ ಪ್ರಕ್ರಿಯೆಯು ಪ್ರಾರಂಭವಾಗುತ್ತದೆ ಹಾಗೂ ಸದರಿ ಈ ಪ್ರಕ್ರಿಯೆಯನ್ನು ಸದರಿ ದಿನಾಂಕದಿಂದಲೇ ಪರಿಗಣಿಸಲಾಗುವುದು.
v) ಎಲ್ಲಾ ನಿವೃತ್ತ/ನಿವೃತ್ತಿ ಹೊಂದಿದ ನೌಕರರುಗಳಿಗೆ ನೇಮಕಾತಿ ದಿನಾಂಕದಿಂದ ತಿಂಗಳ ಕೊನೆಯ ಕೆಲಸದ ದಿನಾಂಕ ಅವಧಿಯನ್ನು ಒಳಗೊಂಡಂತೆ ವೇತನ ನಿಗದಿಯನ್ನು ಆಯಾ ಡಿಡಿಓಗಳು ಕಡ್ಡಾಯವಾಗಿ ಮಾಡಿರಬೇಕು ಮತ್ತು ಸರಿಯಾದ ಅಂತಿಮ ವೇತನವನ್ನು ಸೆಳೆದಿರಬೇಕು. ಈ ವಿವರಗಳನ್ನು, ಸರಿಯಾಗಿ ಭರ್ತಿ ಮಾಡಿದ ನಮೂನೆ-7 ರ ಜೊತೆಗೆ, ಕಡ್ಡಾಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು.
vi) ಈ ಅನುಷ್ಠಾನವು. ವಯೋನಿವೃತ್ತಿ ಪ್ರಕರಣಗಳಿಗೆ ಮಾತ್ರ ಸೀಮಿತವಾಗಿದೆ ಮತ್ತು ಕಾಲಾನಂತರದಲ್ಲಿ ಇತರ ವರ್ಗದ ಪಿಂಚಣಿ ಪ್ರಕರಣಗಳಿಗೆ ವಿಸ್ತರಿಸಲಾಗುವುದು.
3. ಮೇಲ್ಕಂಡಂತೆ, ಮಹಾಲೇಖಪಾಲರು ನೀಡಿರುವ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರದ ಆದೇಶದಲ್ಲಿನ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ, ರಾಜ್ಯದ ಎಲ್ಲಾ ಡಿಡಿಓ/ಪಿಂಚಣಿ ಮಂಜೂರಾತಿ ಪ್ರಾಧಿಕಾರಿಗಳಿಗೆ ಸೂಚಿಸಲಾಗಿದೆ. ಸೂಚನೆಗಳ ಯಾವುದೇ ಉಲ್ಲಂಘನೆಯಿಂದಾಗಿ ನಿವೃತ್ತಿ ವೇತನದ ಪ್ರಾಧಿಕರಣವು ವಿಳಂಬವಾದಲ್ಲಿ, ಸದರಿ ವಿಳಂಬಕ್ಕೆ ಸಂಬಂಧಿಸಿದ ಡಿಡಿಓ/ಪಿಂಚಣಿ ಮಂಜುರಾತಿ ಪ್ರಾಧಿಕಾರಿಗಳನ್ನು ಹೊಣೆಗಾರರೆಂದು ಪರಿಗಣಿಸಲಾಗುವುದು.



ಈ ಮಾಹಿತಿಗಳನ್ನು ಓದಿ
- Karnataka Rain: ಇಂದು ಈ 6 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ! ಬೆಂಗಳೂರಿನಲ್ಲಿ ಬೆಳಿಗ್ಗೆ ‘ಮಂಜು’, ಮಧ್ಯಾಹ್ನ ಹೇಗಿರುತ್ತೆ? – ಹವಾಮಾನ ವರದಿ
- PM Kusum: ರಾತ್ರಿ ಹೊತ್ತು ನೀರು ಹಾಯಿಸೋ ಕಷ್ಟ ಇಲ್ಲ , ಕರೆಂಟ್ ಬಿಲ್ ಇಲ್ಲ ! ರೈತರಿಗೆ 80% ಸಬ್ಸಿಡಿಯಲ್ಲಿ ಸೋಲಾರ್ ಪಂಪ್ – ಅರ್ಜಿ ಹಾಕೋದು ಹೇಗೆ?
- BREAKING : ರಾಜ್ಯದ ರೈತರಿಗೆ ಸಿಹಿಸುದ್ದಿ: 3.50 ಲಕ್ಷ ಕೃಷಿ ಪಂಪ್ ಸೆಟ್ಗಳು ಸಕ್ರಮ – ಸಚಿವ ಕೆ.ಜೆ.ಜಾರ್ಜ್ ಘೋಷಣೆ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಶಿವರಾಜ್ ಅವರು NeedsOfPublic.in ನಲ್ಲಿ ಸಾರ್ವಜನಿಕ, ಶೈಕ್ಷಣಿಕ ಮತ್ತು ಸ್ಥಳೀಯ ಸುದ್ದಿಗಳ ವಿಭಾಗದ ಹಿರಿಯ ಸಂಪಾದಕರಾಗಿದ್ದಾರೆ (Senior Editor). ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಡಿಪ್ಲೊಮಾ ಪದವಿ ಪಡೆದಿದ್ದರೂ, ಮಾಧ್ಯಮ ಕ್ಷೇತ್ರದ ಮೇಲಿರುವ ಅತೀವ ಆಸಕ್ತಿಯಿಂದಾಗಿ 2019 ರಲ್ಲಿ ಡಿಜಿಟಲ್ ಜಗತ್ತಿಗೆ ಕಾಲಿಟ್ಟರು. ಇವರು ಆರಂಭಿಸಿದ “Suddi No.1 Kannada” ಯೂಟ್ಯೂಬ್ ಚಾನೆಲ್ ಪ್ರಸ್ತುತ 300K ಗೂ ಹೆಚ್ಚು ಸಬ್ಸ್ಕ್ರೈಬರ್ಗಳನ್ನು ಹೊಂದುವ ಮೂಲಕ ಜನಪ್ರಿಯವಾಗಿದೆ. ಡಿಜಿಟಲ್ ಮಾಧ್ಯಮದಲ್ಲಿ ಉತ್ತಮ ಅನುಭವ ಹೊಂದಿರುವ ಇವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಂಕೀರ್ಣ ಯೋಜನೆಗಳನ್ನು ಹಾಗೂ ವಿದ್ಯಾರ್ಥಿವೇತನಗಳನ್ನು (Scholarships) ಸರಳವಾಗಿ ವಿಶ್ಲೇಷಿಸಿ, ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ತಲುಪಿಸುವಲ್ಲಿ ಎಕ್ಸ್ಪರ್ಟ್ ಆಗಿದ್ದಾರೆ. ಇದರ ಜೊತೆಗೆ ಪ್ರಮುಖ ಶೈಕ್ಷಣಿಕ ಅಪ್ಡೇಟ್ಗಳು ಮತ್ತು ನಿಖರ ಮಾಹಿತಿ ನೀಡುವ ವಿಡಿಯೋ ಕಂಟೆಂಟ್ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವುದು ಇವರ ಬರವಣಿಗೆಯ ವಿಶಿಷ್ಟ ಶೈಲಿಯಾಗಿದೆ.


WhatsApp Group




Leave a Reply