ಬ್ರೇಕಿಂಗ್ ನ್ಯೂಸ್ – ಈ ತಾಲ್ಲೂಕುಗಳ ಬಿಪಿಎಲ್ ಕುಟುಂಬಗಳಿಗೆ ಅಕ್ಟೋಬರ್​ನಿಂದ ಅಕಿ ಹಣ ಇಲ್ಲ : ಕೆ ಹೆಚ್ ಮುನಿಯಪ್ಪ

WhatsApp Image 2023 09 05 at 08.30.57

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಮತ್ತೆ ರಾಜ್ಯದಲ್ಲಿ ಹಣದ ಬದಲು ಅಕ್ಕಿಯನ್ನು ಕೊಡಲು ನಿರ್ಧಾರ ತೆಗೆದುಕೊಂಡಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಅನ್ನ ಭಾಗ್ಯ ಯೋಜನೆ(Annabhagya scheme)ಯ ಅಡಿಯಲ್ಲಿ ಅಕ್ಕಿಯ ಬದಲಾಗಿ ಹಣವನ್ನು ಪಡೆಯುತ್ತಿರುವ ವಿಷಯ ನಿಮಗೆಲ್ಲ ಈಗಾಗಲೇ ತಿಳಿದೆ ಇದೆ. ಬಿಪಿಎಲ್ ಕಾರ್ಡ್(BPL card)  ಹೊಂದಿರುವ ಅದೆಷ್ಟೋ ಜನರು ಈಗಾಗಲೇ ಎರಡು ತಿಂಗಳ ಹಣವನ್ನು ಪಡೆದಿದ್ದಾರೆ. ಆದರೆ ಈಗ ರಾಜ್ಯ ಸರ್ಕಾರವು ಮತ್ತೆ ಅಕ್ಟೋಬರ್ ತಿಂಗಳಿನಿಂದ ಹಣದ ಬದಲಾಗಿ ಅಕ್ಕಿಯನ್ನು ನೀಡಲು ಮುಂದಾಗುತ್ತಿದೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಹಣದ ಬದಲಿಗೆ ಮತ್ತೆ ಅಕ್ಕಿ ಕೊಡುತ್ತಾರಂತೆ :

ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ, ಕೇಂದ್ರ ಸರ್ಕಾರದ 5 ಕೆಜಿ ಅಕ್ಕಿಯ ಜೊತೆಗೆ ಇನ್ನೈದು ಕೆಜಿ ಅಕ್ಕಿಯನ್ನು ನೀಡುವುದಾಗಿ ಪ್ರಾರಂಭದಲ್ಲಿ ಘೋಷಿಸಿದ್ದರು ಆದರೆ, ಅಕ್ಕಿಯ ದಾಸ್ತಾನು ಇಲ್ಲದ ಕಾರಣ ಹಣವನ್ನು  ನೀಡುತ್ತಿದ್ದಾರೆ. ಅದರೆ ಈಗ ಅಕ್ಕಿ ಲಭ್ಯವಿರುವುದರಿಂದ ಮತ್ತು ಬರಗಾಲದಂಥ ಸ್ಥಿತಿಯಲ್ಲಿ ಜನರಿಗೆ ಹಣಕ್ಕಿಂತ ಅಕ್ಕಿ ಮುಖ್ಯವಾಗುವುದರಿಂದ ಅದನ್ನು ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವರು ಹೇಳಿದರು. ರಾಜ್ಯದಲ್ಲಿ ಮಳೆ ಇಲ್ಲದೆ ಬರಗಾಲದ ಘೋಷಣೆ ನಡೆಯುತ್ತಿದೆ. ಇಂತಹ ಸಮಯದಲ್ಲಿ ಬರಪೀಡಿತ 114 ತಾಲ್ಲೂಕುಗಳಿಗೆ ನೆರವಾಗಲೆಂದು ಈ ಅಕ್ಕಿಯನ್ನು ನೀಡುವ ಕಾರ್ಯಕ್ಕೆ ಮುಂದಾಗುತ್ತಿದ್ದಾರೆ. ಇದರ ಕುರಿತಾಗಿ ಸ್ವತಃ ಆಹಾರ ಸಚಿವ ಕೆ.ಎಚ್.‌ ಮುನಿಯಪ್ಪ (Food Minister KH Muniyappa) ಹೇಳಿದರು.

whatss

DBT (ನೇರ ನಗದು ವರ್ಗಾವಣೆ) ವಿಚಾರದಲ್ಲಿ ಮಾಧ್ಯಮಗಳಿಗೆ ತಪ್ಪು ಮಾಹಿತಿ ಹೋಗಿದೆ. ಜುಲೈ ತಿಂಗಳಿನಲ್ಲಿ 97 ಲಕ್ಷ ಕಾರ್ಡ್‌ದಾರರಿಗೆ ಡಿಬಿಟಿ ಮಾಡಿದ್ದೇವೆ. 3.45 ಕೋಟಿ ಜನರಿಗೆ 566 ಕೋಟಿ ರೂಪಾಯಿ ಬೇಕಾಗುತ್ತದೆ. ಆಗಸ್ಟ್ ತಿಂಗಳಲ್ಲಿ 3.69 ಕೋಟಿ ಜನರಿಗೆ 606 ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಿದ್ದೇವೆ. ಬ್ಯಾಂಕ್ ಅಕೌಂಟ್ ಇಲ್ಲದವರು 21 ಲಕ್ಷ ಜನರಿದ್ದಾರೆ. 2 ಲಕ್ಷ ಜನರಿಗೆ ನಾವೇ ಬ್ಯಾಂಕ್ ಅಕೌಂಟ್ ಮಾಡಿದ್ದೇವೆ. 14 ಲಕ್ಷ ಜನರಿಗೆ ನಾವೇ ಅಕೌಂಟ್ ಮಾಡಿಸುತ್ತಾ ಇದ್ದೇವೆ. ಇದರಿಂದ ಎಲ್ಲರಿಗೂ ನ್ಯಾಯ ದೊರೆಯುತ್ತದೆ ಎಂದು ಕೆ.ಎಚ್.‌ ಮುನಿಯಪ್ಪ ಹೇಳಿದರು.

ತಾಲೂಕುಗಳಲ್ಲಿ ಬೆಳೆ ಸಮೀಕ್ಷೆ ಮಾಡಿ, ಬೆಳೆ ಹಾಳಾದ ವರದಿ ತರಿಸಿಕೊಂಡು, ಅದರ ಪ್ರಕಾರ 114 ತಾಲೂಕುಗಳಿಗೆ ನೆರವಾಗಲೆಂದು ಅಕ್ಕಿಯನ್ನು ಕೊಡಲಾಗುವುದು ಎಂದು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಇಂತಹ ಉತ್ತಮ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!