ಬೆಂಗಳೂರು, ಜುಲೈ 14, 2025: ಕರ್ನಾಟಕ ಸರ್ಕಾರದ ಪ್ರಗತಿಪರ ಶಕ್ತಿ ಯೋಜನೆ ಇಂದು ಐತಿಹಾಸಿಕ ಮೈಲಿಗಲ್ಲನ್ನು ತಲುಪಿದೆ. 500 ಕೋಟಿ ಮಹಿಳಾ ಪ್ರಯಾಣಿಕರಿಗೆ ಉಚಿತ ಬಸ್ ಸೌಲಭ್ಯ ನೀಡುವ ಮೂಲಕ ದೇಶದಲ್ಲೇ ಮೊದಲ ಸಾಧನೆ ನಿರ್ಮಿಸಿದೆ. ಈ ಸಂದರ್ಭದಲ್ಲಿ, 500ನೇ ಕೋಟಿ ಟಿಕೆಟ್ ಪಡೆದ ಮಹಿಳೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಲು ಹೊದಿಸಿ, ಹಾರ ಹಾಕಿ, ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಶಕ್ತಿ ಯೋಜನೆ: ಮಹಿಳಾ ಸಬಲೀಕರಣದ ದಿಟ್ಟ ಹೆಜ್ಜೆ
ಶಕ್ತಿ ಯೋಜನೆ 11 ಜೂನ್ 2023ರಂದು ಜಾರಿಗೆ ಬಂದು, 2 ವರ್ಷಗಳಲ್ಲಿ ಅದ್ಭುತ ಯಶಸ್ಸು ಕಂಡಿದೆ. ಈ ಯೋಜನೆಯಡಿಯಲ್ಲಿ, ರಾಜ್ಯದ ಎಲ್ಲಾ ಮಹಿಳೆಯರು, ವಿದ್ಯಾರ್ಥಿನಿಯರು, ಹಿರಿಯ ನಾಗರಿಕರು ಮತ್ತು ಲಿಂಗತ್ವ ಅಲ್ಪಸಂಖ್ಯಾತರು ನಗರ, ಗ್ರಾಮೀಣ ಮತ್ತು ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವಿದೆ. ಇದರಿಂದಾಗಿ ಮಹಿಳೆಯರ ಆರ್ಥಿಕ, ಶೈಕ್ಷಣಿಕ, ಉದ್ಯೋಗ ಮತ್ತು ಆರೋಗ್ಯ ಅಭಿವೃದ್ಧಿಗೆ ಹೆಚ್ಚಿನ ಸಹಾಯವಾಗಿದೆ.

ಸಂಖ್ಯೆಗಳಲ್ಲಿ ಶಕ್ತಿ ಯೋಜನೆಯ ಯಶಸ್ಸು
- 500 ಕೋಟಿ ಟಿಕೆಟ್ಗಳು ವಿತರಣೆಯಾಗಿವೆ.
- ₹12,669 ಕೋಟಿ ಮೌಲ್ಯದ ಟಿಕೆಟ್ಗಳು ಉಚಿತವಾಗಿ ನೀಡಲಾಗಿದೆ.
- ದೈನಂದಿನ ಪ್ರಯಾಣಿಕರ ಸಂಖ್ಯೆ: ಶಕ್ತಿ ಮೊದಲು 85.84 ಲಕ್ಷ ಇದ್ದದ್ದು, ಈಗ 1.17 ಕೋಟಿ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ.
- ಹೊಸ ಬಸ್ಸುಗಳ ಸೇರ್ಪಡೆ: ಕಳೆದ 2 ವರ್ಷಗಳಲ್ಲಿ 5,800 ಹೊಸ ಬಸ್ಸುಗಳನ್ನು ಸೇರಿಸಲಾಗಿದೆ.
- ನೇಮಕಾತಿ: 9,000 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಶುರುವಾಗಿ, 6,700 ಹೊಸ ನೇಮಕಾತಿಗಳು ಮಾಡಲಾಗಿದೆ.
ಸಾರಿಗೆ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆಗಳು

ಶಕ್ತಿ ಯೋಜನೆಯ ಜೊತೆಗೆ, ರಾಜ್ಯದ ಸಾರಿಗೆ ವ್ಯವಸ್ಥೆಯನ್ನು ಸುಧಾರಿಸಲು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ:
- 2,828 ಹಳೆಯ ಬಸ್ಸುಗಳನ್ನು ಹೊಸದಾಗಿ ಬದಲಾಯಿಸಲಾಗಿದೆ.
- 4 ಸಾರಿಗೆ ನಿಗಮಗಳು (BMTC, KSRTC, NWKRTC, NEKRTC) 185 ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿವೆ.
- ಬಸ್ ಪೂಜಾ ಕಾರ್ಯಕ್ರಮಗಳು ನಡೆಸಿ, ಮಹಿಳಾ ಪ್ರಯಾಣಿಕರಿಗೆ ಗುಲಾಬಿ ಹೂವುಗಳು ಮತ್ತು ಸಿಹಿತಿಂಡಿ ನೀಡಿ ಸ್ವಾಗತಿಸಲಾಗುತ್ತಿದೆ.
ಮಹಿಳಾ ಉದ್ಯಮಿಗಳಿಗೆ ಬೆಂಬಲ
ಶಕ್ತಿ ಯೋಜನೆಯಿಂದ ಸಾವಯವ ರೊಟ್ಟಿ ಮತ್ತು ಹೋಳಿಗೆ ತಯಾರಿಸುವ ಒಡಲ ಧ್ವನಿ ಸ್ತ್ರೀ ಸಂಘ (ವಿಜಯಪುರ) ನಂತರದ ಸಂಸ್ಥೆಗಳು ಲಕ್ಷಾಂತರ ರೂಪಾಯಿ ವಹಿವಾಟು ಮಾಡಿವೆ. ಇವರು ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ರೊಟ್ಟಿ ನೀಡಿ ಗೌರವಿಸಿದ್ದಾರೆ.
ಶಕ್ತಿ ಯೋಜನೆಯು ಮಹಿಳಾ ಸಬಲೀಕರಣ, ಸಾರಿಗೆ ಸುಧಾರಣೆ ಮತ್ತು ಸಾಮಾಜಿಕ ಬದಲಾವಣೆಗೆ ದೊಡ್ಡ ಪ್ರೇರಣೆಯಾಗಿದೆ. 500 ಕೋಟಿ ಟಿಕೆಟ್ ಸಾಧನೆಯು ಕರ್ನಾಟಕದ ಪ್ರಗತಿಗೆ ಸಾಕ್ಷಿಯಾಗಿದೆ. ಮುಂದಿನ ಗುರಿ 1,000 ಕೋಟಿ ಟಿಕೆಟ್ ಮತ್ತು ಹೆಚ್ಚಿನ ಮಹಿಳಾ ಸಬಲೀಕರಣ ಕಾರ್ಯ

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿಈ ಮಾಹಿತಿಗಳನ್ನು ಓದಿ
- ಆಮೇಜಾನ್ ಬಂಪರ್ ಡಿಸ್ಕೌಂಟ್ ಸೇಲ್ HP, Dell, Lenovo ಸೇರಿದಂತೆ ಟಾಪ್ ಲ್ಯಾಪ್ಟಾಪ್ ಕಮ್ಮಿ ಬೆಲೆಗೆ.ಭಾರತದಿಂದ ಲಂಡನ್ ಗೆ ನೇರ ಬಸ್ ಐತಿಹಾಸಿಕ ಪ್ರಯಾಣ…! ಟಿಕೆಟ್ ದರವೆಷ್ಟು ಗೊತ್ತೇ?ವಕ್ಫ್ ತಿದ್ದುಪಡಿ ಮಸೂದೆ 2024: ಸರ್ಕಾರಿ ಆಸ್ತಿಗಳು ಯಾವದೂ ವಕ್ಫ್ ಗೆ ಸೇರುವುದಿಲ್ಲಾ ಮಹತ್ವದ ಆದೇಶ.!
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
ಕ್ರಮಗಳನ್ನು ವಿಸ್ತರಿಸುವುದು.
“ಶಿವರಾಜ್ ಅವರು NeedsOfPublic.in ನಲ್ಲಿ ಸಾರ್ವಜನಿಕ, ಶೈಕ್ಷಣಿಕ ಮತ್ತು ಸ್ಥಳೀಯ ಸುದ್ದಿಗಳ ವಿಭಾಗದ ಹಿರಿಯ ಸಂಪಾದಕರಾಗಿದ್ದಾರೆ. ಪತ್ರಿಕೋದ್ಯಮದಲ್ಲಿ 6 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಇವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಂಕೀರ್ಣ ಯೋಜನೆಗಳನ್ನು ಹಾಗೂ ವಿದ್ಯಾರ್ಥಿವೇತನಗಳನ್ನು (Scholarships) ವಿಶ್ಲೇಷಿಸಿ, ಜನಸಾಮಾನ್ಯರಿಗೆ ಮತ್ತು ವಿದ್ಯಾರ್ಥಿಗಳಿಗೆ ಅದರ ಪ್ರಯೋಜನಗಳನ್ನು ಸುಲಭವಾಗಿ ಅರ್ಥೈಸುವಲ್ಲಿ ಎಕ್ಸ್ಪರ್ಟ್ ಆಗಿದ್ದಾರೆ. ಇದರ ಜೊತೆಗೆ ಪ್ರಮುಖ ಶೈಕ್ಷಣಿಕ ಅಪ್ಡೇಟ್ಗಳು, ಪರೀಕ್ಷಾ ಫಲಿತಾಂಶಗಳು ಮತ್ತು ವಿಶ್ವಾಸಾರ್ಹ ದೈನಂದಿನ ಹವಾಮಾನ ವರದಿಯನ್ನು ಒದಗಿಸುತ್ತಾರೆ. ವಿದ್ಯಾರ್ಥಿಗಳ ಭವಿಷ್ಯ ಮತ್ತು ಸಾರ್ವಜನಿಕ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದು ಇವರ ಮುಖ್ಯ ಗುರಿಯಾಗಿದೆ.”


WhatsApp Group




