ಕರ್ನಾಟಕ ಸರ್ಕಾರದ ಕಾರ್ಮಿಕ ಕಲ್ಯಾಣ ಮಂಡಳಿಯು ರಾಜ್ಯದ ನೋಂದಾಯಿತ ಕಾರ್ಮಿಕರ ಕುಟುಂಬಗಳ ಜೀವನಮಟ್ಟವನ್ನು ಉನ್ನತಗೊಳಿಸುವ ದಿಶೆಯಲ್ಲಿ ಅನೇಕ ಯೋಜನೆಗಳನ್ನು ಕೈಗೊಂಡಿದೆ. ಅಂತಹದೇ ಒಂದು ಮಹತ್ವದ ಕಾರ್ಯವೇನೆಂದರೆ ‘ಕಲಿಕಾ ಭಾಗ್ಯ’ ಯೋಜನೆ. ಈ ಯೋಜನೆಯಡಿಯಲ್ಲಿ, ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಹಾಯಧನವನ್ನು ವಿದ್ಯಾರ್ಥಿ ವೇತನ ರೂಪದಲ್ಲಿ ನೀಡಲಾಗುತ್ತದೆ. ಈ ಲೇಖನದಲ್ಲಿ, ಯೋಜನೆಯ ಪಾತ್ರತೆ, ಅರ್ಜಿ ಸಲ್ಲಿಸುವ ವಿಧಾನ, ಮತ್ತು ಅಗತ್ಯ ದಾಖಲೆಗಳ ಕುರಿತು ವಿವರವಾದ ಮಾಹಿತಿಯನ್ನು ತಿಳಿಸಲಾಗುವುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ…..

ಯಾರಿಗೆ ಲಾಭ?
ಕರ್ನಾಟಕ ರಾಜ್ಯ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತವಾಗಿರುವ ಮತ್ತು ಸಕ್ರಿಯ ಸ್ಥಿತಿಯಲ್ಲಿರುವ ಯಾವುದೇ ಕಾರ್ಮಿಕರು ಈ ಯೋಜನೆಯ ಲಾಭ ಪಡೆಯಲು ಅರ್ಹರು. ಹಾಗೆಯೇ ನೋಂದಾಯಿತ ಕಾರ್ಮಿಕರ ಒಬ್ಬರ ಮಕ್ಕಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರಾಗಿರುತ್ತಾರೆ. ಇದರರ್ಥ ಪ್ರತಿ ಕಾರ್ಮಿಕರಿಗೆ ಗರಿಷ್ಠ ಇಬ್ಬರು ಮಕ್ಕಳ ವಿದ್ಯಾಭ್ಯಾಸಕ್ಕೆ ಮಾತ್ರ ಈ ಸಹಾಯಧನ ಲಭ್ಯವಿದೆ.
ಅರ್ಜಿ ಸಲ್ಲಿಸುವ ಪ್ರಕ್ರಿಯೆ:
ಕಲಿಕಾ ಭಾಗ್ಯ ಯೋಜನೆಗೆ ಅರ್ಜಿ ಸಲ್ಲಿಸುವುದು ಒಂದು ಸರಳ ಪ್ರಕ್ರಿಯೆಯಾಗಿದೆ. ಕಾರ್ಮಿಕರು ಆನ್ಲೈನ್ ಮೂಲಕ ಅಥವಾ ಸಂಬಂಧಿಸಿದ ಕಾರ್ಮಿಕ ಕಲ್ಯಾಣ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವಾಗ, ಕೆಳಗಿನ ಎಲ್ಲಾ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿ, ಅರ್ಜಿಯೊಂದಿಗೆ ಸರಿಯಾಗಿ ಅಪ್ಲೋಡ್ ಮಾಡಬೇಕು ಅಥವಾ ಸಲ್ಲಿಸಬೇಕು.
ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಅಧಿಕೃತ ವೆಬ್ಸೈಟ್ : ಅಪ್ಲೈ ಮಾಡಿ
ಅಗತ್ಯ ದಾಖಲೆಗಳ ಪಟ್ಟಿ (ಮುಖ್ಯವಾಗಿ ಗಮನಿಸಿ):
ಅರ್ಜಿಯೊಂದಿಗೆ ಸಲ್ಲಿಸಬೇಕಾದ ಪೂರಕ ದಾಖಲಾತಿಗಳು
* ಮಂಡಳಿಯಿಂದ ನೀಡಲಾದ ನೋಂದಣಿ ಕಾರ್ಡ್ (ಲೇಬರ್ ಕಾರ್ಡ್ )
ನೋಂದಣಿದಾರರು ಮತ್ತು ಅವರ ಪತಿ/ಪತ್ನಿಯ ಆಧಾರ್ ಕಾರ್ಡ್ ಪ್ರತಿ
* ವಿದ್ಯಾರ್ಥಿಯ ಆಧಾರ್ ಕಾರ್ಡ್ ಸಂಖ್ಯೆ
* ನೋಂದಣಿದಾರರ ಬ್ಯಾಂಕ್ ಖಾತೆಯ ವಿವರಗಳು (ಖಾತೆಯ ಆಧಾರ್ ನೊಂದಿಗೆ ಲಿಂಪ ಮಾಡಿರಬೇಕು ಮತ್ತು ಬ್ಯಾಂಕ್ ಮೂಲಕ NPCI ಮ್ಯಾಪ್ ಮಾಡಿರಬೇಕು )
*ವಿದ್ಯಾರ್ಥಿಯ SATS ಐಡಿ ಅಥವಾ ಸ್ಪೂಡೆಂಟ್ ಐಡಿ
* ವ್ಯಾಸಂಗ ಪ್ರಮಾಣ ಪತ್ರ
* ಉದ್ಯೋಗ ದೃಢೀಕರಣ ಪತ್ರ ಮತ್ತು ಸ್ವಯಂ ದೃಢೀಕರಣ ಪತ್ರ
ಮುಖ್ಯ ಸೂಚನೆಗಳು:
* ಎಲ್ಲಾ ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳು ಸ್ಪಷ್ಟವಾಗಿ ಕಾಣುವಂತೆ ಇರಬೇಕು.
* ಆನ್ಲೈನ್ ಅರ್ಜಿ ಸಲ್ಲಿಸುವಾಗ, ದಾಖಲೆಗಳನ್ನು ನಿಗದಿತ ಸೈಜ್ ಮತ್ತು ಫಾರ್ಮಾಟ್ನಲ್ಲಿ (ಜೆಪಿಇಜಿ/ಪಿಡಿಎಫ್) ಅಪ್ಲೋಡ್ ಮಾಡಬೇಕು.
* ಬ್ಯಾಂಕ್ ಖಾತೆ ವಿವರಗಳು 100% ಸರಿಯಾಗಿರುವುದನ್ನು ಖಚಿತಪಡಿಸಿಕೊಳ್ಳಿ, ಇಲ್ಲದಿದ್ದಲ್ಲಿ ವೇತನ ಪಾವತಿ ತಡವಾಗಬಹುದು.
ಕಲಿಕಾ ಭಾಗ್ಯ ಯೋಜನೆಯು ರಾಜ್ಯದ ಕಾರ್ಮಿಕ ವರ್ಗದ ಕುಟುಂಬಗಳ ಶೈಕ್ಷಣಿಕ ಆಕಾಂಕ್ಷೆಗಳನ್ನು ಪೂರೈಸುವ ಒಂದು ಶ್ಲಾಘನೀಯ ಹೆಜ್ಜೆ. ಈ ಲೇಖನದಲ್ಲಿ ನೀಡಲಾದ ಸಂಪೂರ್ಣ ಮಾರ್ಗದರ್ಶನವನ್ನು ಅನುಸರಿಸಿ, ನೀವು ಸಹಜವಾಗಿ ಈ ಯೋಜನೆಯ ಲಾಭವನ್ನು ಪಡೆದು, ನಿಮ್ಮ ಮಕ್ಕಳ ಉಜ್ವಲ ಭವಿಷ್ಯವನ್ನು ಕಟ್ಟಲು ಸಹಾಯ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಬಹುದು.

ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

Shivaraj is the Lead Editor at NeedsOfPublic.in with over 4 years of experience tracking Indian government schemes and educational updates. He specializes in simplifying complex notifications from the Central and State governments to help the public understand their benefits. Before joining NeedsOfPublic, Shivaraj worked as a Content Writer focusing on Civic issues. When he isn’t decoding the latest circulars, he enjoys reading about digital literacy.”
Follow Shivaraj on:


WhatsApp Group




