ಇಷ್ಟು ವರ್ಷ ಸಾಗುವಳಿ ಮಾಡಿದ ಅಕ್ರಮ ಸಕ್ರಮ ಭೂಮಿಗೆ ಹಕ್ಕು ಪತ್ರ ವಿತರಣೆ – ಇಲ್ಲಿದೆ ಡೀಟೇಲ್ಸ್

bagar hukum 15 year land is valid

ಇದೀಗ ರಾಜ್ಯ ಸರ್ಕಾರದಿಂದ ( State Government ) ಹೊಸ ವ್ಯವಸ್ಥೆಯೊಂದು ಜಾರಿಯಾಗಿದೆ. ಇದರಲ್ಲಿ ಹಲವು ನೂತನ ಅಂಶಗಳು ಒಳಗೊಂಡಿವೆ. ಹೌದು ಅದು ಯಾವ ಇಲಾಖೆ ಗೆ ಸೇರಿದೆ ಮತ್ತು ಇದರಲ್ಲಿ ಏನೆಲ್ಲ ಮಾಹಿತಿ ಇದೆ ಎಂದು ತಿಳಿದು ಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯದ ಕಂದಾಯ ಇಲಾಖೆಯಿಂದ ಬಗರ್ ಹುಕುಂ ಎಂಬ ನೂತನ ವ್ಯವಸ್ಥೆಯು ಈಗ ಜಾರಿಯಲ್ಲಿದ್ದು. ಕೃಷಿ ಭೂಮಿಯ ಸಕ್ರಮಕ್ಕೆ ಫಾರಂ 57(Form 57) ರಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಆ ಅರ್ಜಿಯನ್ನು ಪರಿಶೀಲನೆ ಮಾಡಿ ಸಾಗುವಳಿ ಚೀಟಿಯನ್ನು ವಿತರಣೆ ಮಾಡಲು ರಾಜ್ಯ ಸರಕಾರದಿಂದ ಈ ಒಂದು ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.

ಈ ಒಂದು ಹೊಸ ವ್ಯವಸ್ಥೆ ಯ ಬಗ್ಗೆ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡರವರು ( Krishna Bhire Gowda ) ಪತ್ರಿಕಾ ಮಾಧ್ಯಮದೊಂದಿಗೆ ( Media ) ಇದರ ಸಂಪೂರ್ಣ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಹಾಗಾದರೆ ಈ ಬಗರ್ ಹುಕುಂ ವ್ಯವಸ್ಥೆ ಏನು? ಅದರ ಮುಖ್ಯ ಉದ್ದೇಶ ಏನು ? ಎಂದು ತಿಳಿದು ಕೊಳ್ಳೂಣ ಬನ್ನಿ. ಅದರ ಬಗ್ಗೆ ಮಾಹಿತಿ ಈ ಕೆಳಗಿನಂತಿದೆ :

15 ವರ್ಷ ಉಳುಮೆ ಭೂಮಿ ಸಕ್ರಮ :

bagur hukam

ಹದಿನೈದು ವರ್ಷಗಳಿಂದ ಉಳುಮೆ ಮಾಡುತ್ತಿರುವವರಿಗೆ ಮಾತ್ರ ಸಕ್ರಮಕ್ಕೆ ಅವಕಾಶ ಇದೆ ಎಂದು ರಾಜ್ಯ ಸರ್ಕಾರದಿಂದ ತಿಳಿದು ಬಂದಿದೆ. ಹಾಗೆಯೇ ಅರ್ಜಿಯನ್ನು ಪರಿಶೀಲನೆ ಮಾಡಿ ನಂತರ ವಿಲೇವಾರಿ ಮಾಡುವ ಬದಲು ತಂತ್ರಜ್ಞಾನ ಬಳಕೆಗೆ ರಾಜ್ಯ ಸರಕಾರ ಮುಂದಾಗಿದೆ.
1980 ರಲ್ಲಿ ಕೃಷಿ ಚಟುವಟಿಕೆಗೆ ಸಣ್ಣ ರೈತರ ಬಳಿ ಜಮೀನು ಇರಲಿಲ್ಲ. ಅಂತಹ ರೈತರಿಗೆ ಸರಕಾರದಿಂದ ಎರಡು ಎಕರೆ ಜಮೀನನ್ನು ಮಂಜೂರು ಮಾಡುವ ವ್ಯವಸ್ಥೆಯನ್ನು ಅಂದಿನ ಸರಕಾರ ಜಾರಿ ಮಾಡಿತ್ತು. ಆದರೆ ಈ ಒಂದು ಯೋಜನೆಯನ್ನು ಎಲ್ಲಾ ಭೂ ರಹಿತ ರೈತರಿಗೆ ತಲುಪಿಸಲು ಸರಕಾರದಿಂದ ಸಾಧ್ಯವಾಗಲಿಲ್ಲ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹಾಗಾಗಿ ಭೂಮಿ ಸಿಗದ ಭೂ ರಹಿತ ಕೃಷಿಕರು ತಮ್ಮ ಜೀವನ ನಡೆಸಲು ತಮಗೆ ಸಿಕ್ಕ ಜಾಗದಲ್ಲಿ ತಮಗೆ ಮನಸ್ಸಿಗೆ ಬಂದಂತೆ ಜಮೀನನ್ನು ಉಳುಮೆ ಮಾಡಲು ಪ್ರಾರಂಭ ಮಾಡಿದರು. ಉಳುಮೆ ಮಾಡಿ ಸಂಪಾದನೆ ಮಾಡಿದರೆ ಏನು ಪ್ರಯೋಜನ ಆ ಭೂಮಿಯ ಹುಕ್ಕು ಅವರಿಗೆ ಇರುವುದಿಲ್ಲ. ಮತ್ತು ಯಾವುದೇ ಹಕ್ಕು ಪತ್ರಗಳು ಕೂಡ ಅವರ ಹತ್ತಿರ ಇರುವುದಿಲ್ಲ.

ಇದಕ್ಕಾಗಿ ಇಂತಹ ರೈತರಿಗೆ ಅವರು ಉಳುಮೆ ಮಾಡುತ್ತಿರುವ ಜಮೀನಿನ ಸಾಗುವಳಿ ಚೀಟಿ ಅಥವಾ ಹಕ್ಕು ಪತ್ರವನ್ನು ನೀಡುವುದಕ್ಕಾಗಿ 1991ರಲ್ಲಿ ರಾಜ್ಯ ಸರಕಾರದಿಂದ ಕರ್ನಾಟಕ ಭೂ ಕಂದಾಯ ಕಾಯಿದೆ 1991ರಲ್ಲಿ ನಮೂನೆ 50 ಹಾಗೆ 1999ರಲ್ಲಿ ನಮೂನೆ 53 ಮತ್ತು 2018 ರಲ್ಲಿ ನಮೂನೆ 57 ರ ಈ ಮೂರು ಕಾಯಿದೆಗಳ ಅಡಿಯಲ್ಲಿ ರೈತರಿಂದ ಅರ್ಜಿಗಳನ್ನು ಸ್ವೀಕರಿಸಲಾಗಿತ್ತು. ಹಾಗೆಯೇ ಕಳೆದ 15 ವರ್ಷಗಳಿಂದ ಸಾಗುವಳಿ ಮಾಡುತ್ತಿರುವವರಿಗೆ ಮಾತ್ರ ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶವಿತ್ತು.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ಹಾಗೆಯೇ ಇನ್ನು ಮುಂದೆ ಸಾಗುವಳಿ ಚೀಟಿ ವಿತರಣೆ ಯಲ್ಲಿ ತಂತ್ರಜ್ಞಾನ ಬಳಕೆ ಮಾಡಲಾಗಿದೆ. ಈ ಮೊದಲು ನಮೂನೆ 50, 53 ಮತ್ತು 57 ರಲ್ಲಿ ಸಕ್ರಮಕ್ಕೆ ಅರ್ಜಿ ಸಲ್ಲಿಸಿದವರ ಅರ್ಜಿಯನ್ನು ಭೌತಿಕವಾಗಿ ಪರಿಶೀಲಿಸಿ ಅದನ್ನು ವಿಲೇವಾರಿ ಮಾಡುವ ಕೆಲಸ ಮಾಡಲಾಗುತ್ತಿತ್ತು. ಹಾಗೆಯೇ ಅಲ್ಲಿ ಅರ್ಹ ರಲ್ಲದ ಫಲಾನುಭವಿಗಳಿಗೆ ಮತ್ತು ಅಕ್ರಮಗಳಿಗೆ ಅವಕಾಶ ಇದ್ದ ಕಾರಣದಿಂದಾಗಿ ಈಗ ಈ ಪ್ರಕ್ರಿಯೆಯನ್ನು ಸಂಪೂರ್ಣ ತಂತ್ರಜ್ಞಾನ ( Technology ) ಬಳಕೆ ಮಾಡಿ ಸಾಗುವಳಿ ಚೀಟಿ ನೀಡಲು ಸರ್ಕಾರ ಮುಂದಾಗಿದೆ.

ಹಾಗೆಯೇ ಇನ್ನೊಂದು ಮುಖ್ಯ ವಿಚಾರ ಏನಂದ್ರೆ , ಈ ಮೇಲೆ ತಿಳಿಸಿರುವ ನಮೂನೆಯಲ್ಲಿ ಸಾಗುವಳಿ ಚೀಟಿ ಪಡೆಯಲು ಅರ್ಜಿ ಸಲ್ಲಿಸಿದ ಫಲಾನುಭವಿಗಳ ಅರ್ಜಿಗಳನ್ನು ಪರಿಶೀಲನೆ ಮಾಡಿ ಸಾಗುವಳಿ ಚೀಟಿಯನ್ನು ವಿತರಣೆ ಮಾಡಲು ತಾಲ್ಲೂಕು ಮಟ್ಟದಲ್ಲಿ ಸಮಿತಿಗಳನ್ನು ರಚನೆ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ. ಹಾಗೂ 6 ತಿಂಗಳಲ್ಲಿ ಎಲ್ಲಾ ಅರ್ಜಿ ವಿಲೇವಾರಿ ಆಗಲಿದೆ ಎಂದಿದ್ದಾರೆ.

ಸಮಿತಿಗಳನ್ನು ರಚನೆ ಮಾಡಲು ಪ್ರಕ್ರಿಯೆಯನ್ನು ಈಗಾಗಲೇ ಆರಂಭ ಮಾಡಲಾಗಿದೆ. ಹಾಗೆಯೇ 50 ತಾಲೂಕುಗಳಲ್ಲಿ ಸಮಿತಿ ರಚನೆ ಪ್ರಕ್ರಿಯೆ ಪೂರ್ಣಗೊಂಡಿದ್ದು ಆದಷ್ಟು ಬೇಗ ಆದೇಶ ಬರುತ್ತದೆ ಎಂದಿದ್ದಾರೆ. ಉಳಿದ ತಾಲೂಕುಗಳಲ್ಲಿಯೂ ಸಮಿತಿಗಳ ರಚಿಸಿ ಅದಷ್ಟು ಬೇಗ ಎಲ್ಲ ಕಾರ್ಯ ಮುಗಿಯಲಿದೆ ಎಂದು ತಿಳಿಸಿದ್ದಾರೆ.

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

Picsart 23 07 16 14 24 41 584 transformed 1

Leave a Reply

Your email address will not be published. Required fields are marked *