ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಗ್ಯಾರಂಟಿ ಯೋಜನೆಗಳಿಗೆ ಅರ್ಜಿಯನ್ನು ಸಲ್ಲಿಸುವ ಮುನ್ನ ಸೈಬರ್ ಕಳ್ಳರಿಂದ ಎಚ್ಚರಿಕೆಯಿಂದ ಇರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಎಲ್ಲರಿಗೂ ತಿಳಿದಿರುವಂತೆ ಕಾಂಗ್ರೆಸ್ ಸರ್ಕಾರವು 5 ಗ್ಯಾರಂಟಿಗಳನ್ನು ಜಾರಿಗೆ ತರುತ್ತಿದೆ. ಇದರ ಬೆನ್ನಲ್ಲೇ ಸೈಬರ್ ಕಳ್ಳರ ಹೊಂಚಾಟವೂ ಕೂಡ ಹೆಚ್ಚುತ್ತಿದೆ. ಗ್ಯಾರಂಟಿ ಅರ್ಜೆಗಳನ್ನು ಸಲ್ಲಿಸುವ ಮುನ್ನ ಹೇಗೆ ಎಚ್ಚರಿಕೆಯನ್ನು ವಹಿಸಬೇಕು?, ಈ ಸೈಬರ್ ಕಳ್ಳರು ನಮ್ಮ ವಿಷಯಗಳನ್ನು ಹೇಗೆ ಕದಿಯುತ್ತಾರೆ ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಗ್ಯಾರೆಂಟಿ ಯೋಜನೆಗಳಿಗೆ ಅರ್ಜಿಯನ್ನು ಸಲ್ಲಿಸುವ ಮುನ್ನ ಎಚ್ಚರ :
ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ ಮತ್ತು ಶಕ್ತಿ ಯೋಜನೆಗಳಿಗೆ ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆ ಇನ್ನೇನು ಶುರುವಾಗುತ್ತಿದೆ. ಇದೇ ಸಮಯದಲ್ಲಿ, ಇಂತಹ ಉತ್ತಮವಾದ ಸಮಯವನ್ನೇ ಅವಕಾಶವನ್ನಾಗಿರಿಸಿಕೊಳ್ಳಲು ಸೈಬರ್ ಕಳ್ಳರು ಕಾಯುತ್ತಿದ್ದಾರೆ. ಅಧಿಕೃತ ಜಾಲತಾಣಗಳಲ್ಲಿ ಸುಳ್ಳು ಲಿಂಕುಗಳನ್ನು ಹರಿಬಿಟ್ಟು ಅವುಗಳ ಮೇಲೆ ಕ್ಲಿಕ್ ಮಾಡಿದರೆ ಸಾಕು ನಮ್ಮ ಎಲ್ಲ ಮುಖ್ಯವಾದ ಮಾಹಿತಿಗಳು ಅವರಿಗೆ ಹೋಗುವಂತೆ ಸಂಚನ್ನು ಹೂಡುತ್ತಿದ್ದಾರೆ. ಇಂತಹ ಲಿಂಕುಗಳನ್ನು ಎಂದಿಗೂ ಕ್ಲಿಕ್ ಮಾಡಬೇಡಿ, ಇದರ ಬಗ್ಗೆ ಎಚ್ಚರದಿಂದಿರಿ ಎಂದು ಸೈಬರ್ ತಜ್ಞರು ಎಚ್ಚರಿಕೆಯನ್ನು ನೀಡಿದ್ದಾರೆ.
ದೇಶದಲ್ಲಿ ಅತಿ ಹೆಚ್ಚು ಸೈಬರ್ ಪ್ರಕರಣಗಳು ದಾಖಲಾಗುತ್ತಿರುವ ರಾಜ್ಯಗಳಲ್ಲಿ ಕರ್ನಾಟಕ 3ನೇ ಸ್ಥಾನದಲ್ಲಿದ್ದು, ರಾಜ್ಯದಿಂದ ಪ್ರತಿನಿತ್ಯ ಒಂದು ಕೋಟಿ ರೂ. ಹಣ ಸೈಬರ್ ವಂಚನೆಯಲ್ಲಿ ಲೂಟಿಯಾಗುತ್ತಿದೆ ಎಂದು ಸ್ವತಃ ಪೊಲೀಸ್ ಇಲಾಖೆ ತಿಳಿಸಿದೆ. ಆದ್ದರಿಂದ ಗ್ಯಾರಂಟಿ ಯೋಜನೆಗಳಿಗೆ ಅರ್ಜಿಯನ್ನು ಸಲ್ಲಿಸುವಾಗ ನಾವು ಬ್ಯಾಂಕ್ ಖಾತೆಯ ವಿವರಗಳನ್ನು ಕೂಡ ನೀಡಿರುತ್ತೇವೆ, ಇಂತಹ ಸಂದರ್ಭದಲ್ಲಿ ನಮ್ಮ ಮುಖ್ಯವಾದ ವಿಷಯಗಳು ಲೀಕ್ ಆದರೆ ಹಣವನ್ನು ಲೂಟಿ ಮಾಡುವ ಸಾಧ್ಯತೆಯೂ ಇರುತ್ತದೆ. ಹಾಗಾಗಿ ನೀವು ಅಧಿಕೃತ ಜಾಲತಾಣದಲ್ಲಿ ಲಿಂಕನ್ನು ಕ್ಲಿಕ್ ಮಾಡುವ ಮುನ್ನ ಒಮ್ಮೆ ಯೋಚಿಸಿ ಮತ್ತು ಇತರೆ ವ್ಯಕ್ತಿಗಳಿಗೆ ನಿಮ್ಮ ಓಟಿಪಿಯನ್ನು ನೀಡಬೇಡಿ.

ಸೈಬರ್ ಕಳ್ಳರಿಂದ ಎಚ್ಚರಿಕೆಯನ್ನು ವಹಿಸುವಂತೆ ಮನದಟ್ಟು ಮಾಡುತ್ತಿರುವ ಈ ಲೇಖನವನ್ನು ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಬಂಧುಗಳಿಗೂ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
| ಪ್ರಮುಖ ಲಿಂಕುಗಳು |
| ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ |
Download App |
| ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group






