ಮುಂಗಾರು ಋತುವಿನ ಕೊನೆಯ ದಿನಗಳು ಸಮೀಪಿಸುತ್ತಿರುವಾಗ, ಭಾರತದ ವಿವಿಧ ಭಾಗಗಳಲ್ಲಿ ಮಳೆಯ ತೀವ್ರತೆಯು ಮತ್ತೆ ಹೆಚ್ಚಾಗುವ ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ಈಗಾಗಲೇ ದಕ್ಷಿಣ ಒಡಿಶಾ ಮತ್ತು ಉತ್ತರ ಆಂಧ್ರ ಕರಾವಳಿಯ ಸುತ್ತಮುತ್ತ ವಾಯುಭಾರ ಕುಸಿತದಿಂದಾಗಿ ಹವಾಮಾನದಲ್ಲಿ ವೈಪರೀತ್ಯಗಳು ಕಂಡುಬಂದಿವೆ. ಈ ವಾಯುಭಾರ ಕುಸಿತವು ಗಂಟೆಗೆ 12 ಕಿಮೀ ವೇಗದಲ್ಲಿ ಪಶ್ಚಿಮ ದಿಕ್ಕಿನತ್ತ ಸಾಗುತ್ತಿದ್ದು, ದಕ್ಷಿಣ ಒಡಿಶಾದಲ್ಲಿ ಕೇಂದ್ರೀಕೃತವಾಗಿದೆ. ಮುಂದಿನ 48 ಗಂಟೆಗಳಲ್ಲಿ ಇದು ಕ್ರಮೇಣ ದುರ್ಬಲಗೊಂಡು, ಸ್ಪಷ್ಟವಾದ ಕಡಿಮೆ ಒತ್ತಡದ ಪ್ರದೇಶವಾಗಿ ಪರಿವರ್ತನೆಯಾಗುವ ಸಾಧ್ಯತೆಯಿದೆ. ಇದರ ಪರಿಣಾಮವಾಗಿ, ಮುಂದಿನ 3 ರಿಂದ 5 ದಿನಗಳಲ್ಲಿ ದೇಶದ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ….
ಚಂಡಮಾರುತದ ಸಾಧ್ಯತೆ ಮತ್ತು ವಾಯುಭಾರ ಕುಸಿತ
ಹವಾಮಾನ ಇಲಾಖೆಯ ಪ್ರಕಾರ, ಮುಂದಿನ 48 ಗಂಟೆಗಳಲ್ಲಿ ಅಂದರೇ ಸೆಪ್ಟೆಂಬರ್ 30ರಂದು ಉತ್ತರ ಅಂಡಮಾನ್ ಸಮುದ್ರದಲ್ಲಿ ಹೊಸ ಚಂಡಮಾರುತ ವ್ಯವಸ್ಥೆಯು ರೂಪಗೊಳ್ಳುವ ಸಂಭಾವನೆಯಿದೆ. ಇದರಿಂದಾಗಿ ಅಕ್ಟೋಬರ್ 1ರ ವೇಳೆಗೆ ಉತ್ತರ ಮತ್ತು ಮಧ್ಯ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ಕಡಿಮೆ ಒತ್ತಡದ ಪ್ರದೇಶ ಉಂಟಾಗಬಹುದು. ಈ ಚಂಡಮಾರುತದ ಪ್ರಸರಣವು ಗೋವಾ, ತೆಲಂಗಾಣ, ಉತ್ತರ ಕರ್ನಾಟಕ, ಮಹಾರಾಷ್ಟ್ರ, ಮತ್ತು ಆಂಧ್ರ ಪ್ರದೇಶದವರೆಗೆ ವಿಸ್ತರಿಸುವ ಸಾಧ್ಯತೆಯಿದೆ. ಈ ಪ್ರದೇಶಗಳಲ್ಲಿ ಗುಡುಗು-ಮಿಂಚಿನ ಸಮೇತ ಭಾರೀ ಮಳೆಯಾಗುವ ಸಾಧ್ಯತೆಯನ್ನು ಐಎಂಡಿ ಮುನ್ಸೂಚನೆ ನೀಡಿದೆ.
ದಕ್ಷಿಣ ಭಾರತದಲ್ಲಿ ಮಳೆಯ ಮುನ್ಸೂಚನೆ
ಸೆಪ್ಟೆಂಬರ್ 27ರಿಂದ ಅಕ್ಟೋಬರ್ 3ರವರೆಗೆ ದಕ್ಷಿಣ ಭಾರತದ ಹಲವು ರಾಜ್ಯಗಳಾದ ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರ ಪ್ರದೇಶ, ಮತ್ತು ತೆಲಂಗಾಣದಲ್ಲಿ ಸಾಧಾರಣದಿಂದ ಭಾರೀ ಮಳೆಯ ನಿರೀಕ್ಷೆಯಿದೆ. ಕರಾವಳಿ ಆಂಧ್ರ ಪ್ರದೇಶ ಮತ್ತು ರಾಯಲಸೀಮಾದಲ್ಲಿ ಗಂಟೆಗೆ 30-50 ಕಿಮೀ ವೇಗದ ಗಾಳಿಯೊಂದಿಗೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಉತ್ತರ ಭಾಗ, ಕೊಂಕಣ, ಮತ್ತು ಗೋವಾದಲ್ಲಿ ಸೆಪ್ಟೆಂಬರ್ 27ರಿಂದ ಅಕ್ಟೋಬರ್ 3ರವರೆಗೆ ಭಾರೀ ಮಳೆಯಾಗಲಿದೆ. ಘಾಟ್ ಪ್ರದೇಶಗಳಲ್ಲಿ ಕೆಲವು ದಿನಗಳಲ್ಲಿ ಅತಿಭಾರೀ ಮಳೆಯ ಸಂಭವವಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಒಡಿಶಾ ಮತ್ತು ಇತರ ರಾಜ್ಯಗಳಲ್ಲಿ ಮಳೆಯ ಎಚ್ಚರಿಕೆ
ಒಡಿಶಾ, ವಿದರ್ಭ, ಗಂಗಾ ಪಶ್ಚಿಮ ಬಂಗಾಳ, ಛತ್ತೀಸ್ಗಢ, ಜಾರ್ಖಂಡ್, ಮತ್ತು ಮಧ್ಯಪ್ರದೇಶದಲ್ಲಿ ಸೆಪ್ಟೆಂಬರ್ 27ರಿಂದ ಅಕ್ಟೋಬರ್ 3ರವರೆಗೆ ಗುಡುಗು-ಮಿಂಚಿನೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದೇ ಅವಧಿಯಲ್ಲಿ ಮಧ್ಯ ಮಹಾರಾಷ್ಟ್ರ, ಮರಾಠವಾಡ, ಮತ್ತು ಗುಜರಾತ್ನ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯ ನಿರೀಕ್ಷೆಯಿದೆ. ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ಮತ್ತು ತ್ರಿಪುರಾದಂತಹ ಈಶಾನ್ಯ ರಾಜ್ಯಗಳಲ್ಲಿ ಸೆಪ್ಟೆಂಬರ್ 29ರಿಂದ ಅಕ್ಟೋಬರ್ 3ರವರೆಗೆ ಮಳೆಯಾಗಲಿದ್ದು, ಅಕ್ಟೋಬರ್ 2 ಮತ್ತು 3ರಂದು ಅತಿಭಾರೀ ಮಳೆಯ ಸಾಧ್ಯತೆಯಿದೆ.
ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ಪರಿಣಾಮ
ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ದಕ್ಷಿಣ ಭಾರತದಲ್ಲಿ ಮಳೆಯ ತೀವ್ರತೆ ಮುಂದುವರಿಯಲಿದೆ. ಈ ವೈಪರೀತ್ಯಗಳಿಂದಾಗಿ ಕರಾವಳಿ ಪ್ರದೇಶಗಳಾದ ಕರ್ನಾಟಕ, ತಮಿಳುನಾಡು, ಕೇರಳ, ಮತ್ತು ಆಂಧ್ರ ಪ್ರದೇಶದಲ್ಲಿ ಸೆಪ್ಟೆಂಬರ್ 27 ಮತ್ತು 28ರಂದು ಬಲವಾದ ಗಾಳಿಯೊಂದಿಗೆ ಧಾರಾಕಾರ ಮಳೆಯಾಗಲಿದೆ. ಈ ಪ್ರದೇಶಗಳಲ್ಲಿ ಮುಂದಿನ 5 ದಿನಗಳವರೆಗೆ ಹವಾಮಾನದಲ್ಲಿ ತೀವ್ರ ಏರಿಳಿತಗಳು ಕಂಡುಬರಬಹುದು ಎಂದು ಐಎಂಡಿ ಎಚ್ಚರಿಕೆ ನೀಡಿದೆ.
ಜನರಿಗೆ ಎಚ್ಚರಿಕೆ ಮತ್ತು ಸಿದ್ಧತೆ
ಈ ಭಾರೀ ಮಳೆ ಮತ್ತು ಚಂಡಮಾರುತದ ಸಾಧ್ಯತೆಯಿಂದಾಗಿ ಕರಾವಳಿ ಪ್ರದೇಶದ ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಕೃಷಿಕರು, ಮೀನುಗಾರರು, ಮತ್ತು ಕರಾವಳಿ ಭಾಗದ ನಿವಾಸಿಗಳು ಸೂಕ್ತ ಎಚ್ಚರಿಕೆಯಿಂದಿರಬೇಕು. ಭಾರೀ ಮಳೆಯಿಂದಾಗಿ ಸಂಭವನೀಯ ಪ್ರವಾಹ, ಭೂಕುಸಿತ, ಮತ್ತು ಇತರ ಅಪಾಯಗಳನ್ನು ತಡೆಗಟ್ಟಲು ಸ್ಥಳೀಯ ಆಡಳಿತವು ಸಿದ್ಧತೆಯನ್ನು ಕೈಗೊಳ್ಳಬೇಕು ಎಂದು ಐಎಂಡಿ ಶಿಫಾರಸು ಮಾಡಿದೆ.

ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

Shivaraj is the Lead Editor at NeedsOfPublic.in with over 4 years of experience tracking Indian government schemes and educational updates. He specializes in simplifying complex notifications from the Central and State governments to help the public understand their benefits. Before joining NeedsOfPublic, Shivaraj worked as a Content Writer focusing on Civic issues. When he isn’t decoding the latest circulars, he enjoys reading about digital literacy.”
Follow Shivaraj on:


WhatsApp Group




