ಬೆಂಗಳೂರಿನಲ್ಲಿ ಮಳೆಯೋ ಮಳೆ?
ಎಲ್ಲಿ ನೋಡಿದರು ನೀರಿಗೆ ಹಾಹಾಕಾರ ಶುರುವಾಗಿದೆ. ಒಂದು ಟ್ಯಾಂಕರ್ ನೀರು ಬೇಕು ಅಂದ್ರೆ 3000 ರೂಪಾಯಿಗೂ ಹೆಚ್ಚು ಹಣ ಕೊಡಬೇಕಿದೆ ಎಂಬ ಆರೋಪವೂ ಕೇಳಿಬಂದಿದೆ. ಪರಿಸ್ಥಿತಿ ಕೈಮೀರಿ ಹೋಗಿರುವ ಸಮಯದಲ್ಲೇ ಜನರು ಕೂಡ ಆಕ್ರೋಶ ಹೊರಹಾಕುತ್ತಿದ್ದು ಮಳೆರಾಯ ಬೇಗ ಬಾರಪ್ಪ ಅಂತಾ ಬೇಡಿಕೊಳ್ಳುತ್ತಿದ್ದರು. ಹೀಗಾಗಿ, ಕರ್ನಾಟಕದ ರಾಜಧಾನಿ ಬೆಂಗಳೂರಿಗೆ ಮಳೆರಾಯನ ಎಂಟ್ರಿ ಆಗುತ್ತಿದೆ.
ಇಂದು ಅಂದರೆ ಮೇ ಮೂರು ಕೂಡ ಮಧ್ಯಾಹ್ನ ಬೆಂಗಳೂರಿನಲ್ಲಿ ಬಾರಿ ಮಳೆಯಾಗಿದೆ. ಯಾವ ಯಾವ ಏರಿಯಾ ಗಳಲ್ಲಿ ಮಳೆಯಾಗಿದೆ. ಎನ್ನುವುದರ ಸಂಪೂರ್ಣವಾದ ಮಾಹಿತಿಯನ್ನು ಈ ವರದಿಯ ಮೂಲಕ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಬಿಸಿಲಿನಿಂದ ಕಂಗೆಟ್ಟ ಬೆಂಗಳೂರಿನ ಜನಕ್ಕೆ ವರ್ಷದ ದಾರೆ :
ಬೆಂಗಳೂರಿನಲ್ಲಿ ಜನರು ಬಿಸಿಲಿನ ತಾಪಕೆ ಬೆಂದು ಮಳೆ ಯಾವಾಗ ಬರುತಪ್ಪ ಎನ್ನುವ ನಿರೀಕ್ಷೆಯಲ್ಲಿದ್ದರು, ಅಂತೂ ಅದೆಷ್ಟು ತಿಂಗಳುಗಳ ನಂತರ ಬೆಂಗಳೂರಿನ ಹಲವು ನಗರಗಳಲ್ಲಿ ಮಳೆಯಾಗಿದೆ. ನಿನ್ನೆ ಮತ್ತು ಇಂದು ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್ ಇದು ಮಳೆ ಬರುತ್ತದೆಯೋ ಇಲ್ಲವೋ ಎನ್ನುವ ಹಾಗಿತ್ತು. ಆದರೆ ಇಂದು ಮಧ್ಯಾಹ್ನ ಅಂದರೆ ಮೇ 3 ಬೆಂಗಳೂರಿನ ಕೆ.ಆರ್ಪುರಂ ವೈಟ್ ಫಿಲ್ಡ್, ವಿಧಾನ ಸೌಧ.ಚಾಲುಕ್ಯ ಸರ್ಕಲ್. ಶಿವಾನನಂದ ಸರ್ಕಲ್ ,ಮೈಸೂರು ಬ್ಯಾಂಕ್ ಮೆಜೆಸ್ಟಿಕ್ ಸೇರಿದಂತೆ ಬೆಂಗಳೂರು ದಕ್ಷಿಣ ಭಾಗದಲ್ಲಿ ಗುಡುಗು ಸಮೇತ ಭರ್ಜರಿ ಮಳೆಯಾಗಿದೆ.
ಅಷ್ಟೇ ಅಲ್ಲದೆ ಬೆಂಗಳೂರಿನ ಕೆ ಆರ್ ಮಾರುಕಟ್ಟೆಯಲ್ಲಿ ಮಳೆಯಾಗಿದ್ದು ರಸ್ತೆಯ ತುಂಬಾ ನೀರು ಹರಿಯುತ್ತಿದೆ. ಇದರಿಂದಾಗಿ ರಸ್ತೆಯು ಬ್ಲಾಕ್ ಆಗಿದ್ದು ಟ್ರಾಫಿಕ್ ಹೆಚ್ಚಾಗಿದೆ. ಜಯನಗರ, ಬಸವನಗುಡಿ, ಚಾಮಾರಾಜಪೇಟೆ, ವಸಂತನಗರ ಕೆ.ಆರ್.ಸರ್ಕಲ್, ಹೈಕೋರ್ಟ್, ಕಬ್ಬನ್ ಪಾರ್ಕ್, ಪ್ಯಾಲೆಸ್ ರಸ್ತೆ ಸೇರಿದಂತೆ ಬೆಂಗಳೂರಿನ ಒಳಗಡೆ ಮಿಂಚು ಸಹಿತ ಮಳೆಯಾಗಿದೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗದಿದ್ದರು, ಬೆಂಗಳೂರಿನಲ್ಲಿ ಮಳೆಯಾಗಿರುವುದರಿಂದ, ಎಲ್ಲಾ ಜನರು ತಮ್ಮ ಜಿಲ್ಲೆಗಳಲ್ಲೂ ಮಳೆಯಾಗಬಹುದು ಎಂದು ಕಾತುರದಿಂದ ಕಾಯುತ್ತಿದ್ದಾರೆ.
ಕರ್ನಾಟಕ ವೆದರ್ ಅಪ್ಡೇಟ್ (weather updates) :
ಭಾರತೀಯ ಹವಮಾನ ಇಲಾಖೆಯ ಇತ್ತೀಚಿನ ವರದಿ ಪ್ರಕಾರ ಮೇ ಐದರವರೆಗೆ ಅಂದರೆ ಭಾನುವಾರದ ವರೆಗೂ ರಾಜ್ಯದಲ್ಲಿ ಉಷ್ಣ ಅಲೆ ಇರಲಿದೆ. ಅದರ ನಡುವೆ ಶುಕ್ರವಾರ ಕೊಡಗು ಮತ್ತು ಮೈಸೂರು ಜಿಲ್ಲೆಯ ಹಲವಡೆ, ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಶನಿವಾರ, ಭಾನುವಾರ ಹಾಗೂ ಸೋಮವಾರ ರಾಜ್ಯದಲ್ಲಿ ಒಣಹವೆ ಮುಂದುವರೆಯಲಿದ್ದು, ಮೇ 7ರಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ,, ಚಿಕ್ಕಮಂಗಳೂರು, ಕೊಡಗು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಮೇ 8ಕ್ಕೆ ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ತುಂತುರು ಮಳೆಯಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ವಿಜಯನಗರ , ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಬೆಂಗಳೂರು ಗ್ರಾಮೀಣ ಹಾಗೂ ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳ ಕೆಲ ಭಾಗಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಎಂದಿನಂತೆ ಒಣ ಹವೆ ಮುಂದುವರೆಯಲಿದೆ ಎಂದು ಐಎಂಡಿ ಹೇಳಿದೆ.
ಮೇ 9ರಂದು ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳ ಕೆಲ ಭಾಗಗಳಲ್ಲಿ ಮಳೆಯಾಗಲಿದ್ದರೆ, ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಐಎಂಡಿ ತನ್ನ ಮುನ್ಸೂಚನೆಯಲ್ಲಿ ತಿಳಿಸಿದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿ
ಈ ಮಾಹಿತಿಗಳನ್ನು ಓದಿ
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group




