ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮವು 2025-26ನೇ ಸಾಲಿನಲ್ಲಿ ಮರಾಠ ಸಮುದಾಯದ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣಾ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಮೂಲಕ ಟೈಲರಿಂಗ್ ಕಲಿಯುವ ಆಸೆಯಿರುವ ಅಥವಾ ಈಗಾಗಲೇ ಟೈಲರಿಂಗ್ ಮಾಡುತ್ತಿರುವ ಮಹಿಳೆಯರು ಸ್ವಂತ ಹೊಲಿಗೆ ಯಂತ್ರ ಪಡೆದು ಸ್ವಾವಲಂಬಿಗಳಾಗಬಹುದು. ಅರ್ಜಿ ಸಲ್ಲಿಕೆ ಸಂಪೂರ್ಣವಾಗಿ ಆನ್ಲೈನ್ನಲ್ಲಿ ನಡೆಯುತ್ತಿದ್ದು, ಕೊನೆಯ ದಿನಾಂಕ ಡಿಸೆಂಬರ್ 6, 2025 ಸಂಜೆ 5:30 ಗಂಟೆಯವರೆಗೆ ಇದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.……..
ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುವ ಮಹಿಳೆಯರು ಮರಾಠ ಸಮುದಾಯಕ್ಕೆ ಸೇರಿದವರಾಗಿರಬೇಕು ಮತ್ತು ಪ್ರವರ್ಗ 3ಬಿ ಅಡಿಯಲ್ಲಿ (ಎ) ರಿಂದ 2(ಎಫ್) ವರೆಗೆ ಬರುವ ಉಪಜಾತಿಗಳಲ್ಲಿ ಒಂದಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣಪತ್ರವು ಕಡ್ಡಾಯವಾಗಿ ನಮೂನೆ 3ಬಿ ರೂಪದಲ್ಲಿ ಮಾನ್ಯವಾಗಿರಬೇಕು. ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿದ್ದು, ಆಧಾರ್ ಕಾರ್ಡ್ ಕಡ್ಡಾಯವಾಗಿ ಲಿಂಕ್ ಆಗಿರಬೇಕು.
ವಯೋಮಿತಿಯ ದೃಷ್ಟಿಯಿಂದ ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 55 ವರ್ಷದೊಳಗೆ ಇರಬೇಕು. ಕುಟುಂಬದ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶದಲ್ಲಿ ಗರಿಷ್ಠ ₹98,000 ಮತ್ತು ನಗರ ಪ್ರದೇಶದಲ್ಲಿ ₹1,20,000 ಮೀರಬಾರದು. ಒಂದು ಕುಟುಂಬದಿಂದ ಕೇವಲ ಒಬ್ಬ ಮಹಿಳೆಗೆ ಮಾತ್ರ ಈ ಯೋಜನೆಯ ಲಾಭ ಸಿಗಲಿದೆ.
ಯೋಜನೆಯಲ್ಲಿ ವಿಶೇಷ ಮೀಸಲಾತಿ ವ್ಯವಸ್ಥೆಯೂ ಇದೆ. ಒಟ್ಟು ಫಲಾನುಭವಿಗಳಲ್ಲಿ ಮಹಿಳೆಯರಿಗೆ 33%, ವಿಕಲಚೇತನರಿಗೆ 5%, ತೃತೀಯ ಲಿಂಗಿಗಳಿಗೆ 1% ಮತ್ತು ಅಂಗವಿಕಲ ಮಹಿಳೆಯರಿಗೆ 2% ಮೀಸಲಾತಿ ಇದೆ. ಇದಲ್ಲದೆ ವಿಧವೆಯರು, ಪರಿತ್ಯಕ್ತ ಮಹಿಳೆಯರು, ಎಚ್ಐವಿ ಸೋಂಕಿತರು ಹಾಗೂ 35 ವರ್ಷ ಮೀರಿದ ಅವಿವಾಹಿತ ಮಹಿಳೆಯರಿಗೆ ಹೆಚ್ಚುವರಿಯಾಗಿ 2% ಮೀಸಲಾತಿ ಕಲ್ಪಿಸಲಾಗಿದೆ.
ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ https://kmcdc.karnataka.gov.in ಗೆ ಭೇಟಿ ನೀಡಿ ಆನ್ಲೈನ್ನಲ್ಲಿ ಅರ್ಜಿ ಭರ್ತಿ ಮಾಡಬೇಕು. ಈ ವೆಬ್ಸೈಟ್ನಲ್ಲೇ ಯೋಜನೆಯ ಸಂಪೂರ್ಣ ಮಾರ್ಗಸೂಚಿ, ಅಗತ್ಯ ದಾಖಲೆಗಳ ಪಟ್ಟಿ, ಜಿಲ್ಲಾ ಕಚೇರಿಗಳ ವಿಳಾಸ ಮತ್ತು ಸಂಪರ್ಕ ಸಂಖ್ಯೆಗಳು ಲಭ್ಯವಿವೆ. ಹೆಚ್ಚಿನ ಮಾಹಿತಿಗೆ ನಿಗಮದ ಸಹಾಯವಾಣಿ 8867537799, ಬೆಂಗಳೂರು ಕಚೇರಿ 080-29903994 ಅಥವಾ ಮೈಸೂರು ಜಿಲ್ಲಾ ಕಚೇರಿ 0821-2341194 ಗೆ ಕರೆ ಮಾಡಬಹುದು.
ಈ ಯೋಜನೆಯ ಮೂಲಕ ಮರಾಠ ಸಮುದಾಯದ ಸಾವಿರಾರು ಮಹಿಳೆಯರು ಸ್ವಂತ ಟೈಲರಿಂಗ್ ವ್ಯವಸಾಯ ಆರಂಭಿಸಿ ಆರ್ಥಿಕವಾಗಿ ಸ್ವಾವಲಂಬಿಗಳಾಗುವ ಅವಕಾಶ ಸಿಗಲಿದೆ. ಆದ್ದರಿಂದ ಅರ್ಹ ಮಹಿಳೆಯರು ಡಿಸೆಂಬರ್ 6ರೊಳಗೆ ಖಂಡಿತವಾಗಿಯೂ ಅರ್ಜಿ ಸಲ್ಲಿಸಿ ಈ ಅಪೂರ್ವ ಅವಕಾಶವನ್ನು ಬಳಸಿಕೊಳ್ಳಿ.

ಈ ಮಾಹಿತಿಗಳನ್ನು ಓದಿ
- ಗೃಹಲಕ್ಷ್ಮಿ ಸಹಕಾರಿ ಬ್ಯಾಂಕ್ಗೆ ಸೇರಲು 1,000 ರೂ ಕೊಟ್ಟು ಷೇರ್ ಹೋಲ್ಡರ್ ಆಗಬೇಕು ಯಾರಿಗೆ ಎಷ್ಟು ಸಾಲ ಸಿಗುತ್ತೆ? ಏನೆಲ್ಲಾ ನಿಯಮ?
- Gruhalakshmi: ಅಕ್ಟೋಬರ್ ತಿಂಗಳ ಈ ದಿನ ಗೃಹಲಕ್ಷ್ಮಿ ಬಾಕಿ ಹಣ ಖಾತೆಗೆ ಜಮಾ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ
- BIGNEWS : ಗೃಹಲಕ್ಷ್ಮಿ ಬಾಕಿ 4000ರೂ ಹಣ ಈ ದಿನದಂದು ಖಾತೆಗೆ ಜಮೆ? ಅಧಿಕೃತ ಮಾಹಿತಿ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್..!
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಶಿವರಾಜ್ ಅವರು NeedsOfPublic.in ನಲ್ಲಿ ಸಾರ್ವಜನಿಕ, ಶೈಕ್ಷಣಿಕ ಮತ್ತು ಸ್ಥಳೀಯ ಸುದ್ದಿಗಳ ವಿಭಾಗದ ಹಿರಿಯ ಸಂಪಾದಕರಾಗಿದ್ದಾರೆ (Senior Editor). ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಡಿಪ್ಲೊಮಾ ಪದವಿ ಪಡೆದಿದ್ದರೂ, ಮಾಧ್ಯಮ ಕ್ಷೇತ್ರದ ಮೇಲಿರುವ ಅತೀವ ಆಸಕ್ತಿಯಿಂದಾಗಿ 2019 ರಲ್ಲಿ ಡಿಜಿಟಲ್ ಜಗತ್ತಿಗೆ ಕಾಲಿಟ್ಟರು. ಇವರು ಆರಂಭಿಸಿದ “Suddi No.1 Kannada” ಯೂಟ್ಯೂಬ್ ಚಾನೆಲ್ ಪ್ರಸ್ತುತ 300K ಗೂ ಹೆಚ್ಚು ಸಬ್ಸ್ಕ್ರೈಬರ್ಗಳನ್ನು ಹೊಂದುವ ಮೂಲಕ ಜನಪ್ರಿಯವಾಗಿದೆ. ಡಿಜಿಟಲ್ ಮಾಧ್ಯಮದಲ್ಲಿ ಉತ್ತಮ ಅನುಭವ ಹೊಂದಿರುವ ಇವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಂಕೀರ್ಣ ಯೋಜನೆಗಳನ್ನು ಹಾಗೂ ವಿದ್ಯಾರ್ಥಿವೇತನಗಳನ್ನು (Scholarships) ಸರಳವಾಗಿ ವಿಶ್ಲೇಷಿಸಿ, ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ತಲುಪಿಸುವಲ್ಲಿ ಎಕ್ಸ್ಪರ್ಟ್ ಆಗಿದ್ದಾರೆ. ಇದರ ಜೊತೆಗೆ ಪ್ರಮುಖ ಶೈಕ್ಷಣಿಕ ಅಪ್ಡೇಟ್ಗಳು ಮತ್ತು ನಿಖರ ಮಾಹಿತಿ ನೀಡುವ ವಿಡಿಯೋ ಕಂಟೆಂಟ್ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವುದು ಇವರ ಬರವಣಿಗೆಯ ವಿಶಿಷ್ಟ ಶೈಲಿಯಾಗಿದೆ.


WhatsApp Group




