ಕರ್ನಾಟಕ ಸರ್ಕಾರವು ಬಾಲ್ಯ ವಿವಾಹವನ್ನು ಸಂಪೂರ್ಣವಾಗಿ ತಡೆಗಟ್ಟುವ ದಿಶೆಯಲ್ಲಿ ಹೊಸ ತಿದ್ದುಪಡಿ ಕಾಯ್ದೆಗೆ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ “ಬಾಲ್ಯ ವಿವಾಹ ನಿಷೇಧ ತಿದ್ದುಪಡಿ ಕಾಯ್ದೆ-2025” ಅನ್ನು ಅಂಗೀಕರಿಸಲಾಗಿದೆ. ಈ ಕಾಯ್ದೆಯು ವಿಧಾನಸಭೆಯಲ್ಲಿ ಮಂಡನೆಯಾಗಿ ಅನುಮೋದನೆ ಪಡೆದರೆ, ಕೇವಲ ಬಾಲ್ಯ ವಿವಾಹ ಮಾಡಿಕೊಡುವವರ ಮೇಲೆ ಮಾತ್ರವಲ್ಲದೆ, ನಿಶ್ಚಿತಾರ್ಥ ಮಾತುಕತೆಗಳಲ್ಲಿ ಭಾಗಿಯಾಗುವವರ ವಿರುದ್ಧವೂ ಕಾನೂನು ಕ್ರಮ ಜರುಗಿಸಲಾಗುವುದು.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಬಾಲ್ಯ ವಿವಾಹದೊಂದಿಗೆ ನಿಶ್ಚಿತಾರ್ಥಕ್ಕೂ ಕಟ್ಟುಪಾಡು
ಹಿಂದೆ, ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ಕಾನೂನು ಕ್ರಮಗಳು ಮದುವೆ ನಡೆಸಿಕೊಡುವವರಿಗೆ ಮಾತ್ರ ಸೀಮಿತವಾಗಿತ್ತು. ಆದರೆ, ಈಗಿನ ತಿದ್ದುಪಡಿಯ ಪ್ರಕಾರ, ತೊಟ್ಟಿಲು ಮದುವೆ, ನಿಶ್ಚಿತಾರ್ಥ ಅಥವಾ ಬಾಲ್ಯ ವಿವಾಹಕ್ಕೆ ದಾರಿ ಮಾಡಿಕೊಡುವ ಯಾವುದೇ ಒಪ್ಪಂದದಲ್ಲಿ ಭಾಗಿಯಾಗುವವರನ್ನು ಗುರಿಯಾಗಿರಿಸಿಕೊಂಡು ಕಟ್ಟುನಿಟ್ಟಾದ ನಿಯಮಗಳನ್ನು ಜಾರಿಗೆ ತರಲಾಗುತ್ತಿದೆ. ಇದರಡಿಯಲ್ಲಿ, ಕುಟುಂಬದ ಸದಸ್ಯರು, ಮಧ್ಯಸ್ಥಗಾರರು ಅಥವಾ ಸಮುದಾಯದ ನಾಯಕರು ಒತ್ತಡ ಹಾಕಿದರೂ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು.
ಕುಟುಂಬದ ಒಪ್ಪಿಗೆ ಇದ್ದರೂ ಕಾನೂನು ಬಾಹಿರ
ಹೊಸ ಕಾಯ್ದೆಯ ಪ್ರಕಾರ, ಬಾಲ್ಯ ವಿವಾಹಕ್ಕೆ ಕುಟುಂಬದ ಅಥವಾ ಹಿರಿಯರ ಒಪ್ಪಿಗೆ ಇದ್ದರೂ ಅದು ಕಾನೂನುಬಾಹಿರವೆಂದು ಪರಿಗಣಿಸಲಾಗುವುದು. ಇದು ಮಕ್ಕಳ ಹಕ್ಕುಗಳನ್ನು ರಕ್ಷಿಸುವ ದಿಶೆಯಲ್ಲಿ ಮಹತ್ವದ ಹೆಜ್ಜೆಯಾಗಿದೆ. ಸರ್ಕಾರದ ನಿರ್ಧಾರದ ಪ್ರಕಾರ, 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ವ್ಯಕ್ತಿಯನ್ನು ನಿಶ್ಚಿತಾರ್ಥ ಅಥವಾ ವಿವಾಹಕ್ಕೆ ಒಳಪಡಿಸಿದರೆ, ಅದರಲ್ಲಿ ಭಾಗಿಯಾದ ಎಲ್ಲರ ಮೇಲೂ ದಂಡ, ಜೈಲು ಶಿಕ್ಷೆ ಅಥವಾ ಇತರ ಕಾನೂನು ಕ್ರಮಗಳನ್ನು ಜಾರಿಗೆ ತರಲಾಗುವುದು.
ಜಾಗತಿಕ ಸಾಮರ್ಥ್ಯ ಕೇಂದ್ರ ನೀತಿಗೆ ತಿದ್ದುಪಡಿ
ಇದೇ ಸಭೆಯಲ್ಲಿ, ಕರ್ನಾಟಕ ಜಾಗತಿಕ ಸಾಮರ್ಥ್ಯ ಕೇಂದ್ರ (GCC) ನೀತಿ 2024-2029ಗೆ ಸಂಬಂಧಿಸಿದಂತೆ ತಿದ್ದುಪಡಿಗಳನ್ನು ಮಾಡಲು ಸಚಿವ ಸಂಪುಟ ನಿರ್ಧರಿಸಿದೆ. ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ಇದನ್ನು ಪ್ರಕಟಿಸಿದ್ದಾರೆ.
ಈ ನೀತಿಯಲ್ಲಿ ಸ್ಪಷ್ಟತೆ, ಸ್ಥಿರತೆ ಮತ್ತು ಸುಗಮ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಕೆಲವು ಭಾಷಾ ಮತ್ತು ನಿರೂಪಣಾ ಸುಧಾರಣೆಗಳನ್ನು ಮಾಡಲಾಗುವುದು. ಆದರೆ, ಇದರ ಮೂಲ ಉದ್ದೇಶ ಅಥವಾ ನಿಯಮಗಳನ್ನು ಬದಲಾಯಿಸುವುದಿಲ್ಲ. ಈ ತಿದ್ದುಪಡಿಯು ಸರ್ಕಾರ, ಖಾಸಗಿ ಸಂಸ್ಥೆಗಳು ಮತ್ತು ಇತರ ಪಾಲುದಾರರಿಗೆ ನೀತಿಯನ್ನು ಸರಳವಾಗಿ ಅರ್ಥಮಾಡಿಕೊಳ್ಳಲು ಮತ್ತು ಅನುಷ್ಠಾನಗೊಳಿಸಲು ಸಹಾಯ ಮಾಡುವುದು ಎಂದು ಸಚಿವರು ತಿಳಿಸಿದ್ದಾರೆ.
ಸರ್ಕಾರದ ಈ ಕ್ರಮವು ಮಹಿಳಾ ಮತ್ತು ಬಾಲಕಿಯರ ಸುರಕ್ಷತೆ, ಶಿಕ್ಷಣ ಹಕ್ಕು ಮತ್ತು ಸಾಮಾಜಿಕ ನ್ಯಾಯವನ್ನು ಉನ್ನತೀಕರಿಸುವ ದಿಶೆಯಲ್ಲಿ ಗಮನಾರ್ಹ ಬದಲಾವಣೆಯನ್ನು ತರಲಿದೆ. ಬಾಲ್ಯ ವಿವಾಹ ಮತ್ತು ನಿಶ್ಚಿತಾರ್ಥದಂತಹ ಅನಾಚಾರಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವುದು ಈ ಕಾಯ್ದೆಯ ಮುಖ್ಯ ಉದ್ದೇಶವಾಗಿದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.