ರಾಜ್ಯದ ಎಲ್ಲಾ ಸರ್ಕಾರಿ ನೌಕರರು ತಮ್ಮ ಬ್ಯಾಂಕ್ ಖಾತೆಯನ್ನು ‘ವೇತನ ಖಾತೆ ಯೋಜನೆ’ಯಡಿಯಲ್ಲಿ ನೋಂದಾಯಿಸಿಕೊಳ್ಳುವಂತೆ ಮತ್ತು ಎಚ್ಆರ್ಎಂಎಸ್ (HRMS) ಪೋರ್ಟಲ್ನಲ್ಲಿ ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ (PMJJBY) ಮತ್ತು ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆ (PMSBY) ಪಾಲಿಸಿದ ಮಾಹಿತಿಯನ್ನು ತುರ್ತಾಗಿ ದಾಖಲಿಸುವಂತೆ ಸರ್ಕಾರವು ಸೂಚನೆ ನೀಡಿದೆ. ಇದರೊಂದಿಗೆ, ಎಲ್ಲಾ ಪ್ರಮುಖ ಬ್ಯಾಂಕ್ಗಳು ನೀಡುತ್ತಿರುವ ವೇತನ ಖಾತೆ ಯೋಜನೆಯ ಸೌಲಭ್ಯಗಳು ಸರ್ಕಾರಿ ನೌಕರರಿಗೆ ಲಭ್ಯವಾಗುವಂತಾಗುತ್ತದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ…
ಆರ್ಥಿಕ ಇಲಾಖೆಯು ತನ್ನ FD-CAM/160/2023 ಸಂಖ್ಯೆಯ, 06/09/2023 ದಿನಾಂಕದ ಪತ್ರದ ಮೂಲಕ ಪ್ರತಿಯೊಬ್ಬ ಸರ್ಕಾರಿ ಉದ್ಯೋಗಿಯೂ PMJJBY ಮತ್ತು PMSBY ಎಂಬ ಎರಡು ಅಮೂಲ್ಯ ವಿಮಾ ಯೋಜನೆಗಳಲ್ಲಿ ಸೇರುವಂತೆ ನಿರ್ದೇಶನ ನೀಡಿದೆ. ಈ ಯೋಜನೆಗಳನ್ನು ನೌಕರರು ತಮ್ಮ ವೇತನ ಖಾತೆ ಇರುವ ಬ್ಯಾಂಕ್ ಮೂಲಕ ಸುಲಭವಾಗಿ ಪಡೆದುಕೊಳ್ಳಬಹುದು. ಈ ಕುರಿತು ಹೆಚ್ಚಿನ ವಿವರಗಳನ್ನು https://www.jansuraksha.gov.in/ ಈ ವೆಬ್ಸೈಟ್ ವಿಳಾಸದಲ್ಲಿ ಪಡೆಯಬಹುದು.
ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ (PMJJBY):
ಇದು ಒಂದು ಜೀವನ ವಿಮಾ ಯೋಜನೆಯಾಗಿದ್ದು, ವಾರ್ಷಿಕ ಕೇವಲ ₹436 ಪ್ರೀಮಿಯಂ ಕಟ್ಟಬೇಕಾಗುತ್ತದೆ. ಈ ಪ್ರೀಮಿಯಂ ವಿಮಾದಾರರ ಬ್ಯಾಂಕ್ ಖಾತೆಯಿಂದ ಸ್ವಯಂಚಾಲಿತವಾಗಿ ವಸೂಲಾಗುತ್ತದೆ. ಯಾವುದೇ ಕಾರಣದಿಂದಾಗಿ ವಿಮಾದಾರರ ಮರಣ ಸಂಭವಿಸಿದರೆ, ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ₹2 ಲಕ್ಷಗಳ ವಿಮಾ ಮೊತ್ತವನ್ನು ನೀಡಲಾಗುವುದು. 18 ರಿಂದ 50 ವರ್ಷ ವಯಸ್ಸಿನ ಯಾವುದೇ ನಾಗರಿಕರು ಈ ಯೋಜನೆಯನ್ನು ಪಡೆದುಕೊಳ್ಳಬಹುದು.
ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆ (PMSBY):
ಇದು ಒಂದು ಅಪಘಾತ ವಿಮಾ ಯೋಜನೆಯಾಗಿದೆ. ಇದರ ವಾರ್ಷಿಕ ಪ್ರೀಮಿಯಂ ಕೇವಲ ₹20 ಮಾತ್ರ. ಇದೂ ಸಹ ವಿಮಾದಾರರ ಬ್ಯಾಂಕ್ ಖಾತೆಯಿಂದಲೇ ವಸೂಲಾಗುತ್ತದೆ. ಅಪಘಾತದಿಂದ ಮರಣ ಸಂಭವಿಸಿದಲ್ಲಿ ಅಥವಾ ಶಾಶ್ವತವಾಗಿ ಪೂರ್ಣ ಅಂಗವೈಕಲ್ಯ ಉಂಟಾದರೆ ₹2 ಲಕ್ಷಗಳು ಮತ್ತು ಶಾಶ್ವತವಾಗಿ ಭಾಗಶಃ ಅಂಗವೈಕಲ್ಯ ಉಂಟಾದರೆ ₹1 ಲಕ್ಷ ವಿಮಾ ಮೊತ್ತ ನೀಡಲಾಗುವುದು. 18 ರಿಂದ 70 ವರ್ಷ ವಯಸ್ಸಿನ ಯಾವುದೇ ವ್ಯಕ್ತಿ ಈ ಯೋಜನೆಯನ್ನು ಆಯ್ಕೆ ಮಾಡಿಕೊಳ್ಳಬಹುದು. ಈ ಎರಡೂ ಯೋಜನೆಗಳು ನೌಕರರು ಮತ್ತು ಅವರ ಕುಟುಂಬಗಳ ಸುರಕ್ಷತೆಗೆ ಬಲವಾದ ರಕ್ಷಣಾ ಕವಚವನ್ನು ಒದಗಿಸುತ್ತವೆ.
ಆರ್ಥಿಕ ಇಲಾಖೆಯು ತನ್ನ FD-CAM/160/2023 ಸಂಖ್ಯೆಯ, 02/11/2023 ದಿನಾಂಕದ ಇನ್ನೊಂದು ಪತ್ರದ ಮೂಲಕ, ಪ್ರತಿ ಸಿಬ್ಬಂದಿಯು ಮೇಲ್ಕಂಡ ಯೋಜನೆಗಳಲ್ಲಿ ಪಾಲಿಸಿದ್ದರೆ, ಅದರ ವಿವರಗಳನ್ನು https://hrmsess.karnataka.gov.in ಎಂಬ ಎಚ್ಆರ್ಎಂಎಸ್ ಇಎಸ್ಎಸ್ ಲಾಗಿನ್ ಪೋರ್ಟಲ್ನಲ್ಲಿ ದಾಖಲಿಸುವುದು ಕಡ್ಡಾಯವೆಂದು ಸ್ಪಷ್ಟಪಡಿಸಿದೆ. ಪ್ರತಿಯೊಬ್ಬ ಸಿಬ್ಬಂದಿ ಸದಸ್ಯರು ಮತ್ತು ಡಿಪಾರ್ಟ್ಮೆಂಟ್ ಡ್ರಾಯಿಂಗ್ ಅಂಡ್ ಡಿಸ್ಪೆನ್ಸಿಂಗ್ ಆಫೀಸರ್ಗಳು (ಡಿಡಿಓ) ತಮ್ಮ ವಿಮಾ ವಿವರಗಳನ್ನು ಈ ಪೋರ್ಟಲ್ನಲ್ಲಿ ನವೀಕರಿಸುವ ಜವಾಬ್ದಾರಿಯನ್ನು ನಿಭಾಯಿಸಬೇಕು ಎಂದು ಸರ್ಕಾರಿ ಆದೇಶದಲ್ಲಿ ತಿಳಿಸಲಾಗಿದೆ.

ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಕೃಷ್ಣಸಾಗರಿ ಅವರು NeedsOfPublic.in ನ ‘ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ’ (Job Updates & Career) ವಿಭಾಗದ ಮುಖ್ಯಸ್ಥರಾಗಿದ್ದಾರೆ. ತುಮಕೂರಿನ ಸರ್ಕಾರಿ ನರ್ಸಿಂಗ್ ಕಾಲೇಜಿನಿಂದ B.Sc (Nursing) ಪದವಿ ಪಡೆದಿರುವ ಇವರು, ಸಾರ್ವಜನಿಕ ಜಾಗೃತಿ ಮತ್ತು ಮಾಹಿತಿ ನೀಡುವ ಆಸಕ್ತಿಯಿಂದಾಗಿ ಡಿಜಿಟಲ್ ಪತ್ರಿಕೋದ್ಯಮ ಕ್ಷೇತ್ರವನ್ನು ಆಯ್ದುಕೊಂಡಿದ್ದಾರೆ. ಡಿಜಿಟಲ್ ಮಾಧ್ಯಮ ರಂಗದಲ್ಲಿ 3 ವರ್ಷಗಳ ಅನುಭವ ಹೊಂದಿರುವ ಇವರು, ಸರ್ಕಾರಿ ಉದ್ಯೋಗದ ಅಧಿಸೂಚನೆಗಳು (Govt Job Notifications), ಖಾಸಗಿ ನೇಮಕಾತಿಗಳು ಮತ್ತು ಶೈಕ್ಷಣಿಕ ಅಪ್ಡೇಟ್ಗಳನ್ನು ಒದಗಿಸುವಲ್ಲಿ ಪರಿಣತಿ ಹೊಂದಿದ್ದಾರೆ. ನಿರುದ್ಯೋಗಿ ಯುವಕ-ಯುವತಿಯರಿಗೆ ಯಾವುದೇ ಗೊಂದಲವಿಲ್ಲದೆ, ಕೇವಲ ಅಧಿಕೃತ ಮೂಲಗಳಿಂದ ಪರಿಶೀಲಿಸಿದ (Verified) ನಿಖರ ಮಾಹಿತಿಯನ್ನು ಸಕಾಲದಲ್ಲಿ ತಲುಪಿಸುವುದೇ ಇವರ ಬರವಣಿಗೆಯ ಶೈಲಿಯಾಗಿದೆ.


WhatsApp Group




Leave a Reply