Anna Bhagya Scheme: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನ ಭಾಗ್ಯ ಯೋಜನೆಯಡಿ ಫಲಾನುಭವಿಗಳ ಖಾತೆಗೆ ಅಕ್ಕಿಯ ಹಣವನ್ನು ಜಮೆ ಮಾಡುತ್ತಿದೆ. ಈ ತಿಂಗಳ (April) ಅಕ್ಕಿ ಹಣ ನಿಮ್ಮ ಖಾತೆಗೆ ಬಂದಿದೆಯೇ ಎಂದು ಚೆಕ್ ಮಾಡುವುದು ಹೇಗೆಂಬ ವಿವರ ಇಲ್ಲಿದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
ರಾಜ್ಯ ಸರ್ಕಾರ ಅನ್ನ ಭಾಗ್ಯ ಯೋಜನೆಯಡಿ (Anna Bhagya Scheme) ಫಲಾನುಭವಿಗಳಿಗೆ ಪ್ರತಿತಿಂಗಳು ತಲಾ 10 ಕೆಜಿ ಅಕ್ಕಿ ನೀಡಲು ನಿರ್ಧಾರ ಮಾಡಿತ್ತು. ಆದರೆ ಅಕ್ಕಿ ಕೊರತೆಯ ಕಾರಣ ಯೋಜನೆಯಲ್ಲಿ ಸ್ವಲ್ಪ ಬದಲಾವಣೆ ಮಾಡಿತು. 5 ಕೆಜಿ ಅಕ್ಕಿ ವಿತರಿಸಿ, ಉಳಿದ 5 ಕೆಜಿ ಅಕ್ಕಿಯ ಬದಲಾಗಿ ಪ್ರತಿ ಕೆಜಿಗೆ 34 ರೂ. ದರದಲ್ಲಿ ನಗದನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿದೆ. ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ದಾರರಿಗೆ ಹಣವನ್ನು ಜಮೆ ಮಾಡಲಾಗುತ್ತಿದೆ. ಬಿಪಿಎಲ್ ಕುಟುಂಬದ ಮುಖ್ಯಸ್ಥರ ಆಧಾರ್ ಸಂಖ್ಯೆಗಳಿಗೆ ಲಿಂಕ್ ಮಾಡಲಾದ ಫಲಾನುಭವಿಗಳ ಬ್ಯಾಂಕ್ ಖಾತೆ ನೇರವಾಗಿ ಹಣ ಜಮೆ ಮಾಡಲಾಗುತ್ತಿದೆ. ನಿಮ್ಮ ಖಾತೆಗೆ ಹಣ ಜಮೆಯಾಗಿದೆಯೇ ಎಂದು ಚೆಕ್ ಮಾಡುವುದು ಹೇಗೆ ಎಂಬ ವಿವರ ಇಲ್ಲಿದೆ.
ಏಪ್ರಿಲ್ ತಿಂಗಳ ಅಕ್ಕಿ ಹಣ ಚೆಕ್ ಮಾಡಿ
ಬಿಪಿಎಲ್ ಕಾರ್ಡ್ ಮತ್ತು ಅಂತೋದಯ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ದವಸ ಧಾನ್ಯಗಳ ಜೊತೆ ಉಚಿತವಾಗಿ ಹಣ ಕೂಡ ಲಭ್ಯವಾಗುತ್ತಿದೆ. ಈಗಾಗಲೇ ಅನ್ನಭಾಗ್ಯದ 680 ರೂಪಾಯಿ ಹಣ ಬ್ಯಾಂಕ್ ಖಾತೆಗೆ ಬಂದಿರುವುದನ್ನ ನೀವು ಕೆಳಗಡೆ ಗಮನಿಸಬಹುದು. ಮತ್ತು ಗೃಹಲಕ್ಷ್ಮಿ ಯೋಜನೆಯ 8ನೇ ಕಂತಿನ ಹಣ ಇದೇ 30ನೇ ತಾರೀಖಿನ ಒಳಗಾಗಿ ಹಂತ ಹಂತವಾಗಿ ಎಲ್ಲಾ ಮಹಿಳೆಯರ ಖಾತೆಗೆ ಬಂದು ತಲುಪುತ್ತದೆ.

ನಿಮ್ಮ ಖಾತೆಗೆ ಹಣ ಬಂದಿಲ್ವಾ, ಸರ್ಕಾರ ಕೊಟ್ಟಿದೆ ಪರಿಹಾರ!
ಈಗಾಗಲೇ ರಾಜ್ಯದ ಎಲ್ಲಾ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಲಾಗಿದ್ದು. ಹಂತ ಹಂತವಾಗಿ ಎಲ್ಲರ ಅತ್ತಿಗೆ ಬಂದು ತಲುಪಲು ಸಮಯ ತೆಗೆದುಕೊಳ್ಳುತ್ತದೆ. ಆದ್ದರಿಂದ ಯಾವುದೇ ಟೆನ್ಶನ್ ಮಾಡಿಕೊಳ್ಳದೆ ಈ ತಿಂಗಳ ಕೊನೆಯವರೆಗೂ ಕಾಯಿರಿ. ಇದುವರೆಗೂ ಒಂದು ಕಂತಿನ ಹಣ ಬಂದಿಲ್ಲ ಎನ್ನುವ ಮಹಿಳೆಯರಿಗೆ ಸರ್ಕಾರದಿಂದ ಈಗಾಗಲೇ ತಿಳಿಸಿರುವಂತೆ, ನೀವು ನಿಮ್ಮ ಬ್ಯಾಂಕ್ ಗೆ ಹೋಗಿ ಈ ಕೆವೈಸಿ (EKYC)ಪರಿಶೀಲನೆ ಮಾಡಿಕೊಳ್ಳಬೇಕು ಜೊತೆಗೆ, ಎನ್ಪಿಸಿಐ ಮ್ಯಾಪಿಂಗ್ (NPCI mapping) ಕೂಡ ಮಾಡಿಸಬೇಕು.
ಎಲ್ಲ ದಾಖಲಾತಿ ಸರಿ ಇದ್ದವರು ಮತ್ತೊಮ್ಮೆ ಪೋಸ್ಟ್ ಆಫೀಸ್ನಲ್ಲಿ ಒಂದು ಹೊಸ ಖಾತೆಯನ್ನು ತೆರೆಯುವುದು ಉತ್ತಮ, ಅಥವಾ ಯಾವುದೇ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಖಾತೆಯನ್ನು ತೆರೆಯಿರಿ ಉದಾ : ಬ್ಯಾಂಕ್ ಆಫ್ ಬರೋಡ, ಕೆನರಾ, SBI, ಎಲ್ಲಾ ಸರಿ ಇದ್ರೂ ಹಣ ಬರ್ತಿಲ್ಲ ಅಂದ್ರೆ ಅದು ಬ್ಯಾಂಕ್ ಆಧಾರ್ ಸೀಡಿಂಗ್ ಸಮಸ್ಯೆಯೂ ಆಗಿರಬಹುದು ಹಾಗಾಗಿ ಹೊಸ ಖಾತೆಯನ್ನು ನೀವು ಆಧಾರ್ ದೃಢೀಕರಣ ಮೂಲಕ ತೆರೆದಾಗ DBT ವರ್ಗಾವಣೆ ಸುಲಭವಾಗಿ ಆಗುತ್ತದೆ. ಇದೊಂದು ಪ್ರಯತ್ನ ಮಾಡಿ ನೋಡಿ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಮೊಬೈಲ್ ನಲ್ಲಿ ಅನ್ನಭಾಗ್ಯ ಸ್ಟೇಟಸ್ ತಿಳಿದುಕೊಳ್ಳಿ!
ಹಂತ 1: ಮೊದಲನೆಯದಾಗಿ ಆಹಾರ ಮತ್ತು ನಾಗರಿಕ ಸರಜರಾಜು ಇಲಾಖೆಯ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ
ಹಂತ 2: ನಂತರ ನಿಮ್ಮ ಜಿಲ್ಲೆಯ ಮೇಲಿನ ಲಿಂಕನ್ನು ಕ್ಲಿಕ್ ಮಾಡಿ.

ಹಂತ 3 : ನಂತರ ಕೆಳಗಿನ ಭಾಗದಲ್ಲಿರುವ ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.

ಹಂತ 4: ಮುಂದುವರೆದುನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಿ. ನಂತರ ಗೋ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ, ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವವರ ಸದಸ್ಯರ ಸಂಖ್ಯೆ, ಮುಖ್ಯಸ್ಥರ ಹೆಸರು, ಸದಸ್ಯರ ಯುಐಡಿ, ಎಷ್ಟು ಹಣ ಜಮಾ ಆಗುತ್ತದೆ ಅಥವಾ ಆಗಿದೆ ಎಂಬುದರ ಮಾಹಿತಿಯನ್ನು ನೀವು ನೋಡಬಹುದು.

ಹೀಗೆ ನೀವು ಅನ್ನಭಾಗ್ಯ ಯೋಜನೆಯಡಿಯಲ್ಲಿನ ಹಣವು ನಿಮಗೆ ಜಮಾ ಆಗಿದೆಯೇ ಅಥವಾ ಅದರ ಸ್ಥಿತಿ ಹೇಗಿದೆ ಎಂಬುವುದನ್ನು ಚೆಕ್ ಮಾಡಬಹುದು.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
ಈ ಮಾಹಿತಿಗಳನ್ನು ಓದಿ
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group




