ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ, ನಾಲ್ಕು ಜಿಲ್ಲೆಗಳ ಜನರಿಗೆ ಹಣವನ್ನು ನೇರವಾಗಿ ಟ್ರಾನ್ಸ್ಫರ್(transfer) ಮಾಡಲಾಗುತ್ತಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನಿಮಗೆಲ್ಲರಿಗೂ ತಿಳಿದಿರುವಂತೆ 5 ಕೆಜಿಯ ಅಕ್ಕಿಯ ಬದಲಾಗಿ ಹಣವನ್ನು ಖಾತೆಗಳಿಗೆ ಹಾಕಲಾಗುತ್ತಿದೆ. ಅದರ ಪ್ರಕಾರವಾಗಿ ಇಂದು ನಾಲ್ಕು ಜಿಲ್ಲೆಯ ಜನರಿಗೆ ಹಣವನ್ನು ಖಾತೆಗೆ ಹಾಕಲು DBT ಮೂಲಕ ಟ್ರಾನ್ಸ್ಫರ್ ಮಾಡಲಾಗುತ್ತಿದೆ. ಆ ಜಿಲ್ಲೆಗಳು ಯಾವುವು ಎಂದು ಈ ಲೇಖನದ ಮೂಲಕ ನಿಮಗೆ ತಿಳಿಸಿಕೊಡಲಾಗುತ್ತದೆ. ಇದರ ಬಗ್ಗೆ ಪೂರ್ಣ ಮಾಹಿತಿಯನ್ನು ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಇಂದು ನಾಲ್ಕು ಜಿಲ್ಲೆಗಳಿಗೆ ಅನ್ನಭಾಗ್ಯ ಯೋಜನೆಯ(Annabhagya scheme ) ಹಣ ಬರಲಿದೆ :
ಅಕ್ಕಿ ದಾಸ್ತಾನು ಕೊರತೆಯಿಂದ ಅನ್ನಭಾಗ್ಯ ಅಕ್ಕಿಯ ಬದಲು ಹಣ ಜಮೆ ಮಾಡಲು ಸರ್ಕಾರ ನಿರ್ಧಾರ ಕೈಗೊಂಡಿರುವುದರ ಬಗ್ಗೆ ನಿಮಗೆಲ್ಲ ತಿಳಿದೇ ಇದೆ. ಅದರಂತೆಯೇ ಜಿಲ್ಲೆಗಳ ಅನುಗುಣವಾಗಿ ಹಣವನ್ನು ಜಮೆಮಾಡಲಾಗುತ್ತಿದೆ. ಬಿಪಿಎಲ್ ರೇಷನ್ ಕಾರ್ಡ್(ration card) ಹೊಂದಿದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಮನೆಯ ಒಬ್ಬ ಸದಸ್ಯರಿಗೆ ರೂ.170ಗಳಂತೆ ಹಣವನ್ನು DBT ಮೂಲಕ transfer ಮಾಡಲಾಗುತ್ತಿದೆ. ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ತಲಾ ಐದು ಕೆಜಿ ಅಕ್ಕಿ ಬದಲು 170 ರೂ.ಗಳನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಈವರೆಗೆ 27 ಜಿಲ್ಲೆಗಳ 3.45 ಕೋಟಿ ಫಲಾನುಭವಿಗಳಿಗೆ ಒಟ್ಟು 566 ಕೋಟಿ ರೂಗಳನ್ನು ಪಾವತಿಸಲಾಗಿದೆ.
ಚಿಕ್ಕಬಳ್ಳಾಪುರ, ಶಿವಮೊಗ್ಗ, ಉಡುಪಿ ಮತ್ತು ವಿಜಯನಗರ ಜಿಲ್ಲೆಗಳ ಉಳಿದವರು ಜುಲೈ ಅಂತ್ಯದೊಳಗೆ ಹಣ ಪಡೆಯಲಿದ್ದಾರೆ ಎಂದು ಸಚಿವ ಮುನಿಯಪ್ಪ ತಿಳಿಸಿದರು. ಹಾಗಾಗಿ ನೀವೇನಾದರೂ ಚಿಕ್ಕಬಳ್ಳಾಪುರ, ಶಿವಮೊಗ್ಗ, ಉಡುಪಿ ಮತ್ತು ವಿಜಯನಗರ ಜಿಲ್ಲೆಯ ಜನರಾಗಿದ್ದರೆ ನಿಮಗೆ ಇದು ಒಂದು ಖುಷಿಯ ವಿಷಯ ಎನ್ನಬಹುದು, ಏಕೆಂದರೆ ನಿಮಗೆ ಇನ್ನೇನು ನಾಲ್ಕು ದಿನಗಳ ಒಳಗಾಗಿ ಅನ್ನಭಾಗ್ಯ ಯೋಜನೆಯ ಹಣವು ಜಮವಾಗಲಿದೆ.
ಇಲ್ಲಿದೆ ಅನ್ನಭಾಗ್ಯ ಹಣ ವರ್ಗಾವಣೆ ಮಾಹಿತಿ ನೀಡುವ ವೆಬ್ಸೈಟ್ ಲಿಂಕ್ :
ಅನ್ನಭಾಗ್ಯದ ಹಣ ಜಮಾ ಆಗಿದೆಯೇ ಎಂಬುದನ್ನು ನೋಡುವ ವಿಧಾನ :
ಹಂತ 1: ಮೊದಲನೆಯದಾಗಿ ಆಹಾರ ಮತ್ತು ನಾಗರಿಕ ಸರಜರಾಜು ಇಲಾಖೆಯ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ
https://ahara.kar.nic.in/Home/Eservices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಮುಖ ಪುಟ ತೆಗೆಯುತ್ತದೆ ಅದರಲ್ಲಿ ಈ ಸ್ಟೇಟಸ್ ಎಂಬ ಆಯ್ಕೆಯನ್ನು ಒತ್ತಿ, ನಂತರ ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.

ಹಂತ 2: ನಂತರ ನಿಮ್ಮ ಜಿಲ್ಲೆಯ ಮೇಲಿನ ಲಿಂಕನ್ನು ಕ್ಲಿಕ್ ಮಾಡಿ.

ಹಂತ 3 : ನಂತರ ಕೆಳಗಿನ ಭಾಗದಲ್ಲಿರುವ ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ. 
ಹಂತ 4: ಮುಂದುವರೆದು ನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಿ. ನಂತರ ಗೋ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ, ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವವರ ಸದಸ್ಯರ ಸಂಖ್ಯೆ, ಮುಖ್ಯಸ್ಥರ ಹೆಸರು, ಸದಸ್ಯರ ಯುಐಡಿ, ಎಷ್ಟು ಹಣ ಜಮಾ ಆಗುತ್ತದೆ ಅಥವಾ ಆಗಿದೆ ಎಂಬುದರ ಮಾಹಿತಿಯನ್ನು ನೀವು ನೋಡಬಹುದು.

ಹೀಗೆ ನೀವು ಅನ್ನಭಾಗ್ಯ ಯೋಜನೆಯಡಿಯಲ್ಲಿನ ಹಣವು ನಿಮಗೆ ಜಮಾ ಆಗಿದೆಯೇ ಅಥವಾ ಅದರ ಸ್ಥಿತಿ ಹೇಗಿದೆ ಎಂಬುವುದನ್ನು ಚೆಕ್ ಮಾಡಬಹುದು.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಹಾಗಾಗಿ ಎಲ್ಲಾ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ ಎಲ್ಲಾ ಜನರಿಗೆ ಜಿಲ್ಲೆಗಳ ಅನುಗುಣವಾಗಿ ಹಣವು ಬರುತ್ತಿದೆ. ನಿಮ್ಮ ಖಾತೆಗೂ ಕೂಡ ಹಣ ಬಂದಿದೆಯೇ ಎಂದು ನೀವು ಸ್ಟೇಟಸ್ ಚೆಕ್ ಮಾಡುವ ಮೂಲಕ ತಿಳಿದುಕೊಳ್ಳಬಹುದಾಗಿದೆ. ಇಂತಹ ಮುಖ್ಯವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
| ಪ್ರಮುಖ ಲಿಂಕುಗಳು |
| ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ |
Download App |
| ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group







