ಬಿಗ್ಬಾಸ್ ಮನೆಯಿಂದ ಇಂದು ಒಬ್ಬ ಸ್ಪರ್ಧಿ ಹೊರಬರಲಿದ್ದಾರೆ. ಹೌದು ಬಿಗ್ ಬಾಸ್ ಕನ್ನಡ ಸೀಸನ್ 10(BigBoss kannada 10) ಆರಂಭವಾಗಿ ಒಂದು ವಾರ ಮುಗಿಯುತ್ತಿದೆ. ಇಂದು ದೊಡ್ಮನೆಯಿಂದ ಹೊರಬರುವ ಸ್ಪರ್ಧಿಗಳ ಆಯ್ಕೆ ಜನರ ಕೈಯಲ್ಲಿ ಇದೆ. ಹೇಗೆ ಹೊರಬರುತ್ತಾರೆ ಎಂದು ತಿಳಿದುಕೊಳ್ಳ ಬೇಕೇ ಹಾಗಿದ್ದಲ್ಲಿ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ವೋಟ್ ಮಾಡುವ ಜನರೇ ಬಾಸ್ ಗಳು :
ನಾಳೆ ಎಲ್ಲ ಸ್ಪರ್ಧಿಗಳು ಬಿಗ್ ಬಾಸ್ ನ ಮುಂದೆ ಮುಖಾ ಮುಖಿಯಾಗಿ ಇರುತ್ತಾರೆ. ಈ ವಾರ ಯಾವ ಸ್ಪರ್ಧಿ ಮನೆಯಿಂದ ಹೊರಕ್ಕೆ ಬರುತ್ತಾರೆ ಎಂಬ ಕುತೂಹಲದಿಂದ ಜನರು ಕಾಯುತ್ತಿದ್ದಾರೆ. ಮನೆಯಿಂದ ಹೊರಕ್ಕೆ ಬರುವ ಸ್ಪರ್ಧಿಗಳ ಭವಿಷ್ಯವನ್ನು ಪ್ರೇಕ್ಷಕರು ನಿರ್ಧರಿಸುತ್ತಾರೆ. ಅವರು ಮನೆಯಲ್ಲಿ ಉಳಿಬೇಕಾ ಅಥವಾ ಇಲ್ಲವಾ ಅಂತ ನೀವು ಕೂಡ ನಿರ್ಧರಿಸಬಹುದು. ಅದಕ್ಕೆ ಅನುಸರಿಸಬೇಕಾದ ವಿಧಾನಗಳ ಕುರಿತು ಜಿಯೋ ಸಿನಿಮಾ(Jio cinema) ಮಾಹಿತಿ ನೀಡುತ್ತದೆ.
ಬಿಗ್ ಬಾಸ್ ನ ಸ್ಪರ್ಧಿಗಳಿಗೆ ವೋಟ್ ಮಾಡಲು ಬಯಸುವವರು ಈ ಕೆಳಗಿನ ಸೂಚನೆಗಳನ್ನು ಅನುಸರಿಸಿ :
ಇದೀಗ ಬಿಗ್ಬಾಸ್ ಕನ್ನಡ ಜಿಯೋ ಸಿನಿಮಾ 4 ಗಂಟೆಗಳ ಕಾಲ ಉಚಿತ ಪ್ರಸಾರದಲ್ಲಿದ್ದು ಪ್ರೇಕ್ಷಕರು ಸ್ಪರ್ಧಿಗಳಿಗೆ ವೋಟ್ ಮಾಡಲು ಸಂಪೂರ್ಣ ಅಧಿಕಾರವನ್ನು ನೀಡಿದೆ. ಈ ಸೆಗ್ಮೆಂಟ್ ನಲ್ಲಿ ಕೇಳಲಾಗುವ ಪ್ರಶ್ನೆಗೆ ಜನರ ವೋಟ್ಗಳು ಮನೆಯೊಳಗಿನ ಹಲವಾರು ಮುಖ್ಯ ನಿರ್ಣಯಗಳನ್ನು ತೆಗೆದುಕೊಳ್ಳುತ್ತದೆ.
ಈ ಬಿಗ್ ಬಾಸ್ ಸೆಗ್ಮೆಂಟ್ನಲ್ಲಿ ಪ್ರಶ್ನೆಯೊಂದನ್ನು ಜನಮತಕ್ಕಾಗಿ ಇಡಲಾಗಿದೆ. ಇದರ ಮೂಲಕ ಬಿಗ್ಬಾಸ್ ಮನೆಯೊಳಗಿನ ‘ಅಸಮರ್ಥ’ರ ಭವಿಷ್ಯ ನಿರ್ಧರಿಸುವ ಸಂಪೂರ್ಣ ಅಧಿಕಾರವನ್ನು ಪ್ರೇಕ್ಷಕರಿಗೆ ನೀಡಲಾಗಿದೆ.
ಬಿಗ್ ಬಾಸ್ ನ ಮೊದಲ ಪ್ರಶ್ನೆ ಹೀಗಿದೆ: ಈ ಏಳು ಮಂದಿ ಅಸಮರ್ಥರಲ್ಲಿ ಯಾರೆಲ್ಲ ಸಮರ್ಥರಾಗಲು ಅರ್ಹರು? ಈ ಪ್ರಶ್ನೆಯನ್ನು ‘ನೀವೀಗ ಬಾಸ್’ ಸೆಗ್ಮೆಂಟ್ನಲ್ಲಿ ಜನಮತಕ್ಕಾಗಿ ಇಡಲಾಗಿದೆ. ಪ್ರೇಕ್ಷಕರು ತಮ್ಮ ನೆಚ್ಚಿನ ಸ್ಪರ್ಧಿಗಳಿಗೆ ಮತ ಹಾಕಬಹುದು. ಅತಿಹೆಚ್ಚು ಮತ ಪಡೆದ ಸ್ಪರ್ಧಿ ಎಲ್ಲರಿಗಿಂತ ಮೊದಲು ‘ಸಮರ್ಥ’ರ ಗುಂಪಿಗೆ ಸೇರಿಕೊಳ್ಳುತ್ತಾರೆ.
ಇದೀಗ ಮನೆಯೊಳಗೆ ಎರಡು ಗುಂಪುಗಳಾಗಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಜನರ ವೋಟ್ನಿಂದ ನೇರವಾಗಿ ಮನೆಯೊಳಗೆ ಪ್ರವೇಶಿಸಿದ ಹತ್ತು ‘ಸಮರ್ಥ’ ಸ್ಪರ್ಧಿಗಳ ಗುಂಪು ಒಂದೆಡೆ ಇದ್ದರೆ ಇನ್ನೊಂದು ಕಡೆ ಹೋಲ್ಡ್ನಲ್ಲಿ ಇಟ್ಟಿರುವ ಏಳು ‘ಅಸಮರ್ಥ’ ಸ್ಪರ್ಧಿಗಳ ಗುಂಪು ಇದೆ. ಈ ಏಳು ಸ್ಪರ್ಧಿಗಳಿಗೆ ಮನೆಯೊಳಗಿನ ಕೆಲವು ಸೌಲಭ್ಯಗಳನ್ನು ಸ್ವಲ್ಪ ಕಡಿಮೆ ನೀಡಲಾಗಿದೆ. ಈಗ ಅವರಲ್ಲಿ ಸಮರ್ಥರು ಯಾರು ಎಂಬುದನ್ನು ತೀರ್ಮಾನಿಸುವ ಸಂದರ್ಭ ಬಂದಿದೆ. ಅದಕ್ಕಾಗಿ ಸಂಪೂರ್ಣ ಅಧಿಕಾರವನ್ನು ಜನರಿಗೆ ನೀಡಲಾಗಿದೆ.
ಈ ಬಾರಿಯ ಬಿಗ್ ಬಾಸ್ ಬಹಳ ಕುತೂಹಲಕಾರಿ ಮತ್ತು ವಿಶಿಷ್ಟವಾಗಿದೆ. ಈ ಸಲ ಪ್ರೇಕ್ಷಕರ ಭಾಗವಹಿಸುವಿಕೆಗೂ ಸಾಕಷ್ಟು ಅವಕಾಶಗಳಿರುವುದು ಇನ್ನೊಂದು ವಿಶೇಷತೆ ಎನ್ನಬಹದು. ಬರೀ ಭಾಗವಹಿಸುವುದಷ್ಟೇ ಅಲ್ಲ, ಬಿಗ್ಬಾಸ್ ತೆಗೆದುಕೊಳ್ಳುವ ಹಲವು ಬಹುಮುಖ್ಯ ನಿರ್ಧಾರಗಳನ್ನು ನಿರ್ಣಯಿಸುವ ಸಂಪೂರ್ಣ ಅಧಿಕಾರ ಪ್ರೇಕ್ಷಕರಿಗೆ ಇದೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group







